Connect with us

    LATEST NEWS

    Udupi: ಶಿಕ್ಷಕರ ವರ್ಗಾವಣೆಗೆ ಖಂಡನೆ :ಬ್ರಹ್ಮಾವರದ ಕೋಡಿಬೆಂಗ್ರೆ ಹಿರಿಯ ಪ್ರಾಥಮಿಕ ಶಾಲೆಗೆ ಬೀಗ ಜಡಿದು ಪ್ರತಿಭಟಿಸಿದ ಗ್ರಾಮಸ್ಥರು..!

    Published

    on

    ಶಿಕ್ಷಕರ ವರ್ಗಾವಣೆ ವಿರೋಧಿಸಿ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೋಡಿಬೆಂಗ್ರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ. 

    ಉಡುಪಿ : ಶಿಕ್ಷಕರ ವರ್ಗಾವಣೆ ವಿರೋಧಿಸಿ ಗ್ರಾಮಸ್ಥರು ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದ ಕೋಡಿಬೆಂಗ್ರೆ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ನಡೆದಿದೆ.

    ಒಂದನೇ ತರಗತಿಯಿಂದ ಏಳನೇ ತರಗತಿಯವರೆಗೆ ಒಟ್ಟು ಎಂಭತ್ತು ವಿದ್ಯಾರ್ಥಿಗಳು ಕಲಿಯುತ್ತಿದ್ದು ಈ ಮುಂಚೆ ಮೂರು ಶಿಕ್ಷಕರಿದ್ದರು.

    ಇದೀಗ ಅವರಲ್ಲಿ ಒರ್ವ ಶಿಕ್ಷಕರನ್ನು ವರ್ಗಾವಣೆ ಮಾಡಲು ಶಿಕ್ಷಣ ಇಲಾಖೆ ಮುಂದಾಗಿದ್ದು ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಸ್ಥಳೀಯ ‌ಮುಖಂಡ ರಮೇಶ್ ತಿಂಗಳಾಯ, ಸರಕಾರಿ ಶಾಲೆಯನ್ನು ನೇರವಾಗಿ ಮುಚ್ಚದೆ ಹಿಂಬದಿಯಿಂದ ಮುಚ್ಚಲು ಪ್ರಯತ್ನಿಸಲಾಗುತ್ತಿದೆ‌.

    ಶಿಕ್ಷಣಾಧಿಕಾರಿಗಳಿಗೆ, ಉದ್ಯಮಿಗಳಿಗೆ, ರಾಜಕಾರಣಿಗಳಿಗೆ ಆಸಕ್ತಿ ಇದ್ದರೆ ಅವರು ಸರಕಾರಿ ಶಾಲೆಯನ್ನು ದತ್ತು ಪಡೆದು‌ ಅಭಿವೃದ್ದಿ ಪಡಿಸಲಿ ಅದು ಬಿಟ್ಟು ಶಿಕ್ಷಣವನ್ನು ಇಂದು ಉದ್ಯೋಗಕ್ಕಾಗಿ ಬಳಸಲಾಗುತ್ತಿದೆ ಇದು ಖೇದಕರ ಎಂದರು.

    ಸರಕಾರಿ ಶಾಲೆಗೆ ಶಿಕ್ಷಕರನ್ನು ಕೊಡುತ್ತಿಲ್ಲ. ಇದರಿಂದ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿದೆ.

    ಈ ಮುಂಚೆ ಕೌನ್ಸಿಲಿಂಗ್ ನಡೆಸುವಾಗ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ನಮ್ಮನ್ನು ಬಂಧಿಸುವ ಪ್ರಯತ್ನ ನಡೆದಿತ್ತು.

    ನ್ಯಾಯಯುತವಾದ ಬೇಡಿಕೆಯಿಟ್ಟಾಗ ನಮ್ಮನ್ನು ಬಂಧಿಸುವ ಪ್ರಯತ್ನ ನಡೆಯುತ್ತಿದೆ. ಇದೀಗ ಮತ್ತೆ ನಮ್ಮ ಶಿಕ್ಷಕರೊಬ್ಬರನ್ನು ವರ್ಗಾವಣೆ ಮಾಡಲು ಸರಕಾರ ಮುಂದಾಗಿದೆ.

    ಎಂಭತ್ತು ಮಕ್ಕಳು ಎರಡು ಶಿಕ್ಷಕರಿಂದ ಕಲಿಯುವುದು ಹೇಗೆ ಎಂದು‌ ಪ್ರಶ್ನಿಸಿದ ಅವರು ನಮಗೆ ನ್ಯಾಯ ದೊರಕಿಸಿಕೊಡಬೇಕು.

    ಏಳು ಶಿಕ್ಷಕರು ಈ ಶಾಲೆಗೆ ಬರಬೇಕು. ಬಡ ಕೂಲಿ ಕಾರ್ಮಿಕರ ಮಕ್ಕಳು, ಮೀನುಗಾರರ ಮಕ್ಕಳು ಶಿಕ್ಷಣ ವಂಚಿತರಾಗುದರಿಂದ ತಡೆಯಬೇಕು. ಅಲ್ಲಿಯವರೆಗೆ ಶಾಲೆಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಗುವುದು ಎಂದರು.

    ಎರಡು ಗ್ರಾಮಕ್ಕೆ ಒಂದು ಶಾಲೆ

    ಉಡುಪಿ ಜಿಲ್ಲೆಯ ಬ್ರಹ್ಮಾವರ ವಲಯಕ್ಕೆ ಸಂಬಂದಪಟ್ಟ ಮೂರು ಕಡೆ ಜಲಾವತದಿಂದ ಅವ್ರತಗೊಂಡಿರುವ ಏಕೈಕ ಭೂ ಸಂಪರ್ಕ ಇರುವ ವಿಶೇಷ ಗ್ರಾಮವಾದ ನಮ್ಮ ಕೋಡಿ ಬೆಂಗೆ ಶಾಲೆಗೆ 98 ವರ್ಷ ಇತಿಹಾಸ ಇರುವ ಶಾಲೆಯಲ್ಲಿ ಈಗ ಕೇವಲ ಮೂರು ಜನ ಖಾಯಂ ಶಿಕ್ಷಕರಿದ್ದು 1ರಿಂದ 7ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಉತ್ತಮ ಬೋಧನೆಯನ್ನು ಮಾಡುತ್ತಿದ್ದಾರೆ.

    ಆದರೆ, ಕಳೆದ ವರ್ಷದಿಂದ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯ ನೆಪ ಒಡ್ಡಿ ಮೂರು ಜನ ಶಿಕ್ಷಕರಲ್ಲಿ ಒಬ್ಬರನ್ನು ವರ್ಗಾವಣೆ ಮಾಡುವುದನ್ನು ಗ್ರಾಮದವರು ಮಕ್ಕಳ ಹಿತದೃಷ್ಟಿಯಿಂದ ಸಂಬಂಧ ಪಟ್ಟವರಿಗೆ ಮನವಿ ನೀಡಿ ವಿರೋಧ ವ್ಯಕ್ತಪಡಿಸಿದ್ದೇವೆ.

    ಆವಾಗ ವರ್ಗಾವಣೆಯ ಪ್ರಕ್ರಿಯೆ ತಾತ್ಕಾಲಿಕವಾಗಿ ಕೆಲವೊಂದು ಕಾರಣದಿಂದ ತಡೆಹಿಡಿದಿದ್ದೀರಿ. ತದನಂತರದಲ್ಲಿ ಈ ವರ್ಷದಲ್ಲಿ ಕೊರತೆ ಇರುವ ಶಿಕ್ಷಕರನ್ನು ನೀಡದೆ ಪಾರಂಭದ ಹಂತದಲ್ಲಿಯೇ ಕಳೆದ ವರ್ಷದಂತೆ ಪುನಃ ಹೆಚ್ಚುವರಿ ಶಿಕ್ಷಕರು ಎಂಬ ನೆಪ ಒಡ್ಡಿ ವರ್ಗಾವಣೆ ಪ್ರಕ್ರಿಯೆ ಪ್ರಾರಂಭಿಸುವ ಸೂಚನೆ ಸಿಕ್ಕಿರುತ್ತದೆ.

    ಇದರಿಂದ ಶಾಲೆಯ ಶೈಕ್ಷಣಿಕ ಸ್ಥಿತಿ ಮತ್ತಷ್ಟು ಕೆಳಗಿಳಿಯುತ್ತದೆ. ಇಂತಹ ಕಾನೂನುಗಳಿಂದ ಸರಕಾರಿ ಶಾಲೆ ಮುಚ್ಚುವಂತಾಗುತ್ತದೆ ಹೊರತು ಅಭಿವೃದ್ಧಿಯಾಗಲಾರದು.

    ಇದಕ್ಕೆ ಉದಾಹರಣೆಯಾಗಿ ನಮ್ಮ ಪಕ್ಕದ ಗ್ರಾಮವಾದ ಪಡುತೋನ್ಸೆ ಬೆಂಗ್ರೆಯಲ್ಲಿದ್ದ ಶಾಲೆಯು ಮುಚ್ಚಿರುತ್ತದೆ. ಈಗ ನಮ್ಮ ಎರಡೂ ಗ್ರಾಮಕ್ಕೆ ಇದೊಂದೇ ಶಾಲೆ ಉಳಿದಿರುವುದು, ನಾವು ಪೋಷಕರು ಶಿಕ್ಷಕರ ಮೇಲಿನ ಭರವಸೆಯಿಂದ ಹಾಗೂ ನಮ್ಮೂರ ಶಾಲೆಯ ಮಕ್ಕಳ ಸಂಖ್ಯೆ 21ಕ್ಕೆ ಇಳಿದು ಶಾಲೆ ಅಳಿವಿನ ಅಂಚಿನಲ್ಲಿರುವ ಸಮಯದಲ್ಲಿ ನಮ್ಮ ಮಕ್ಕಳನ್ನು ಆಂಗ್ಲ ಮಾಧ್ಯಮದಿಂದ ಬಿಡಿಸಿ ಇಲ್ಲಿಗೆ ಸೇರ್ಪಡೆ ಮಾಡಿದ್ದರಿಂದ 21 ಇದ್ದ ಮಕ್ಕಳ ಸಂಖ್ಯೆ 72ಕ್ಕೆ ಏರಿತು, ತದನಂತರ ನಾಲ್ಕು ಖಾಯಂ ಶಿಕ್ಷಕರಲ್ಲಿ ಒಬ್ಬ ಶಿಕ್ಷಕರು ಬೇರೆ ಶಾಲೆಗೆ ವರ್ಗಾವಣೆಗೊಂಡು ಅವರ ಬದಲಿಗೆ ಇನ್ನೂ ಕೂಡ ಯಾವುದೇ ಶಿಕ್ಷಕರು ನಮ್ಮ ಶಾಲೆಗೆ ಬಂದಿರುವುದಿಲ್ಲ.

    ಅಲ್ಲದೆ 2020-2021ನೇ ಸಾಲಿನ ಸ್ಯಾಟ್ ಅಂಕಿ ಅಂಶದ ಪ್ರಕಾರ ನಮ್ಮ ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದುದರಿಂದ ಇದರ ಆಧಾರದ ಮೇಲೆ ಈಗ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಮಾಡುವುದು ಎಷ್ಟು ಸರಿ ? ಏಕೆಂದರೆ ಈಗ 22022-2023ರ ಸ್ಯಾಟ್ ಅಂಕಿ ಅಂಶದ ಪ್ರಕಾರ ಮಕ್ಕಳ ಸಂಖ್ಯೆ 67 ಇದೆ.

    ಶಿಕ್ಷಕರ ಕೊರತೆಯ ಕಾರಣದಿಂದ ನಮ್ಮ ಮಕ್ಕಳ ಭವಿಷ್ಯ ಚಿಂತಾಜನಕವಾಗಿದೆ ಹಾಗೂ ಊರಿನಲ್ಲಿರುವ ಒಂದೇ ಒಂದು ಶಾಲೆಯು ಮುಂದಿನ ದಿನಗಳಲ್ಲಿ ಮುಚ್ಚುವ ಸಂಭವವಿರುತ್ತದೆ ಆದುದರಿಂದ ತಾವು ನಮ್ಮ ಮಕ್ಕಳ ಭವಿಷ್ಯದ ದೃಷ್ಟಿಯಿಂದ ಹೆಚ್ಚುವರಿ ಶಿಕ್ಷಕರ ವರ್ಗಾವಣೆಯನ್ನು ಕೈಬಿಡಬೇಕು.

    ಅಲ್ಲದೆ ಇಲ್ಲಿ 1 ರಿಂದ 7ನೇ ತರಗತಿಯವರೆಗೆ ಇರುವುದರಿಂದ ಇನ್ನೂ 4 ಶಿಕ್ಷಕರನ್ನು ನೀಡಬೇಕು.

    ಅಲ್ಲದೆ ಈಗ ಶಿಕ್ಷಣದ ಇಲಾಖೆಯಲ್ಲಿರುವ ಕಾನೂನನ್ನು ಸರಕಾರಿ ಶಾಲೆಯನ್ನು ಉಳಿಸುವ ರೀತಿಯಲ್ಲಿ ಬದಲಾವಣೆ ಮಾಡಬೇಕೆಂದು ಪೋಷಕರಾದ ನಾವು ಈ ಮೂಲಕ ವಿನಂತಿಸುತ್ತಿದ್ದೇವೆ ಎಂದಿದ್ದಾರೆ.

    2021-22ರಲ್ಲಿ ವರ್ಗಾವಣೆಯಾದ ಶಿಕ್ಷಕರ ಬದಲಿಗೆ ಇನ್ನೋರ್ವ ಶಿಕ್ಷಕರನ್ನು ದಿನಾಂಕ 15/06/2023ರೊಳಗೆ ನೀಡದೆ ಇದ್ದಲ್ಲಿ 16/06/2023ರಿಂದ ಅನಿರ್ದಿಷ್ಟ ಕಾಲದವರೆಗೆ ಶಾಲೆಗೆ ಬೀಗ ಜಡಿದು ಪ್ರತಿಭಟಿಸಲಾಗುವುದು.

    ಇದರಿಂದಾಗುವ ಮಕ್ಕಳ ಶೈಕ್ಷಣಿಕ ತೊಂದರೆಗೆ ಜಿಲ್ಲಾಡಳಿತ, ಶಿಕ್ಷಣ ಇಲಾಖೆ, ಸರಕಾರ ನೇರಾ ಹೊಣೆಯಾಗಲಿದೆ.

    ಆದ್ದರಿಂದ ಶೈಕ್ಷಣಿಕವಾಗಿ ಇರುವ ಎಲ್ಲಾ ಕಾನೂನುನ್ನು ಮರುಪರಿಶೀಲಿಸುವವರೆಗೆ ವರ್ಗಾವಣೆ ಪ್ರಕ್ರಿಯೆಯನ್ನು ತಡೆ ಹಿಡಿದು ಶಾಲೆಯ ಉಳಿಯುವಿಗಾಗಿ ಸಹಕರಿಸಬೇಕಾಗಿ ವಿನಂತಿಸುತ್ತೇವೆ ಎಂದು ಗ್ರಾಮಸ್ಥರು ಮನವಿ ಮಾಡಿದ್ದಾರೆ.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending