LATEST NEWS
Udupi: ಪಡುಬಿದ್ರಿ ಗ್ರಾಮ ಪಂಚಾಯತ್ ನಲ್ಲಿ ತ್ಯಾಜ್ಯ ಸಮಸ್ಯೆ- ಕಾಂಗ್ರೆಸ್ ನಿಂದ ಪ್ರತಿಭಟನೆ
ಪಡುಬಿದ್ರಿಯಲ್ಲಿ ಕಾಂಗ್ರೆಸ್ ಸ್ಥಾನೀಯ ಸಮಿತಿಯ ಸ್ಥಳೀಯ ನಾಯಕರು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರ ಬೆಂಬಲದೊಂದಿಗೆ ತ್ಯಾಜ್ಯ ಸಮಸ್ಯೆಯನ್ನು ಬಗೆಹರಿಸುವಂತೆ ಮತ್ತು ಮುಂದೆ ಎಂದೂ ಪಡುಬಿದ್ರಿ ಗ್ರಾಮ ಪಂಚಾಯತ್ ಆವರಣದಲ್ಲಿ ತ್ಯಾಜ್ಯಗಳ ರಾಶಿಯನ್ನು ಪರಿಸರ ಮಾಲಿನ್ಯವಾಗುವ ರೀತಿಯಲ್ಲಿ ರಾಶಿ ಹಾಕದಂತೆ ಕಾಂಗ್ರೆಸ್ ಪಕ್ಷ ಶುಕ್ರವಾರದಂದು ಪ್ರತಿಭಟನೆ ಹಮ್ಮಿಕೊಂಡಿತ್ತು.
ಉಡುಪಿ: ಪಡುಬಿದ್ರಿಯಲ್ಲಿ ಕಾಂಗ್ರೆಸ್ ಸ್ಥಾನೀಯ ಸಮಿತಿಯ ಸ್ಥಳೀಯ ನಾಯಕರು, ಗ್ರಾಮ ಪಂಚಾಯತ್ ಸದಸ್ಯರು, ಗ್ರಾಮಸ್ಥರ ಬೆಂಬಲದೊಂದಿಗೆ ತ್ಯಾಜ್ಯ ಸಮಸ್ಯೆಯನ್ನು ಬಗೆಹರಿಸುವಂತೆ ಮತ್ತು ಮುಂದೆ ಎಂದೂ ಪಡುಬಿದ್ರಿ ಗ್ರಾಮ ಪಂಚಾಯತ್ ಆವರಣದಲ್ಲಿ ತ್ಯಾಜ್ಯಗಳ ರಾಶಿಯನ್ನು ಪರಿಸರ ಮಾಲಿನ್ಯವಾಗುವ ರೀತಿಯಲ್ಲಿ ರಾಶಿ ಹಾಕದಂತೆ ಕಾಂಗ್ರೆಸ್ ಪಕ್ಷ ಶುಕ್ರವಾರದಂದು ಪ್ರತಿಭಟನೆ ಹಮ್ಮಿಕೊಂಡಿತ್ತು.
ಈ ವೇಳೆ ಪ್ರತಿಭಟನೆಯ ಕಾವನ್ನರಿತ ಬಿಜೆಪಿ ಬೆಂಬಲಿತ ಪಡುಬಿದ್ರಿ ಗ್ರಾಮ ಪಂಚಾಯತ್ ಆಡಳಿತವು ಬೆಳ್ಳಂಬೆಳಿಗ್ಗಿನಿಂದಲೇ ಪಂಚಾಯತ್ ಎದುರಿನ ತ್ಯಾಜ್ಯಗಳನ್ನು ತೆರವುಗೊಳಿಸಲು ಮುಂದಾಯಿತು.
ಆಗ ಕಾಂಗ್ರೆಸ್ ನಾಯಕರೂ ಪ್ರತಿಭಟನೆಯನ್ನು ಸೌಮ್ಯಗೊಳಿಸಿ ಮುಂದೆ ಪಡುಬಿದ್ರಿಯ ನಾಗರಿಕರಿಗೆ ಅನ್ಯಾಯವಾಗುವಂತೆ ಕಸದ ರಾಶಿಯನ್ನು ಪಂಚಾಯತ್ ಮುಂದೆ ಹಾಕಕೂಡದು.
ಆದರೂ ಅದೇ ಚಾಳಿಯನ್ನು ಮುಂದುವರಿಸಿದಲ್ಲಿ ಮುಂದಿನ ದಿನಗಳಲ್ಲಿ ಪಂಚಾಯತ್ ಗೆ ಬೀಗ ಜಡಿದು ಉಗ್ರ ಪ್ರತಿಭಟನೆಯನ್ನು ಮಾಡುವುದಾಗಿ ಮನವಿಯೊಂದನ್ನು ಸ್ಥಳಕ್ಕಾಗಮಿಸಿದ ಕಾಪು ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ನವೀನ್ ಕುಮಾರ್ ಹಾಗೂ ಪಿಡಿಒ ಪಂಚಾಕ್ಷರೀ ಸ್ವಾಮಿ ಕೆರಿಮಠ ಅವರಿಗೆ ಸಲ್ಲಿಸಿದರು.
ಪಡುಬಿದ್ರಿ ಗ್ರಾಮ ಪಂಚಾಯತ್ ತನ್ನ ತ್ಯಾಜ್ಯ ವಿಲೇವಾರಿಗಾಗಿ 15 ಲಕ್ಷ ರೂಪಾಯಿ ಅಂದಾಜು ಮೌಲ್ಯದ ಸ್ಕ್ರಬ್ಬರ್ ಯಂತ್ರವನ್ನು ಶೀಘ್ರವೇ ಅಳವಡಿಸಿಕೊಳ್ಳಲಿದೆ ಎಂದೂ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಕಾಂಗ್ರೆಸ್ ಧುರೀಣರಿಗೆ ಆಶ್ವಾಸನೆಯನ್ನಿತ್ತರು.
ಈ ಸಂದರ್ಭ ಕೆಪಿಸಿಸಿ ಆರ್ಡಿನೇಟರ್ ನವೀನ್ಚಂದ್ರ ಜೆ. ಶೆಟ್ಟಿ, ಡಿಸಿಸಿ ಉಪಾಧ್ಯಕ್ಷ ವೈ. ಸುಕುಮಾರ್, ಬ್ಲಾಕ್ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೀಝ್ ಹುಸೈನ್ ಸೇರಿದಂತೆ ಗ್ರಾಮಸ್ಥರು ಜತೆಗಿದ್ದರು.
LATEST NEWS
ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?
ಮಹಾರಷ್ಟ್ರ: ಅಪ್ರಾಪ್ತ ಬಾಲಕಿಯೊಬ್ಬಳು ಎರಡು ಬಾರಿ ಅಕ್ರಮ ಗರ್ಭ ಧರಿಸಿ ಇದೀಗ ತನ್ನ ಪೋಷಕರ ವಿರುದ್ಧ ಠಾಣೆ ಮೆಟ್ಟಿಲೇರಿರುವ ಘಟನೆ ಮಹಾರಷ್ಟ್ರದಲ್ಲಿ ನಡೆದಿದೆ. ಹೌದು, 17 ವರ್ಷದ ಬಾಲಕಿಯೊಬ್ಬಳು ಬೇರೆ ಬೇರೆ ಯುವಕರಿಂದ ಎರಡು ಬಾರಿ ಗರ್ಭ ಧರಿಸಿದ್ದಾಳೆ.
ಮೊದಲಾಗಿ ಅಕ್ರಮ ಸಂಬಂಧ ಹೊಂದಿದ್ದ ಪುರುಷನಿಂದ ಗರ್ಭ ಧರಿಸಿದ್ದಳು. ಈ ಮಗುವನ್ನು ಪೋಷಕರು ತನಗರಿಯದೆ ಮಾರಾಟ ಮಾಡಿದ್ದಾರೆ ಎಂದು ಆರೋಪಿಸಿ ಬಾಲಕಿ ಪೋಷಕರು ಸೇರಿದಂತೆ ಶಿಕ್ಷಕರು, ವಕೀಲರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿದೆ.
ಮುಂದೆ ಓದಿ..; 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!
ಪೋಷಕರು ನನ್ನನ್ನು ಮುಂಬೈಗೆ ಕರೆದುಕೊಂಡು ಹೋಗಿ ವಕೀಲರ ನೇತೃತ್ವದಲ್ಲಿ ಕೆಲವು ದಾಖಲೆ ಪತ್ರಗಳಿಗೆ ಸಹಿ ಹಾಕಿಸಿದ್ದಾರೆ. 7ನೇ ತರಗತಿಯ ಬಳಿಕ ಶಾಲೆಯಿಂದ ಹೊರಗುಳಿದ ಬಾಲಕಿಯ ನಿಯಮಿತ ತಪಾಸಣೆ ಮತ್ತು ಹೆರಿಗೆಗಾಗಿ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. 2021ರ ಸೆಪ್ಟೆಂಬರ್ 24ರಂದು ಆಕೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾಳೆ. ಮರುದಿನ ಆ ಮಗುವನ್ನು ಸಾಮಾಜಿಕ ಕಾರ್ಯಕರ್ತರೊಬ್ಬರಿಗೆ ಹಸ್ತಾಂತರಿಸಿದ್ದು, ಹೆರಿಗೆಯ ಬಗ್ಗೆ ಯಾರಲ್ಲೂ ಮಾತನಾಡದಂತೆ ಆಕೆಗೆ ಪೋಷಕರು ಎಚ್ಚರಿಕೆ ನೀಡಿದ್ದರು ಎಂದು ದೂರಿನಲ್ಲಿ ಹೇಳಲಾಗಿದೆ.
ಇನ್ನು ಹೆರಿಗೆ ಆದ ಆರು ತಿಂಗಳ ಬಳಿಕ ಅಪ್ರಾಪ್ತೆ ಮಗುವಿನ ತಂದೆಯನ್ನು ಸಂಪರ್ಕಿಸಿದ್ದಾಳೆ. ಈ ವೇಳೆ ಆತ ಅವಳನ್ನು ವರಿಸಳು ಸಿದ್ಧನಾಗಿದ್ದೇನೆ ಎಂದು ಹೇಳುತ್ತಾನೆ. ಆದರೆ ಮನೆಯವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ. ತನ್ನ ಪೋಷಕರು ಮಗುವನ್ನು 4 ಲಕ್ಷ ರೂ.ಗೆ ಮಾರಾಟ ಮಾಡಿದ್ದರು. ಈ ಪೈಕಿ ಪೋಷಕರು ಮತ್ತು ಚಿಕ್ಕಪ್ಪ ತಲಾ 1.5 ಲಕ್ಷ ರೂ. , ಸಾಮಾಜಿಕ ಕಾರ್ಯಕರ್ತೆ ಮತ್ತು ಇತರ ಕೆಲವರು ಉಳಿದ 1 ಲಕ್ಷ ರೂ.ಗಳನ್ನು ಹಂಚಿಕೊಂಡಿದ್ದಾರೆ ಎಂದು ಅಪ್ರಾಪ್ತೆ ದೂರಿನಲ್ಲಿ ತಿಳಿಸಿದ್ದಾಳೆ.
ಈ ಕುರಿತಾಗಿ ಪ್ರಶ್ನಿಸಿದಕ್ಕೆ ಅಜ್ಜಿ ಮನೆಗೆ ಕಳುಹಿಸಿದ್ದಾರೆ. ಇನ್ನು ಅಲ್ಲಿ ಈ ಬಾಲಕಿಗೆ 23ವರ್ಷದ ಯುವಕನ ಜೊತೆ ಮದುವೆ ಫಿಕ್ಸ್ ಮಾಡಲಾಗಿತ್ತು. ಈ ವೇಳೆ ವಿವಾಹ ನಿಶ್ಚಯವಾಗಿದ್ದ ಯುವಕನ ಜೊತೆ ಲೈಂಗಿಕ ಸಂಪರ್ಕ ಹೊಂದುತ್ತಾಳೆ. ಬಳಿಕ ಬಾಲಕಿ ಮತ್ತೊಮ್ಮೆ ಗರ್ಭ ಧರಿಸುತ್ತಾಳೆ. ಅಷ್ಟಾಗಲೇ ವಿವಾಹ ನಿಶ್ಚಯವಾಗಿದ್ದ ಹುಡುಗನಿಗೆ ಇವಳ ಮೊದಲ ಮಗುವಿನ ಕುರಿತಾಗಿ ತಿಳಿದು ಇವಳನ್ನು ಮದುವೆಯಾಗಲು ನಿರಾಕರಿಸುತ್ತಾನೆ. ಬಳಿಕ ಅಜ್ಜಿ ಮನೆಯಿಂದ ಹೊರಟು ಬರ್ತಾಳೆ. ಪರಿಚಯಸ್ಥರ ನೆರವಿನಿಂದ ಗಂಡು ಮಗುವಿಗೆ ಜನ್ಮ ನೀಡಿದಳು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದೀಗ ಪೋಷಕರು ಎರಡನೇ ಮಗವನ್ನೂ ಮಾರಾಟ ಮಾಡುವಂತೆ ಒತ್ತಡ ಹೇರುತ್ತಿದ್ದು ಈ ನಿಟ್ಟಿನಲ್ಲಿ ಬಾಲಕಿ ಪೊಲೀಸ್ ಮೆಟ್ಟಿಲೇರಿದ್ದಾಳೆ. ಇನ್ನು ಪೊಲೀಸರು ಮಾರಾಟ ಮಾಡಿದ್ದ ಹೆಣ್ಣು ಮಗುವನ್ನು ಹುಡುಕಲು ತನಿಖೆ ಆರಂಭಿಸಿದ್ದಾರೆ ಎನ್ನಲಾಗಿದೆ.
FILM
ಕ್ಲಿಕ್ ಆಯ್ತು ‘ಪುಷ್ಪ ಪುಷ್ಪ’…ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್ ಸ್ಟೆಪ್ಸ್ ಗೆ ಫ್ಯಾನ್ಸ್ ಫಿದಾ
ಟಾಲಿವುಡ್ : ಸದ್ಯ ಟಾಲಿವುಡ್ ಅಂಗಳದಲ್ಲಿ ‘ಪುಷ್ಪ 2 : ದಿ ರೂಲ್’ ಸೌಂಡ್ ಜೋರಾಗಿದೆ. ಅಲ್ಲು ಅರ್ಜುನ್ ಸಿನಿಮಾ ಅಂದ್ರೆ ಹೇಳ್ಬೇಕಾ..ಮೊದಲೇ ಕ್ರೇಜ್ ಹೆಚ್ಚಿಸಿರುತ್ತೆ. ಪುಷ್ಪ ಈಗಾಗಲೇ ಫಸ್ಟ್ ಲುಕ್, ಟೀಸರ್ ಎಲ್ಲದರ ಮೂಲಕಾನೂ ನಿರೀಕ್ಷೆ ಹೆಚ್ಚಿಸುತ್ತಿದೆ. ಇದೀಗ ಹಾಡಿನ ಸರದಿ.
ಅಲ್ಲು ಅರ್ಜುನ್ ಮಾಸ್ ಲುಕ್; ಸಕತ್ ಸ್ಟೆಪ್ಸ್ :
‘ಪುಷ್ಪ 2 : ದಿ ರೂಲ್’ ಸಿನಿಮಾದ ಕುರಿತು ಯಾವ ಅಪ್ಡೇಟ್ ಕೊಡುತ್ತದೆ ಎಂದು ಅಲ್ಲು ಅರ್ಜುನ್ ಅಭಿಮಾನಿಗಳು ಕಾಯುತ್ತಿರುತ್ತಾರೆ. ಇದೀಗ ಮೇ 1 ರಂದು ಸಿನೆಮಾದ ಹಾಡೊಂದನ್ನು ರಿಲೀಸ್ ಮಾಡಲಾಗಿದೆ. ಪುಷ್ಪ ಪುಷ್ಪ ಅನ್ನೋ ಈ ಹಾಡಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಾಡಿನಲ್ಲಿ ಅಲ್ಲು ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
ಮಾಸ್ ಲುಕ್ ನಲ್ಲಿ ಅಲ್ಲು ಅರ್ಜುನ್ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗೆ ಫ್ಯಾನ್ಸ್ ಫಿದಾ ಆಗಿರೋದಂತೂ ಸುಳ್ಳಲ್ಲ. ಎಂದಿನಂತೆ ಅಲ್ಲು ಡ್ಯಾನ್ಸ್ ಸಕತ್ತಾಗಿಯೇ ಇದೆ. ಟೀ ಗ್ಲಾಸ್ ಹಿಡಿದು ಅಲ್ಲು ಅರ್ಜುನ್ ವ್ಹಾವ್ ಎಂದೆನಿಸುವಂತೆ ಸ್ಟೆಪ್ ಹಾಕಿದ್ದಾರೆ.
ಬಿಡುಗಡೆಯಾದ ಕೆಲವೇ ಘಂಟೆಯಲ್ಲಿ ಲಕ್ಷಾಂತರ ಜನರು ವೀಕ್ಷಣೆ ಮಾಡಿದ್ದಾರೆ. ಸದ್ಯ 9.7 ಮಿಲಿಯನ್ ವೀಕ್ಷಣೆ ಪಡೆದಿದೆ. ಈ ಮೂಲಕ ಭಾರತದಲ್ಲಿನ ಸಂಗೀತ ಪಟ್ಟಿಯಲ್ಲಿ ಈ ಹಾಡು ಅಗ್ರಸ್ಥಾನ ಪಡೆದುಕೊಂಡಿದೆ.
ದೇವಿ ಶ್ರೀ ಪ್ರಸಾದ್ ಸಂಗೀತ ಸಂಯೋಜಿಸಿರುವ ಈ ಹಾಡನ್ನು ಅಲ್ಲು ಅರ್ಜುನ್ ಪಾತ್ರದ ಮೇಲೆ ಚಿತ್ರಿಸಲಾಗಿದೆ. ತೆಲುಗು ಹಾಡಿಗೆ ಚಂದ್ರಬೋಸ್ ಸಾಹಿತ್ಯ ಬರೆದಿದ್ದು ,ನಕಾಶ್ ಅಜೀಜ್, ದೀಪಕ್ ಬ್ಲೂ ದನಿಯಾಗಿದ್ದಾರೆ. ‘ಪುಷ್ಪ ಪುಷ್ಪ’ ಹಾಡು ತೆಲುಗು, ಹಿಂದಿ, ತಮಿಳು, ಕನ್ನಡ, ಮಲಯಾಳಂ ಮತ್ತು ಬೆಂಗಾಲಿ ಎಂಬ ಆರು ಭಾಷೆಗಳಲ್ಲಿ ಬಿಡುಗಡೆಯಾಗಿದೆ.
ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!
ತೆರೆಗೆ ಯಾವಾಗ?
ಅಲ್ಲು ಅರ್ಜುನ್ ಜೊತೆ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಟಿಸಿದ್ದಾರೆ. ಫಹಾದ್ ಫಾಸಿಲ್ , ಡಾಲಿ ಧನಂಜಯ್, ಜಗದೀಶ್ ಪ್ರತಾಪ್ ಭಂಡಾರಿ, ರಾವ್ ರಮೇಶ್, ಜಗಪತಿ ಬಾಬು, ಅಜಯ್, ಸುನಿಲ್, ಮೈಮ್ ಗೋಪಿ, ಅನಸೂಯಾ ಭಾರದ್ವಾಜ್, ಶ್ರೀತೇಜ್, ಬ್ರಹ್ಮಾಜಿ ಮೊದಲಾದವರು ಪಾತ್ರವಾಗಿದ್ದಾರೆ.
‘ಪುಷ್ಪ 2: ದಿ ರೂಲ್’ ಆಗಸ್ಟ್ 15, 2024 ರಂದು ವಿಶ್ವದಾದ್ಯಂತ ಥಿಯೇಟರ್ಗಳಲ್ಲಿ ಬಿಡುಗಡೆಯಾಗಲಿದೆ. ಪುಷ್ಪಾದಲ್ಲಿದ್ದ ಆಕ್ಷನ್ ಗಿಂತ ಹೆಚ್ಚಿನ ಆಕ್ಷನ್ ಪುಷ್ಪಾ 2 ನಲ್ಲಿ ಇರಲಿದೆಯಂತೆ. ಪುಷ್ಪಾದಲ್ಲಿ ಮರಗಳ್ಳತನದ ಕಥೆ ಇದ್ರೆ, ಪುಷ್ಪಾ2 ನಲ್ಲಿ ಕೆಂಪು ಮರಳು ಕಳ್ಳಸಾಗಾಟದ ಬಗ್ಗೆ ಹೇಳಲಾಗಿದೆ.
LATEST NEWS
ಹೊಸ ಅಪ್ಡೇಟ್ ನೊಂದಿಗೆ ಬರುತ್ತಿದೆ ವಾಟ್ಸ್ಆ್ಯಪ್; ಏನದು ಗೊತ್ತಾ!?
ಮಂಗಳೂರು : ಆ್ಯಪ್ ಗಳು ಅಂದ್ರೆ ಹೊಸ ಹೊಸ ಫೀಚರ್ ಗಳ ಅನಾವರಣ ಮಾಡುತ್ತಿರುತ್ತವೆ. ಬಳಕೆದಾರರಿಗೆ ಅನುಕೂಲತೆಯನ್ನು ಸೃಷ್ಟಿಸಲು ನವೀನ ಫೀಚರ್ ಗಳನ್ನು ಅಳವಡಿಸಲಾಗುತ್ತದೆ. ವಾಟ್ಸ್ ಆ್ಯಪ್ ಕೂಡ ಹೊಸ ಹೊಸ ಫೀಚರ್ ಗಳನ್ನು ಪರಿಚಯಿಸುತ್ತಿರುತ್ತದೆ. ಇದೀಗ ಮತ್ತೊಂದು ಹೊಸ ಫೀಚರ್ ಪರಿಚಯಿಸುತ್ತಿದೆ.
ಏನಿದು ಫೀಚರ್ ?
ವಾಟ್ಸ್ ಆ್ಯಪ್ ಗೆ ಅತ್ಯಂತ ಹೆಚ್ಚಿನ ಬಳಕೆದಾರರಿದ್ದಾರೆ. ಈಗಾಗಲೇ ನೂತನ ಫೀಚರ್ ಗಳನ್ನು ವಾಟ್ಸ್ ಆ್ಯಪ್ ಪರಿಚಯಿಸುತ್ತಿರುತ್ತದೆ. ಇದೀಗ ಹೊಸ ಫೀಚರ್ವೊಂದನ್ನು ಪರಿಶೀಲಿಸುತ್ತಿದೆ. ಇಂಟರ್ನೆಟ್ ಇಲ್ಲದಿದ್ದರೂ ವಾಟ್ಸಾಪ್ನಲ್ಲಿ ಫೋಟೋ, ವೀಡಿಯೋ ಇತ್ಯಾದಿ ಫೈಲ್ ಶೇರಿಂಗ್ ಮಾಡಲು ಅವಕಾಶ ಕೊಡುವ ಫೀಚರ್ ಇದಾಗಿದೆ. ಬೀಟಾ ಆವೃತ್ತಿಯಲ್ಲಿ ಇದನ್ನು ಪರೀಕ್ಷಿಸಲಾಗುತ್ತಿದೆ. ಶೀಘ್ರದಲ್ಲಿ ಬಿಡುಗಡೆ ಆಗಬಹುದು ಎನ್ನಲಾಗುತ್ತಿದೆ.
ಇದನ್ನೂ ಓದಿ : 123 ವರ್ಷಗಳಲ್ಲಿ 2ನೇ ಬಾರಿಗೆ ಅತ್ಯಧಿಕ ತಾಪಮಾನ..! ಇನ್ನೂ 11 ದಿನ ಮುಂದುವರಿಯಲಿದೆ ಬಿಸಿ ಶಾಖ..!
ನಿಯರ್ ಬೈ ಡಿವೈಸ್, ಕ್ವಿಕ್ ಶೇರಿಂಗ್ ಇತ್ಯಾದಿ ಫೀಚರ್ ರೀತಿಯಲ್ಲಿ ಇದು ಇರಬಹುದು ಎನ್ನಲಾಗಿದೆ.
ಭಾರತ ಸೇರಿದಂತೆ ಜಗತ್ತಿನಾದ್ಯಂತ ವಾಟ್ಸ್ ಆ್ಯಪ್ ಜನಪ್ರಿಯ. ಜನರಿಗೆ ಹೆಚ್ಚಿನ ಖಾಸಗಿತನ ಮತ್ತು ಭದ್ರತೆಯನ್ನು ಒದಗಿಸಲು ಕೂಡ ವಾಟ್ಸ್ಆ್ಯಪ್ ಸಹಾಯ ಮಾಡುತ್ತದೆ.