Connect with us

DAKSHINA KANNADA

ಮಂಗಳೂರು ಸಂತ ಜೋಸೆಫ್ ಇಂಜಿನಿಯರಿಂಗ್​ ಕಾಲೇಜಿಗೆ ಯುಜಿಸಿ ಸ್ವಾಯತ್ತತೆ

Published

on

ಮಂಗಳೂರು : ವಾಮಂಜೂರಿನ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿಗೆ 2021-22ರ ಶೈಕ್ಷಣಿಕ ವರ್ಷದಿಂದ ಹೊಸ ಸ್ವಾಯತ್ತ ಸ್ಥಾನಮಾನ ಸಿಕ್ಕಿದೆ. ಈ ಮೂಲಕ ದಕ್ಷಿಣ ಕನ್ನಡ ಜಿಲ್ಲೆಯ ಇಂಜಿನಿಯರಿಂಗ್ ಕಾಲೇಜಿಗೆ ಮೊದಲ ಬಾರಿಗೆ ಯುಜಿಸಿಯಿಂದ ಸ್ವಾಯತ್ತತೆ ದೊರಕಿದಂತಾಗಿದೆ.

ಈ ಬಗ್ಗೆ  ಕಾಲೇಜಿನ ಪ್ರಾಂಶುಪಾಲ ಡಾ. ರಿಯೋ ಡಿಸೋಜ ಸುದ್ದಿಗೋಷ್ಟಿ ಕರೆಯಿಸಿ ಪ್ರತಿಕ್ರಿಯೆ ನೀಡಿದ್ದಾರೆ. ಯುಜಿಸಿ ತಜ್ಞರ ತಂಡವು 2020ರ ನವೆಂಬರ್‌ 28, 29ರಂದು ಕಾಲೇಜಿಗೆ ಭೇಟಿ ನೀಡಿ ಸಂಸ್ಥೆ ಕುರಿತು ಮಾಹಿತಿ ಪಡೆದುಕೊಂಡಿತ್ತು.
ಆದರೆ ಇದೀಗ ಬೆರಳೆಣಿಕೆಯಷ್ಟು ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ನಮ್ಮ ಸಂಸ್ಥೆಯೂ ಸ್ಥಾನ ಮಾನವನ್ನು ಪಡೆದುಕೊಂಡಿರುವುದು ಕಾಲೇಜಿನ ವಿಶ್ವಾಸಾರ್ಹತೆಯನ್ನು ಹೆಚ್ಚಿಸಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿ, ಸ್ವಾಯತ್ತತೆಯ ಪ್ರಮಾಣಪತ್ರವನ್ನು ಪ್ರದರ್ಶಿಸಿದರು.
ಸುದ್ದಿಗೋಷ್ಠಿಯಲ್ಲಿ ಕಾಲೇಜಿನ ನಿರ್ದೇಶಕ ವಿಲ್ಪ್ರೇಡ್‌ ಪ್ರಕಾಶ ಡಿ ಸೋಜ, ಉಪನಿರ್ದೇಶಕರಾದ ರೋಹಿತ್‌ ಡಿ ಕೋಸ್ತಾ, ಆಲ್ವಿನ್‌ ರಿಚಾರ್ಡ್‌ ಡಿ ಸೋಜಾ, ರಾಕೇಶ್‌ ಲೋಬೋ, ಡಾ. ಶ್ರೀರಂಗ ಭಟ್‌ ಮೊದಲಾದವರು ಉಪಸ್ಥಿತರಿದ್ದರು.

ಈ ಬಗ್ಗೆ ಮಾತನಾಡಿದ ಸಂತ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲ ಡಾ.ರಿಯೋ ಡಿಸೋಜ, ಕರ್ನಾಟಕದ ಕೆಲವೇ ಇಂಜಿನಿಯರಿಂಗ್ ಕಾಲೇಜಿಗೆ ಯುಜಿಸಿ ಸ್ವಾಯತ್ತತೆ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ವಾಯತ್ತತೆ ಪಡೆದಿರುವ ಮೊದಲ ಇಂಜಿನಿಯರಿಂಗ್ ಕಾಲೇಜು ನಮ್ಮದೆಂಬುದು ಹೆಮ್ಮೆಯ ವಿಚಾರ.

ಇದರಿಂದಾಗಿ ಉದ್ಯಮದ ಅಗತ್ಯತೆಗಳನ್ನು ಗುರುತಿಸುವ ಮೂಲಕ ಪಠ್ಯಕ್ರಮವನ್ನು ವಿನ್ಯಾಸಗೊಳಿಸಲು, ಆಯ್ಕೆಯ ಚುನಾಯಿತ ಕೋರ್ಸುಗಳನ್ನು ನೀಡಲು, ವಿದೇಶಿ ವಿಶ್ವವಿದ್ಯಾನಿಲಯಗಳೊಂದಿಗೆ ಸಹಯೋಗ ನಡೆಸಲು ಮತ್ತು ವಿದ್ಯಾರ್ಥಿಗಳು ನಿರಂತರ ಮೌಲ್ಯಮಾಪನ ನಡೆಸಲು ಅನುಕೂಲವಾಗಲಿದೆ ಎಂದು ತಿಳಿಸಿದರು.

https://youtu.be/_SvVJQQ6EqY

Ancient Mangaluru

ಕುಂದಾಪುರ: 15 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಅರಣ್ಯ ಇಲಾಖೆ ನೌಕರ

Published

on

ಕುಂದಾಪುರ: ಅರಣ್ಯ ಇಲಾಖೆ ವಶದಲ್ಲಿದ್ದ ವಾಹನ ಬಿಡುಗಡೆಗೆ ಲಂಚ ಸ್ವೀಕರಿಸುತ್ತಿದ್ದ  ಕುಂದಾಪುರ ಅರಣ್ಯ ಇಲಾಖೆಯ ನೌಕರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕುಂದಾಪುರ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯ ಕ್ಷೇಮಾಭಿವೃದ್ಧಿ ನೌಕರ ಬಿ.ಮಂಜುನಾಥ್ ಪೂಜಾರಿ ಬಂಧಿತ ಆರೋಪಿ.

ಅರಣ್ಯ ಇಲಾಖೆ ವಶದಲ್ಲಿದ್ದ ಆಲೂರಿನ ಆದಿತ್ಯ ಎಂಬವರ ವಾಹನ ಬಿಡುಗಡೆಗಾಗಿ ಮಂಜುನಾಥ್ ಪೂಜಾರಿ 15 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದನು.  ಲಂಚ ನೀಡಲು ನಿರಾಕರಿಸಿದ ಆದಿತ್ಯ ಈ ಬಗ್ಗೆ ಉಡುಪಿ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ಆದಿತ್ಯ ಅವರಿಂದ 15 ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ  ಸಂದರ್ಭ ಮಂಜುನಾಥ್ ಪೂಜಾರಿಯನ್ನು ಬಂಧಿಸಿದರು.  ಲೋಕಾಯುಕ್ತ ಎಸ್ಪಿ ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ  ಕೆ.ಸಿ. ಪ್ರಕಾಶ್ ನೇತೃತ್ವದಲ್ಲಿ ಪೊಲೀಸ್ ನಿರೀಕ್ಷಕರಾದ ಮಂಜುನಾಥ್ ಮತ್ತು ರಫೀಕ್ ಹಾಗೂ ಸಿಬಂದಿ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Continue Reading

DAKSHINA KANNADA

ಉಡುಪಿ : ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಜೀವಾಂತ್ಯ

Published

on

ಉಡುಪಿ : ಉಡುಪಿಯ ಬ್ರಹ್ಮಾವರದ ಧರ್ಮಾವರಂ ಎಂಬಲ್ಲಿ ಬೈಕಿಗೆ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ ಸವಾರ ಉಪ್ಪಿನಕೋಟೆಯ 31 ವರ್ಷ ಪ್ರಾಯದ ಪ್ರೀತಮ್‌ ಡಿ’ ಸಿಲ್ವಾ ಸ್ಥಳದಲ್ಲೇ ಮೃತಪಟ್ಟ ಘಟನೆ ನಿನ್ನೆ ನಡೆದಿದೆ.

ಪ್ರೀತಮ್‌ ಅವರು ಬೈಕ್‌ ಚಲಾಯಿಸಿಕೊಂಡು ಬ್ರಹ್ಮಾವರ ಆಕಾಶವಾಣಿ ಪೆಟ್ರೋಲ್‌ ಪಂಪ್‌ ಕಡೆಯಿಂದ ಸರ್ವಿಸ್‌ ರೋಡ್‌ನ‌ಲ್ಲಿ ಆಗಮಿಸಿ ಉಪ್ಪಿನಕೋಟೆಗೆ ತೆರಳಲು ಡಿವೈಡರ್‌ ಬಳಿ ಸಾಗುತ್ತಿದ್ದಾಗ ಎದುರಿನಿಂದ ಬಂದ ಖಾಸಗಿ ಬಸ್‌ ಢಿಕ್ಕಿ ಹೊಡೆಯಿತು. ಅವಿವಾಹಿತರಾಗಿದ್ದ ಪ್ರೀತಮ್‌ ಕೆಟರಿಂಗ್‌ ಉದ್ಯಮ ನಡೆಸುತ್ತಿದ್ದರು. ಪ್ರೀತಮ್‌ ಅವರು ತಂದೆ, ತಾಯಿ ಹಾಗೂ ಸಹೋದರಿಯನ್ನು ಅಗಲಿದ್ದಾರೆ. ಬ್ರಹ್ಮಾವರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Continue Reading

DAKSHINA KANNADA

ಮನೆ ಬಿಟ್ಟು ಓಡಿ ಹೋಗಿದ್ದ ಬಂಟ್ವಾಳದ ಪ್ರೇಮಿಗಳು ಕಾಸರಗೋಡಿನಲ್ಲಿ ಪತ್ತೆ

Published

on

ಬಂಟ್ವಾಳ : 4 ದಿನಗಳ ಹಿಂದೆ ನಾಪತ್ತೆಯಾಗಿದ್ದ ಬಂಟ್ವಾಳ ತಾಲೂಕು ಸಜೀಪಮುನ್ನೂರು ಗ್ರಾಮದ ಉದ್ದೊಟ್ಟು ನಿವಾಸಿಗಳಾದ ಅಕ್ಕ ಪಕ್ಕದ ಮನೆಗಳ ಯುವಕ ಹಾಗೂ ಯುವತಿಯನ್ನು ಬಂಟ್ವಾಳ ಪೊಲೀಸರು ಕೇರಳದ ಕಾಸರಗೋಡು ಜಿಲ್ಲೆಯ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿ ಊರಿಗೆ ಕರೆ ತಂದಿದ್ದಾರೆ.

ಉದ್ದೊಟ್ಟು ನಿವಾಸಿ ಅಬ್ದುಲ್‌ಹಮೀದ್‌ಅವರ ಪುತ್ರಿ ಆಯಿಸತ್‌ರಸ್ಮಾ(18) ಮತ್ತು ಹೈದರ್‌ಅವರ ಪುತ್ರ ಮಹಮ್ಮದ್‌ಸಿನಾನ್‌ (23) ಅವರು ನ. 23 ರಂದು ತಂತಮ್ಮ ಮನೆಗಳಲ್ಲಿ ಮಲಗಿದ್ದವರು ನ. 24ರಂದು ಬೆಳಗಾಗುವಷ್ಟರಲ್ಲಿ ಕಾಣೆಯಾಗಿದ್ದರು. ಮನೆಯವರ ದೂರಿನಂತೆ ಹುಡುಕಾಟ ನಡೆಸಿದ ಬಂಟ್ವಾಳ ಪೊಲೀಸರು ಅವರಿಬ್ಬರನ್ನೂ ಕಾಂಞಂಗಾಡಿನಲ್ಲಿ ಪತ್ತೆ ಹಚ್ಚಿದ್ದು, ಠಾಣೆಗೆ ತಂದು ವಿಚಾರಿಸಿದಾಗ ತಾವಿಬ್ಬರೂ ಪರಸ್ಪರ ಪ್ರೀತಿಸಿದ್ದು, ಮದುವೆಯಾಗುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

Continue Reading

LATEST NEWS

Trending