BELTHANGADY
ಉಜಿರೆ-ಧರ್ಮಸ್ಥಳ ರಸ್ತೆ ಇನ್ಮುಂದೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ
ಬೆಳ್ತಂಗಡಿ : ಶಿರಾಡಿ ರಸ್ತೆಯಾಗಿ ಪೆರಿಯ ಶಾಂತಿಯಿಂದ ಕೊಕ್ಕಡ ಮೂಲಕ ಧರ್ಮಸ್ಥಳವನ್ನು ಸೇರುವ ಹಾಗೂ ಚಾರ್ಮಾಡಿ ಮಾರ್ಗವಾಗಿ ಬಂದು ಉಜಿರೆಯಿಂದ ಧರ್ಮಸ್ಥಳಕ್ಕೆ ಸಾಗುವ ರಸ್ತೆಯು ಶೀಘ್ರ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಲಿದೆ.
ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ಕಳೆದ ಬಾರಿ ಧರ್ಮಸ್ಥಳ ನೇತ್ರಾವತಿ ವರೆಗಿನ ಚತುಷ್ಪಥ ರಸ್ತೆ ಉದ್ಘಾಟನೆ ವೇಳೆ ಉಜಿರೆ-ಪೆರಿಯಶಾಂತಿ ರಸ್ತೆಯನ್ನು ಮೇಲ್ದರ್ಜೆಗೇರಿಸುವ ಅಗತ್ಯದ ಬಗ್ಗೆ ಪ್ರಸ್ತಾವವನ್ನು ಸರಕಾರದ ಮುಂದಿಟ್ಟಿದ್ದರು.
ಇದೀಗ ರಾಷ್ಟ್ರೀಯ ಹೆದ್ದಾರಿ 75ರ ಪೆರಿಯಶಾಂತಿಯನ್ನು ಸಂಪರ್ಕಿಸುವ ಉಜಿರೆಯಿಂದ ಪೆರಿಯಶಾಂತಿ ವರೆಗಿನ 30 ಕಿ.ಮೀ. ವ್ಯಾಪ್ತಿಯನ್ನು ರಾ.ಹೆ.-73ರ ಸ್ಪರ್ ರಸ್ತೆಯಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಅಧಿಕೃತವಾಗಿ ಘೋಷಿಸಿದೆ.
ರಸ್ತೆಯನ್ನು ರಾಜ್ಯ ಹೆದ್ದಾರಿ ಇಲಾಖೆಯಿಂದ ರಾಷ್ಟ್ರೀಯ ಹೆದ್ದಾರಿ ಇಲಾಖೆಗೆ ಹಸ್ತಾಂತರಿಸುವ ಪ್ರಕ್ರಿಯೆ ನಡೆಯುತ್ತಿದೆ.
ಈ ಬಗ್ಗೆ ಮಾತನಾಡಿರುವ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತ, ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಮಹಾಬಲ ನಾಯ್ಕ ‘ಐತಿಹಾಸಿಕ ಕ್ಷೇತ್ರಗಳನ್ನು ಸಂಪರ್ಕಿಸುವ ಒಂದು ರಾಜ್ಯದಿಂದ ಇನ್ನೊಂದು ರಾಜ್ಯಕ್ಕೆ, ಒಂದು ರಾಷ್ಟ್ರೀಯ ಹೆದ್ದಾರಿಯಿಂದ ಇನ್ನೊಂದು ರಾಷ್ಟ್ರೀಯ ಹೆದ್ದಾರಿಯನ್ನು ಸಂಪರ್ಕಿಸುವ ಅಥವಾ ಒಂದು ಪ್ರಮುಖ ರಸ್ತೆಯಿಂದ ಇನ್ನೊಂದು ಪ್ರಮುಖ ರಸ್ತೆಗೆ ಸಂಪರ್ಕಿಸುವ, ಒಳದಾರಿಗಳು ಅಥವಾ ಸಮೀಪದ ದಾರಿಗಳನ್ನು ಮೇಲ್ದರ್ಜೆ ಗೇರಿಸಿಕೊಂಡು ಅವುಗಳಿಗೆ ಸಮರ್ಪಕವಾದ ಅನುದಾನ ಒದಗಿಸಿಕೊಂಡು ರಾಷ್ಟ್ರೀಯ ಹೆದ್ದಾರಿ ಮಾದರಿಯ ರಸ್ತೆಯಂತೆ ಸುಸಜ್ಜಿತವಾಗಿ ನಿರ್ಮಾಣ ಮಾಡುವುದು ಈ ಸ್ಪರ್ ಯೋಜನೆಯ ಪ್ರಮುಖ ಉದ್ದೇಶವಾಗಿದೆ.
ಇತಿಹಾಸ ಪ್ರಸಿದ್ಧ ದೇವಾಲಯಗಳು, ತೀರ್ಥ ಕ್ಷೇತ್ರಗಳನ್ನು ಸಂಪರ್ಕಿಸುವ ರಸ್ತೆಗಳಿಗೆ ಈಗಾಗಲೇ ರಾಜ್ಯದ ಹಲವೆಡೆ ಈ ರೀತಿಯ ಯೋಜನೆಯನ್ನು ಅನ್ವಯಿಸಲಾಗಿದೆ.
ಉಜಿರೆಯಿಂದ ಧರ್ಮಸ್ಥಳ ವರೆಗೆ ಚತುಷ್ಪಥದ ಬೇಡಿಕೆಯಿದ್ದು, ಧರ್ಮಸ್ಥಳ – ನಿಡ್ಲೆ – ಕೊಕ್ಕಡ ಮಾರ್ಗವಾಗಿ ಪೆರಿಯಶಾಂತಿ ವರೆಗೆ 10 ಮೀಟರ್ ಅಗಲದ ರಸ್ತೆ ನಿರ್ಮಾಣ ಸಾಧ್ಯತೆಯಿದೆ.
ಪ್ರಸ್ತುತ ಲೋಕೋಪಯೋಗಿ ಇಲಾಖೆಯ ಅಧೀನದಲ್ಲಿರುವ ಈ ರಸ್ತೆಯು ಧರ್ಮಸ್ಥಳದಿಂದ ಪೆರಿಯ ಶಾಂತಿ ವರೆಗಿನ ದುರಸ್ತಿ ಕಾರ್ಯಕ್ಕೆ ಪ್ರಸಕ್ತ ವರ್ಷದಲ್ಲಿ ಅನುದಾನ ದೊರೆತಿದ್ದು ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದೆ.
ಮುಂದಿನ ದಿನಗಳಲ್ಲಿ ಧರ್ಮಸ್ಥಳ – ಸುಬ್ರಹ್ಮಣ್ಯ – ಮಂಗಳೂರು – ಬೆಂಗಳೂರು – ಉಡುಪಿ – ಸೋಲಾಪುರ ಪ್ರದೇಶಕ್ಕೆ ತೆರಳುವ ಪ್ರಯಾಣಿಕರಿಗೆ ಈ ರಸ್ತೆ ವಿಸ್ತರಣೆಯಿಂದ ಅನುಕೂಲವಾಗಲಿದೆ.
ಉಜಿರೆ – ಧರ್ಮಸ್ಥಳ ಚತುಷ್ಪಥ
ಧರ್ಮಸ್ಥಳ ಕ್ಷೇತ್ರದ ಭಕ್ತರ ಅನುಕೂಲ ಹಾಗೂ ಸ್ಥಳೀಯ ಜನರ ಅಗತ್ಯ ಮನಗಂಡು ಈಗಿರುವ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೇರಿಸಲಾಗಿದೆ.
ಉಜಿರೆಯಿಂದ ಧರ್ಮಸ್ಥಳವರೆಗೆ ಚತುಷ್ಪಥ ನಿರ್ಮಾಣವಾಗಲಿದ್ದು ಉಳಿದಂತೆ ದ್ವಿಪಥವಾಗಿ ಅಭಿವೃದ್ಧಿಯಾಗಲಿದೆ ಎಂದು ಶಾಸಕ ಹರೀಶ್ ಪೂಂಜ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 73ನ್ನು ಸಂಪಕಿಸುವ ಉಜಿರೆ- ಪೆರಿಯಶಾಂತಿ ರಸ್ತೆ ಐತಿಹಾಸಿಕ ಸ್ಥಳಗಳನ್ನು ಸಂಪರ್ಕಿಸುವ ಸ್ಪರ್ ಯೋಜನೆಯಲ್ಲಿ ಮೇಲ್ದರ್ಜೆಗೆ ಏರಿಸುವ ಕುರಿತು ಅಧಿಕೃತ ಆದೇಶ ಬಿಡುಗಡೆಯಾಗಿ ನೋಟಿಫಿಕೇಶನ್ ಹಂತದಲ್ಲಿದೆ.
BELTHANGADY
ಅಂತರಾಷ್ಟ್ರೀಯ ಟಾರ್ಗೆಟ್ ಬಾಲ್ ಪಂದ್ಯಾಟದಲ್ಲಿ ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯ ವಿದ್ಯಾರ್ಥಿಗಳ ಸಾಧನೆ
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಕಲಾ ವಿಭಾಗದ ಸಿದ್ದಾರ್ಥ್ ಎಂ.ಸಿ ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ಫ್ಲಾಯ್ಡ್ ಮಿಸ್ಕಿತ್ ರಾಷ್ಟ್ರಮಟ್ಟದ ಟಾರ್ಗೆಟ್ ಬಾಲ್ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ನೇಪಾಳದ ಕಠ್ಮಂಡುವಿನಲ್ಲಿ ಜುಲೈ 8 ರಿಂದ ಜರುಗಿದ ಅಂತರಾಷ್ಟ್ರೀಯ ಮಟ್ಟದ ದಕ್ಷಿಣ ಏಷ್ಯಾ ಟಾರ್ಗೆಟ್ ಬಾಲ್ ಚಾಂಪಿಯನ್ ಶಿಪ್ ನಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನ ಪಡೆದಿರುತ್ತಾರೆ.
ಫ್ಲಾಯ್ಡ್ ಮಿಸ್ಕಿತ್ ಮಡಂತ್ಯಾರು ನಿವಾಸಿ ಬೇಬಿ ಡಯಾನ ಮಿಸ್ಕಿತ್ ಹಾಗೂ ಕ್ಲೌಡಿ ಫ್ರಾನ್ಸಿಸ್ ಮಿಸ್ಕಿತ್ ದಂಪತಿಗಳ ಪುತ್ರರಾಗಿದ್ದು, ಸಿದ್ಧಾರ್ಥ್ ಎಂ.ಸಿ ಮಂಗಳೂರಿನ ಕಪಿತಾನಿಯೊ ಪದವಿ ಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ ಮಮಿತಾ ಹಾಗೂ ಬಿ.ಸಿ.ರೋಡ್ ನ ನ್ಯಾಯವಾದಿ ಪಿ.ಚೆನ್ನಪ್ಪ ಸಾಲಿಯಾನ್ ದಂಪತಿಗಳ ಪುತ್ರರಾಗಿದ್ದಾರೆ.
ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ರಾಘವೇಂದ್ರ ವಿಟ್ಲ ತರಬೇತಿ ನೀಡಿರುತ್ತಾರೆ.
BELTHANGADY
ಬೆಳ್ತಂಗಡಿ: ವಿದ್ಯುತ್ ತಗುಲಿ ಯುವಕ ಮೃ*ತ್ಯು
ಉಪ್ಪಿನಂಗಡಿ: ಮನೆಯಲ್ಲಿ ವಿದ್ಯುತ್ ಇಲ್ಲವೆಂದು ವಿದ್ಯುತ್ ಪರಿವರ್ತಕದ ಬಳಿ ಫ್ಯೂಸ್ ಹಾಕಲು ತೆರಳಿದ ಯುವಕನೋರ್ವ ವಿದ್ಯುತ್ ಆಘಾ*ತಕ್ಕೆ ಬ*ಲಿಯಾದ ಘಟನೆ ಜು.15ರಂದು ಇಳಂತಿಲ ಗ್ರಾಮದ ಗೋಳಿತ್ತಡಿ ಎಂಬಲ್ಲಿ ನಡೆದಿದೆ.
ಹರೀಶ (32) ಮೃ*ತ ಯುವಕ. ಅಡಿಕೆ ಸುಲಿಯುವ ಕೆಲಸ ಮಾಡುತ್ತಿದ್ದ ಈತ ಉತ್ತಮ ಕಬಡ್ಡಿ ಆಟಗಾರನೂ ಆಗಿದ್ದು, ತನ್ನ ಮನೆಗೆ ವಿದ್ಯುತ್ ಬರುತ್ತಿಲ್ಲವೆಂದು ವಿದ್ಯುತ್ ಪ್ರವಹಿಸಿ ಈತ ಮೃ*ತಪಟ್ಟಿದ್ದಾರೆ.
BELTHANGADY
ವಿಧಾನಸಭಾ ಅಧಿವೇಶನ: ಫಝಲ್ ಕೋಯಮ್ಮ ತಂಙಳ್, ನಿರೂಪಕಿ ಅಪರ್ಣಾ ಸಹಿತ ಅಗಲಿದ ಗಣ್ಯರಿಗೆ ಸಂತಾಪ
ಬೆಂಗಳೂರು: ವಿಧಾನ ಮಂಡಲ ಉಭಯ ಸದನಗಳ ಮುಂಗಾರು ಅಧಿವೇಶನ ಇಂದು ಪೂರ್ವಾಹ್ನ 11 ಗಂಟೆಗೆ ಆರಂಭಗೊಂಡಿತು.
ಸದನ ಆರಂಭಗೊಳ್ಳುತ್ತಿದ್ದಂತೆ ಸಭಾಧ್ಯಕ್ಷರಾದ ಯು.ಟಿ.ಖಾದರ್ ಅವರು ಸಂತಾಪ ಸೂಚಿಸುವ ನಿರ್ಣಯವನ್ನು ಮಂಡಿಸಿ, ಅಗಲಿದ ಗಣ್ಯರ ಕೊಡುಗೆಗಳನ್ನು ಸ್ಮರಿಸಿದರು.
ಅಗಲಿದ ಗಣ್ಯರಾದ ಧಾರ್ಮಿಕ ಮುಖಂಡ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಅಲ್ ಬುಖಾರಿ (ಕೂರತ್ ತಂಙಳ್), ನಿರೂಪಕಿ ಅಪರ್ಣಾ, ಸಾಹಿತಿ ಕಮಲಾ ಹಂಪನಾ, ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರಿಗೆ ಸದನಗಳ ಸದಸ್ಯರು ಸಂತಾಪ ಅರ್ಪಿಸಿದರು.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ