DAKSHINA KANNADA
ಉಕ್ರೇನ್ನಿಂದ ತವರಿಗೆ ಮರಳಿದ ವಿದ್ಯಾರ್ಥಿಗಳು: ದ.ಕ ಡಿಸಿಗೆ ಥ್ಯಾಂಕ್ಯೂ ಎಂದ ಪೋಷಕರು
ಮಂಗಳೂರು: ಯುದ್ಧಭೂಮಿ ಉಕ್ರೇನ್ನಿಂದ ಭಾರತ ಸರ್ಕಾರ ಈಗಾಗಲೇ ಹಲವಾರು ಮಂದಿ ವಿದ್ಯಾರ್ಥಿನಿಯರನ್ನು ಸುರಕ್ಷಿತವಾಗಿ ಕರೆತಂದಿದೆ. ಇದೀಗ ದ.ಕ ಜಿಲ್ಲೆಯ ನಾಲ್ಕು ಮೆಡಿಕಲ್ ವಿದ್ಯಾರ್ಥಿಗಳು ತವರೂರಿಗೆ ಮರಳಿದ್ದಾರೆ.
ಮಂಗಳೂರಿನ ದೇರೇಬೈಲ್ ನ ಅನೈನಾ ಅನ್ನ, ಮೂಡುಬಿದಿರೆಯ ದಾಲ್ವಿನ್ ಪ್ರೀತಿ ಅರಾನ್ಹಾ, ಪಡೀಲ್ ನ ಕ್ಲಾಟನ್ ಡಿಸೋಜಾ, ಮಾರ್ಗನ್ಸ್ ಗೇಟ್ನಿಂದ ಸಾದ್ ಅರ್ಷದ್ ಅಹ್ಮದ್ ಹಾಗೂ ದೇರಳಕಟ್ಟೆಯ 4 ನೇ ವರ್ಷದ ವೈದ್ಯ ವಿದ್ಯಾರ್ಥಿನಿ ಲಕ್ಷಿತಾ ಪುರುಷೋತ್ತಮ ಮಂಗಳೂರಿಗೆ ವಾಪಾಸ್ಸಾಗಿದ್ದಾರೆ.
ಇಂದು ಬೆಳಿಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರನ್ನು ಪೋಷಕರು ಸೇರಿದಂತೆ ಕುಟುಂಬಸ್ಥರು ಸಂತಸದಿಂದ ಬರಮಾಡಿಕೊಂಡರು.
“ನಾವು ಉಕ್ರೇನ್ನಿಂದ ಮಂಗಳೂರಿಗೆ ಹಿಂತಿರುಗುವ ತನಕ ನಿರಂತರ ಸಂಪರ್ಕದಲ್ಲಿದ್ದು, ತಾಯ್ನಾಡಿಗೆ ಹಿಂತಿರುಗುವಲ್ಲಿ ಸಹಾಯ ಮಾಡಿದ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅವರಿಗೆ ಧನ್ಯವಾದ ತಿಳಿಸುತ್ತೇವೆ” ಎಂದು ಹೇಳಿದರು.
ಜೊತೆಗೆ ವಿದ್ಯಾರ್ಥಿಗಳು ಸೇರಿ, ಹೂಗುಚ್ಚ ನೀಡಿ ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿದರು. ಇದೇ ವೇಳೆ ಉಪಸ್ಥಿತರಿದ್ದ ಜಿಲ್ಲಾಧಿಕಾರಿಗಳು ವಿದ್ಯಾರ್ಥಿಗಳನ್ನು ಸ್ವಾಗತಿಸಿದರು.
ಈ ವಿದ್ಯಾರ್ಥಿಗಳು ಉಕ್ರೇನ್ ನಲ್ಲಿ ಖಾರ್ಕೀವ್ ಭಾಗದಲ್ಲಿ ವಾಸ್ತವ್ಯದಲ್ಲಿದ್ದರು ಎಂದು ತಿಳಿದುಬಂದಿದೆ.
DAKSHINA KANNADA
ಸಿಎಂ ರಾಜಿನಾಮೆ ನೀಡಬೇಕು; ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯ
ಮಂಗಳೂರು: ಸಿದ್ದರಾಮಯ್ಯ 14 ಸೈಟ್ ವಾಪಾಸ್ ಕೊಟ್ಟಿರುವುದು ಅವರಿಗೆ ಅವರ ತಪ್ಪಿನ ಅರಿವಾದಂತೆ ಇದೆ. ಅವರು ಬದುಕುಳಿಯುವ ಕೊನೆಯ ಯತ್ನವಾಗಿ ಕಾಣುತ್ತದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಒತ್ತಾಯಿಸಿದ್ದಾರೆ.
ಸಂವಿಧಾನದ ಆಶಯಗಳಿಗೆ ಗೌರವ ನೀಡಬೇಕು ಕೇವಲ ಕುರ್ಚಿಗೆ ಅಂಟಿಕೊಂಡಿರುವುದಲ್ಲ . ಸಿದ್ದರಾಮಯ್ಯ ಕೇವಲ ಕುರ್ಚಿಗಾಗಿಯೇ ಇರುವಂತೆ ಮಾಡುತ್ತಾರೆ ಎಂದು ಹೇಳಿದರು.
ಆಮಿಷಗಳಿಗೆ ಜನರನ್ನು ಒಳಪಡಿಸುತ್ತಾ ರಾಜ್ಯವನ್ನೇ ದಿವಾಳಿ ಹಂತಕ್ಕೆ ಸಿದ್ದರಾಮಯ್ಯ ತಂದಿಟ್ಟಿದ್ದಾರೆ. ಕಿಂಚಿತ್ತೂ ಆಭಿವೃದ್ಧಿ ಕಾಣುತ್ತಿಲ್ಲ. ವಾಲ್ಮೀಕಿ ನಿಗಮದಿಂದಲೇ ನೇರವಾಗಿ ಲೋಕಸಭಾ ಚುನಾವಣೆಗೆ ಖರ್ಚು ಮಾಡಿದ್ದಾರೆ. ದಲಿತರ ಜಾಗವನ್ನು ಕಬಳಿಸಿ, ಪತ್ನಿ ಹೆಸರಿಗೆ ಸೈಟ್ ಮಾಡಿಕೊಂಡಿದ್ದಾರೆ ಎಂದರು.
BANTWAL
ಬಸ್ಸಿನಿಂದ ಪರಿಸರ ಮಾಲಿನ್ಯ; ಸಾರ್ವಜನಿಕರ ಆಕ್ರೋಶ
ಬಂಟ್ವಾಳ: ಮಂಗಳೂರು ವಿಭಾಗಕ್ಕೆ ಸೇರಿದ ಕೆಎಸ್ಆರ್ಟಿಸಿ ಬಸ್ಸೊಂದು ಮಂಗಳೂರು – ಧರ್ಮಸ್ಥಳ ಸಂಚರಿಸುವ ವೇಳೆಯಲ್ಲಿ ಜೀವಕ್ಕೆ ಹಾಗೂ ಪರಿಸರಕ್ಕೆ ಹಾನಿಕಾರಕವಾದ ಕಪ್ಪು ಹೊಗೆಯನ್ನು ಹೊರ ಹಾಕುತ್ತಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ಸರಿಯಾದ ನಿರ್ವಹಣೆ ಇಲ್ಲದ ಬಸ್ಸುಗಳನ್ನು ರಸ್ತೆಯಲ್ಲಿ ಓಡಿಸುತ್ತಿದ್ದು, ಇದರಿಂದ ಜನರಿಗೆ ಆಗುತ್ತಿರುವ ತೊಂದರೆಗಳನ್ನು ಶೀಘ್ರವೇ ನಿವಾರಿಸಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಕಪ್ಪು ಹೋಗೆ ಹೊರ ಸೂಸುವ ಬಸ್ಸಿನ ಫೋಟೋಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟು ಸರ್ಕಾರದ ವಿರುದ್ಧ ಕಿಡಿ ಕಾರುತ್ತಿದ್ದಾರೆ.
DAKSHINA KANNADA
ಬಸ್ಸುಗಳು ಮುಖಾಮುಖಿ; ದಂಪತಿಗೆ ಗಾಯ
ನೆಲ್ಯಾಡಿ: ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಬಸ್ಸ್ ಹಾಗೂ ಧರ್ಮಸ್ಥಳದಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸ್ ಅಡ್ಡಹೊಳೆ ಪೆಟ್ರೋಲ್ ಬಂಕ್ ಬಳಿ ಮುಖಾಮುಖಿ ಡಿಕ್ಕಿಹೊಡೆದು ವಾಹನಗಳು ಜಖಂಗೊಂಡಿದೆ.
ಹಾಸನ ಮೂಲದ ದಂಪತಿಗಳಾದ ನಾಗೇಂದ್ರ ಪ್ರಸಾದ್ (60) ಮತ್ತು ಭಾರತಿ (54) ಎಂಬುವವರಿಗೆ ಗಾಯಗಳಾಗಿದ್ದು, ಶಿರಾಡಿಯ ಆಂಬ್ಯುಲೆನ್ಸ್ ಮೂಲಕ ಸಕಲೇಶಪುರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇತ್ತೀಚೆಗೆ ಅತೀ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು, ಚಾಲಕನ ಅತಿವೇಗ ಹಾಗೂ ಅಜಾಗರುಕತೆ ಮುಖ್ಯ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ನೆಲ್ಯಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- DAKSHINA KANNADA6 days ago
ಮಂಗಳೂರು : ಪಾನಿಪುರಿ ಸವಿಯುತ್ತಿದ್ದ ವಿದ್ಯಾರ್ಥಿನಿಯ ಮೊಬೈಲ್ ಎಗರಿಸಿದ ಭೂಪ!
- DAKSHINA KANNADA5 days ago
ಕೆಬಿಬಿಯಲ್ಲಿ ಮಿಂಚಿದ ಮಂಗಳೂರು ಬೆಡಗಿ; ಕೊನೆಗೂ ನನಸಾದ ಅಪೂರ್ವ ಶೆಟ್ಟಿ ಕನಸು
- DAKSHINA KANNADA6 days ago
ಮೂಡುಬಿದಿರೆ: ಕಾರು ಢಿಕ್ಕಿ ಹೊಡೆದು ವಿದ್ಯಾರ್ಥಿ ಸಾ*ವು
- LATEST NEWS5 days ago
ಪುತ್ತೂರು: ಸಾಲ ವಸೂಲಿಗೆಂದು ಮನೆಗೆ ಬಂದ ಬ್ಯಾಂಕ್ ಸಿಬ್ಬಂದಿಗೆ ಪಿಸ್ತೂಲ್ ತೋರಿಸಿ ಬೆದರಿಸಿದ ತಂದೆ ಮಗ