DAKSHINA KANNADA
ಉಳ್ಳಾಲ : ನಿಷೇಧಿತ ಎಂಡಿಎಂಎ ಮಾರಾಟ -ರಿಕ್ಷಾ ಚಾಲಕ ಸೆರೆ..!
ಉಳ್ಳಾಲ(ullal) ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ನನ್ನು ಬಂಧಿಸಲಾಗಿದೆ.
ಉಳ್ಳಾಲ : ಉಳ್ಳಾಲ(ullal) ಪೊಲೀಸ್ ಠಾಣಾ ವ್ಯಾಪ್ತಿಯ ಕುಂಪಲದ ಭಗಂಬಿಲ ಸ್ಮಶಾನದ ಮೈದಾನದಲ್ಲಿ ಸಾರ್ವಜನಿಕವಾಗಿ ಎಂಡಿಎಂಎ ಮಾದಕ ವಸ್ತುವನ್ನು ಮಾರಾಟ ಮಾಡುವ ಬಗ್ಗೆ ಖಚಿತ ಮಾಹಿತಿ ದೊರೆತ ಹಿನ್ನೆಲೆಯಲ್ಲಿ ಶಾಂತಿಬಾಗ್ ನಿವಾಸಿ ಮಹಮ್ಮದ್ ಶರೀಫ್ ಯಾನೆ ಫೈಝಲ್ ನನ್ನು ಬಂಧಿಸಲಾಗಿದೆ.
ಬಂಧಿತನಿಂದ 12 ಗ್ರಾಂ ಎಂಡಿಎಂಎ ಮಾದಕ ವಸ್ತು ಹಾಗೂ ಎರಡು ಮೊಬೈಲ್ ಫೋನ್ ಸಮೇತ ಮಾದಕ ವಸ್ತುವನ್ನು ಮಾರಾಟ ಮಾಡಲು ಉಪಯೋಗಿಸಿದ ಆಟೋರಿಕ್ಷಾವನ್ನು ವಶಕ್ಕೆ ಪಡೆದು ವಶಕ್ಕೆ ಪಡೆದು ಕಾನೂನು ಕ್ರಮ ಜರುಗಿಸಲಾಗಿದೆ.
ವಶಕ್ಕೆ ಪಡೆದ ಒಟ್ಟು ಸ್ವತ್ತುಗಳ ಮೌಲ್ಯ 95,000 ಆಗಬಹುದು. ಉಳ್ಳಾಲ ಪೊಲೀಸ್ ನಿರೀಕ್ಷಕ ಸಂದೀಪ್ ರವರ ಮಾರ್ಗದರ್ಶನದಲ್ಲಿ ಉಳ್ಳಾಲ ಪೊಲೀಸ್ ಠಾಣ ಉಪನಿರೀಕ್ಷಕ ಸಂತೋಷ್ ಕುಮಾರ್ ಹಾಗೂ ಸಿಬ್ಬಂದಿಗಳಾದ ರಂಜಿತ್,ಅಶೋಕ್, ಮಂಜುನಾಥ್ ರವರುಗಳು ದಾಳಿ ಮಾಡಿ ಪ್ರಕರಣ ಬೇಧಿಸಿದ್ದಾರೆ.
ಆರೋಪಿ ಹಲವು ವರ್ಷಗಳಿಂದ ತನ್ನ ರಿಕ್ಷಾವನ್ನು ಕೂಡ ಅಪರಿಮಿತ ವೇಗದಿಂದ ಚಲಾಯಿಸುತ್ತಿದ್ದು, ಹಲವು ರೀತಿಯ ಅಪಘಾತಗಳು ಸ್ವಲ್ಪ ಅಂತರದಲ್ಲಿ ತಪ್ಪಿದೆ.
DAKSHINA KANNADA
ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿ ಹೆಸರು ಉಲ್ಲೇಖಿಸಿದ್ದ ವರ..! ವರನ ಮೇಲೆ ದೂರು ದಾಖಲು..!
ಕಡಬ: ವ್ಯಕ್ತಿಯೊಬ್ಬರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮೋದಿಯ ಕುರಿತಾಗಿ ಉಲ್ಲೇಖಿಸಿದ್ದು ಇದೀಗ ಇಕ್ಕಟ್ಟಿಗೆ ಸಿಲುಕಿರುವ ಘಟನೆ ನಡೆದಿದೆ. ಕಡಬ ತಾಲೂಕಿನ ಆಲಂತಾಯ ನಿವಾಸಿ ಶಿವಪ್ರಸಾದ್ ಎಂಬವರು ತಮ್ಮ ಮದುವೆಯ ಆಮಂತ್ರನ ಪತ್ರಿಕೆಯಲ್ಲಿ ಪ್ರಧಾನಿ ಮೋದಿಯನ್ನು ಮತ್ತೆ ಪ್ರಧಾನಿಯನ್ನಾಗಿ ಮಾಡುವುದು ನಮಗೆ ನೀವು ನೀಡುವ ಉಡುಗೊರೆ ಎಂದು ವಿವಾಹ ಆಮಂತ್ರಣ ಪತ್ರಿಕೆಯಲ್ಲಿ ಉಲ್ಲೇಖಿಸಿದ್ದರು.
ಮುಂದೆ ಓದಿ..; ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!
ಮದುವೆ ನಡೆದ ಬಳಿಕ ವರನ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರನ್ನು ಅಧಿಕಾರಿಗಳು ದಾಖಲಿಸಿಕೊಂಡಿದ್ದಾರೆ. ಮಾರ್ಚ್1 ರಂದು ಮದುವೆ ಆಮಂತ್ರಣ ಪತ್ರಿಕೆ ಮುದ್ರಿಸಿ ಶಿವಪ್ರಸಾದ್ರವರು ಹಂಚಿದ್ದರು. ನೀತಿ ಸಂಹಿತಿ ಘೋಷಣೆಗೆ ಮೊದಲೇ ಈ ಆಮಂತ್ರಣ ಪತ್ರಿಕೆ ಮುದ್ರಣಗೊಂಡಿತ್ತಾದರೂ ಇದೀಗ ಚುನಾವಣಾ ಅಧಿಕಾರಿಗಳಿಂದ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮೇ 3 ರಂದು ಗಬ್ಬರ್ ಸಿಂಗ್ ತುಳು ಸಿನಿಮಾ ತೆರೆಗೆ
ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ತಯಾರಾದ ಸತೀಶ್ ಬಾರ್ಕೂರು ನಿರ್ಮಾಣದ ಗಬ್ಬರ್ ಸಿಂಗ್ ತುಳು ಚಲನ ಚಿತ್ರ ಮೇ 3 ರಂದು ಕರಾವಳಿ ಜಿಲ್ಲೆಯಾದ್ಯಂತ ತೆರೆ ಕಾಣಲಿದೆ.
ಉತ್ತರ ಪ್ರದೇಶದಲ್ಲಿ ನಡೆದ ಘಟನೆಯೊಂದನ್ನು ಆಧರಿಸಿ ಗಬ್ಬರ್ ಸಿಂಗ್ ತುಳು ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಸಿನಿಮಾದಲ್ಲಿ ಆರು ಹಾಡು, ನಾಲ್ಕು ಫೈಟ್ಸ್ ಇದೆ. ಈ ಚಿತ್ರವನ್ನುಸುರತ್ಕಲ್, ಚಿತ್ರಾಪುರ, ಬೈಕಂಪಾಡಿ ಮೊದಲಾದ ಪ್ರದೇಶಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಾಯಕ ನಟನಾಗಿ ಶರಣ್ ಶೆಟ್ಟಿ ನಾಯಕಿಯಾಗಿ ವೆನ್ಸಿಟಾ ಅಭಿನಯಿಸಿದ್ದಾರೆ. ಗಬ್ಬರ್ ಸಿಂಗ್ ಸಿನಿಮಾ ಈಗಾಗಲೇ ಮಸ್ಕತ್ ಮತ್ತು ಉಡುಪಿಯಲ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
“ಗಬ್ಬರ್ ಸಿಂಗ್” ಆ್ಯಕ್ಷನ್ ಥ್ರಿಲ್ಲರ್ ಫ್ಯಾಮಿಲಿ ಓರಿಯೆಂಟೆಡ್ ಫಿಲ್ಮ್ ಆಗಿದೆ. ಈ ಸಿನಿಮಾದ ಕಥೆ, ಚಿತ್ರಕಥೆ, ನಿರ್ಮಾಪಕರು ಸತೀಶ್ ಪೂಜಾರಿ ಬಾರ್ಕೂರ್ , ನಿರ್ದೇಶನದ ಜವಾಬ್ದಾರಿಯನ್ನು ಪ್ರದೀಪ್ ವಹಿಸಿದ್ದಾರೆ. ಮಧು ಸುರತ್ಕಲ್ ಸಂಭಾಷಣೆ ರಚಿಸಿದ್ದಾರೆ.
ಮುಖ್ಯ ಪಾತ್ರದಲ್ಲಿ ಕುಸೇಲ್ದರಸೆ ನವೀನ್ ಡಿ ಪಡೀಲ್, ಅರವಿಂದ ಬೋಳಾರ್, ಭೋಜರಾಜ ವಾಮಂಜೂರು, ಪ್ರಸನ್ನ ಶೆಟ್ಟಿ ಬೈಲೂರು, ಸಾಯಿಕೃಷ್ಣ, ಉಮೇಶ್ ಮಿಜಾರ್, ರವಿರಾಮ ಕುಂಜ, ಗಿರೀಶ್ ಎಂ. ಶೆಟ್ಟಿ ಕಟೀಲ್, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್, ಉದಯ ಆಳ್ವ ಇಡ್ಯಾ, ಸಂದೀಪ್ ಭಕ್ತ, ಕಿರಣ್ ಮಲ್ಪೆ, ಪೂರ್ಣಿಮಾ ಶೆಟ್ಟಿ, ಪವಿತ್ರ ಶೆಟ್ಟಿ,ಚಂದ್ರಹಾಸ ಶೆಟ್ಟಿ ಮಾಣಿ, ಸಂಪತ್ ಲೋಬೋ, ಆಶಾ ಶೆಟ್ಟಿ ಶಿಬರೂರು, ಲಹರಿ ಶೆಟ್ಟಿ ಪಡ್ರೆ, ಶಿಲ್ಪಾ ಶೆಟ್ಟಿ, ಭವ್ಯಾ ಶೆಟ್ಟಿ ಸುರತ್ಕಲ್ ಸಂತೋಷ್, ಚಂದ್ರಹಾಸ ಶೆಟ್ಟಿ ಕಪ್ಪೆಟ್ಟು, ಫ್ರಾಂಕಿ ಕೊಳಲಗಿರಿ, ಉಮೇಶ್ ಶೆಟ್ಟಿ ಹಾವಂಜೆ, ಬೇಬಿ ಆಧ್ಯಾ ಉಡುಪಿ ಮೊದಲಾದವರಿದ್ದಾರೆ.
ಛಾಯಾಗ್ರಹಣ: ರವಿ ಸುವರ್ಣ, ಸಂಕಲನ: ಪ್ರಜ್ವಲ್ ಸುವರ್ಣ, ಕಲೆ: ವೆಂಕಟೇಶ್ ಬೆಂಗಳೂರು, ಸಂಗೀತ: ಡೊಲ್ಪಿನ್ ಕೊಳಲಗಿರಿ. ಹಿನ್ನಲೆ ಸಂಗೀತ: ಕಾರ್ತಿಕ್ ಮುಲ್ಕಿ, ಸಾಹಸ: ಅಲ್ಟಿಮೆಟ್ ಶಿವ್ ನೃತ್ಯ: ಅವಿನಾಶ್ ಬಂಗೇರ, ಶುಭಕಿರಣ್, ಮೇಕಪ್ ಪ್ರದೀಪ್, ವಸ್ತ್ರಾಲಂಕಾರ : ಶರತ್ ಬರ್ಕೆ, ಸಹ ನಿರ್ದೇಶನ: ಪುಷ್ಪರಾಜ ರೈ, ಜಯರಾಜ್, ಸಹಾಯ: ಭಾಗ್ಯರಾಜ್ ಮಾಡಿದ್ದಾರೆ.
ಪ್ರೀಮಿಯರ್ ಶೋ
ಈಗಾಗಲೇ ಮಸ್ಕತ್, ಕತಾರ್ ಉಡುಪಿ, ಸುರತ್ಕಲ್ ನಲ್ಲಿ ಗಬ್ನರ್ ಸಿಂಗ್ ಸಿನಿಮಾದ ಪ್ರೀಮಿಯರ್ ಶೋ ನಡೆದಿದೆ. ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಲಭಿಸಿದೆ. ಸಾಂಸಾರಿಕ ಕತೆಯ ಜೊತೆ ಇಲ್ಲಿ ಹಾಸ್ಯವೂ ಚೆನ್ನಾಗಿ ವಕ್೯ಹೌಟ್ ಆಗಿದೆ. ನವೀನ್ ಪಡೀಲ್, ಬೋಜರಾಜ್ ವಾಮಂಜೂರು, ಅರವಿಂದ ಬೋಳಾರ್, ಸಾಯಿಕೃಷ್ಣ, ಉಮೇಶ್ ಮಿಜಾರ್, ಪ್ರಸನ್ನ ಶೆಟ್ಟಿ ಬೈಲೂರು, ರವಿರಾಮ ಕುಂಜ ಇವರ ಹಾಸ್ಯ ಸಕ್ಕತ್ತಾಗಿದೆ. ಜೊತೆಗೆ ಗಿರೀಶ್ ಶೆಟ್ಟಿ ಕಟೀಲು, ವೀಣಾ ಶೆಟ್ಟಿ ಉಡುಪಿ, ಅಥರ್ವ ಪ್ರಕಾಶ್ ಮೊದಲಾದವರ ಪಾತ್ರಗಳೂ ಕೂಡಾ ಇಲ್ಲಿ ಪ್ರಾಮುಖ್ಯತೆಯನ್ನು ಪಡೆದಿದೆ ಎಂದು ನಿರ್ಮಾಪಕ ಸತೀಶ್ ಬಾರ್ಕೂರು ತಿಳಿಸಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಚಿತ್ರದ ನಿರ್ಮಾಪಕ ಸತೀಶ್ ಪೂಜಾರಿ ಬಾರ್ಕೂರು, ನಟ ಭೋಜರಾಜ ವಾಮಂಜೂರು, ಮಧು ಸುರತ್ಕಲ್, ಚಂದ್ರ ಶೇಖರ ನಾನಿಲ್ ಹಳೆಯಂಗಡಿ, ನಟ ಶರಣ್ ಶೆಟ್ಟಿ
ನಟಿ ವೆನ್ಸಿಟಾ ಇದ್ದರು.
DAKSHINA KANNADA
ಸಾವಿನಲ್ಲೂ ಒಂದಾದ ಸಹೋದರರು! ಅಣ್ಣನ ನಿಧನದ ಸುದ್ದಿ ಕೇಳಿ ಇಹಲೋಕ ತ್ಯಜಿಸಿದ ತಮ್ಮ
ಸುಳ್ಯ : ಸಹೋದರರಿಬ್ಬರು ಸಾ*ವಿನಲ್ಲೂ ಒಂದಾದ ಘಟನೆ ಸುಳ್ಯದ ಅರಂತೋಡಿನಲ್ಲಿ ನಡೆದಿದೆ. ಅರಂತೋಡು ಗ್ರಾಮದ 82 ವರ್ಷದ ಎಸ್. ಇ. ಅಬ್ದುಲ್ಲಾ ಹಾಗೂ ಮಹಮ್ಮದ್ ಎಸ್. ಇ ಮೃ*ತ ಸಹೋದರರು.
ಅಬ್ದುಲ್ಲಾ ಅವರು ಅಲ್ಪಕಾಲದ ಅಸೌಖ್ಯದಿಂದ ನಿಧ*ನರಾಗಿದ್ದಾರೆ. ಈ ವಿಚಾರ ತಿಳಿದ ಅವರ ಸಹೋದರ ಮಹಮ್ಮದ್ ಕುಸಿದು ಬಿದ್ದು ಸಾ*ವನ್ನಪ್ಪಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ : ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?
ಇಬ್ಬರನ್ನು ಕಳೆದುಕೊಂಡ ಕುಟುಂಬ ಶೋಕ ಸಾಗರದಲ್ಲಿ ಮುಳುಗಿದೆ.
- FILM5 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA5 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS6 days ago
ಖತರ್ನಾಕ್ ಕಳ್ಳನನ್ನು ಬಂಧಿಸಿದ ಕೋಟ ಪೊಲೀಸರು; ‘ನನ್ನ ಬಗ್ಗೆ ಮಾಹಿತಿ ಬೇಕಾದ್ರೆ ಯೂಟ್ಯೂಬ್ ನೋಡಿ’ ಎಂದ ಖದೀಮ!
- bangalore6 days ago
ರಾಜ್ಯದ ಎಂಟು ಜಿಲ್ಲೆಗಳಲ್ಲಿ ಮಳೆಯಾಗಲಿದೆ: ಹವಾಮಾನ ಇಲಾಖೆ ಮುನ್ಸೂಚನೆ