DAKSHINA KANNADA
ಉಳ್ಳಾಲ: ಹಿಟ್ ಆಂಡ್ ರನ್ ಪ್ರಕರಣ – ಬೈಕ್ ಸವಾರ ಸಾವು..!
ಬೈಕ್ಗೆ ಇನೋವಾ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಉಳ್ಳಾಲ: ಬೈಕ್ಗೆ ಇನೋವಾ ಕಾರು ಢಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಕೋಟೆಕಾರು ಪಟ್ಟಣ ವ್ಯಾಪ್ತಿಯ ಮಾಡೂರು ವೈದ್ಯನಾಥ ದೈವಸ್ಥಾನ ರಸ್ತೆ ನಿವಾಸಿ ತೇಜಸ್ ಕುಲಾಲ್ ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ತೇಜಸ್ ಕುಲಾಲ್(28) ಮೃತಪಟ್ಟ ದುರ್ದೈವಿ.
ಕಳೆದ ಜೂ.4 ರ ಭಾನುವಾರ ತಡರಾತ್ರಿ ತೇಜಸ್ ಸಂಕೋಳಿಗೆಯ ಪೆಟ್ರೋಲ್ ಬಂಕಿಗೆ ಪೆಟ್ರೋಲ್ ತುಂಬಿಸಲು ಬೈಕಲ್ಲಿ ತೆರಳುತ್ತಿದ್ದ ವೇಳೆ ಕೇರಳ ನೋಂದಾವಣಿಯ ಇನ್ನೋವ ಕಾರೊಂದು ಢಿಕ್ಕಿ ಹೊಡೆದು ಪರಾರಿಯಾಗಿತ್ತು.
ಹಿಟ್ ಆಂಡ್ ರನ್ ಪ್ರಕರಣ ದಾಖಲಿಸಿದ ಮಂಗಳೂರು ದಕ್ಷಿಣ ಸಂಚಾರಿ ಪೊಲೀಸರು ತಲಪಾಡಿ ಟೋಲ್ ಗೇಟಿನ ಸಿಸಿಟಿವಿ ದೃಶ್ಯಾವಳಿ ಆಧಾರದಲ್ಲಿ ಮರುದಿನವೇ ಘಟನೆಗೆ ಕಾರಣವಾದ ಕಾರನ್ನು ವಶಕ್ಕೆ ಪಡೆದುಕೊಂಡಿದ್ದರು.
ಗಂಭೀರ ಗಾಯಗೊಂಡಿದ್ದ ತೇಜಸನ್ನು ತಕ್ಷಣಕ್ಕೆ ದೇರಳಕಟ್ಟೆ ಖಾಸಗಿ ಆಸ್ಪತ್ರೆಗೆ ಸಾಗಿಸಿದ್ದು, ನಂತರ ಮಂಗಳೂರಿನ ಕೆಎಮ್ ಸಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ತಲೆಗೆ ಗಂಭೀರ ಗಾಯವಾಗಿದ್ದ ತೇಜಸ್ ಕೋಮಾ ಸ್ಥಿತಿಯಲ್ಲಿದ್ದು ಇಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಮೃತ ತೇಜಸ್ ಅವಿವಾಹಿತರಾಗಿದ್ದು ಸುಝುಕಿ ಕಂಪನಿಯಲ್ಲಿ ಮೆಕ್ಯಾನಿಕ್ ಆಗಿದ್ದರು.
ತೇಜಸ್ ಬಜರಂಗದಳ ಮಾಡೂರು ಶಾಖೆಯ ಸಕ್ರಿಯ ಕಾರ್ಯಕರ್ತರಾಗಿದ್ದರು.
ಮೃತರು ತಂದೆ ರಾಮ ಕುಲಾಲ್, ತಾಯಿ ರೇವತಿ ಮತ್ತು ಸಹೋದರ ರವೀಂದ್ರ ಅವರನ್ನು ಅಗಲಿದ್ದಾರೆ.
DAKSHINA KANNADA
ಕಾರಿನಲ್ಲಿ ಮಗುವನ್ನು ಮರೆತು ಹೋದ ತಾಯಿ..! ಕಾರಿನಲ್ಲೇ ಮಗುವಿನ ಅಂತ್ಯ…!
ಮಂಗಳೂರು ( ರಾಜಸ್ಥಾನ ) : ಮಕ್ಕಳ ಬಗ್ಗೆ ಪೋಷಕರು ಎಷ್ಟು ಮುಂಜಾಗ್ರತೆ ವಹಿಸಿದರೂ ಸಾಲದು. ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳಬೇಕು. ಆದ್ರೆ, ತಂದೆ ಮತ್ತು ತಾಯಿಯ ನಿರ್ಲಕ್ಷಕ್ಕೆ ಮೂರು ವರ್ಷದ ಬಾಲಕಿ ಅಸುನೀಗಿದ್ದಾಳೆ. ಹೌದು, ಮಗು ಕಾರಿನಲ್ಲಿ ಉಸಿರುಗಟ್ಟಿ ಸಾ*ವನಪ್ಪಿದ ಘಟನೆ ರಾಜಸ್ಥಾನದ ಕೋಟದಲ್ಲಿ ನಡೆದಿದೆ. ಮೃ*ತ ಮಗುವನ್ನು ಕೋಟಾದ ಇಂದ್ರ ಕಾಲೋನಿಯ ನಿವಾಸಿ ಪ್ರದೀಪ್ ಅವರ ಮಗಳು ಗರ್ವಿ (3) ಎಂದು ಗುರುತಿಸಲಾಗಿದೆ.
ಮದುವೆ ಸಂಭ್ರಮದಲ್ಲಿ ಕಳೆದುಹೋದ ದಂಪತಿ :
ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಬಾಲಕಿ ತನ್ನ ಪೋಷಕರೊಂದಿಗೆ ಕಾರಿನಲ್ಲಿ ಬಂದಿದ್ದರು. ಈ ವೇಳೆ ತಾಯಿ ತನ್ನ ಇನ್ನೊಬ್ಬ ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಆದರೆ, ಬಾಲಕಿ ಗರ್ವಿ ಮಾತ್ರ ಕಾರಿನಲ್ಲೇ ಇದ್ದಳು. ಇತ್ತ ತಂದೆ ಕಾರನ್ನು ಪಾರ್ಕ್ ಮಾಡಿ, ಮಗು ಗರ್ವಿ ಕೂಡ ಅವಳ ತಾಯಿಯ ಜೊತೆಗಿದ್ದಾಳೆ ಎಂದು ಭಾವಿಸಿ, ಕಾರನ್ನು ಲಾಕ್ ಮಾಡಿ ತೆರಳಿದ್ದರು.
ಮದುವೆ ಸಮಾರಂಭದಲ್ಲಿ ಗಂಡ ಹೆಂಡತಿ ಇಬ್ಬರು ಮೈಮರೆತಿದ್ದರು. ಬ್ಯುಸಿಯಲ್ಲಿ ಯಾರೂ ತಮ್ಮ ಇನ್ನೊಂದು ಮಗುವಿನ ಬಗ್ಗೆ ಆಲೋಚಿಸಲೇ ಇದೆ. ಸುಮಾರು ಎರಡು ಗಂಟೆಗಳ ಬಳಿಕ ಪೋಷಕರಿಗೆ ಮಗು ಇಲ್ಲದ ಬಗ್ಗೆ ತಿಳಿದು ಬಂದಿದೆ. ಈ ವೇಳೆ ಇಡೀ ಮದುವೆ ಸಭಾಂಗಣ ಹುಡುಕಾಡಿದ್ದಾರೆ. ಬಳಿಕ ಕಾರಿನ ಬಳಿ ಬಂದಾಗ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿತ್ತು. ಕೂಡಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಮಗು ಅಷ್ಟರಲ್ಲೇ ಸಾ*ವನಪ್ಪಿದೆ ಎಂದು ವೈದ್ಯರು ತಿಳಿಸಿದ್ದಾರೆ. ತಮ್ಮ ಸಂಭ್ರಮದಲ್ಲಿ ಮೈಮರೆತ ತಂದೆ – ತಾಯಿಯಿಂದಾಗಿ ಪುಟ್ಟ ಜೀವವೊಂದು ಬ*ಲಿಯಾಗಿದೆ.
DAKSHINA KANNADA
ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ
ಮಂಗಳೂರು : ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಬಹು ನಿರೀಕ್ಷಿತ ಪುಷ್ಪ 2 ಚಿತ್ರ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಸಿನೆಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಆಗಸ್ಟ್ 15 ರಂದು ನಿಗದಿಯಾಗಿದ್ದ ಬಿಡುಗಡೆಯ ದಿನವನ್ನು ಬದಲಾಯಿಸಲಾಗಿದೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.
ಎಡಿಟಿಂಗ್ ಸಮಸ್ಯೆಯಿಂದ ಪುಷ್ಪ 2 ರಿಲೀಸ್ ವಿಳಂಬವಾಗಲಿದೆ ಎಂಬ ಊಹಾಪೋಹಗಳು ಹರಡಿದೆ. ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆಂಟೋನಿ ರೂಬೆನ್ ಪುಷ್ಪ 2 ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಿತ್ತು.
ಆಂಟೋನಿ ರೂಬೆನ್ ಜಾಗಕ್ಕೆ ನವೀನ್ ನೂಲಿ ಬರಲಿದ್ದು, ಪುಷ್ಪ 2 ಬಿಡುಗಡೆ ವಿಳಂಬವಾಗಲಿದೆ ಎಂದು ಹೇಳಿತ್ತು. ಇದು ಎಲ್ಲೆಡೆ ಸುದ್ದಿಯಾಗಿದ್ದು, ಸಿನೆಮಾ ರಿಲೀಸ್ನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಆದ್ರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ನಿಗದಿತ ದಿನಾಂಕ ಆಗಸ್ಟ್ 15 ರಂದೇ ಸಿನೆಮಾ ರಿಲೀಸ್ ಆಗಲಿದೆ ಎಂದು ಸಿನೆಮಾ ತಂಡ ಸ್ಪಷ್ಟನೆ ನೀಡಿದೆ. ಅಲ್ಲೂ ಅರ್ಜುನ್ ಅವರ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ಜೂನ್ ಅಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಹೀಗಾಗಿ ಎಡಿಟಿಂಗ್ ಕೂಡಾ ನಿರಾಂತಕವಾಗಿ ನಡೆಯಲಿದ್ದು, ಈಗಾಗಲೇ ಟೀಸರ್ ಕೂಡಾ ಭಾರೀ ಸದ್ದು ಮಾಡಿದೆ. ರಿಲೀಸ್ ಜೊತೆಗೆ ಬಾಕ್ಸ್ ಆಫೀಸಿನಲ್ಲಿ ಚಿಂದಿ ಉಡಾಯಿಸಲಿರುವ ಪುಷ್ಪಾ 2 ನಿಗದಿಯಾದ ದಿನದಂತೆ ಬಿಡುಗಡೆ ಆಗಲಿದೆ ಅಂತ ಸ್ಪಷ್ಟನೆ ನೀಡಿದ್ದಾರೆ.
DAKSHINA KANNADA
ನಿಮ್ಮ ಆಫೀಸ್ ಡೆಸ್ಕ್ ಮೇಲೆ ಈ ವಸ್ತುಗಳನ್ನು ಇಟ್ಟರೆ ಶುಭ
ಮಂಗಳೂರು: ವಾಸ್ತುಶಾಸ್ತ್ರಕ್ಕೆ ವಿಶೇಷ ಪ್ರಾಮುಖ್ಯತೆ ಇದೆ. ಅದನ್ನು ಪಾಲಿಸಿದರೆ ಅದೃಷ್ಟ ನಿಮ್ಮದಾಗುತ್ತದೆ. ಕಚೇರಿಗೆ ಸಂಬಂಧಿಸಿದ ಅನೇಕ ವಿಚಾರಗಳನ್ನು ವಾಸ್ತುವಿನಲ್ಲಿ ಉಲ್ಲೇಖಿಸಲಾಗಿದೆ. ಅದನ್ನು ಅನುಸರಿಸಿ ಕೆಲಸದಲ್ಲಿ ಪ್ರಗತಿ ಹೊಂದಬಹುದು. ಈ ವಾಸ್ತುಗಳನ್ನು ಅನುಸರಿಸಿದರೆ ನಿಮಗೆ ಬಡ್ತಿ ದೊರೆಯುವುದಲ್ಲದೆ, ಸಂಬಳ ಕೂಡ ಹೆಚ್ಚಾಗುತ್ತದೆ.
ಸ್ಫಟಿಕ ಲೋಹ
ವಾಸ್ತು ಪ್ರಕಾರ ನಿಮ್ಮ ಆಫೀಸ್ ಡೆಸ್ಕ್ ಮೇಲೆ ಸ್ಫಟಿಕ ಲೋಹವನ್ನು ಇಟ್ಟರೆ ಅದು ನಿಮ್ಮ ಕೆಲಸವನ್ನು ಸುಲಭಗೊಳಿಸುತ್ತದೆ.
ಬಿದಿರಿನ ಗಿಡ
ವಾಸ್ತು ಪ್ರಕಾರ ಬಿದಿರಿನ ಗಿಡವನ್ನು ನೀವು ಡೆಸ್ಕ್ ಮೇಲೆ ಇಡುವುದು ಬಹಳ ಮಂಗಳಕರ. ಇದು ನಿಮಗೆ ಚೈತನ್ಯ ತುಂಬುತ್ತದೆ.
ಬುದ್ಧನ ಪ್ರತಿಮೆ
ಬುದ್ಧನ ಪ್ರತಿಮೆಯನ್ನು ಡೆಸ್ಕ್ ಮೇಲಿಟ್ಟರೆ ಅದು ನಿಮ್ಮನ್ನು ಶಾಂತಿಯುತವಾಗಿ ಕೆಲಸ ಮಾಡಲು ಪ್ರೇರೇಪಿಸುತ್ತದೆ.
ಹಡಗು ಚಿತ್ರವಿರುವ ನಾಣ್ಯ
ನಿಮಗೆ ಉದ್ಯೋಗದಲ್ಲಿ ಬಡ್ತಿ ಬೇಕಾದರೆ ವಾಸ್ತುಪ್ರಕಾರ ನಿಮ್ಮ ಟೇಬಲ್ ಮೇಲೆ ಹಡಗು ಚಿತ್ರವಿರುವ ನಾಣ್ಯ ಇಟ್ಟುಕೊಳ್ಳಬೇಕು.
ಗಣೇಶ ಮೂರ್ತಿ
ಇವಿಷ್ಟೇ ಅಲ್ಲದೆ ನೀವು ಮೇಜಿನ ಮೇಲೆ ಗಣೇಶ ಮೂರ್ತಿಯನ್ನು ಇಟ್ಟುಕೊಂಡರೆ ನಿಮಗೆ ಎಂದಿಗೂ ಯಾವ ವಿಘ್ನಗಳೂ ಬರುವುದಿಲ್ಲ.
- FILM7 days ago
“ನಿವೇದಿತಾಜೈನ್”ಗೆ ಸಾ*ವಿನ ಸುಳಿವು ಮೊದಲೇ ಇತ್ತಾ.!? ಈಬಗ್ಗೆ ನಿವೇದಿತಾ ತಾಯಿ ಹೇಳಿದ್ದೇನು ಗೊತ್ತಾ?
- DAKSHINA KANNADA7 days ago
ಮಂಗಳೂರಿನಲ್ಲಿ ಬೆಳಕಿಗೆ ಬಂತು ಬಹುದೊಡ್ಡ ಆನ್ಲೈನ್ ವಂಚನೆ ಪ್ರಕರಣ; ಕೋಟಿಗಟ್ಟಲೆ ಕಳೆದುಕೊಂಡ ನಿವೃತ್ತ ಇಂಜಿನಿಯರ್
- DAKSHINA KANNADA7 days ago
ಪುತ್ತೂರಿನಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಯುವಕ!
- LATEST NEWS6 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು