DAKSHINA KANNADA
ಉಳ್ಳಾಲ: ಕಣಚೂರು ಮೆಡಿಕಲ್ ಕಾಲೇಜಿನಲ್ಲಿ MBBS ಸೀಟು ಕೊಡಿಸುವ ದೋಖಾ-FIR ದಾಖಲು..!
ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟ್ ಮಾಡಿಕೊಡುತ್ತೇನೆ ಎಂದು ನಂಬಿಸಿ 22.05 ಲಕ್ಷ ನಗದು ಹಣವನ್ನು ಪಡೆದು ಸೀಟ್ ಕೊಡಿಸದೇ ಮೋಸ ಮಾಡಿದ ಪ್ರಕರಣ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮಂಗಳೂರು: ಕಣಚೂರು ಮೆಡಿಕಲ್ ಕಾಲೇಜಿನಲ್ಲಿ ಎಂಬಿಬಿಎಸ್ ಸೀಟ್ ಮಾಡಿಕೊಡುತ್ತೇನೆ ಎಂದು ನಂಬಿಸಿ 22.05 ಲಕ್ಷ ನಗದು ಹಣವನ್ನು ಪಡೆದು ಸೀಟ್ ಕೊಡಿಸದೇ ಮೋಸ ಮಾಡಿದ ಪ್ರಕರಣ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಘಟನೆ ವಿವರ
ಬೀದರ್ ಮೂಲದ ಉತ್ತಮ್ ದೀಕ್ಷಿತ್ ಎಂಬುವವರು ಮೆಡಿಕಲ್ ಸೀಟ್ಗಾಗಿ ಹುಡುಕಾಟ ನಡೆಸುತ್ತಿದ್ದರು. ಈ ವೇಳೆ ಕರೆ ಮಾಡಿದ ಮಹಿಳೆಯೊಬ್ಬರು ದೇರಳಕಟ್ಟೆಯ ಕಣಚೂರು ಮೆಡಿಕಲ್ ಇನ್ಸ್ಟಿಟ್ಯೂಟ್ ಆಫ್ ಸಯನ್ಸ್ ಕೌನ್ಸಿಲಿಂಗ್ ಮ್ಯಾನೆಜ್ಮೆಂಟ್ ಕೋಟಾದಲ್ಲಿ ಮೆಡಿಕಲ್ ಸೀಟ್ ಮಾಡಿಕೊಡುವುದಾಗಿ ಹೇಳಿದ್ದಾರೆ.
ಆಗ ಉತ್ತಮ್ ದೀಕ್ಷಿತ್ ನನಗೆ 50 ಲಕ್ಷ ರೂ ಒಳಗಾದರೆ ಮೆಡಿಕಲ್ ಸೀಟ್ ಬೇಕಾಗಿರುತ್ತದೆ ಎಂದು ಕಾಲ್ ಕಟ್ ಮಾಡಿದ್ದಾರೆ. ಇದಾದ ಸ್ವಲ್ಪ ಹೊತ್ತಿನಲ್ಲಿ 9355273847 ಮೊಬೈಲ್ ನಂಬರ್ನಿಂದ ನೇಹ ಎಂಬ ಮಹಿಳೆ ಕಣಚೂರು ಮೆಡಿಕಲ್ ಇನ್ಸ್ಟಿಟ್ಯೂಟ್ ದೇರಳಕಟ್ಟೆ ಮಂಗಳೂರು ಎಂಬಲ್ಲಿ ಸೀಟ್ ಇದೆ, ಇದಕ್ಕೆ ರೂ.15 ಲಕ್ಷ ಕ್ಯಾಪಿಟೇಶನ್ ಫೀಸ್ ಮತ್ತು ರೂ.7.5 ಲಕ್ಷ ಹಣ ಫಸ್ಟ್ ಈಯರ್ ಫೀಸ್ ಕೊಡಬೇಕು, ಒಂದು ವರ್ಷದ ಹಾಸ್ಟೇಲ್ ಫೀಸ್ ಉಚಿತವಾಗಿ ಕೊಡುತ್ತೇವೆ.
ದಾಖಲಾತಿಗಳನ್ನು ವಾಟ್ಸ್ ಆ್ಯಪ್ ಮಾಡಿ ಎಂದಿದ್ದಾರೆ. ಅದರಂತೆ 2022ರ ಡಿ.17 ರಂದು ಉತ್ತಮ್ ದೀಕ್ಷಿತ್ ತನ್ನ ತಾಯಿ ಖಾತೆಯಿಂದ ರೂ.7,50,000/- ಮೌಲ್ಯದ ಡಿಮಾಂಡ್ ಡ್ರಾಫ್ಟ್ ನಂ. ನ್ನು ಪಡೆದು ಅದರ ಫೋಟೊವನ್ನು ವಾಟ್ಸ್ ಆ್ಯಪ್ ಮೂಲಕ ನೇಹರವರ ಮೊಬೈಲ್ ಕಳುಹಿಸಿದ್ದಾರೆ.
2022ರ ಡಿ.20 ರಂದು ಇದೇ ವಿಷಯಕ್ಕೆ ಸಂಬಂಧಿಸಿ 9205481751 ನೇ ನಂಬರ್ನಿಂದ ಪಾಯಲ್ (ಸೀನಿಯರ್ ಎಕ್ಸ್ಕ್ಯೂಟಿವ್) ಎಂಬುವವರು ಉತ್ತಮ್ ದೀಕ್ಷಿತ್ಗೆ ಕರೆ ಮಾಡಿ ಮೆಡಿಕಲ್ ಸೀಟ್ ಕನ್ಫರ್ಮ್ ಇದೆ. ನಾಳೆ ದೇರಳಕಟ್ಟೆ ಕಣಚೂರು ಮೆಡಿಕಲ್ ಇನ್ಸ್ಟಿಟ್ಯೂಟ್ ಬಳಿ ಬಂದು ಯಶ್ ಎಂಬ ವ್ಯಕ್ತಿಯನ್ನು ಭೇಟಿಯಾಗುವಂತೆ ತಿಳಿಸುತ್ತಾರೆ.
ಅದರಂತೆ ಮರುದಿನ ಬೆಳಿಗ್ಗೆ 11-15 ಗಂಟೆಗೆ ದೇರಳಕಟ್ಟೆಗೆ ಬಂದು ಯಶ್ ಎಂಬ ವ್ಯಕ್ತಿಯ 7304082371 ಮೊಬೈಲ್ ಸಂಖ್ಯೆಗೆ ಕರೆ ಮಾಡಿ ಸಿಕ್ಕಿದ್ದಾರೆ. ಕಾಲೇಜು ಸೀಟ್ ಬಗ್ಗೆ ಆಸ್ಪತ್ರೆಯ ಪಾರ್ಕಿಂಗ್ ಏರಿಯಾದ ಬಳಿ ಇರುವ ಮುಖ್ಯಸ್ಥರ ಚೇಂಬರ್ಗೆ ಹೋಗುವಾಗ ಅದೇ ಚೇಂಬರ್ನಿಂದ ಇಫ್ತಿಕಾರ್ ಅಹಮ್ಮದ್ ಎಂಬ ವ್ಯಕ್ತಿ ಹೊರಗೆ ಬಂದು ಮೆಡಿಕಲ್ ಸೀಟ್ ಕನ್ಫರ್ಮ್ ಆಗಿದೆ.
ಇದಕ್ಕೆ ಸಂಬಂಧಪಟ್ಟ ಫಾರ್ಮ್ ಭರ್ತಿಮಾಡಿಕೊಡಬೇಕು ಎಂದಿದ್ದಾರೆ. ಆಗ ಉತ್ತಮ್ ದೀಕ್ಷಿತ್ನನ್ನು ಸಮೀಪದ ಹೊಟೇಲ್ಗೆ ಕರೆದುಕೊಂಡು ಹೋಗಿ ಫಾರ್ಮ್ ಭರ್ತಿ ಮಾಡಿ, ರೂ.7,50,000/- ಮೌಲ್ಯದ ಡಿ.ಡಿ. ಲಗ್ತೀಕರಿಸಿ ಇಫ್ತಿಕಾರ್ ಅಹಮ್ಮದ್ ಅವರ ಕೈಯಲ್ಲಿದ್ದ ಮೆಡಿಕಲ್ ಸೀಟ್ನ ಅಡ್ಮಿಷನ್ ಲೆಟರ್ ಕೊಟ್ಟು, ಬಳಿಕ ಇಫ್ತಿಕಾರ್ ಅಹಮ್ಮದ್ ರವರು ಉತ್ತಮ್ ದೀಕ್ಷಿತ್ ತಂದೆಯ ಬಳಿಯಿಂದ ರೂ.15,00,000/- ನಗದು ಹಣ ಪಡೆದುಕೊಂಡಿದ್ದಾರೆ.
2022ರ ಡಿ.27 ರಂದು 7304082371 ನಿಂದ ಇಫ್ತಿಕಾರ್ ಅಹಮ್ಮದ್ ರವರು ಉತ್ತಮ್ ದೀಕ್ಷಿತ್ಗೆ ಕರೆ ಮಾಡಿ 2022-23 ನೇ ಸಾಲಿನ ಮೆಡಿಕಲ್ ಸೀಟ್ ಆಗಿದೆ. 2023 ಜ.6 ರಿಂದ ಕ್ಲಾಸ್ ಪ್ರಾರಂಭ ಆಗುತ್ತದೆ.
ಆದರೆ ಡಿಮಾಂಡ್ ಡ್ರಾಪ್ಟ್ ಕ್ಲೀಯರ್ ಇಲ್ಲದ ಕಾರಣ ಡಿ.ಡಿ ಯನ್ನು ಕ್ಯಾನ್ಸಲ್ ಮಾಡಿ ಮೊದಲನೇ ವರ್ಷದ ಟ್ಯೂಶನ್ ಫೀಸ್ ರೂ.7,50,000/- ಹಣವನ್ನು ನಗದು ರೂಪದಲ್ಲಿ ಕೊಡಬೇಕು. ಆ ಹಣವನ್ನು ಹೈದರಬಾದ್ ಏರ್ಪೋರ್ಟ್ಗೆ ಬಂದು ಅಲ್ಲಿ ಒಬ್ಬ ವ್ಯಕ್ತಿಯ ಕೈಯಲ್ಲಿ ಕೊಡಬೇಕು ಎಂದು ತಿಳಿಸಿದ್ದಾರೆ.
ಅದರಂತೆ 2022 ಡಿ.29ರಂದು ಅಶೋಕ್ ಸಿಂಗ್ ಎಂಬ ವ್ಯಕ್ತಿಗೆ ರೂ.7,50,000/- ನಗದು ಹಣವನ್ನು ಹಸ್ತಾಂತರಿಸಿರುತ್ತಾರೆ.
2023 ಜ.5 ರಂದು ಉತ್ತಮ್ ದೀಕ್ಷಿತ್ ದೇರಳಕಟ್ಟೆ ಕಣಚೂರು ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸಯನ್ಸ್ನ ಅಡ್ಮಿಷನ್ ವಿಭಾಗಕ್ಕೆ ಹೋಗಿ ಅಲ್ಲಿ ಅಡ್ಮಿಷನ್ ಆರ್ಡರ್ ತೋರಿಸಿದಾಗ ವಿದ್ಯಾಸಂಸ್ಥೆಯವರು ಅಂತಹ ಆದೇಶವನ್ನು ನೀಡಿಲ್ಲ ಎಂದಿದ್ದಾರೆ. ಸದ್ಯ ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
DAKSHINA KANNADA
ಮಂಗಳೂರು : ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಪುಸ್ತಕ ವಿತರಣಾ ಕಾರ್ಯಕ್ರಮ
ಮಂಗಳೂರು : ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ ಯುವ ಪೀಳಿಗೆಯ ಯುವ ಮಕ್ಕಳ ಮುಂದಿನ ಉಜ್ವಲ ಭವಿಷ್ಯದ ನಿರ್ಮಾಣಕ್ಕಾಗಿ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ವತಿಯಿಂದ ಉಚಿತ ಪುಸ್ತಕ ವಿತರಣಾ ಕಾರ್ಯಕ್ರಮ ಪಚ್ಚನಾಡಿಯಲ್ಲಿ ನಡೆಯಿತು.
ಈ ಸಂದರ್ಭ ಕರಾವಳಿ ಮಾಣಿಕ್ಯ ಸೇವಾ ಸಂಸ್ಥೆಯ ಅಧ್ಯಕ್ಷ ಸತೀಶ್ ಕುಮಾರ್ ಬಜಾಲ್ ಮಾತನಾಡಿ, ನಾವು ಸಣ್ಣವರಿದ್ದಾಗ ಕಲಿಕಾ ಸಾಮಗ್ರಿಗಳಿಲ್ಲದೇ ಕಷ್ಟಪಟ್ಟಿದ್ದೆವು. ಅಂತಹ ಕಷ್ಟ ಬಡ ವಿದ್ಯಾರ್ಥಿಗಳು ಪಡಬಾರದೆಂದು ಸಮಾಜದ ಎಲ್ಲರಿಗೂ ಪ್ರೇರಣೆಯಾಗುವಂತೆ ಮಂಗಳೂರಿನ ಎಲ್ಲಾ ಕಡೆ ಪ್ರತಿವರ್ಷದಂತೆ ಪುಸ್ತಕ ವಿತರಣೆ ಕಾರ್ಯಕ್ರಮ ಮಾಡುವುದಾಗಿ ಭರವಸೆ ನೀಡಿದರು. ಪುಸ್ತಕ ಪಡೆದ ವಿದ್ಯಾರ್ಥಿಗಳು ಜೀವನದಲ್ಲಿ ಕಲಿತು ಆರ್ಥಿಕವಾಗಿ ಬೆಳೆದರೆ, ನೀವು ಕೂಡ ಈ ರೀತಿ ಕಾರ್ಯಕ್ರಮ ಮಾಡುವುದರ ಮೂಲಕ ಬಡ ವಿದ್ಯಾರ್ಥಿಗಳಿಗೆ ಸಹಾಯಮಾಡಿ ಎಂದರು.
ಇದನ್ನೂ ಓದಿ : ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
ಗೌರವಾಧ್ಯಕ್ಷ ವಸಂತ್ ಜೆ ಪೂಜಾರಿ, ಉಪಾಧ್ಯಕ್ಷ ಅಕ್ಷಯ್ ಬಂಜನ್, ಕಮಲಾಕ್ಷ ಬಜಾಲ್, ಪ್ರಧಾನ ಕಾರ್ಯದರ್ಶಿ ನಟರಾಜ್ ಪಚ್ಚನಾಡಿ, ಜೊತೆ ಕಾರ್ಯದರ್ಶಿ ಶರತ್ ಕುಂದರ್ ಪದವಿನಂಗಡಿ, ಪ್ರಸಾದ್ ಕುಂಪಲ, ಖಜಾಂಚಿ ಅರುಣ್ ಡಿಸೋಜ, ಸದಸ್ಯ ರಾಕೇಶ್ ಶೆಟ್ಟಿ, ಪಿ ಎಎಫ್ ಸಿ ತಂಡದ ಪ್ರಮುಖರಾದ ಐವನ್ ಆಲ್ವರಿಸ್, ಕೀರ್ತಿ ಪ್ರಸಾದ್, ರಘು, ರಾಕೇಶ್ ಶೆಟ್ಟಿ, ರೂಪೇಶ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
DAKSHINA KANNADA
ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!
ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
DAKSHINA KANNADA
15 ಸಾವಿರ ಸಂಬಳ..! ಮನೆಯಲ್ಲಿ ಕಂತೆ ಕಂತೆ ನೋಟು..! ED ಅಧಿಕಾರಿಗಳೇ ಶಾಕ್..!
ಮಂಗಳೂರು ( ಜಾರ್ಖಂಡ್ ): ಆತ ತಿಂಗಳಿಗೆ 15 ಸಾವಿರ ಸಂಬಳ ಪಡೆಯುವ ಒಬ್ಬ ಸಾಮಾನ್ಯ ನೌಕರ. ಆದ್ರೆ ಆತನ ಮನೆಗೆ ಇಡಿ ದಾಳಿ ಮಾಡಿ ಬರೋಬ್ಬರಿ 30 ಕೋಟಿ ಹಣವನ್ನು ಜಪ್ತಿ ಮಾಡಿದೆ. ಇದು ಜಾರ್ಖಂಡ್ನಲ್ಲಿ ನಡೆದ ಘಟನೆಯಾಗಿದ್ದು, ಹತ್ತು ಸಾವಿರ ಲಂಚ ಪ್ರಕರಣದ ಸಂಬಂಧ ತನಿಖೆ ನಡೆಸಿದ್ದ ಇಡಿ ಸಾಮಾನ್ಯ ನೌಕರನ ಮನಗೆ ದಾಳಿ ಮಾಡಿತ್ತು. ಅಲ್ಲಿ ಅಡಗಿಸಿಟ್ಟಿದ್ದ ಹಣ ನೋಡಿ ಇಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ. ಹಣ ಎಣಿಸಲು ಮೆಷಿನ್ ಹಾಗೂ ಹೆಚ್ಚುವರಿ ನೌಕರರನ್ನು ಮನೆಗೆ ಕರೆಸಿಕೊಂಡಿದ್ದಾರೆ.
ನೌಕರನ ಮನೆಗೆ ಲಂಚದ ಹಣ…!
ಜಾರ್ಖಂಡ್ ನ ಸಚಿವ ಅಲಂಗೀರ್ ಆಲಂ ಅವರ ಖಾಸಗಿ ಕಾರ್ಯದರ್ಶಿ ಮನೆ ಮೇಲೆ ರಾಂಚಿಯ ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಅಲಂಗೀರ್ ಆಲಂ ಅವರ ಸಚಿವಾಲಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದ್ದು, ಅಲ್ಲಿನ ಲಂಚದ ಹಣ ನೌಕರನ ಮನೆಗೆ ಹೋಗುತ್ತದೆ ಅನ್ನೋ ಮಾಹಿತಿ ಸಿಕ್ಕಿತ್ತು. ಹೀಗಾಗಿ ಸಚಿವರ ಆಪ್ತ ಕಾರ್ಯದರ್ಶಿಯ ಅಡಿಯಲ್ಲಿ ಮಾಸಿಕ 15 ಸಾವಿರಕ್ಕೆ ಕೆಲಸ ಮಾಡುತ್ತಿದ್ದ ನೌಕರನ ಮನೆಗೆ ದಾಳಿ ಮಾಡಿದಾಗ ಇಷ್ಟೊಂದು ಪ್ರಮಾಣದ ಹಣ ಪತ್ತೆಯಾಗಿದೆ.
ವಿಡಿಯೋ ನೋಡಿ :
ಹತ್ತು ಸಾವಿರ ಲಂಚದ ಹಿಂದೆ ಬಿದ್ದಿದ್ದ ಇಡಿ..!
ಕಳೆದ ವರ್ಷ ಹತ್ತು ಸಾವಿರ ರೂಪಾಯಿ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯ ಇಂಜೀನಿಯರ್ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಈ ವೇಳೆ ಇಂಜೀನಿಯರ್ ಅವರ ಹೇಳಿಕೆಯನ್ನು ದಾಖಲಿಸಿದಾಗ ಲಂಚದ ಹಣ ಸಚಿವರಿಗೆ ತಲುಪಿಸಲಾಗುತ್ತದೆ ಎಂಬ ಸ್ಪೋಟಕ ಹೇಳಿಕೆ ನೀಡಿದ್ದರು. ಬಳಿಕ ಜಾರ್ಖಂಡ್ನ ಗ್ರಾಮೀಣ ಅಭಿವೃದ್ದಿ ಸಚಿವ ಅಲಂಗೀರ್ ಆಲಂ ಹಾಗೂ ಅವರ ಆಪ್ತ ಕಾರ್ಯದರ್ಶಿ ಸಂಜೀವ್ ಲಾಲ್ ಹೆಸರು ಮುನ್ನಲೆಗೆ ಬಂದಿತ್ತು . ಹೀಗಾಗಿ ಸಂಜೀವ್ ಲಾಲ್ ಅವರ ಬಳಿ ನೌಕರನಾಗಿದ್ದ ವ್ಯಕ್ತಿಯ ಮನೆಗೆ ದಾಳಿ ಮಾಡಲಾಗಿದೆ.
ಇದನ್ನೂ ಓದಿ : ನೇತ್ರಾವತಿ ನದಿಯಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು..!
ಜಾರ್ಖಂಡ್ ಕಾಂಗ್ರೆಸ್ ಸರ್ಕಾರದ ಸಚಿವ…!
ಅಲಂಗೀರ್ ಆಲಂ ಜಾರ್ಖಂಡ್ನ ಪಾಕುರ್ ಕ್ಷೇತ್ರದಿಂದ ನಾಲ್ಕು ಬಾರಿ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಈಗ ಸರ್ಕಾರದಲ್ಲಿ ಸಂಸದೀಯ ವ್ಯವಹಾರ ಮತ್ತು ಗ್ರಾಮೀಣಾಭಿವೃದ್ದಿ ಸಚಿವರಾಗಿದ್ದಾರೆ. ಈ ಹಿಂದೆ 2006 ರಿಂದ 2009 ರ ವರೆಗೆ ಅವರು ಸ್ಪೀಕರ್ ಕೂಡಾ ಆಗಿದ್ದರು. 2023ರ ಡಿಸೆಂಬರ್ ತಿಂಗಳಲ್ಲಿ ಜಾರ್ಖಂಡ್ನ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಉದ್ಯಮಿ ಧೀರಜ್ ಸಾಹು ಮನೆ ಮೇಲೂ ಆದಾಯ ತೆರಿಗೆ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ ಮನೆಯಲ್ಲಿ 350 ಕೋಟಿಯಷ್ಟು ಹಣ ಪತ್ತೆಯಾಗಿತ್ತು. ಈ ವೇಳೆ ಧೀರಜ್ ಸಾಹು ಅದು ಮದ್ಯದ ವ್ಯವಹಾರದ ಹಣವಾಗಿದ್ದು, ಅದಕ್ಕೂ ಪಕ್ಷಕ್ಕೂ ಸಂಬಂಧ ಇಲ್ಲ ಎಂದು ಹೇಳಿದ್ದರು.
- DAKSHINA KANNADA4 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM6 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali5 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY5 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು