DAKSHINA KANNADA
ಉಳ್ಳಾಲ: ನೈತಿಕ ಪೊಲೀಸ್ ಗಿರಿ ಪ್ರಕರಣ-ಬಂಧಿತರ ಸಂಖ್ಯೆ 5ಕ್ಕೇರಿಕೆ, ಠಾಣೆಗೆ ಬಿಜೆಪಿ- ಹಿಂದೂ ನಾಯಕರ ದೌಡು..!
ಮಂಗಳೂರು ಹೊರ ವಲಯದ ಉಳ್ಳಾಲ ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಅಪ್ರಾಪ್ತ ಆರೋಪಿ ಸೇರಿ ಈವರೆಗೆ ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಬಂಧಿತರವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಉಳ್ಳಾಲ: ಮಂಗಳೂರು ಹೊರ ವಲಯದ ಉಳ್ಳಾಲ ಸೋಮೇಶ್ವರ ಬೀಚ್ ನಲ್ಲಿ ನೈತಿಕ ಪೊಲೀಸ್ ಗಿರಿ ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿಯನ್ನು ಬಂಧಿಸಿದ್ದಾರೆ.
ತಲಪಾಡಿ ನಿವಾಸಿ ಅಖಿಲ್ ಬಂಧಿತ ಆರೋಪಿಯಾಗಿದ್ದಾನೆ. ಅಪ್ರಾಪ್ತ ಆರೋಪಿ ಸೇರಿ ಈವರೆಗೆ ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಬಂಧಿತರವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.
ಬಸ್ತಿಪಡ್ಪು ನಿವಾಸಿ ಯತೀಶ್, ತಲಪಾಡಿ ನಿವಾಸಿಗಳಾದ ಸಚಿನ್ ಮತ್ತು ಸುಹಾನ್, ಅಖಿಲ್ ಸೇರಿ ಓರ್ವ ಅಪ್ರಾಪ್ತ ಬಂಧಿತ ಆರೋಪಿಗಳಾಗಿದ್ದಾರೆ.
ಐಪಿಸಿ 307 ಹಾಗೂ ಗಲಭೆ ಸೃಷ್ಟಿ ಆರೋಪದಡಿ ಪ್ರಕರಣ ದಾಖಲು ಮಾಡಲಾಗಿದೆ.
ಮತ್ತಷ್ಟು ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸದ್ಯ ಮೂರು ಪ್ರತ್ಯೇಕ ತಂಡದಿಂದ ತನಿಖೆ ಮುಂದುವರಿಸಲಾಗಿದೆ.
ಉಳ್ಳಾಲ ಪೊಲೀಸ್ ಠಾಣೆಯಲ್ಲಿ ವಿದ್ಯಾರ್ಥಿಗಳ ದೂರಿನಡಿ ಎಫ್ಐಆರ್ ದಾಖಲಾಗಿತ್ತು.ಅದರಂತೆ ಹಿಂದೂ ಸಂಘಟನೆಗೆ ಸೇರಿದ ಐವರು ಆರೋಪಿಗಳನ್ನು ಈವರೆಗೆ ಬಂಧಿಸಲಾಗಿದೆ.
ಮಂಗಳೂರು ಪೊಲಿಸ್ ಕಮೀಷನರ್ ಭೇಟಿ :
ಪ್ರಕರಣ ಗಂಭೀರತೆ ಪಡೆದ ಹಿನ್ನೆಲೆ ಉಳ್ಳಾಲ ಪೊಲೀಸ್ ಠಾಣೆಗೆ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಇಂದು ಭೇಟಿ ನೀಡಿ ಮಾಹಿತಿ ಪಡೆದರು.
ಸಿಸಿಬಿ ಎಸಿಪಿ ಪಿ.ಎ ಹೆಗ್ಡೆ ಹಾಗೂ ಉಳ್ಳಾಲ ಇನ್ಸ್ಪೆಕ್ಟರ್ ಅವರುಗಳಿಂದ ಕಮಿಷನರ್ ಮಾಹಿತಿ ಪಡೆದರು. ಮೂರು ಪೊಲೀಸ್ ತಂಡಗಳಿಗೆ ಸಮಗ್ರ ತನಿಖೆ ನಡೆಸಿ ಉಳಿದ ಆರೋಪಿಗಳ ಶೀಘ್ರ ಪತ್ತೆಗೆ ಆದೇಶಿಸಿದರು.
ಬಿಜೆಪಿ- ಹಿಂದು ನಾಯಕರಿಂದ ಠಾಣೆಗೆ ಭೇಟಿ :
ಅಮಾಯಕರ ಬಂಧನವಾಗಿದೆ ಎಂದು ಆರೋಪಿಸಿ ಉಳ್ಳಾಲ ಠಾಣೆಗೆ ಬಿಜೆಪಿ ಹಾಗೂ ಹಿಂದೂ ಪರ ಸಂಘಟನೆಗಳ ನಾಯಕರು ಭೇಟಿ ನೀಡಿದರು.
ಉಳ್ಳಾಲ ಠಾಣೆಗೆ ಆಗಮಿಸಿದ ಬಿಜೆಪಿ ನಾಯಕ ಸತೀಶ್ ಕುಂಪಲ ಹಾಗೂ ವಿಎಚ್ ಪಿ, ಭಜರಂಗದಳ ಪ್ರಮುಖರು ಕಮಿಷನರ್ ಕುಲದೀಪ್ ಜೈನ್ ಭೇಟಿಯಾಗಿ ಮಾತುಕತೆ ನಡೆಸಿದರು.
ಹಲವು ಅಮಾಯಕ ಹಿಂದೂ ಯುವಕರ ಬಂಧಿಸಲಾಗಿದೆ. ತಕ್ಷಣ ಅಮಾಯಕರ ಬಿಡುಗಡೆಗೆ ಮಾಡಬೇಕು ಎಂದು ಹಿಂದೂ ನಾಯಕರು ಒತ್ತಾಯಿಸಿದರು.
ಈ ಸಂದರ್ಭ ಪ್ರಕರಣದ ಆರೋಪಿಗಳನ್ನಷ್ಟೇ ಬಂಧಿಸುತ್ತೇವೆ. ವಶಕ್ಕೆ ಪಡೆದವರು ಕೇಸ್ ನಲ್ಲಿ ಇಲ್ಲದಿದ್ದರೆ ಬಿಡುಗಡೆ ಮಾಡುವ ಭರವಸೆಯನ್ನು ಪೊಲೀಸ್ ಕಮಿಷನರ್ ನೀಡಿದರು.
ಕಮಿಷನರ್ ಭೇಟಿ ಬಳಿಕ ಬಿಜೆಪಿ ಮುಖಂಡ ಸತೀಶ್ ಕುಂಪಲ ಮಾಧ್ಯಮಗಳ ಜತೆ ಮಾತನಾಡಿ ಕಾಂಗ್ರೆಸ್ ಸರ್ಕಾರ ಬಂದ ಬೆನ್ನಲ್ಲೇ ಉಳ್ಳಾಲದಲ್ಲಿ ಅಹಿತಕರ ಘಟನೆ ನಡೆದಿದೆ.
ಕಾಲೇಜಿನ ಅನ್ಯಕೋಮಿನ ವಿದ್ಯಾರ್ಥಿಗಳು ಸೋಮೇಶ್ವರ ಬೀಚ್ ಗೆ ಬಂದಿದ್ದಾರೆ.
ಪರಮ ಪವಿತ್ರ ಕ್ಷೇತ್ರದಲ್ಲಿ ಅಶ್ಲೀಲವಾಗಿ ವರ್ತಿಸಿದಾಗ ಸ್ಥಳೀಯ ಯುವಕರು ಪ್ರಶ್ನೆ ಮಾಡಿದ್ದಾರೆ.
ಇದು ತಪ್ಪಾದರೂ ದೇವರ ಕ್ಷೇತ್ರದ ಬಳಿ ಅಶ್ಲೀಲ ವರ್ತನೆ ಕಂಡು ಆಕ್ರೋಶ ಸಹಜವಾಗಿದೆ. ಏನೇ ಆದರೂ ಪೊಲೀಸ್ ಇಲಾಖೆ ಈ ಬಗ್ಗೆ ಗಮನ ಹರಿಸಲಿ.
ಇಂತಹ ಘಟನೆಗಳಿಗೆ ಆಸ್ಪದ ನೀಡುವುದು ಬೇಡ ಅಮಾಯಕರ ಬಂಧನ ಸರಿಯಲ್ಲ, ಅಮಾಯಕರನ್ನ ಬಿಡುತ್ತೇವೆ ಅಂದಿದ್ದಾರೆ.
ಯುವಕರು ನಮ್ಮ ಕಾರ್ಯಕರ್ತರಾ ಅಥವಾ ಅಲ್ಲವಾ ಅನ್ನೋದು ಪ್ರಶ್ನೆ ಅಲ್ಲ.
ಅವರ ಕುಟುಂಬದವರು ಬಂದು ಹೇಳಿದಾಗ ನಾವು ಠಾಣೆಗೆ ಬಂದಿದ್ದೇವೆ. ಎಲ್ಲಾ ವೈದ್ಯಕೀಯ ಕಾಲೇಜುಗಳ ಪ್ರಮುಖರ ಜತೆಗೆ ಮಾತನಾಡಿ ವಿದ್ಯಾರ್ಥಿಗಳಿಗೆ ಬುದ್ಧಿಮಾತು ಹೇಳುವ ಪ್ರಯತ್ನ ಮಾಡುತ್ತೇನೆ ಎಂದರು.
DAKSHINA KANNADA
ಮೇಯರ್ ಫೋನ್ ಇನ್ : ಮಂಗಳೂರು ನಗರದ 8 ಕಡೆ ಬಸ್ ಬೇ ನಿರ್ಮಾಣ- ಸುಧೀರ್ ಶೆಟ್ಟಿ
ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಒಟ್ಟು 53 ಪ್ರದೇಶಗಳಲ್ಲಿ ಬಸ್ಸು ತಂಗುದಾಣ ನಿರ್ಮಿಸಲು ಮಂಗಳೂರು ಪೊಲೀಸ್ ಕಮಿಷನರ್ ಪ್ರಸ್ತಾವನೆ ಸಲ್ಲಿಸಿದ್ದು, ಪ್ರಸ್ತುತ 8 ಪ್ರದೇಶಗಳಲ್ಲಿ ಬಸ್ ಬೇ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದ್ದಾರೆ.
ಮೇಯರ್ ಕಚೇರಿಯಲ್ಲಿ ಶನಿವಾರ ನಡೆದ ಮೇಯರ್ ಫೋನ್ ಇನ್ ಕಾರ್ಯಕ್ರಮದಲ್ಲಿ ಸುದ್ದಿಗಾರರ ಜೊತೆ ಅವರು ಮಾತನಾಡಿದರು.
ಮೊದಲ ಹಂತದಲ್ಲಿ ನಾಗರಿಕರಿಂದ ಹೆಚ್ಚು ಬೇಡಿಕೆ ಇರುವ ಬಿಜೈ ಕೆಎಸ್ಸಾರ್ಟಿಸಿ ಬಸ್ಸು ನಿಲ್ದಾಣ ಸಮೀಪ, ಲೇಡಿಹಿಲ್, ಕಂಕನಾಡಿ ಜಂಕ್ಷನ್, ಬಂಟ್ಸ್ ಹಾಸ್ಟೇಲ್ ಸೇರಿದಂತೆ ಒಟ್ಟು 8 ಕಡೆಗಳಲ್ಲಿ ಬಸ್ ಬೇ ನಿರ್ಮಿಸಲಾಗುವುದು.
ಬಳಿಕ ಹಂತ ಹಂತವಾಗಿ ಉಳಿದೆಡೆ ಬಸ್ ಬೇ ನಿರ್ಮಿಸಲಾಗುವುದು ಎಂದರು. ನಗರದಲ್ಲಿ 53 ಬಸ್ಸು ತಂಗುದಾಣಕ್ಕೆ ಪೊಲೀಸರು ಪ್ರಸ್ತಾವನೆ ಸಲ್ಲಿಸಿದ್ದರೂ ಅಧಿಕಾರಿಗಳುಮಾತ್ರ ಕಡತದಲ್ಲೇ ಬಾಕಿ ಇರಿಸಿದ್ದು, ಮನಪಾ ಆಡಳಿತದ ಸಭೆಗೆ ಹಾಜರುಪಡಿಸದಿರುವುದು ಗಮನಕ್ಕೆ ಬಂತು.
ಕೂಡಲೇ ಮುಖ್ಯ ಸಚೇತಕ ಪ್ರೇಮಾನಂದ ಶೆಟ್ಟಿ ಪ್ರಸ್ತಾವನೆಯನ್ನು ಮುಂದಿನ ಸಭೆಗೆ ಹಾಜರುಪಡಿಸುವಂತೆ ಸೂಚನೆ ನೀಡಿದರು.
ಬೀದಿ ಬದಿ ವ್ಯಾಪಾರಸ್ಥರು ನಗರದ ಅನೇಕ ಕಡೆಗಳಲ್ಲಿ ರಸ್ತೆ ಹಾಗೂ ಫುಟ್ಪಾತ್ ಅತಿಕ್ರಮಣ ನಡೆಸಿದ್ದಾರೆ.
ಅಗಲಗೊಂಡರಸ್ತೆಯಲ್ಲಿ ವಾಹನಗಳನ್ನು ಪಾರ್ಕ್ ಮಾಡಲಾಗುತ್ತಿದೆ.
ಈ ಬಗ್ಗೆ ಪಾಲಿಕೆ ಕ್ರಮ ವಹಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
bengaluru
ಬೆಂಗಳೂರಿನಲ್ಲಿ ಮೊತ್ತ ಮೊದಲ ಬಾರಿಗೆ ನಡೆಯುವ ಕಂಬಳಕ್ಕೆ ಡೇಟ್ ಫಿಕ್ಸ್-ಅಶೋಕ್ ಕುಮಾರ್ ರೈ
ಮಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಪ್ರಥಮ ಬಾರಿಗೆ ಹೊನಲು ಬೆಳಕಿನ ಕರಾವಳಿಯ ಜಾನಪದ ಕ್ರೀಡೆ ಕಂಬಳ ನ. 25 ಮತ್ತು 26ರಂದು ನಡೆಯಲಿದೆ ಎಂದು ಬೆಂಗಳೂರು ಕಂಬಳ ಸಮಿತಿಯ ಸಂಘಟಕ ಹಾಗೂ ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.
ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯ ಮಂತ್ರಿ ಸೇರಿದಂತೆ ರಜನಿಕಾಂತ್, ಐಶ್ವರ್ಯ ರೈ ಸೇರಿದಂತೆ ಸಿನಿಮಾ ಕ್ಷೇತ್ರದ ನಟ ನಟಿಯರು ಭಾಗವಹಿಸಲಿದ್ದಾರೆ.
ಪ್ರಥಮ ಬಾರಿಗೆ ಬೆಂಗಳೂರಿನಲ್ಲಿ ನಡೆಯುವ ಈ ಕಂಬಳ ಕೂಟದಲ್ಲಿ ದಕ್ಷಿಣ ಕನ್ನಡ, ಉಡುಪಿ, ಕಾಸರಗೋಡು ಸೇರಿದಂತೆ ವಿವಿಧ ಜಿಲ್ಲೆಗಳ ಸುಮಾರು 130 ಜೊತೆ ಕೋಣಗಳು ಅದರ ಮಾಲಕರು ಭಾಗವಹಿಸಲಿದ್ದಾರೆ ಎಂದರು.
ಇದರ ಜೊತೆ 125 ಸ್ಟಾಲ್ ಗಳಲ್ಲಿ ಕರಾವಳಿಯ ತಿಂಡಿ ತಿನಿಸುಗಳು ಗ್ರಾಹಕರಿಗೆ ದೊರೆಯಲಿದೆ.
ಸುಮಾರು 7 ರಿಂದ 8 ಲಕ್ಷ ಜನರು ಇದನ್ನು ವೀಕ್ಷಿಸುವ ನಿರೀಕ್ಷೆ ಇದೆ ಎಂದು ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಉಡುಪಿ, ದಕ್ಷಿಣ ಕನ್ನಡ ಕಂಬಳ ಸಮಿತಿಯ ಅಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಕಂಬಳ ಸಮಿತಿ ಪದಾಧಿಕಾರಿಗಳಾದ ರೋಹಿತ್ ಹೆಗ್ಡೆ, ಬಾರ್ಕೂರು ಶಾಂತರಾಮ ಶೆಟ್ಟಿ, ಲೋಕೇಶ್ ಶೆಟ್ಟಿ, ಚಂದ್ರಹಾಸ ಸನಿಲ್, ಮುರಳಂಧರ ರೈ, ವಿಜಯಕುಮಾರ್ ಜೈನ್ ಉಪಸ್ಥಿತರಿದ್ದರು.
DAKSHINA KANNADA
ಕರಾವಳಿ ಉತ್ಸವ ಮೈದಾನದಲ್ಲಿ ಪ್ರಥಮ ಬಾರಿಗೆ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನ
ಮಂಗಳೂರು: ದಕ್ಷಿಣ ಭಾರತದಾದ್ಯಂತ ಕಳೆದ ನಾಲ್ಕು ದಶಕಗಳಿಂದ ಗ್ರಾಹಕರ ಮೇಳಗಳನ್ನು ಸಂಘಟಿಸುವಲ್ಲಿ ಧ್ರುವತಾರೆಯಾಗಿ ಗುರುತಿಸಿಕೊಂಡಿರುವ ಎನ್ಸಿಎಫ್ ಸಂಘಟಿಸಲ್ಪಡುತ್ತಿರುವ ರಾಷ್ಟ್ರೀಯ ಗ್ರಾಹಕ ಮೇಳವನ್ನು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್ ಅವರು ಉದ್ಘಾಟಿಸಿದರು.
ಬಳಿಕ ರಾಷ್ಟ್ರೀಯ ಗ್ರಾಹಕರ ಮೇಳದ ಅಂಗವಾನಿ ನಿರ್ಮಿಸಲ್ಪಟ್ಟಿರುವ ಅಂತರ್ಜಲ ಸುರಂಗ ಮಾರ್ಗ ಮೀನುಗಳ ಪ್ರದರ್ಶನವನ್ನು ಶಾಸಕ ವೇದವ್ಯಾಸ್ ಕಾಮತ್ ಉದ್ಘಾಟಿಸಿದರು.
ಈ ಅಂತರ್ಜಲ ಸುರಂಗವು ಹಲವು ಪ್ರಬೇದದ ಮೀನುಗಳೊಂದಿಗೆ ಸುಂದರ ಮತ್ಸ್ಯ ಲೋಕವನ್ನು ಸೃಷ್ಟಿಸಿ ಮಂಗಳೂರಿನ ಜನತೆಗೆ ರಸದೌತಣವನ್ನು ನೀಡಲು ಸಜ್ಜಾಗಿವೆ.
ಅಲ್ಲದೆ, ರೊಬೊಟಿಕ್ ಅನಿಮಲ್ ಶೋದಲ್ಲಿ ದೈತ್ಯಾಕಾರದ ವನಮೃಗಗಳು ಹಾಗೂ ಅವುಗಳ ಘರ್ಜನೆ ದಟ್ಟಾರಣ್ಯದಲ್ಲಿ ವಿಹರಿಸಿದ ಅನುಭವವನ್ನು ನೀಡಲಿದೆ.
ಈ ಮೊದಲು ಮಂಗಳೂರಿಗೆ ಸೋವಲ್ಡ್, ಅಕ್ವಾ ಶೋ, ಬರ್ಡ್ ಶೋ, ತಾಜ್ಮಹಲ್ನಂತಹ ವಿನೂತನ ರೀತಿಯ ಮೆಗಾ ಶೋಗಳನ್ನು ನೀಡಿರುವ ಈ ಸಂಸ್ಥೆ ಪ್ರತಿ ಬಾರಿಯೂ ಹೊಚ್ಚ ಹೊಸ ಶೋಗಳನ್ನು ನೀಡುತ್ತಾ ಬಂದಿದೆ.
ಈ ರಾಷ್ಟ್ರೀಯ ಗ್ರಾಹಕರ ಮೇಳವು ಸಂಪೂರ್ಣ ಕುಟುಂಬಕ್ಕಾಗಿ ಪಿಂಗ್ ಮತ್ತು ಮನರಂಜನಾ ಮೇಳವಾಗಿರುತ್ತದೆ.
ರಾಷ್ಟ್ರೀಯ ಗ್ರಾಹಕರ ಮೇಳವು ವ್ಯಾಪಾರ ಮಳಿಗೆಗಳೊಂದಿಗೆ, ವಿಶೇಷ ಮತ್ತು ಅತ್ಯಧಿಕ ರಿಯಾಯಿತಿ ದರದಲ್ಲಿ ಗ್ರಾಹಕರನ್ನು ಆಕರ್ಷಿಸಲಿದೆ.
ಗೃಹ ಬಳಕೆ ಉತ್ಪನ್ನಗಳು, ಅಡುಗೆ ಮನೆ ಉತ್ಪನ್ನಗಳು, ಕೈಮಗ್ಗದ ಉತ್ಪನ್ನಗಳು, ಕರುಶಲ, ಉತ್ಪನ್ನಗಳು, ಡ್ರೆಸ್ ಮೆಟೀರಿಯಲ್ ಫ್ಯಾರನ್ ಪಾದರಕ್ಷೆಗಳು, ಆಟಿಕೆಗಳು, ಆಹಾರೋತ್ಪನ್ನಗಳು ಮತ್ತು ಇನ್ನೂ ಹಲವಾರು ಉತ್ಪನ್ನಗಳು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ಲಭ್ಯವಾಗಲಿದೆ.
ಮನೋರಂಜನಾ ವಿಭಾಗದಲ್ಲಿ ಟೋರಾ ಟೋರಾ, ಡ್ಯಾಶಿಂಗ್ ಕಾರ್, ಜಾಯಿಂಟ್ ಸ್ಟೀಲ್, ಡ್ರಾಗನ್ ಟೇನ್, ಮೆದ್ರಿ ಕೊಲಂಬಸ್, 30 ಶೋಸ್, ಸೇರಿ ಹೌಸ್, ಏ ಶಾಟ್, ಸ್ಟೇಸ್ ಜೆಟ್, ಇತ್ಯಾದಿಗಳು ಇವೆ.
ಮನೋರಂಜನೆಗೆ ಸಂಜೆ 4ರಿಂದ 9ರವರೆಗೆ ಮನೋರಂಜನೆಗೆ ಕರಾವಳಿ ಉತ್ಸವ ಮೈದಾನದಲ್ಲಿ ಅವಕಾಶವಿರುತ್ತದೆ.
ಮಂಗಳೂರು ಮಹಾನಗರ ಪಾಲಿಕೆಯ ನೂತನ ಮೇಯರ್ ಸುದೀರ್ ಶೆಟ್ಟಿ ಕಣ್ಣೂರು ಮತ್ತು ಎನ್ಸಿಎಫ್ ವತಿಯಿಂದ ಚೈತನ್ಯ ಹಾಗೂ ವಿಜಯ ಕುಮಾರ್ ಮತ್ತು ನಿಸರ್ಗ ಪಬ್ಲಿಸಿಟಿಯ ಮಂಜುನಾಥ್ ಉಪಸ್ಥಿತರಿದ್ದರು.
- bengaluru7 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA6 days ago
2ನೇ ಮದುವೆಯಾದ ಕಿರುತೆರೆ ನಟಿ ಜ್ಯೋತಿ ರೈ …!
- DAKSHINA KANNADA7 days ago
ಮಂಗಳೂರಿನ ಆಟೋಮ್ಯಾಟ್ರಿಕ್ಸ್ ಶೋ ರೂಮ್ ನಲ್ಲಿ ಟಾಟಾ ನೆಕ್ಸಾನ್, ಇ.ವಿ ಬಿಡುಗಡೆ
- LATEST NEWS6 days ago
ವಾರವಿಡೀ ಕಾಡಿನಲ್ಲಿ ಸಿಲುಕಿದ್ದ ಯುವಕ- ಮನೆಗೆ ವಾಪಸ್ ಆಗುವಂತೆ ರಕ್ಷಣೆ ಮಾಡಿದ ಸಾಕುನಾಯಿ..!