DAKSHINA KANNADA
ಉಳ್ಳಾಲ : ನಿಷೇಧಿತ ಮಾದಕ ದ್ರವ್ಯ ಎಂಡಿಎಂಎ ಸಾಗಾಟ – ಇಬ್ಬರ ಬಂಧನ
ಉಳ್ಳಾಲ: ನಿಷೇಧಿತ ಎಂಡಿಎಂಎ ಸಾಗಾಟ ನಡೆಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಉಚ್ಚಿಲ ರಿಲಾಯನ್ಸ್ ಪೆಟ್ರೋಲ್ ಪಂಪ್ ನಲ್ಲಿ ಅಡ್ಡಗಟ್ಟಿ ಬಂಧಿಸಿದ್ದಾರೆ. ಬಂಧಿತರಿಂದ 95,000 ರೂ. ಬೆಲೆಯ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಉಳ್ಳಾಲದ ಆಝಾದನಗರ 1 ನೇ ಕ್ರಾಸ್ ನ ಮೊಹಮ್ಮದ್ ಖಾಲಿದ್(39), ಹಾಗೂ ಮಂಜೇಶ್ವರದ ಲಿಖಿತ್ (21) ಬಂಧಿತರು.
ಮಾದಕವಸ್ತು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರನ್ನು ಉಳ್ಳಾಲ ಪೊಲೀಸರು ಸೋಮೇಶ್ವರ ಗ್ರಾಮದ ಉಚ್ಚಿಲ ರಿಲಾಯನ್ಸ್ ಪೆಟ್ರೋಲ್ ಪಂಪ್ ನಲ್ಲಿ ನಡೆದಿದೆ.
ಇಬ್ಬರು ಯುವಕರು ಡಿಯೊ ಸ್ಕೋಟರನಲ್ಲಿ ತಲಪಾಡಿಯಿಂದ ಉಚ್ಚಿಲ ರಿಲಯನ್ಸ್ ಪೆಟ್ರೋಲ್ ಪಂಪ ಕಡೆಗೆ MDMA ಹೊಂದಿರುವ ಪಾಕೆಟ್ ಸಮೆತ ಸ್ಕೋಟರನಲ್ಲಿ ಹೊಗುತ್ತಿದ್ದ ಸಮಯದಲ್ಲಿ ಉಳ್ಳಾಲ ಪೊಲೀಸರು ಸ್ಕೊಟರನ್ನು ಅಡ್ಡಗಟ್ಟಿ ಹಿಡಿಯುವ ಸಮಯ ಇಬ್ಬರು ಆರೋಪಿಗಳು ಸಿಕ್ಕಿದ್ದಾರೆ.
ಇವರಿಂದ ರೂ.20,000 ಮೌಲ್ಯದ 10 ಗ್ರಾಂ ರೂ. 50,000 ಬೆಲೆಬಾಳುವ ಸ್ಕೂಟರ್ ಹಾಗೂ ರೂ. 25,000 ಬೆಲೆಬಾಳುವ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ.
ಬಂಧಿತರ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ, ಗಾಂಜಾ ಮಾರಾಟದ ಪ್ರಕರಣಗಳಿವೆ.
ಉಳ್ಳಾಲ ಠಾಣೆಯ ಇನ್ಸ್ಪೆಕ್ಟರ್ ಸಂದೀಪ್ ರವರ ಮಾರ್ಗದರ್ಶನದಲ್ಲಿ ಪಿಎಸ್ ಐಗಳಾದ ರೇವಣ್ ಣಸಿದ್ದಪ್ಪ, ಪ್ರದೀಪ್ ಟಿ,ಆರ್, ಶಿವಕುಮಾರ್ ಹಾಗು ಸಿಬ್ಬಂದಿಗಳಾದ ರಂಜಿತ್, ಅಶೋಕ,ಅಕ್ಬರ್, ಸಾಗರ, ವಾಸುದೇವ,ಸತೀಶ್, ಚಿದಾನಂದ,ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
DAKSHINA KANNADA
ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ..!
ಮಂಗಳೂರು : ಅವರ ಪತಿ ಆಸ್ಪತ್ರೆಯಲ್ಲಿ ಕೊನೆ ಉಸಿರು ಎಳೆದಿದ್ದಾರೆ. ಅದೇ ದಿನ ರಾಜ್ಯದಲ್ಲಿ ಎರಡನೇ ಹಂತದ ಮತದಾನ ಕೂಡಾ ನಡೆದಿದೆ. ಆಕೆಗೆ ಪತಿ ಇನ್ನಿಲ್ಲ ಅನ್ನೋ ವಿಚಾರವನ್ನು ಯಾರೋ ತಿಳಿಸಿದ್ದಾರೆ. ಆದ್ರೆ ಆಕೆ ಪತಿಯ ಕೊನೆ ಆಸೆ ಈಡೇರಿಸಿದ ಬಳಿಕ ಪತಿಯ ಅಂತಿಮ ದರ್ಶನ ಪಡೆದಿದ್ದಾರೆ.
ಇದು ಮತದಾನ ಮಾಡದೇ ಇರುವವರಿಗೆ ಇವರೊಂದು ಪಾಠವಾಗಿದೆ. ಮಂಗಳವಾರ ರಾಜ್ಯದಲ್ಲಿ ನಡೆದ ಎರಡನೇ ಹಂತದ ಮತದಾನದಲ್ಲಿ ನಡೆದ ಘಟನೆ ಇದು. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಗುಡ್ಡೇಕೊಪ್ಪ ಪಂಚಾಯತ್ ವ್ಯಾಪ್ತಿಯಲ್ಲಿ ಇದು ನಡೆದಿದೆ. ಇಲ್ಲಿನ ಆಡುಗೋಡಿನ ಕಲಾವತಿ ವೆಂಕಟೇಶ್ ಇವರ ಪತಿ ವೆಂಕಟೇಶ್ ಚುನಾವಣೆಯ ದಿನ ಮಂಗಳೂರಿನ ವೆನ್ ಲಾಕ್ ಆಸ್ಪತ್ರೆಯಲ್ಲಿ ಇಹಲೋಕ ತ್ಯಜಿಸಿದ್ದಾರೆ. ಇನ್ನೇನು ಓಟು ಹಾಕಲು ಹೋಗಬೇಕು ಅನ್ನೋ ಅಷ್ಟರಲ್ಲಿ ಪತಿ ಇಹಲೋಕ ತ್ಯಜಿಸಿದ ಮಾಹಿತಿ ಪತ್ನಿ ಕಲಾವತಿಗೆ ಬಂದಿದೆ. ಆದ್ರೆ ಕಲಾವತಿ ಅವರು ಈ ವೇಳೆ ತಮ್ಮ ಅಮೂಲ್ಯ ಮತ ಚಲಾಯಿಸಿ, ಬಳಿಕ ಪತಿಯ ದೇಹವನ್ನು ನೋಡಲು ತೆರಳಿದ್ದಾರೆ.
ಪತಿ ಒಂದು ಪಕ್ಷದ ಅಭಿಮಾನಿಯಾಗಿದ್ದು ,ಆ ಪಕ್ಷದ ನಾಯಕನನ್ನು ಯಾವಾಗಲು ಜಪಿಸ್ತಾ ಇದ್ರು ಹಾಗಾಗಿ ಪತಿಯ ಕೊನೆಯ ಆಸೆಯಾಗಿ ಅವರ ಪ್ರೀಯಪಟ್ಟವರಿಗೆ ಮತ ಚಲಾಯಿಸಿದೆ ಅಂತ ಕಲಾವತಿ ಹೇಳಿಕೊಂಡಿದ್ದಾರೆ.
DAKSHINA KANNADA
ಪ್ರಜ್ವಲ್ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್ಐಟಿ ವಾರ್ನಿಂಗ್..!
ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.
ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BANTWAL
ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!
ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.
ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- DAKSHINA KANNADA5 days ago
ಸುಬ್ರಹ್ಮಣ್ಯ: ಕೆಎಸ್ಸಾರ್ಟಿಸಿ ಬಸ್ಗಳ ಹಗಲು ದರೋಡೆ..! ಏನಿದು ಘಟನೆ?
- FILM7 days ago
ಬಿಗ್ ಬಾಸ್ ಬಗ್ಗೆ ಅಚ್ಚರಿ ಹೇಳಿಕೆ ಕೊಟ್ಟ ನಮ್ರತಾ ಗೌಡ!
- dehali6 days ago
ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
- BELTHANGADY6 days ago
ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು