DAKSHINA KANNADA
ಹರೇಕಳ-ಅಡ್ಯಾರ್ ಸೇತುವೆ ಇಂದಿನಿಂದ ಲಘು ವಾಹನಗಳ ಸಂಚಾರಕ್ಕೆ ಮುಕ್ತ..!
ಬಹುಪಯೋಗಿ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್-ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ಇಂದಿನಿಂದ ಅಧಿಕೃತವಾಗಿ ಸಂಚಾರ ಆರಂಭಗೊಂಡಿದೆ.
ಮಂಗಳೂರು : ಬಹುಪಯೋಗಿ ಉಳ್ಳಾಲ ತಾಲೂಕಿನ ಹರೇಕಳ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ 75ರ ಅಡ್ಯಾರ್-ಕಣ್ಣೂರಿಗೆ ನೇರ ಸಂಪರ್ಕ ಕಲ್ಪಿಸುವ ಸೇತುವೆಯಲ್ಲಿ ಇಂದಿನಿಂದ ಅಧಿಕೃತವಾಗಿ ಸಂಚಾರ ಆರಂಭಗೊಂಡಿದೆ.
ಈ ಸೇತುವೆಯಲ್ಲಿ ದ್ವಿಚಕ್ರ ಮತ್ತು ತ್ರಿಚಕ್ರ ಹಾಗೂ ನಾಲ್ಕು ಚಕ್ರಗಳ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದ್ದು, ಈ ಮೂಲಕ ಈ ಭಾಗದ ಜನರ ದಶಕಗಳ ಕನಸು ನನಸಾಗಿದೆ.
ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ಈ ಸೇತುವೆಯನ್ನು ಸ್ಥಳೀಯ ಜನಪ್ರತಿನಿಧಿಗಳ ಉಪಸ್ಥಿತಿಯಲ್ಲಿ ಉದ್ಘಾಟನಾ ಕಾರ್ಯಕ್ರಮ ನಡೆಸುವಂತಿಲ್ಲ.
ಗ್ರಾಮಸ್ಥರು ಸೇತುವೆಯ ಬಳಕೆಗೆ ಅವಕಾಶ ಮಾಡಿಕೊಡುವಂತೆ ಸ್ಥಳೀಯ ಶಾಸಕರಾಗಿದ್ದ ಯು.ಟಿ. ಖಾದರ್ ಬಳಿ ಮನವಿ ಮಾಡಿಕೊಂಡಿದ್ದರು.
ಈ ಮನವಿಯನ್ನು ಪರಿಗಣಿಸಿ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಕಲ್ಪಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಅಣೆಕಟ್ಟು ನಿರ್ಮಾಣ ಕಾರ್ಯ ಪೂರ್ಣಗೊಂಡಿಲ್ಲ.
ಹಾಗಾಗಿ ಅತ್ಯಂತ ಎಚ್ಚರಿಕೆ ವಹಿಸಿ ವಾಹನ ಚಲಾಯಿಸ ಬೇಕಿದೆ ಎಂದು ಯು.ಟಿ. ಖಾದರ್ ಮನವಿ ಮಾಡಿದ್ದಾರೆ.
195.50 ಕೋ.ರೂ. ವೆಚ್ಚದ ಈ ಸೇತುವೆ ಮತ್ತು ಅಣೆಕಟ್ಟು ಕಾಮಗಾರಿ ಬಹುತೇಕ ಮುಗಿದಿದೆ. ಪಶ್ಚಿಮ ವಾಹಿನಿ ಯೋಜನೆಯಲ್ಲಿ ನೀರಾವರಿ ಇಲಾಖೆಯಡಿ ಅತಿದೊಡ್ಡ ಯೋಜನೆಯ ಕಾಮಗಾರಿ ಎನ್ನುವ ಖ್ಯಾತಿಯೂ ಇದಕ್ಕಿದೆ.
ಸೇತುವೆಯು 520 ಮೀ. ಉದ್ದವಿದ್ದು, 10.6 ಮೀ. ಎತ್ತರ, 10 ಮೀ. ಅಗಲ ಹಾಗೂ ಇಕ್ಕೆಲಗಳಲ್ಲಿ ಕಾಲುದಾರಿಯೂ ಇದೆ.
ಅಣೆಕಟ್ಟಿನಿಂದ ಸಂಗ್ರಹವಾಗುವ ಸಿಹಿನೀರನ್ನು ಉಳ್ಳಾಲ ಪ್ರದೇಶದ ಮನೆ, ವ್ಯವಹಾರ ಕೇಂದ್ರಗಳಿಗೆ ಮೀಟರ್ ಅಳವಡಿಸಿ 24 ಗಂಟೆಯೂ ನೀರಿನ ವ್ಯವಸ್ಥೆ ಮಾಡುವ ಯೋಜನೆಯೂ ಇದೆ.
ಈ ಸೇತುವೆಯು ಹರೇಕಳ ಗ್ರಾಮವಲ್ಲದೆ ಪಾವೂರು, ಕೊಣಾಜೆ, ಪಜೀರ್ ಗ್ರಾಮಸ್ಥರ ಪಾಲಿಗೆ ಮಂಗಳೂರು ಪ್ರಯಾಣ ಅತ್ಯಂತ ಹತ್ತಿರವಾಗಲಿದೆ.
ದೇರಳಕಟ್ಟೆ-ಮಂಗಳೂರು ನಡುವಿನ ವಾಹನ ದಟ್ಟಣೆ ಸಮಸ್ಯೆ ನೀಗಿಸಲು ಸಹಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ.
ಸಿದ್ದರಾಮಯ್ಯ ತನ್ನ ಬಜೆಟ್ನಲ್ಲಿ ಹರೇಕಳಕ್ಕೆ ಸೇತುವೆಯ ಯೋಜನೆ ಘೋಷಿಸಿ 174 ಕೋ.ರೂ. ಅನುದಾನ ಮೀಸಲಿಟ್ಟಿದ್ದರು.
ಉಡುಪಿಯ ಜಿ.ಶಂಕರ್ ಟ್ರಸ್ಟ್ 195.50 ಕೋ.ರೂ.ಗೆ ಗುತ್ತಿಗೆ ವಹಿಸಿ 2020ರ ಜನವರಿಯಲ್ಲೇ ಕಾಮಗಾರಿ ಆರಂಭಿಸಿತ್ತು.
ಶಾಸಕ ಯು.ಟಿ.ಖಾದರ್ 2020ರ ಮಾ.21ರಂದು ಶಿಲಾನ್ಯಾಸಗೈದಿದ್ದರು. ಮೂರು ವರ್ಷವಾಗುತ್ತಲೇ ಈ ಸೇತುವೆಯು ವಾಹನಗಳ ಸಂಚಾರಕ್ಕೆ ಮುಕ್ತಗೊಂಡಿವೆ.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
DAKSHINA KANNADA
ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು
ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.
ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!