Connect with us

DAKSHINA KANNADA

ಉಳ್ಳಾಲ: ಫ್ಲೆಕ್ಸ್‌ನಲ್ಲಿ ಅನುಮತಿಯಿಲ್ಲದೆ ಗರ್ಭಿಣಿ ಭಾವಚಿತ್ರ ಅಳವಡಿಕೆ: ಕೆರಳಿದ ಭಜರಂಗದಳ

Published

on

ಉಳ್ಳಾಲ: ಕಾರ್ಯಕ್ರಮವೊಂದರ ಫ್ಲೆಕ್ಸ್ ನಲ್ಲಿ ಮಹಿಳೆಯ ಅನುಮತಿ ಇಲ್ಲದೆ ಫೊಟೋ ಅಳವಡಿಸಿದ ಕುರಿತಾಗಿ ಕೆರಳಿದ ಬಜರಂಗದಳದ ಕಾರ್ಯಕರ್ತರು ಕಾರ್ಯಕ್ರಮ ಆಯೋಜಕರನ್ನು ತರಾಟೆಗೆ ತೆಗೆದುಕೊಂಡ ಘಟನೆ ಉಳ್ಳಾಲದ ಕೊಲ್ಯ ನಾರಾಯಣಗುರು ಸಭಾಭವನದಲ್ಲಿ ಬುಧವಾರ ನಡೆಯಿತು.


ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ಮಂಗಳೂರು ಗ್ರಾಮಾಂತರ ವತಿಯಿಂದ ತಾಲೂಕು ಮಟ್ಟದ ಪೋಷಣ್ ಮಾಸಾಚರಣೆ, ಅನ್ನಪ್ರಾಶನ, ಪೌಷ್ಟಿಕ ಆಹಾರ ಪ್ರದರ್ಶನ ಹಾಗೂ ಸೀಮಂತ ಕಾರ್ಯಕ್ರಮವನ್ನು‌ ಕೊಲ್ಯ ನಾರಾಯಣಗುರು ಸಭಾಂಗಣದಲ್ಲಿ ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಪ್ರಚಾರ ಪ್ರಯುಕ್ತ ಸಭಾಂಗಣದ ಮುಂದೆ ಅಳವಡಿಸಿದ್ದ ಫ್ಲೆಕ್ಸ್ ನಲ್ಲಿ ಹಿಂದೂ‌ ಮಹಿಳೆಯೊಬ್ಬರ ಹಲವು ವರ್ಷಗಳ ಹಿಂದಿನ ಗರ್ಭಿಣಿಯಾಗಿದ್ದ ಭಾವಚಿತ್ರವನ್ನು‌ ಜಾಲತಾಣದಿಂದ ನಕಲು ಮಾಡಿ ಅಳವಡಿಸಲಾಗಿದ್ದು ಪಕ್ಕದಲ್ಲೇ ಕ್ಷೇತ್ರದ ಶಾಸಕ ಯು.ಟಿ. ಖಾದರ್ ಅವರ ಫೊಟೋ ಬಳಸಲಾಗಿತ್ತು.

ವಿಷಯ ತಿಳಿಯುತ್ತಿದ್ದಂತೆಯೇ ಕೆರಳಿದ ಬಜರಂಗದಳದ ಕಾರ್ಯಕರ್ತರು ಇಂದು ಕಾರ್ಯಕ್ರಮ ನಡೆಯುತ್ತಿದ್ದ ನಾರಾಯಣಗುರು ಸಭಾಂಗಣದೊಳಗೆ ನುಗ್ಗಿ ಆಯೋಜಕರ ನಿರ್ಲಕ್ಷ್ಯತನಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೆ ಶಾಸಕರ ವಿರುದ್ಧ ಘೋಷಣೆ ಕೂಗಿದರು.

ಮಹಿಳೆಯರ ಬಗ್ಗೆ ಪುಂಖಾನುಪುಂಖವಾಗಿ ಹೊಗಳುವ ಸರಕಾರಿ ಮಹಿಳಾ ಅಧಿಕಾರಿಗಳು ಮಾಡಿದ ಕ್ರಮ‌ ಸಮಂಜಸವಲ್ಲ ಎಂದು ಆರೋಪಿಸಿ ಶಾಸಕ ಯು.ಟಿ. ಖಾದರ್ ಅವರ ವಿರುದ್ಧ ಘೋಷಣೆ ಕೂಗಿದರು.
ಬಳಿಕ ಆಯೋಜಕರು ಕಾರ್ಯಕರ್ತರ ಮನವೊಲಿಸಿ ಫ್ಲೆಕ್ಸ್ ತೆರವುಗೊಳಿಸಿದರು.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending