Connect with us

DAKSHINA KANNADA

ಉಳ್ಳಾಲ : ಗುಜಿರಿ ಸೇರಿದ ತಲಪಾಡಿ ಟೋಲ್ ಆಂಬ್ಯುಲೆನ್ಸ್- ಅಪಘಾತದ ಗಾಯಾಳುಗಳು ರಸ್ತೆಯಲ್ಲೇ ಬಾಕಿ..!

Published

on

ನವಯುಗ ಸಂಸ್ಥೆಗೆ ಸೇರಿದ ಎರಡು ಆಂಬ್ಯುಲೆನ್ಸ್ ಗಳು ಟೋಲ್ ಬೂತ್ ಸಮೀಪವೇ ನಿಲ್ಲಿಸಲಾಗಿದ್ದು, ನಿರ್ವಹಣೆಯಿಲ್ಲದೆ ಪಾಳು ಬಿದ್ದಿವೆ ಮತ್ತು ಅದರೊಳಗೆ ಮದ್ಯದ ಬಾಟಲಿಗಳಿಂದ ತುಂಬಿದೆ.

ಉಳ್ಳಾಲ: ತಲಪಾಡಿ ಟೋಡ್ಡಿ ಶಾಪ್ ಎದುರುಗಡೆ ರಾ.ಹೆ.66 ರಲ್ಲಿ ಸಂಭವಿಸಿದ ಅಪಘಾತದ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ನವಯುಗ ಟೋಲ್ ಆಂಬ್ಯುಲೆನ್ಸ್ ಸಿಗದೆ, ಗಾಯಾಳುಗಳಿಬ್ಬರು ರಸ್ತೆಯಲ್ಲೇ ನರಳಾಡಿದ ಘಟನೆ ಮಂಗಳೂರು ಹೊರವಲಯದ ಉಳ್ಳಾಲದಲ್ಲಿ ಸಂಭವಿಸಿದೆ.

ಬಳಿಕ ಬೇರೊಂದು ಖಾಸಗಿ ಆಂಬ್ಯುಲೆನ್ಸ್ ಮೂಲಕ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು.

ತಲಪಾಡಿ ಟೋಲ್ ಸಂಸ್ಥೆಗೆ ಸೇರಿದ ಆಂಬ್ಯುಲೆನ್ಸ್ ಗಳೆರಡು ನಿರ್ವಹಣೆಯಿಲ್ಲದೆ ಗುಜರಿ ಸೇರಿರುವುದರ ವಿರುದ್ಧ ಸ್ಥಳೀಯರು ಟೋಲ್ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಂತೂರಿನಿಂದ ತಲಪಾಡಿವರೆಗೂ ನವಯುಗ ಸಂಸ್ಥೆ ರಾ.ಹೆ.66ರ ನಿರ್ವಹಣೆ ನಡೆಸುತ್ತಿದ್ದರೂ, ಜನರಿಗೆ ಸುರಕ್ಷತೆಯಿಲ್ಲದ ಸ್ಥಿತಿ ನಿರ್ಮಾಣವಾಗಿದೆ.

ಅಪಘಾತದ ಸಂದರ್ಭ ತುರ್ತಾಗಿ ಕಾರ್ಯಾಚರಿಸಬೇಕಾದ ನವಯುಗ ಸಂಸ್ಥೆಯ ಎರಡು ಆಂಬ್ಯುಲೆನ್ಸ್ ವಾಹನಗಳು ಮೂಲೆ ಸೇರಿದೆ.

ಕಾನೂನು ರೀತ್ಯಲ್ಲಿ ಎರಡು ಆಂಬ್ಯುಲೆನ್ಸ್ ಕಾರ್ಯಾಚರಿಸಬೇಕಿದ್ದರೂ, ನಿರ್ವಹಣೆ ಕಷ್ಟವೆಂದು ಸಂಸ್ಥೆಯವರು ಸಂಘಟನೆಗೆ ಸೇರಿದ ಆಂಬ್ಯುಲೆನ್ಸ್ ಮೂಲಕ ಸೇವೆ ನೀಡಲು ಮುಂದಾಗಿದ್ದಾರೆ.

ಆದರೆ ಮೊನ್ನೆ ನಡೆದ ಅಪಘಾತದ ಸಂದರ್ಭ ಸಂಘಟನೆಯ ಆಂಬ್ಯುಲೆನ್ಸ್ ಕೂಡಾ ಬಾರದೆ ಗಾಯಾಳುಗಳು ಹಲವು ನಿಮಿಷಗಳ ಕಾಲ ಕಾದು ಬಳಿಕ ರಸ್ತೆಯಲ್ಲಿ ಹೋಗುತ್ತಿದ್ದ ಆಂಬ್ಯುಲೆನ್ಸ್ ಅನ್ನು ತಡೆದು ಆಸ್ಪತ್ರೆಗೆ ಕಳುಹಿಸಲಾಗಿದೆ.

ನವಯುಗ ಸಂಸ್ಥೆಗೆ ಸೇರಿದ ಎರಡು ಆಂಬ್ಯುಲೆನ್ಸ್ ಗಳು ಟೋಲ್ ಬೂತ್ ಸಮೀಪವೇ ನಿಲ್ಲಿಸಲಾಗಿದ್ದು, ನಿರ್ವಹಣೆಯಿಲ್ಲದೆ ಪಾಳು ಬಿದ್ದಿವೆ ಮತ್ತು ಅದರೊಳಗೆ ಮದ್ಯದ ಬಾಟಲಿಗಳಿಂದ ತುಂಬಿದೆ.

ವರ್ಷಗಳಿಂದ ಮೂಲೆ ಸೇರಿರುವ ಆಂಬ್ಯುಲೆನ್ಸ್ ಗಳಿಗೆ ಇನ್ನೂ ಕಾಯಕಲ್ಪ ದೊರೆತಿಲ್ಲ. ತಲಪಾಡಿ ಟೋಲ್ ಸಮೀಪದಲ್ಲೇ ರಾ.ಹೆ.ಯುದ್ದಕ್ಕೂ ದಾರಿದೀಪಗಳು ಉರಿಯದೆ ವಾಹನ ಸವಾರರು, ಸ್ಥಳೀಯರು ಸಂಕಷ್ಟ ಎದುರಿಸುವಂತಾಗಿದೆ.

ಎಲ್ಲವೂ ಸೆಂಟ್ರಲ್ : ಟೋಲ್ ಸಂಸ್ಥೆ ಹೊರರಾಜ್ಯಕ್ಕೆ ಸೇರಿರುವುದರಿಂದ ಅದರಲ್ಲಿ ನಿರ್ವಹಿಸುವ ಸಿಬ್ಬಂದಿಯೂ ಹೊರರಾಜ್ಯದವರೇ ಆಗಿದ್ದಾರೆ. ತಲಪಾಡಿ ಗ್ರಾ.ಪಂ ವ್ಯಾಪ್ತಿಯಲ್ಲಿ ಟೋಲ್ ಬೂತ್ ಕಾರ್ಯಚರಿಸುತ್ತಿದ್ದರೂ ಗ್ರಾ.ಪಂ.ಗೆ ಕೊಡಬೇಕಾದ ಕನಿಷ್ಟ ಗೌರವವನ್ನು ನೀಡಲಾಗುತ್ತಿಲ್ಲ ಅನ್ನುವ ಆರೋಪ ವ್ಯಕ್ತವಾಗಿದೆ.

ದಾರಿದೀಪಗಳು, ಸರ್ವಿಸ್ ರಸ್ತೆ, ಆಂಬ್ಯುಲೆನ್ಸ್ ಸೇವೆ ಕುರಿತು ತಲಪಾಡಿ ಗ್ರಾಮಸಭೆಯಲ್ಲಿ ಗ್ರಾಮಸ್ಥರು ದೂರಿಕೊಂಡು ಬಂದರೂ, ಈವರೆಗೆ ಗ್ರಾಮದ ಮೂಲಭೂತ ಸೇವೆಗಳನ್ನು ಒದಗಿಸುವಲ್ಲಿ ಸಂಸ್ಥೆ ವಿಫಲವಾಗಿದೆ ಅನ್ನುವ ಆರೋಪ ಕೇಳಿಬಂದಿದೆ.

ಸಾಲು ಸಾಲು ಅಪಘಾತಗಳು :
ಕೊಲ್ಯ ರಮಾನಂದಾಶ್ರಮ , ಬೀರಿ ಉಚ್ಚಿಲ , ತೊಕ್ಕೊಟ್ಟು ಕಾಪಿಕಾಡು ರಾ.ಹೆ.66 ಗಳಲ್ಲಿ ವಿರುದ್ಧ ಧಿಕ್ಕಿನಲ್ಲಿ ವಾಹನಗಳು ಸಂಚರಿಸುವುದರಿಂದ ಅಪಘಾತಗಳು ಸಾಲು ಸಾಲಾಗಿ ಸಂಭವಿಸುತ್ತಲೇ ಇವೆ.

ಸರ್ವಿಸ್ ರಸ್ತೆಯ ವ್ಯವಸ್ಥೆಯಿಲ್ಲದೆ ಅನಾಹುತಗಳು ಸಂಭವಿಸುತ್ತಿದ್ದರೂ, ಕನಿಷ್ಟ ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲು ಸೂಕ್ತ ಆಂಬ್ಯುಲೆನ್ಸ್ ವ್ಯವಸ್ಥೆ ತಕ್ಷಣದಿಂದ ಜಿಲ್ಲಾಡಳಿತ ಜಾರಿಗೊಳಿಸುವಂತೆ ಆದೇಶ ಹೊರಡಿಸಬೇಕು ಅನ್ನುವ ಆಗ್ರಹವನ್ನು ಅಪಘಾತ ನಡೆದ ಸ್ಥಳದಲ್ಲಿ ಜಮಾಯಿಸಿದ ಸ್ಥಳೀಯರು ಆಗ್ರಹಿಸಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ದಂತ ವೈದ್ಯೆಯಾಗಿ ಸೇವೆ ಆರಂಭದ ದಿನವೇ ವಿಧಿಯಾಟ..! ಯುವ ವೈದ್ಯೆ ಸಾ*ವು..!

Published

on

ಮಂಗಳೂರು : ಆಕೆ ಆರೋಗ್ಯವಾಗಿದ್ದು, ಇನ್ನೊಬ್ಬರ ಆರೋಗ್ಯ ವಿಚಾರಿಸುವ ವೈದ್ಯೆಯಾಗಿದ್ದವರು. ದಂತ ವೈದ್ಯಕೀಯ ಪದವಿ ಮುಗಿಸಿ ಇನ್ನೇನು ಕೆಲಸಕ್ಕೆ ಸೇರಬೇಕು ಅಂತ ಒಂದು ಕ್ಲಿನಿಕ್‌ಗೆ ಜಾಯಿನ್ ಆಗಿದ್ದಾರೆ. ಆದ್ರೆ ದುರಾದೃಷ್ಟ ಅಂದ್ರೆ ಕೆಲಸಕ್ಕೆ ಜಾಯಿನ್ ಆಗುವ ದಿನವೇ ಆಕೆ ಇಹಲೋಕ ತ್ಯಜಿಸಿದ್ದಾರೆ. ಉಳ್ಳಾಲ ತಾಲೂಕಿನ ನರಿಂಘಾನ ಗ್ರಾಮದ ಆಳ್ವರಬೆಟ್ಟು ನಿವಾಸಿ 24 ವರ್ಷದ ಸ್ವಾತಿ ಶೆಟ್ಟಿ ಇಹಲೋಕ ತ್ಯಜಿಸಿದ ವೈದ್ಯೆಯಾಗಿದ್ದಾರೆ. ಉಳ್ಳಾಲ ತಾಲೂಕಿನ ನರಿಂಗಾನ‌ ಗ್ರಾಮದ ಆಳ್ವರಬೆಟ್ಟು ನಿವಾಸಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಹಿರಿಯ ಮುಖಂಡ, ಶಾಂತಿಪಳಿಕೆ ಶ್ರೀ ಮಹಾಮ್ಮಾಯ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರಾಮಣ್ಣ ಶೆಟ್ಟಿ ಆಳ್ವರಬೆಟ್ಟು ಹಾಗೂ ಜ್ಯೋತಿ ಶೆಟ್ಟಿ ದಂಪತಿ ಪುತ್ರಿ ಇವರು.

ಮಂಗಳೂರಿನ ಎಜೆ ಆಸ್ಪತ್ರೆಯಲ್ಲಿ ದಂತ ವೈದ್ಯಕೀಯ ಪದವಿ ಮುಗಿಸಿ ಮಂಗಳವಾರದಿಂದ(16-04-2024) ಪಾಂಡೇಶ್ವರದ ಕ್ಲಿನಿಕ್ ಒಂದರಲ್ಲಿ ಕೆಲಸಕ್ಕೆ ಜಾಯಿನ್ ಆಗುವವರಿದ್ದರು. ಹೀಗಾಗಿ ಸೋಮವಾರ (15-04-2024) ಸಂಜೆ ಪಾಂಡೇಶ್ವರದ ಪಿಜಿ ಬಂದು ಜಾಯಿನ್ ಆಗಿದ್ದರು. ಮರುದಿನ ಹೊಸ ಕೆಲಸಕ್ಕೆ ಹೋಗುವ ಕಾರಣ ಸಾಕಷ್ಟು ಎಕ್ಸೈಟ್ ಆಗಿದ್ದ ಸ್ವಾತಿ ತಂದೆ ತಾಯಿ ಜೊತೆ ಫೋನ್ ಮೂಲಕ ಮಾತನಾಡಿದ್ದರು. ಈ ವೇಳೆ ವಿಪರೀತ ತಲೆನೋವು ಕಾಣಿಸಿಕೊಂಡ ಕಾರಣ ಬೇಗನೆ ಮಲಗುವುದಾಗಿ ಹೇಳಿ ಸ್ವಾತಿ ನಿದ್ರೆಗೆ ಜಾರಿದ್ದರು. ಈ ವೇಳೆ ರೂಮ್ ಮೇಟ್ ಕೂಡಾ ಜೊತೆಯಲ್ಲಿ ಇದ್ದರಾದ್ರೂ ತಲೆನೋವಿನ ಕಾರಣ ತೊಂದರೆ ಕೊಡದೆ ಅವರೂ ಕೂಡಾ ಮಲಗಿದ್ದರು. ಮುಂಜಾನೆ ಸ್ವಾತಿ ಎದ್ದಿಲ್ಲ ಅನ್ನೋ ಕಾರಣಕ್ಕೆ ಅವರನ್ನು ಅಲುಗಾಡಿಸಲು ಹೋದಾಗ ಮೈ ತಣ್ಣಗಾಗಿರುವುದು ಗೊತ್ತಾಗಿದೆ.  ತಕ್ಷಣ ಅಂಬ್ಯುಲೆನ್ಸ್ ಮೂಲಕ ನಗರದ ವೆನ್‌ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಅಷ್ಟರಲ್ಲಾಗಲೇ ಅವರು ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಸ್ವಾತಿ ಅವರಿಗೆ ಅಪರೂಪಕ್ಕೆ ತಲೆ ನೋವು ಕಾಣಿಸಿಕೊಳ್ಳುತ್ತಿತ್ತು. ಆದ್ರೆ ಅವರ ಈ ಧಿಡೀರ್ ಸಾವಿಗೆ ಕಾರಣ ಏನು ಅನ್ನೋದು ಇನ್ನಷ್ಟೇ ಗೊತ್ತಾಗಬೇಕಾಗಿದೆ.

 

 

Continue Reading

DAKSHINA KANNADA

ದೇಶದಲ್ಲಿ ಮೊದಲ ಬಾರಿಗೆ QR ಕೋಡ್ ವೋಟರ್ ಸ್ಲಿಪ್

Published

on

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿ ಮತದಾರರಿಗೆ ಕ್ಯೂ ಆರ್‌ ಕೋಡ್‌ ಹೊಂದಿರುವ ವೋಟರ್‌ ಸ್ಲಿಪ್‌ ನೀಡಲಾಗುವುದು.

ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತಗಟ್ಟೆ ಸುಲಭವಾಗಿ ಹುಡುಕಲು ಸಾಧ್ಯವಾಗದಂತೆ ಮನೆ ಮನೆಗೆ ನೀಡಲಾಗುವ ವೋಟರ್‌ ಸ್ಲಿಪ್‌ ಗಳಲ್ಲಿ ಮತಗಟ್ಟೆಯ ಕ್ಯೂ ಆರ್‌ ಕೋಡ್‌ ಮುದ್ರಿಸಲಾಗಿದೆ.

ನಗರದ ನಿವಾಸಿಗಳು ಕ್ಯೂ ಆರ್‌ ಕೋಡ್‌ ಮೂಲಕ ತಮ್ಮ ಮತಗಟ್ಟೆಯನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಮತದಾರರ ಮಾಹಿತಿ ಚೀಟಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ನೋಂದಾಯಿತ ಎಲ್ಲಾ ಮತದಾರರಿಗೆ ಒದಗಿಸಲಾಗುವುದು.

Continue Reading

DAKSHINA KANNADA

ಒಂದು ತಿಂಗಳಿನಿಂದ ಮೊಬೈಲ್‌ ಫೋನ್‌ ಸಂಪರ್ಕವಿಲ್ಲದೆ ಪರದಾಡುತ್ತಿದ್ದಾರೆ ಈ ಜನರು..!!

Published

on

ಉಡುಪಿ: ಜಿಲ್ಲೆಯ ಕಟಪಾಡಿ ಪೇಟೆ ಸುತ್ತಮುತ್ತಲಿನ ಒಂದೂವರೆ ಕಿ.ಮೀ. ವ್ಯಾಪ್ತಿಯಲ್ಲಿ ಕಳೆದ ಒಂದು  ತಿಂಗಳಿನಿಂದ ಮೊಬೈಲ್ ನೆಟ್ವರ್ಕ್ ಸಂಪೂರ್ಣ ಸ್ಥಗಿತವಾಗಿದ್ದು, ಖಾಸಗಿ ಕಂಪೆನಿಗಳ ಮೊಬೈಲ್ ಫೋನ್ ಮತ್ತು ಇಂಟರ್‌ನೆಟ್ ಬಳಕೆದಾರರು ತೀವ್ರ ಅಡಚಣೆ ಅನುಭವಿಸುತ್ತಿದ್ದಾರೆ.

katapadi

ಮೊಬೈಲ್ ಕಂಪೆನಿ ಹಾಗೂ ಟವರ್ ಅಳವಡಿಸಲಾಗಿರುವ ಜಾಗದ ಮಾಲೀಕರ ನಡುವಿನ ಒಪ್ಪಂದ ಮುಗಿದ ಹಿನ್ನೆಲೆಯಲ್ಲಿ ಏರ್‌ಟೆಲ್, ವಿಐ ಮತ್ತು ಜಿಯೋ ಬಳಕೆದಾರರಿಗೆ ನೆಟ್ ವರ್ಕ್ ಸಿಗದಂತಾಗಿದೆ. ಫೋನ್ ಕರೆ ಮಾಡಲು, ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ, ಆನ್‌ಲೈನ್ ಹಣಕಾಸಿನ ವ್ಯವಹಾರ, ವರ್ಕ್ ಫ್ರಮ್ ಹೋಮ್, ಕಚೇರಿಯ ದೈನಂದಿನ ಕೆಲಸ ನಿರ್ವಹಿಸಲು ಕಷ್ಟಪಡುತ್ತಿದ್ದು, ಜನರ ಗೋಳು ಕೇಳುವವರೇ ಇಲ್ಲವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಮೊಬೈಲ್ ಸೇವೆ ಒದಗಿಸುವ ಕಂಪೆನಿಗಳು ಟವರ್ ಲಭ್ಯವಿಲ್ಲದೆ ನಾವೇನೂ ಮಾಡಲಾಗುತ್ತಿಲ್ಲ. ಸಮೀಪದಲ್ಲಿ ಪರ್ಯಾಯ ಜಾಗವೂ ಸಿಗುತ್ತಿಲ್ಲ ಎಂದು ಹೇಳುತ್ತಿವೆ. ಏರ್‌ಟೆಲ್ ಸಂಸ್ಥೆಯ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ‘ಪರ್ಯಾಯ ಟವರ್‌ಗೆ ವ್ಯವಸ್ಥೆಯಾಗದೆ ಏನೂ ಮಾಡುವಂತಿಲ್ಲ, ಪರ್ಯಾಯ ಜಾಗದ ವ್ಯವಸ್ಥೆ ಆದಲ್ಲಿ ಟವರ್ ನಿರ್ಮಾಣ ಮಾಡುತ್ತೇವೆ’ ಎಂದು ಹೇಳುತ್ತಿದ್ದಾರೆ.

READ MORE..; ಅರ್ಚಕರಿಂದಲೇ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ..!! ವಿಡಿಯೋ ವೈರಲ್

ನೆಟ್ ವರ್ಕ್ ಸಿಗದೆ ಹೈರಾಣಾಗಿರುವ ಸ್ಥಳೀಯರು ಮೊಬೈಲ್ ಸೇವೆ ಕಲ್ಪಿಸುವ ಸಂಸ್ಥೆಗಳ ವಿರುದ್ಧ – ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಜನರಲ್ಲಿ ಕಂಪೆನಿ ವಿರುದ್ದ ಆಕ್ರೋಶ ಹೆಚ್ಚುತ್ತಿದೆ. ಜಾಗದ ಮಾಲೀಕರು ಮತ್ತು ನೆಟ್ವರ್ಕ್ ಸಂಸ್ಥೆಗಳು ಪರಸ್ಪರ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳ ಬೇಕು ಎಂದು ಒತ್ತಾಯಿಸು ತ್ತಿರುವ ಸ್ಥಳೀಯರು ಸಂಘಟಿತ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

 

Continue Reading

LATEST NEWS

Trending