Connect with us

    DAKSHINA KANNADA

    ಉಳ್ಳಾಲ : ದುರ್ನಾತ ಬೀರುತ್ತಿದೆ ಉಳ್ಳಾಲ ಬೀಚ್ ರಸ್ತೆ -ಸಾಂಕ್ರಾಮಿಕ ರೋಗದ ಭೀತಿಯಲ್ಲಿ ವೀರರಾಣಿ ಅಬ್ಬಕ್ಕನ ನಾಡು..!

    Published

    on

    ಉಳ್ಳಾಲದಲ್ಲಿ ಕಳೆದ ಹಲವು ಸಮಯಗಳಿಂದ ಕಂಡು ಬರುತ್ತಿರುವುದೇ ತ್ಯಾಜ್ಯದ ಸಮಸ್ಯೆ, ಮಂಗಳೂರಿನ ಪಚ್ಚನಾಡಿ ಡಂಪಿಂಗ್ ಯಾರ್ಡಿನಂತೆ ಉಳ್ಳಾಲದ ಪ್ರಮುಖ ಸ್ಥಳ ಸಾಂಕ್ರಾಮಿಕ ರೋಗಗಳ ಭೀತಿ ತಂದೊಡ್ಡಿದೆ. 

    ಉಳ್ಳಾಲ:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಹುತೇಕ ನಗರಗಳು ಅಭಿವೃದ್ಧಿ ಹೊಂದುತ್ತಿವೆ. ಶಿಕ್ಷಣ ನಗರಿ ಎಂದೇ ಪ್ರಖ್ಯಾತಿಯನ್ನು ಪಡೆದಿರುವ ಮಂಗಳೂರು ನಗರ ಜೊತೆಗೆ ಮೆಡಿಕಲ್ ಹಬ್ ಎಂದೂ ಕರೆಯಲ್ಪಡುವ ಸಮುದ್ರ ತೀರದ ಉಳ್ಳಾಲ, ವಿಶ್ವವಿದ್ಯಾನಿಲಯ ಹೊಂದಿರುವ ಕೊಣಾಜೆ ಪರಿಸರವೂ ಅಷ್ಟೇ ಜನಪ್ರಿಯವಾಗಿದೆ.

    ಆದರೆ ದೇಶದ ಪ್ರಪ್ರಥಮ ಮಹಿಳಾ ಹೋರಾಗಾರ್ತಿ ಅಬ್ಬಕ್ಕ ರಾಣಿ ಆಳಿದ ಉಳ್ಳಾಲದ ಪ್ರಮುಖ ಪ್ರದೇಶ ಕಳೆದ ಹಲವು ಸಮಯಗಳಿಂದ ಹಸಿ- ಬಿಸಿ ತ್ಯಾಜ್ಯಗಳಿಂದ ಕೊಳೆಯುತ್ತಿದ್ದು ಇದರಿಂದ ಹೊರಡುವ ದುರ್ನಾತ, ವೈರಸ್ , ಬ್ಯಾಕ್ಟಿರಿಯಾಗಳು ಸ್ಥಳೀಯದ ದೈನಂದಿನ ಜೀವನವನ್ನೇ ಆಹುತಿ ಪಡೆದಿದೆ.

    ಉಳ್ಳಾಲದ ಪ್ರಸಿದ್ಧ ಬೀಚ್ ವೀಕ್ಷಣೆಗೆ, ದರ್ಗಾಕ್ಕೆ ಸಾವಿರಾರು ಪ್ರವಾಸಿಗರು ದೂರದೂರುಗಳಿಂದ ಆಗಮಿಸುತ್ತಾರೆ. ಒಂದೆಡೆ ಹಲವು ಮೆಡಿಕಲ್‌ ಕಾಲೇಜು, ವಿಶ್ವವಿದ್ಯಾನಿಲಯ ಕಾಲೇಜು, ಪವಿತ್ರವಾದ ಉಳ್ಳಾಲ ಮಸೀದಿ, ಸೋಮೇಶ್ವರ ದೇವಸ್ಥಾನ, ಚರ್ಚು ಇದೆ. ಆದರೆ ಹೀಗೆ ಬರುವವರನ್ನು ಸ್ವಾಗತಿಸುವುದೇ ದುರ್ನಾತ ಬೀರುತ್ತಿರುವ ಈ ಬ್ಲ್ಯಾಕ್‌ ಸ್ಪಾಟ್‌.

    ಉಳ್ಳಾಲದ ಅಬ್ಬಕ್ಕ ಸರ್ಕಲ್‌ನಿಂದ ಕೇವಲ 25 ಮೀ. ದೂರದಲ್ಲಿರುವ ಬೀಚಿಗೆ ಹೋಗುವ ಪ್ರಮುಖ ರಸ್ತೆಯ ಪಕ್ಕದಲ್ಲೇ ಭಾರೀ ಕಸವನ್ನು ತಂದು ಇಲ್ಲಿ ಸುರಿಯಲಾಗುತ್ತಿದ್ದು, ಬೀದಿನಾಯಿಗಳು, ದನ ಕರುಗಳು, ಪ್ರಾಣಿ ಪಕ್ಷಿಗಳು ಈ ಕೊಳೆತ ಪದಾರ್ಥಗಳನ್ನು ಆಹಾರವಾಗಿ ಸೇವಿಸುತ್ತಿದ್ದು ಇದು ಸ್ಥಳೀಯರಲ್ಲಿ ಸಾಂಕ್ರಾಮಿಕ ರೋಗ ಹರಡುವ ಭೀತಿ ತಂದೊಡ್ಡಿದೆ.

    ಈಗಾಗಲೇ ಇಲ್ಲಿನ ಜನತೆ ವಿವಿಧ ರೋಗರುಜಿನಗಳಿಂದ ಬಳಲುತ್ತಿದ್ದಾರೆ.ಸುತ್ತಮುತ್ತಲ ಬಾವಿಯ ನೀರು ಕೂಡಾ ಕಲುಷಿತವಾಗುತ್ತಿದೆ.

    ಕಳೆದ ಹಲವು ವರ್ಷಗಳಿಂದ ಇಲ್ಲಿ ಆಯ್ಕೆಗೊಂಡು ಬರುತ್ತಿರುವ ಶಾಸಕ ಯು ಟಿ ಖಾದರ್, ಪ್ರಸ್ತುತ ವಿಧಾನ ಸಭಾ ಸಭಾಪತಿಯಾಗಿದ್ದು ಇಲ್ಲಿನ ತ್ಯಾಜ್ಯ ಸಮಸ್ಯೆ ಬಗ್ಗೆ ಕ್ರಮ ವಹಿಸಬೇಕಾಗಿದೆ.

    ನಾವು ಈಗಾಗಲೇ ಶಾಸಕರಿಗೆ ಮನವಿ ನೀಡಿದ್ದೇವೆ. ಇಲ್ಲಿ ಇನ್ನೊಂದು ಪಚ್ಚನಾಡಿ ಡಂಪ್‌ ಮಾಡುವ ಮುನ್ನ ಇದನ್ನು ತೆರವುಗೊಳಿಸಿ ಉಳ್ಳಾಲ ನಗರ ಸಭೆ ಶಾಶ್ವತವಾದ ಪರಿಹಾರವನ್ನು ತೆಗೆದುಕೊಳ್ಳಲು ಕ್ರಮ ಕೈಗೊಂಡು ಉಳ್ಳಾಲದ ಜನತೆಯನ್ನು ರಕ್ಷಿಸಬೇಕಾಗಿ ಸ್ಥಳೀಯ ಜನತೆ ಆಗ್ರಹಿಸಿದ್ದಾರೆ.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    DAKSHINA KANNADA

    ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು

    Published

    on

    ಮಂಗಳೂರು: ಗುಜರಾತ್‌ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.

     

     

    ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್‌ ಗಾರ್ಡ್‌ ತಂಡ ಹೆಲಿಕಾಪ್ಟರ್‌ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

    ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್‌ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್‌ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.

    ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್‌ ಗಾರ್ಡ್‌ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್‌ ಗಾರ್ಡ್‌ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.

    Continue Reading

    LATEST NEWS

    Trending