Connect with us

    LATEST NEWS

    ಕರಿಮಣಿ ಮಾಲೀಕನ ವರದಕ್ಷಿಣೆ ಕಿರುಕುಳ…ಬದುಕಿಗೆ ಗುಡ್‌ ಬೈ ಹೇಳಿದ ಪತ್ನಿ! ಡೆತ್ ನೋಟ್ ನಲ್ಲಿತ್ತು ಆಕೆಯ ನೋವು

    Published

    on

    ಇತ್ತೀಚೆಗೆ ಕರಿಮಣಿ ಮಾಲೀಕ ನೀನಲ್ಲ ಅನ್ನೋ ಹಾಡು ಸೋಷಿಯಲ್ ಮೀಡಿಯಾದಲ್ಲಿ ಸಕತ್ ಸೌಂಡ್ ಮಾಡಿತ್ತು. ಅದೊಂದು ತಮಾಷೆ, ರೀಲ್ಸ್ ಗೀಳಿನವರಿಗೆ ಹುಚ್ಚು ಹಿಡಿಸುವ ಪದವಷ್ಟೇ ಆಗಿತ್ತಾದ್ರೂ ಆ ಹಾಡಿನ ಕಾರಣದಿಂದ ಬಾಗಲಕೋಟೆಯಲ್ಲೊಬ್ಬ ಪತಿ, ಪತ್ನಿ ಮಾಡಿದ ಕರಿಮಣಿ ಹಾಡಿನ ರೀಲ್ಸ್‌ನಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ. ಆದ್ರೆ ಮಂಡ್ಯದಲ್ಲೊಬ್ಬ ಕಿರಾತಕ ಕರಿಮಣಿಯ ಬೆಲೆಯೇ ತಿಳಿಯದೆ ಪತ್ನಿಗೆ ಹಿಂಸೆ ನೀಡಿ ಆಕೆಯ ಸಾವಿಗೆ ಕಾರಣನಾಗಿದ್ದಾನೆ.

    ಏನಿದು ಪ್ರಕರಣ ?

    ಈಗಿನ್ನೂ 26 ವರ್ಷವಾಗಿರೋ ಆಕೆಯ ಹೆಸರು ಪ್ರೇಮ ಕುಮಾರಿ. ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲೂಕಿನ ಲಿಂಗಾಪುರ ಗ್ರಾಮದವರು. 2022 ರಲ್ಲಿ ಪ್ರೇಮಕುಮಾರಿ ಅವರಿಗೆ ಮೈಸೂರಿನ ರಾಘವೇಂದರ ಎಂಬವರ ಜೊತೆ ಅದ್ಧೂರಿಯಾಗಿ ಮದುವೆ ಮಾಡಿಸಲಾಗಿತ್ತು. ಸಾಮಾನ್ಯ ಕುಟುಂಬದವರಾಗಿದ್ದ ತಂದೆ ತಾಯಿ ಮಗಳು ಚೆನ್ನಾಗಿರಲಿ ಅಂತ ಸ್ವಲ್ಪ ಶ್ರೀಮಂತ ಹುಡುಗನನ್ನೇ ಹುಡುಕಿದ್ರು. ಹೀಗಿರುವಾಗ 150 ಗ್ರಾಮ ಚಿನ್ನ, ಹಾಗೂ ವರನಿಗೆ 5 ಲಕ್ಷ ವರದಕ್ಷಿಣೆ ಕೂಡಾ ನೀಡಿದ್ರು. ನಮ್ಮ ಮಗಳು ಶ್ರೀಮಂತರ ಮನೆಯಲ್ಲಿ ಚೆನ್ನಾಗಿ ಬಾಳುತ್ತಾಳೆ ಅಂತ ಪ್ರೇಮಕುಮಾರಿಯ ತಂದೆತಾಯಿ ಕನಸು ಕಂಡಿದ್ದರು.
    ಆದ್ರೆ, ಆ ಕನಸು ಮೂರೆ ತಿಂಗಳಲ್ಲಿ ನುಚ್ಚು ನೂರಾಗಿ ಹೋಗಿದ್ದು, ಶ್ರೀಮಂತ ಅಳಿಯನ ಅಸಲಿ ಮುಖ ಹೊರ ಬಿದ್ದಿದೆ.

    ಹಣ ಹಣ ಅಂತ ಪತ್ನಿ ಪ್ರೇಮಕುಮಾರಿಯನ್ನು ಪೀಡಿಸಲು ಆರಂಭಿಸಿದ್ದಾನೆ. ಕಷ್ಟದಲ್ಲಿ ಮದುವೆ ಮಾಡಿ ಕೊಟ್ಟಿದ್ದ ಪ್ರೇಮಕುಮಾರಿ ಮನೆಯವರಲ್ಲಿ 64 ಲಕ್ಷಕ್ಕೆ ಡಿಮ್ಯಾಂಡ್ ಇಟ್ಟಿದ್ದಾನೆ. ಹಣ ಇಲ್ಲಾಂದ್ರೆ ಮನೆಯಲ್ಲಿ ಜಾಗ ಇಲ್ಲಾ ಅಂತ ಪತ್ನಿಯನ್ನು ತವರು ಮನೆಗೆ ಕಳುಹಿಸಿದ್ದಾನೆ.

    ಕಮರಿದ ‘ವಕೀಲೆ’ ಕನಸು :

    ಮದುವೆ ಆಗುವ ಮೊದಲು ವಕೀಲೆ ಆಗಬೇಕು ಅಂತಿದ್ದ ಪ್ರೇಮ ಕುಮಾರಿ ಮನೆಯವರ ಒತ್ತಾಯಕ್ಕೆ ಮದುವೆ ಆಗಿದ್ದಾಳೆ. ಆದ್ರೆ ಮದುವೆ ಆಗಿ ಮೂರೇ ತಿಂಗಳಲ್ಲಿ ಪತಿ ಮನೆಯವರು ವರದಕ್ಷಿಣೆ ನೆಪದಲ್ಲಿ ಮನೆಯಿಂದ ಹೊರ ಹಾಕಿದ್ದಾರೆ. ಹೀಗಾಗಿ ತವರು ಮನೆ ಸೇರಿದ್ದ ಪ್ರೇಮ ಕುಮಾರಿ ಮನೆಯಲ್ಲಿದ್ದೇ ವಕೀಲೇ ಆಗಬೇಕು ಕನಸಿಗೆ ಜೀವ ತುಂಬಿದ್ದಾರೆ. ಲಾ ವಿದ್ಯಾಭ್ಯಾಸ ಮುಂದುವರೆಸಿಕೊಂಡು ಎಲ್ಲಾ ನೋವು ನುಂಗಿಕೊಂಡು ತನ್ನ ಪಾಡಿಗೆ ತಾನಿದ್ದಳು. ಆದ್ರೆ ಕರಿಮಣಿ ಮಾಲೀಕ ಅನ್ನೋ ದಬ್ಬಾಳಿಕೆ ಮುಂದುವರೆಸಿದ್ದ ರಾಘವೇಂದ್ರ ಆಕೆಯ ತವರು ಮನೆಗೂ ಬಂದು ಕಿರುಕುಳ ನೀಡಲು ಆರಂಭಿಸಿದ್ದಾನೆ. ವರದಕ್ಷಿಣೆ ತೆಗೆದುಕೊಂಡು ಮನೆಗೆ ಬಾ ಇಲ್ಲಾ ಅಂದ್ರೆ ನಿನ್ನನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ.

    ಪ್ರೇಮಕುಮಾರಿಯ ಕೊನೆಯ ಪತ್ರ…


    ಒಂದು ಕಡೆ ತಂದೆ ತಾಯಿಯ ನೋವು ನೋಡಲಾಗದೆ, ಮತ್ತೊಂದು ಕಡೆಯಲ್ಲಿ ಪತಿ ಅಂತ ಕರೆಸಿಕೊಂಡಿರುವ ಕಿರಾತಕನ ಉಪಟಳ ತಡೆಯಲಾಗದೆ ಕೊನೆಯ ತೀರ್ಮಾನ ತೆಗೆದುಕೊಂಡಿದ್ದಾರೆ. ವಕೀಲೆಯಾಗಿ ಜನರಿಗೆ ನ್ಯಾಯ ಒದಗಿಸಬೇಕು ಅಂತ ಕನಸು ಕಂಡವಳು ತನಗೆ ನ್ಯಾಯ ಒದಗಿಸಿ ಅಂತ ಕೊನೆಯ ಪತ್ರ ಬರೆದಿದ್ದಾರೆ.

    ಲಾಯರ್‌ ಆಗುವ ನನ್ನ ಕನಸು ನಚ್ಚು ನೂರಾಗಿದೆ. ಇವರ ಕಾಟವನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ. ನಿತ್ಯವು ಭಯದಲ್ಲೇ ಜೀವನವನ್ನು ದೂಡುವಂತಾಗಿದೆ. ಒಳ್ಳೆಯವರಂತೆ ನಟಿಸಿ, ಮೋಸ ಮಾಡಿದ್ದಾರೆ. ಅವರಿಗೆ ಸರಿಯಾದ ಶಿಕ್ಷೆ ಆಗಬೇಕು. ಹಣ ತರುವಂತೆ ಪತಿ ಕುಟುಂಬಸ್ಥರು ಒತ್ತಡ ಹೇರಿ ಪ್ರೇಮಕುಮಾರಿಯನ್ನು ತವರು ಮನೆಗೆ ಕಳಿಸಿದ್ದರು.

    ಇತ್ತ ತವರು ಮನೆಯಲ್ಲೆ ಇದ್ದುಕೊಂಡೇ ಪ್ರೇಮ ವಿದ್ಯಾಭ್ಯಾಸವನ್ನು ಮುಂದುವರಿಸಿದ್ದಳು. ಇತ್ತೀಚಿಗೆ ವರದಕ್ಷಿಣೆ ತೆಗೆದುಕೊಂಡು ಬಾ ಇಲ್ಲದಿದ್ದರಿಂದ ಕೊಲೆ ಮಾಡಿಸುವ ಬೆದರಿಕೆಯನ್ನೂ ಹಾಕಿದ್ದರು. ಶ್ರೀಮಂತ ಮನೆ ಸೊಸೆಯಾದ ನನಗೆ ಸಾಯುವ ಧೈರ್ಯವು ಇಲ್ಲ, ಬದುಕುವ ಆಸೆಯೂ ಇಲ್ಲ. ಗಂಡ ಬಿಟ್ಟವಳು, ಮಾರ್ಯಾದೆ ತೆಗೆಯುತ್ತಿದ್ದಾಳೆ ಎಂದು ಭಾವಿಸದೇ ನನ್ನ ಸಾವಿಗೆ ನ್ಯಾಯ ಕೊಡಿಸಿ.

    ಹೀಗೇ ಐದು ಪುಟಗಳ ತನ್ನ ಕೊನೆಯ ಪತ್ರ ಬರೆದು ನ್ಯಾಯ ಕೋರಿದ ಪ್ರೇಮಕುಮಾರಿ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯ ಗೊಳಿಸಿದ್ದಾರೆ. ಸದ್ಯ ಪತಿ ರಾಘವೇಂದ್ರ ಹಾಗೂ ಅವರ ಮನೆಯವರ ವಿರುದ್ಧ ಕಿಕ್ಕೆರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯಾಯ ಕೊಡಿಸಲು ವಕೀಲೆ ಆಗಬೇಕು ಅಂತ ಕನಸು ಕಂಡಿದ್ದ ಪ್ರೇಮಕುಮಾರಿಗೆ ಕರಿಮಣಿ ಮಾಲೀಕನೇ ಅನ್ಯಾಯ ಮಾಡಿದ್ದು, ಆಕೆಗೆ ಸದ್ಯ ಪೊಲೀಸರೇ ನ್ಯಾಯ ಕೊಡಿಸಬೇಕಾಗಿದೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending