DAKSHINA KANNADA
ಕಾಂಗ್ರೆಸ್ ಹೈಕಮಾಂಡ್ಗೆ ಕಗ್ಗಂಟಾದ ಮಂಗಳೂರು ಉತ್ತರ ಕ್ಷೇತ್ರ : ಘೋಷಣೆಯಾಗದ ಕಾಂಗ್ರೆಸ್ ಟಿಕೆಟ್..!
ಒಂದು ವೇಳೆ ಇನಾಯತ್ ಆಲಿಗೆ ಟಿಕೆಟ್ ನೀಡಿದ್ರೆ ಮಾಜಿ ಶಾಸಕ ಟಿಕೆಟ್ ಆಕಾಂಕ್ಷಿ ಮೊಯಿದಿನ್ ಬಾವಾ ರೆಬೆಲ್ ಆಗುವ ಸಾಧ್ಯತೆ ಇದ್ದು ಇದು ಮತಗಳಿಕೆಗೆ ಹಿನ್ನಡೆಯಾಗಲಿದೆ.
ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗು ಪಡೆಯುತ್ತಿದೆ. ವಿಧಾನಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇದೇ ಎಪ್ರಿಲ್20 ಕೊನೆಯ ದಿನಾಂಕವಾಗಿದೆ.
ಆದರೆ ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಯಾರೆಂಬುದು ಇನ್ನೂ ಅಂತಿಮವಾಗದೆ ಕಗ್ಗಂಟಾಗಿ ಉಳಿದಿದೆ.
ಕಾರಣ ಟಿಕೆಟ್ ಪಡೆಯಲು ಮಾಜಿ ಶಾಸಕ ಮೊಯ್ದಿನ್ ಬಾವ ಮತ್ತು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಇನಾಯತ್ ಅಲಿ ನಡುವೆ ನೇರ ಪೈಪೋಟಿ ಇದೆ.
ಕ್ಷೇತ್ರದಲ್ಲೂ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ. ಇಬ್ಬರು ಹೈಕಮಾಂಡ್ನಲ್ಲಿ ಪ್ರಬಲ ಲಾಬಿ ನಡೆಸುತ್ತಿದ್ದು, ಅಂತಿಮವಾಗಿ ಟಿಕೆಟ್ ಯಾರಿಗೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.
ಮೊಯ್ದಿನ್ ಬಾವ ಅವರು 2013ರ ವಿಧಾನಸಭಾ ಚುನಾವಣೆಯಲ್ಲಿ ಮೊದಲ ಬಾರಿ ಸ್ಪರ್ಧಿಸಿ ಕಾಂಗ್ರೆಸ್ ಪಕ್ಷದಿಂದ ಜಯಗಳಿಸಿದ್ದರು.
2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ. ವೈ ಭರತ್ ಶೆಟ್ಟಿ ಅವರ ಎದುರು ಪರಾಭವಗೊಂಡಿದ್ದರು.
ಇವರು ಸಿದ್ದರಾಮಯ್ಯ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದಾರೆ. ಮತ್ತೊಂದೆಡೆ ಉದ್ಯಮಿ ಇನಾಯತ್ ಅಲಿಯವರು ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.
ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಪಡೆಯಲು ಅವರು ಕಳೆದ ಎರಡು ವರ್ಷಗಳಿಂದ ಕ್ಷೇತ್ರದಲ್ಲಿ ಭರ್ಜರಿ ಪ್ರಚಾರವನ್ನು ನಡೆಸಿದ್ದಾರೆ. ಇನಾಯತ್ ಅಲಿ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ಆಪ್ತರಾಗಿದ್ದಾರೆ.
ಡಿಕೆಶಿ ಸೂಚನೆಯಂತೆ ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿರುವ ಅವರು ಈ ಬಾರಿಯ ಕಾಂಗ್ರೆಸ್ ಅಭ್ಯರ್ಥಿಯಾಗುವ ನಿರೀಕ್ಷೆಯಲ್ಲಿದ್ದಾರೆ.
ಮಂಗಳೂರು ಉತ್ತರದಲ್ಲಿ ಬಿಜೆಪಿ – ಕಾಂಗ್ರೆಸ್ ನಡುವೆ ನೇರ ಪೈಪೋಟಿ ಇದೆ.
ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಡಾ.ವೈ ಭರತ್ ಶೆಟ್ಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಆಡಳಿತ ರೂಡ ಪಕ್ಷ ಬಿಜೆಪಿ ಶಾಸಕರಾಗಿರುವ ಡಾ ಭರತ್ ಶೆಟ್ಟಿಯನ್ನು ಮಣಿಸುವುದು ಅಷ್ಟು ಸುಲಭವಲ್ಲ ಎಂದು ಕಾಂಗ್ರೆಸ್ ಕೂಡ ಮನಗಂಡಿದ್ದು ಪ್ರಬಲ ಅಭ್ಯರ್ಥಿಯ ಅಗತ್ಯವಿದೆ,
ಒಂದು ವೇಳೆ ಇನಾಯತ್ ಆಲಿಗೆ ಟಿಕೆಟ್ ನೀಡಿದ್ರೆ ಮಾಜಿ ಶಾಸಕ ಟಿಕೆಟ್ ಆಕಾಂಕ್ಷಿ ಮೊಯಿದಿನ್ ಬಾವಾ ರೆಬೆಲ್ ಆಗುವ ಸಾಧ್ಯತೆ ಇದ್ದು ಇದು ಮತಗಳಿಕೆಗೆ ಹಿನ್ನಡೆಯಾಗಲಿದೆ.
ಇವರೇ ಮಾತ್ರವಲ್ಲದೆ ಮಾಜಿ ಮೇಯರ್ ಎಂ.ಶಶಿಧರ್ ಹೆಗ್ಡೆ, ಲುಕ್ಮಾನ್ ಬಂಟ್ವಾಳ, ಪುರುಷೋತ್ತಮ ಚಿತ್ರಾಪುರ, ಕವಿತಾ ಸನಿಲ್, ಪ್ರತಿಭಾ ಕುಳಾಯಿ, ಅನಿಲ್ ಕುಮಾರ್ ಪೂಜಾರಿ, ಅಲ್ತಾಫ್ ಸುರತ್ಕಲ್, ಪದ್ಮನಾಭ ಕೋಟ್ಯಾನ್ ಕಾಂಗ್ರೆಸ್ ಪಕ್ಷದ ಟಿಕೆಟ್ ಪಡೆಯಲು ಅರ್ಜಿ ಸಲ್ಲಿಸಿದ್ದಾರೆ. ಆದ್ರೆ ಮೂಲಗಳ ಪ್ರಕಾರ ಮೊಯ್ದಿನ್ ಬಾವಾರನ್ನು ಕೈಬಿಟ್ಟು ಇನಾಯತ್ ಅಲಿಗೆ ಇಂದು ಸಂಜೆ ಒಳಗೆ ಟಿಕೆಟ್ ಘೋಷಣೆಯಾಗುವ ಸಾಧ್ಯತೆಗಳು ಹೆಚ್ಚಿವೆ ಎನ್ನಲಾಗಿದೆ.
DAKSHINA KANNADA
ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ
ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.
ಮಂಗಳೂರಿನ ಪ್ರೆಸ್ ಕ್ಲಬ್ ವತಿಯಿಂದ ನಡೆದ ಪ್ರೆಸ್ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.
ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.
DAKSHINA KANNADA
ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!
ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.
ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.
ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್ಕ್ರೀಮ್ ತಯಾರಿಸುವ ಘಟಕ, ಕಾರ್ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.
ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್ನಲ್ಲಿ ಪಲ್ಟಿಂಗ್ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.
DAKSHINA KANNADA
ವೈರಲ್ ವಿಡಿಯೋ: ಕಲ್ಲಂಗಡಿ ಚಿಕನ್ ಬಿರಿಯಾನಿ ತಿಂದಿದ್ದೀರಾ?
ಮಂಗಳೂರು(ವೈರಲ್ ವಿಡಿಯೋ): ಬಿರಿಯಾನಿ ಅಂದ್ರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಬಹುಜನರ ಬೇಡಿಕೆಯ ಖಾದ್ಯವಾದ ಬಿರಿಯಾನಿ ಹಲವು ಮಾದರಿಗಳಲ್ಲಿ ಸಿಗುತ್ತದೆ. ಚಿಕನ್ ಬಿರಿಯಾನಿ, ಮಟನ್ ಬಿರಿಯಾನಿ ತಿನ್ನಲು ಜನರಂತೂ ದೂರ ಸರಿಯುದೇ ಇಲ್ಲ. ಆದರೆ ಈಗ ಬಿರಿಯಾನಿ ಹೊಸ ಹೊಸ ಮಾದರಿಯಲ್ಲಿ ತುಂಬಾ ವೈರಟಿ ಆಗಿ ಸಿಗುತ್ತಾ ಇದೆ. ಬಾರ್ಬಿ ಬಿರಿಯಾನಿ ವೈರಲ್ ಆದ ಬಳಿಕ ಇದೀಗ ಇನ್ನೊಂದು ಹೊಸ ಬಿರಿಯಾನಿ ವೈರಲ್ ಆಗ್ತಾ ಇದೆ.
ಕಲ್ಲಂಗಡಿ ಚಿಕನ್ ಬಿರಿಯಾನಿ
ಹೌದು, ಈ ಬಿರಿಯಾನಿಯ ಹೆಸರು ಕಲ್ಲಂಗಡಿ ಚಿಕನ್ ಬಿರಿಯಾನಿ. ಇದು ವಿಚಿತ್ರವಾದರೂ ಸತ್ಯ. ಕಲ್ಲಂಗಡಿ ಹಾಕಿ ಮಾಡಿರುವ ಈ ಚಿಕನ್ ಬಿರಿಯಾನಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗ್ತಾ ಇದೆ. ಇನ್ಸ್ಟಾಗ್ರಾಮ್ನ villagefoodchannel_official ಪೇಜ್ನಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಈ ವಿಚಿತ್ರ ಬಿರಿಯಾನಿ ವೈರಲ್ ಆಗಿದೆ.
ಕಲ್ಲಂಗಡಿ ಬಿಕನ್ ಬಿರಿಯಾನಿ ತಯಾರಿಸುವ ವಿಧಾನ
ಮೊದಲಿಗೆ ಇಬ್ಬರು ಕಲ್ಲಂಗಡಿ ಹಣ್ಣನ್ನು ತುಂಡು ಮಾಡುವ ಮೂಲಕ ವಿಡಿಯೋ ಆರಂಭವಾಗುತ್ತದೆ. ಬಳಿಕ ಹಣ್ಣಿನ ತುಂಡುಗಳನ್ನು ದೊಡ್ಡ ಪಾತ್ರೆಗೆ ಹಾಕಿ ಅದರಲ್ಲಿ ಗುದ್ದಿ ರಸವನ್ನು ತೆಗೆಯುತ್ತಾರೆ. ಬಳಿಕ ಮತ್ತೊಂದು ಪಾತ್ರೆಯಲ್ಲಿ ಚಿಕನ್ ಬಿರಿಯಾನಿ ತಯಾರಿಸಲು ಪ್ರಾರಂಭಿಸುತ್ತಾರೆ.
ದೊಡ್ಡ ಪಾತ್ರೆಯನ್ನು ಇಟ್ಟು ಅದಕ್ಕೆ ಎಣ್ಣೆ, ನೀರುಳ್ಳಿ, ಬೆಳ್ಳುಳ್ಳಿ, ಶುಂಠಿ-ಬೆಳ್ಳುಳ್ಳಿ ಪೇಸ್ಟ್, ಮಸಾಲೆಗಳು, ಗರಂ ಮಸಾಲೆ ಹಾಕಿ ಮಸಾಲೆ ತಯಾರಿಸುತ್ತಾರೆ. ಬಳಿಕ ಅದಕ್ಕೆ ಶುಚಿಗೊಳಿಸಿದ ಕೋಳಿ ತುಂಡುಗಳನ್ನು ಹಾಕಿ ಮಿಕ್ಸ್ ಮಾಡಿ ಬೇಯಿಸುತ್ತಾರೆ.
ಕೋಳಿ ಮಾಂಸ ಬೆಂದ ನಂತರ ಅದಕ್ಕೆ ಪ್ರಮುಖ ಅಂಶವಾದ ಕಲ್ಲಂಗಡಿ ಹಣ್ಣಿನ ರಸವನ್ನು ಸೇರಿಸುತ್ತಾರೆ. ನಂತರ ಅದಕ್ಕೆ ಬಾಸುಮತಿ ಅಕ್ಕಿ ಹಾಕಿ ಮತ್ತೆ ಬೇಯಿಸುತ್ತಾರೆ. ಸ್ವಲ್ಪ ಕೊತ್ತಂಬರಿ ಸೊಪ್ಪನ್ನು ಮೇಲಿಗೆ ಹಾಕಿ ಮುಚ್ಚಿಡುತ್ತಾರೆ. ಈ ರೀತಿ ಮಾಡಿದಾಗ ಕಲ್ಲಂಗಡಿ ಚಿಕನ್ ಬಿರಿಯಾನಿ ತಯಾರಾಗುತ್ತದೆ.
ಈ ವಿಡಿಯೋ ಬಾರಿ ವೈರಲ್ ಆಗಿದ್ದು, ಇದುವರೆಗೆ ಆರು ಲಕ್ಷಕ್ಕೂ ಹೆಚ್ಚು ಮಂದಿ ವಿಡಿಯೋ ಲೈಕ್ ಮಾಡಿದ್ದಾರೆ. ಹಾಗೆಯೇ 21 ಲಕ್ಷಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಕಲ್ಲಂಗಡಿ ಚಿಕನ್ ಬಿರಿಯಾನಿಯ ಈ ವಿಶಿಷ್ಟ ಸಂಯೋಜನೆಯನ್ನು ವೀಕ್ಷಿಸಿದ ಹಲವಾರು ಜನರು ತಮ್ಮ ಅಭಿಪ್ರಾಯಗಳನ್ನು ಕಮೆಂಟ್ ಮಾಡಿದ್ದಾರೆ.
- FILM7 days ago
“ನಿತ್ಯಾಮೆನನ್” ಚಿತ್ರರಂಗದಿಂದ ‘ಬ್ಯಾನ್’ ಆಗಲು ಕಾರಣವೇನು ಗೊತ್ತಾ? ಈ ಬಗ್ಗೆ ನಿತ್ಯಾ ಹೇಳಿದ್ದೇನು?
- DAKSHINA KANNADA7 days ago
ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?
- LATEST NEWS7 days ago
ಕಾಲಿನ ಮೂಲಕವೇ ಕಾರು ಚಲಾಯಿಸಿ, ಡ್ರೈವಿಂಗ್ ಲೈಸೆನ್ಸ್ ಪಡೆದ ಏಷ್ಯಾದ ಮೊದಲ ಮಹಿಳೆ!
- DAKSHINA KANNADA6 days ago
ಪತ್ನಿ ಮಗಳೊಂದಿಗೆ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದ ಪದ್ಮರಾಜ್ ಪೂಜಾರಿ
SRL Diagnostics
18/04/2023 at 3:47 PM
ಅಭ್ಯರ್ಥಿ ಯಾರಾದರೂ ರೆಬೆಲ್ ಆಗುವ ಆಲೋಚನೆ ಪಕ್ಷದ ಹಿತ ದೃಷ್ಟಿಯಿಂದ ಪಕ್ಷಕ್ಕೆ ಹಾನಿ ಆಗುತ್ತದೆ. ಆದುದರಿಂದ ಮೊಹಿದಿನ್ ಬಾವಾ ರವರು ಪಕ್ಷ ನಿಷ್ಠೆಯಿಂದ ಪಕ್ಷದ ಜಯಕ್ಕಾಗಿ ಶ್ರಮಿಸಬೇಕು.ಸರ್ಕಾರ ರಚನೆಯಾಗಲು ಪ್ರತಿಯೊಂದು ಸೀಟು ಅತ್ಯಂತ ಮಹತ್ವದ್ದಾಗಿದೆ. ಜೈ ಕಾಂಗ್ರೆಸ್.