Connect with us

LATEST NEWS

ಭೂಗತ ಲೋಕದ ಅನಭಿಷಿಕ್ತ ದೊರೆಯಾಗಲು ಹೋಗಿ ಖೆಡ್ಡಾಕ್ಕೆ ಬಿದ್ದನೇ ಶರಣ್‌..?

Published

on

ಮಂಗಳೂರು: ಭೂಗತ ಲೋಕ ಅಂದ್ರೆ ಮಂಗಳೂರು, ಮಂಗಳೂರು ಅಂದ್ರೆ ಭೂಗತಲೋಕ ಅನ್ನುವ ಕಾಲವೊಂದಿತ್ತು.

ರಾಜ್ಯದ ಅಂಡರ್‌ವಲ್ಡ್‌ಗೆ ಆಧುನಿಕ ಟಚ್‌ ಕೊಟ್ಟ ಇತಿಹಾಸ ಕರಾವಳಿಗರದ್ದು, ಇಲ್ಲಿನ ಭೂಗತ ಪಾತಕಿಗಳು ಮಂಗಳೂರು ಮಾತ್ರವಲ್ಲ.

ಬೆಂಗಳೂರು, ಮುಂಬೈ ಹಾಗೂ ಗಲ್ಫ್‌ ದೇಶಗಳಲ್ಲಿ ತಮ್ಮದೇ ಲಿಂಕ್‌ ಮೂಲಕ ಭೂಗತ ಲೋಕವನ್ನು ಆಳಿ ಅಳಿದವರು ಇದ್ದಾರೆ.

ಕಳೆದ ಎರಡು ದಶಕದಿಂದ ಕರಾವಳಿ ಅಂತಹ ರಕ್ತ ಸಿಕ್ತ ಅಧ್ಯಾಯವನ್ನೇ ನೋಡಿಲ್ಲ.

ಇದೀಗ ಮತ್ತೆ ಅಂತಹ ಲೋಕ ಸೃಷ್ಟಿಸಿ ಭೂಗತ ಜಗತ್ತಿಗೆ ಡಾನ್‌ ಆಗುವ ತವಕದಲ್ಲಿದ್ದ ಕುಖ್ಯಾತ ರೌಡಿಶೀಟರ್‌ ಆಕಾಶಭವನ ಶರಣ್‌ ಹಾಗೂ ನಾಲ್ವರು ಸಹಚರರನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

ತನ್ನ ಒಂದು ಸಣ್ಣ ತಪ್ಪಿನಿಂದ ಸಿಕ್ಕಿಬಿದ್ದು ಕೈಗೆ ಕೋಳ ಹಾಕಿಸಿಕೊಂಡಿದ್ದಾನೆ ಈ ಶರಣ್‌.

ಪೊಲೀಸ್‌ ದಾಖಲೆಗಳೇ ಹೇಳುವಂತೆ ಸರಿಸುಮಾರು ಕಳೆದ ಒಂದೂವರೆ ದಶಕದಿಂದ ಮಂಗಳೂರಿನ ಇತಿಹಾಸದಲ್ಲಿ ಅತೀ ಹೆಚ್ಚು ಕ್ರೈಂ ಬ್ಯಾಕ್‌ಹಿಸ್ಟರಿ ಇರುವ ಕಿರಾತಕ ಅಂದ್ರೆ ಅದು ಆಕಾಶಭವನ ಶರಣ್‌.

ಈವರೆಗೆ 22 ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಆಕಾಶಭವನ ಶರಣ್‌ ಎರಡು ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೇಲ್‌ ಮೂಲಕ ರಿಲೀಸ್‌ ಆಗಿದ್ದ.

ಈತ ಹೊರಬರುತ್ತಿದ್ದಂತೆ ಉಳಿದ ಪ್ರಕರಣದ ಅರೆಸ್ಟ್‌ ವಾರಂಟ್‌ ಮೇಲೆ ಪೊಲೀಸರು ಆತನನ್ನು ಹುಡುಕುತ್ತಿದ್ದರು.

ಆದರೆ ಈತ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿ ಮಂಗಳೂರು, ಉಡುಪಿ, ಬೆಂಗಳೂರು ಅಂತ ಸುತ್ತಾಡುತ್ತಿದ್ದನಂತೆ.

ಒಮ್ಮೊಮ್ಮೆ ಮಂಗಳೂರಿನ ಆಕಾಶಭವನದ ಮನೆಗೆ ಮಧ್ಯರಾತ್ರಿ ಬಂದು ಬೆಳ್ಳಂಬೆಳಗ್ಗೆ ಜಾಗ ಖಾಲಿ ಮಾಡುತ್ತಿದ್ದ.

ಆದರೆ ಈತನ ಚಲನವಲನದ ಮೇಲೆ ಮಂಗಳೂರು ಖಾಕಿಪಡೆಯ ಹದ್ದಿನ ಕಣ್ಣು ಬಿದ್ದಿದ್ದು, ಶರಣ್‌ಗೆ ಗೊತ್ತೇ ಇರಲಿಲ್ಲ.

ಮಂಗಳೂರು ನಗರ ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೇಳಾರು ನಂದಿನಿ ಬ್ರೀಡ್ಜ್ ಬಳಿಯಲ್ಲಿ, ಕಳೆದ ಡಿ.8 ರಂದು ರಾತ್ರಿ 11-30 ರ ಸುಮಾರಿಗೆ ಹಳೆಯಂಗಡಿ ನಿವಾಸಿಯೊಬ್ಬರು

ದ್ವಿ ಚಕ್ರ ವಾಹನದಲ್ಲಿ ತೆರಳುತ್ತಿದ್ದಾಗ ಅಪರಿಚಿತ ವ್ಯಕ್ತಿಗಳಿದ್ದ ಕಾರು ಅವರನ್ನು ಹಿಂಬಾಲಿಸಿ ತಡೆದು ಚಾಕು ತೋರಿಸಿ ಬೆದರಿಸಿ ಅವರ ಬಳಿಯಿದ್ದ ಮೊಬೈಲ್ ಫೋನ್,

3000 ರೂಪಾಯಿ ನಗದು ಹಾಗೂ ಟಿವಿಎಸ್ ದ್ವಿಚಕ್ರವನ್ನು ಸುಲಿಗೆ ಮಾಡಿದ್ದರು. ಈ ಬಗ್ಗೆ ಸುರತ್ಕಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.


ಇದರ ತನಿಖೆ ನಡೆಸುತ್ತಿದ್ದ ವೇಳೆ ಕೃತ್ಯಕ್ಕೆ ಉಪಯೋಗಿಸಿದ ಮೊಬೈಲ್‌ನಿಂದ ಈತ ಮತ್ತೋರ್ವ ರೌಡಿ ಶೀಟರ್‌ಗೆ ಕಾಲ್‌ ಮಾಡಿ ಕೊಲೆ ಬೆದರಿಕೆ ಹಾಕಿದ ವಿಷಯ ಪೊಲೀಸರಿಗೆ ದೊರೆಯುತ್ತದೆ.

ಜೊತೆಗೆ ಆತನ ಕೊಲೆಗೆ ಸ್ಕೆಚ್‌ ಸಹ ಹಾಕಿದ್ದಾನೆ ಎಂಬ ಅಂಶ ಬಯಲಾಗುತ್ತದೆ. ವಿಶೇಷ ಎಂದರೆ ಆತ ಯಾವ ರೌಡಿ ಶೀಟರ್‌ಗೆ ಕೊಲೆ ಬೆದರಿಕೆ ಹಾಕಿದ್ದಾನೋ ಅದೇ ಗುಂಪಿನಲ್ಲಿ ಈ ಹಿಂದೆ ಆಕಾಶಭವನ್‌ ಶರಣ್‌ ಗುರುತಿಸಿಕೊಂಡಿದ್ದನು.

ಆದ್ರೆ ಅದ್ಯಾಕೋ ಆತನಿಗೆ ಅಲ್ಲಿ ಸರಿಬಂದಿರಲಿಲ್ಲ.

ಆ ಕಾರಣಕ್ಕೆ ಶರಣ್‌ ಆ ಗುಂಪಿನಿಂದ ಹೊರಬಂದು ತನ್ನದೇ ಗ್ಯಾಂಗ್‌ ಕಟ್ಟಿಕೊಂಡಿದ್ದ. ಇದೀಗ ಅದೇ ಗುಂಪಿನ ರೌಡಿಶೀಟರ್‌ಗೆ ಮೊಬೈಲ್‌ ಮೂಲಕ ಕೊಲೆ ಬೆದರಿಕೆ ಹಾಕಿ ತಾನು ತೋಡಿದ್ದ ಖೆಡ್ಡಾಕ್ಕೆ ಬಿದ್ದಿದ್ದಾನೆ.

ಈತನ ಮೇಲಿತ್ತು ಬರೋಬ್ಬರಿ 22 ಕೇಸ್‌
ಆಕಾಶ್‌ ಭವನ ಶರಣ್‌ ಮೇಲೆ ಮಂಗಳೂರು ನಗರ ಕಮೀಷನರೇಟ್, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆಯಲ್ಲಿ ಸೇರಿ ಒಟ್ಟು 22 ಪ್ರಕರಣಗಳು ದಾಖಲಾಗಿದೆ.

ಇದರಲ್ಲಿ 6 ಕೊಲೆ, 2 ಕೊಲೆ ಯತ್ನ, 2 ದರೋಡೆಗೆ ಯತ್ನ, 4 ಹಲ್ಲೆ, 2 ಅತ್ಯಾಚಾರ, 1 ದರೋಡೆ ಮತ್ತು ಎನ್ ಡಿ ಪಿ ಎಸ್ ಕಾಯ್ದೆ, ಕಳವು, ಹಫ್ತಾ ವಸೂಲಿ ಪ್ರಕರಣಗಳು ಸೇರಿವೆ.

ಇದಲ್ಲದೆ ಇನ್ನೂ ಹಲವು ಪ್ರಕರಣಗಳು ಶರಣ್‌ ಮೇಲೆ ದಾಖಲಾಗುವ ಸಾಧ್ಯತೆ ಇದೆ. ಕಾರಣ ಕೆಲವು ಕೃತ್ಯಗಳಲ್ಲಿ ಸಂತ್ರಸ್ತರು ಶರಣ್‌ ಭಯದಿಂದ ಮುಂದೆ ಬಂದು ದೂರು ನೀಡುವ ಧೈರ್ಯ ಮಾಡಿರಲಿಲ್ಲ.

ಆದರೆ ಇದೀಗ ಮಂಗಳೂರು ನಗರ ಪೊಲೀಸ್‌ ಆಯಕ್ತರು ಸಂತ್ರಸ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ದೂರು ದಾಖಲಿಸುವ ಸಾಧ್ಯತೆಗಳಿವೆ.

2003 ರಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಪಿ.ಎಲ್‌.ಗೇಟ್ ಬಳಿಯಲ್ಲಿ ರಿಕ್ಷಾ ಚಾಲಕ ಫಾರೂಕ್ ಕೊಲೆ ಪ್ರಕರಣ.

2011ರಲ್ಲಿ ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಕೆವಿಜಿ ಕಾಲೇಜ್ ಕ್ಯಾಂಪಸ್ ಪರಿಸರದಲ್ಲಿ ಕೆವಿಜಿ ಆಡಳಿತಾಧಿಕಾರಿ ರಾಮಕೃಷ್ಣ ಎಂಬವರ ಕೊಲೆ ಪ್ರಕರಣ.

2012 ರಲ್ಲಿ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಆಕಾಶಭವನ ನಿವಾಸಿ ಕುಮಾರ್ ಕೊಲೆ ಪ್ರಕರಣ. 2013 ರಲ್ಲಿ ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ವೆಲೆನ್ಸಿಯಾದಲ್ಲಿ ಪ್ರಶಾಂತ್ ಯಾನೆ ಪಚ್ಚು ಕೊಲೆ ಪ್ರಕರಣ.

2015 ರಲ್ಲಿ ಬರ್ಕೆ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳೂರು ಕಾರಾಗೃಹದಲ್ಲಿ ವಿಚಾರಣಾಧೀನ ಖೈದಿಯಾಗಿದ್ದ ಮಾಡೂರು ಯೂಸುಫ್ ಎಂಬಾತನನ್ನು ಕೊಲೆ ಮಾಡಿದ ಪ್ರಕರಣದಲ್ಲಿ ಶರಣ್‌ ನೇರವಾಗಿ ಭಾಗಿಯಾಗಿದ್ದ ಅಂಶ ಬಯಲಾಗಿತ್ತು.


2020 ರಲ್ಲಿ ಬಂಟ್ವಾಳ ಠಾಣಾ ವ್ಯಾಪ್ತಿಯಲ್ಲಿ ನಡೆದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣದಲ್ಲಿ ಈತನ ನೇರ ಕೈವಾಡ ಇದೆ ಎಂಬ ಅಂಶ ತನಿಖೆಯಲ್ಲಿ ಬಯಲಾಗಿದೆ.

ಈ ಕೊಲೆಯು ನಡೆಯುವ ಸಮಯ ಈತನು ಪರಪ್ಪನ ಅಗ್ರಹಾರಲ್ಲಿದ್ದು, ತನ್ನ ಸಹಚರರ ಮೂಲಕ ಈ ಕೊಲೆಯನ್ನು ನಡೆಸಿರುವುದಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈತನ ಮೇಲೆ ಕಾವೂರು ಪೊಲೀಸ್ ಠಾಣೆಯಲ್ಲಿ ರೌಡಿ ಶೀಟ್ ಸಹ ತೆರೆಯಲಾಗಿದೆ.

ಇಷ್ಟೆಲ್ಲಾ ಪ್ರಕರಣಗಳು ಶರಣ್‌ ಮೇಲಿದ್ದರೂ ಕಳೆದ ವರ್ಷ ನ.11 ರಂದು ಬೆಂಗಳೂರು ಪರಪ್ಪನ ಅಗ್ರಹಾರ ಜೈಲ್ ನಿಂದ ನಿರಾಯಾಸವಾಗಿ ಜಾಮೀನಿನ ಮೇಲೆ ಹೊರಬಂದಿದ್ದನು. ಮತ್ತೆ ಅದೇ ಹಿಂದಿನ ಚಾಳಿ ಮುಂದುವರೆಸಿದ್ದ.


ಕರಾವಳಿ ಭೂಗತ ಲೋಕದ ಡಾನ್‌ ಆಗಲು ಬಯಸಿದ್ದ ಶರಣ್‌
ರೋಹಿತ್‌ದಾಸ್‌ ಅಲಿಯಾಸ್‌ ಆಕಾಶಭವನ ಶರಣ್‌ಗೆ ಕರಾವಳಿಯ ಭೂಗತ ಲೋಕದ ಅನಭಿಷಿಕ್ತ ದೊರೆಯಾಗಬೇಕು ಒಂದು ಆಸೆ ಇತ್ತು.

ಇತ್ತೀಚಿನ ವರ್ಷಗಳಲ್ಲಿ ಕರಾವಳಿಯಲ್ಲಿ ಫೀಲ್ಡಲ್ಲಿದ್ದು, ರೌಡಿಸಂ ಮಾಡುವ ತಾಕತ್ತು ಯಾರಿಗಿರಲಿಲ್ಲ.

ಕಾರಣ ಮಂಗಳೂರು ಪೊಲೀಸರ ಕಾರ್ಯದಕ್ಷತೆ ಮತ್ತು ಕಟ್ಟು ನಿಟ್ಟಿನ ಕ್ರಮಗಳು ಅಂಡರ್‌ವಲ್ಡ್‌ ಚಟುವಟಿಕೆಗಳನ್ನು ಸಂಪೂರ್ಣ ಅಳಿಸಿ ಹಾಕಿತ್ತು.

ಇದರ ಪರಿಣಾಮ ಕರಾವಳಿಯಲ್ಲಿ ಕಳೆದೆರಡು ದಶಕದಿಂದ ದೊಡ್ಡ ಮಟ್ಟದ ರಕ್ತ ಹರಿದಿರಲಿಲ್ಲ.

ಸುಪಾರಿ ಕಿಲ್ಲಿಂಗ್‌, ರೌಡಿಸಂ, ಶೂಟೌಟ್‌, ಉದ್ಯಮಿಗಳಿಗೆ ಹಫ್ತಾಕ್ಕಾಗಿ ಬೆದರಿಕೆ ಮುಂತಾದ ಕುಕೃತ್ಯಗಳಿಗೆ ಫುಲ್‌ಸ್ಟಾಪ್‌ ಬಿದ್ದಿತ್ತು.

ಇದನ್ನೇ ಅವಕಾಶವಾಗಿ ಬಳಸಿ ತಾನು ರೌಡಿ ಗ್ಯಾಂಗ್‌ ಕಟ್ಟಬೇಕು.

ಆ ಮೂಲಕ ಅಂಡರ್‌ವಲ್ಡ್‌ನ ಸಿಂಹಾಸನದಲ್ಲಿ ಆಸೀನರಾಬೇಕು ಎಂದು ಕನಸು ಕಂಡಿದ್ದ ಶರಣ್‌.

ಅದಕ್ಕಾಗಿ ಹೊರದೇಶಗಳಲ್ಲಿ ಕರಾವಳಿಯ ಇರುವ ಭೂಗತ ಪಾತಕಿಗಳ ಜೊತೆ ಕೈಜೋಡಿಸುವ ಬಗ್ಗೆ ಫೋನ್‌ ಮೂಲಕ ಮಾತುಕತೆಯೂ ನಡೆದಿತ್ತು.

ಜೊತೆಗೆ ಕರಾವಳಿಯಲ್ಲಿ ಪೊಲೀಸ್‌ ಉಪಟಳ ಜಾಸ್ತಿಯಾದ್ರೆ ಜಾಗ ಖಾಲಿ ಮಾಡಿ ಹೊರದೇಶದಲ್ಲಿದ್ದುಕೊಂಡೇ ಇಲ್ಲಿನ ಕ್ರೈಂ ಲೋಕವನ್ನು ಆಪರೇಟ್‌ ಮಾಡುವ ಸಲುವಾಗಿ ಪರಪ್ಪನ ಅಗ್ರಹಾರದಲ್ಲಿ

ಈತ ಜೈಲು ಶಿಕ್ಷೆ ಅನುಭವಿಸುತ್ತಿರುವ ವೇಳೆ ಬೆಂಗಳೂರಿನ ಲೋಕಲ್‌ ರೌಡಿ ಶೀಟರ್‌ಗಳೊಂದಿಗೆ ಸಖ್ಯ ಬೆಳೆಸಿ ಶರಣ್‌ ಅಲ್ಲಿನ ಕುಕೃತ್ಯಕ್ಕೆ ಕರಾವಳಿಯ ಹುಡುಗರನ್ನು ಕಳುಹಿಸುವ ಒಪ್ಪಂದ ಕೂಡಾ ನಡೆದಿತ್ತು.

ಆದರೆ ಕಾನೂನಿನ ಕೈಗಳು ಉದ್ದ ಎಂಬುವುದು ಮತ್ತೊಮ್ಮೆ ಸಾಬೀತಾಗಿ ಮಂಗಳೂರು ಪೊಲೀಸರು ಖೆಡ್ಡಾ ನಿರ್ಮಿಸಿ ಶರಣ್‌ನನ್ನು ಮತ್ತೆ ಬಂಧಿಸಿ ಜೈಲಿಗೆ ಅಟ್ಟಿದ್ದಾರೆ.


ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ್ದ ರೇಪಿಸ್ಟ್ ಶರಣ್

ಅಪ್ರಾಪ್ತೆಯ ಮೇಲೆ ಅತ್ಯಾಚಾರ ನಡೆಸಿದ ಬಗ್ಗೆ ಕಳೆದ ವರ್ಷ ಜನವರಿ 7ರಂದು ಶರಣ್ ವಿರುದ್ಧ ಪಾಂಡೇಶ್ವರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೊಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರು ರೌಡಿ ಶರಣ್ ನನ್ನು ಬಂಧಿಸಿದ್ದರು. ಶರಣ್ ಹುಲಿವೇಷ ತರಬೇತಿ ನೀಡುತ್ತಿದ್ದು,

ತರಬೇತಿಗಾಗಿ ಬಂದಿದ್ದ ಬಾಲಕಿಯೊಬ್ಬಳನ್ನು ಪುಸಲಾಯಿಸಿ ಲಾಡ್ಜ್ ವೊಂದಕ್ಕೆ ಕರೆದೊಯ್ದು, ಅಲ್ಲಿ ಮೂರು ದಿನಗಳ ಕಾಲ ಅತ್ಯಾಚಾರ ಎಸಗಿದ್ದ ಎಂದು ಆರೋಪಿಸಲಾಗಿದೆ.

ಅತ್ಯಾಚಾರದ ಬಳಿಕ ಬಾಲಕಿ ಅಸ್ವಸ್ಥಗೊಂಡ ಹಿನ್ನೆಲೆಯಲ್ಲಿ ಪ್ರಕರಣ ಬೆಳಕಿಗೆ ಬಂದಿತ್ತು.

LATEST NEWS

ಮುಂದಿನ ಮೂರು ದಿನ ಈ ಭಾಗಗಳಲ್ಲಿ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ

Published

on

ಬೆಂಗಳೂರು : ಬಿಸಿಲಿನ ಬೇಗೆಯ ತಣಿಸಲು ಮಳೆರಾಯ ಆಗಮಿಸಿದ್ದಾನೆ. ರಾಜ್ಯದ ಹಲವೆಡೆ ಮಳೆಯಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿದೆ.

ಗಾಳಿ, ಮಳೆ ಮುನ್ಸೂಚನೆ :

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿರುವ ಬಗ್ಗೆ ಹವಾಮಾನ ಇಲಾಖೆ ಶುಭ ಸುದ್ದಿ ಕೊಟ್ಟಿದೆ. ರಾಯಚೂರು, ವಿಜಯನಗರ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಹಾವೇರಿ, ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹೇಳಿದೆ.

ಹವಾಮಾನ ಇಲಾಖೆಯ ಪ್ರಕಾರ ಗಂಟೆಗೆ 30ರಿಂದ 40 ಕಿಲೋ ಮೀಟರ್ ಗಾಳಿ ಬೀಸಲಿದ್ದು ಜನ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ತಂಪೆರೆದ ಮಳೆರಾಯ :

ಗುರುವಾರ ಧಾರವಾಡದಲ್ಲಿ ಆಲಿಕಲ್ ಸಮೇತ ಮಳೆ ಸುರಿದಿದೆ. ಅರ್ಧ ಗಂಟೆಗೂ ಹೆಚ್ಚು ಕಾಲ ಮಳೆಯಾಗಿದ್ದು ಅಲ್ಲಲ್ಲಿ ಮರಗಳು ಉರುಳಿವೆ. ಮಾತ್ರವಲ್ಲದೆ ವಿಜಯನಗರದ ಹೊಸಪೇಟೆಯಲ್ಲೂ ಭಾರೀ ಮಳೆಯಾಗಿದೆ. ತೀರ್ಥಹಳ್ಳಿಯಲ್ಲೂ ಭಾರೀ ಗಾಳಿ ಮಳೆಯಾಗಿದೆ.

ಇದನ್ನೂ ಓದಿ : ಮುಂದಿನ ಮೂರು ದಿನ ಈ ಭಾಗಗಳಲ್ಲಿ ಮಳೆಯಾಗಲಿದೆ : ಹವಾಮಾನ ಇಲಾಖೆ ಮುನ್ಸೂಚನೆ

ಧಾರವಾಡ, ಹಾವೇರಿ, ಗದಗ, ಉತ್ತರ ಕನ್ನಡ, ಕೊಪ್ಪಳ, ವಿಜಯನಗರ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೊಡಗು, ವಿಜಯಪುರದಲ್ಲಿ ಗಾಳಿ, ಸಿಡಿಲು-ಗುಡುಗು ಸಹಿತ ಉತ್ತಮ ಮಳೆಯಾಗಿದೆ.

Continue Reading

LATEST NEWS

ಉಡುಪಿ : ಅಂಬಾಗಿಲಿನಲ್ಲಿ ಬೈಕ್ – ಟಿಪ್ಪರ್ ನಡುವೆ ಭೀಕರ ಅಪಘಾ*ತ; ಬೈಕ್ ಸವಾರ ಸಾ*ವು

Published

on

ಉಡುಪಿ : ಟಿಪ್ಪರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾ*ವನ್ನಪ್ಪಿದ ಘಟನೆ ಉಡುಪಿಯ ಅಂಬಾಗಿಲಿನಲ್ಲಿ ನಡೆದಿದೆ. ಅಂಬಾಗಿಲು – ಉಡುಪಿ ಮುಖ್ಯ ರಸ್ತೆಯಲ್ಲಿ ಈ ದುರಂ*ತ ಸಂಭವಿಸಿದೆ.


ಬ್ರಹ್ಮಾವರ ಮಟಪಾಡಿ ಮೂಲದ ಪ್ರಭಾಕರ ಆಚಾರಿ ಮೃ*ತ ದುರ್ದೈವಿ. ಪ್ರಭಾಕರ ಅವರು ಪೆರಂಪಳ್ಳಿ ಕಡೆಯಿಂದ ಅಂಬಾಗಿಲು ಮುಖ್ಯರಸ್ತೆಗೆ ಬರುತ್ತಿದ್ದರು ಎನ್ನಲಾಗಿದೆ. ಅಪಘಾ*ತದ ರಭಸಕ್ಕೆ ಟಿಪ್ಪರ್ ನ ಅಡಿ ಭಾಗಕ್ಕೆ ಬೈಕ್ ಗುದ್ದಿದೆ.

ಇದನ್ನೂ ಓದಿ : ಉಡುಪಿಯಲ್ಲಿ ಭೀಕರ ಅಪಘಾ*ತ; ಲಾರಿಯಡಿ ಸಿಲುಕಿ ಬೈಕ್ ಸವಾರ ಸಾ*ವು

ಸಹಸವಾರ ಗಂಭೀ*ರವಾಗಿ ಗಾಯಗೊಂಡಿದ್ದು, ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Continue Reading

bengaluru

ಹರ್ಷಿಕಾ ಪೂಣಚ್ಚ – ಭುವನ್ ಗೌಡ ದಂಪತಿ ಮೇಲೆ ಹ*ಲ್ಲೆ; ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ? ಏಂದು ಕೇಳಿದ ನಟಿ

Published

on

ಬೆಂಗಳೂರು : ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ಭುವನ್ ಪೊನ್ನಣ್ಣ ದಂಪತಿ ಮೇಲೆ ಹ*ಲ್ಲೆ ನಡೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಪರಿಣಾಮ ಭುವನ್ ಗೆ ಗಾ*ಯವಾಗಿದೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಹರ್ಷಿಕಾ ಪೂಣಚ್ಚ ಸೋಶಿಯಲ್ ಮೀಡಿಯಾದಲ್ಲಿ ಸುದೀರ್ಘವಾಗಿ ಬರೆದುಕೊಂಡಿದ್ದಾರೆ.

ಗೆಳೆಯರೇ, ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ಎಂದು ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಗ*ಲಾಟೆಯ ವೀಡಿಯೋವನ್ನೂ ಹರ್ಷಿಕಾ ಹಂಚಿಕೊಂಡಿದ್ದಾರೆ. ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ಭ*ಯಾನಕ ಅನುಭವ ಆಗಿದೆ ಎಂದು ಅವರು ಹೇಳಿದ್ದಾರೆ.

ಹರ್ಷಿಕಾ ಬರೆದ ಪೋಸ್ಟ್ ನಲ್ಲಿ ಏನಿದೆ?

ಗೆಳೆಯರೇ ,ನಮ್ಮ ಬೆಂಗಳೂರಿನಲ್ಲಿ ನಾವು ಸ್ಥಳೀಯರು ಎಷ್ಟು ಸುರಕ್ಷಿತ ಎಂಬ ಪ್ರಶ್ನೆ ನನಗೆ ಮೂಡಿದೆ? ನಮಸ್ಕಾರ, ಒಂದಷ್ಟು ಯೋಚಿಸಿ ಕೆಲವು ದಿನಗಳ ಹಿಂದೆ ನಮ್ಮ ಬೆಂಗಳೂರಿನಲ್ಲಿ ನನಗಾದ ಭಯಾನಕ ಅನುಭವವನ್ನು ಹಂಚಿಕೊಳ್ಳಲು ನಿರ್ಧರಿಸಿದ್ದೇನೆ.
ನನ್ನ ಸ್ನೇಹಿತರು, ಕುಟುಂಬ ಮತ್ತು ಪೊಲೀಸ್ ಇಲಾಖೆಯಲ್ಲಿನ ಕೆಲವು ಪರಿಚಯಸ್ಥರೊಂದಿಗೆ ಮಾತನಾಡಿದ ನಂತರ ನಾನು ಈ ವಿಷಯವನ್ನು ಅಲ್ಲಿಗೇ ಬಿಟ್ಟು ಬಿಡುತ್ತೇನೆ ಎಂದು ಯೋಚಿಸಿದೆ ಆದರೆ ನನ್ನ ಅನುಭವದಿಂದ ಮತ್ತಿರರಿಗೆ ಸಹಾಯ ವಾಗ ಬಹುದು ಎಂದು ಯೋಚಿಸಿ ನಾನು ಅದರ ಬಗ್ಗೆ ಪೋಸ್ಟ್ ಮಾಡಲು ನಿರ್ಧರಿಸಿದೆ.

ಒಂದೆರಡು ದಿನಗಳ ಹಿಂದೆ ಫ್ರೇಜರ್ ಟೌನ್ ಪ್ರದೇಶದ ಸಮೀಪವಿರುವ ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ “ಕರಾಮಾ” ಎಂಬ ರೆಸ್ಟೊರೆಂಟ್‌ನಲ್ಲಿ ಸಂಜೆ ಕುಟುಂಬದೊಂದಿಗೆ ಊಟ ಮಾಡಲು ತೆರಳಿದ್ದೆ. ಭೋಜನವನ್ನು ಮುಗಿಸಿದ ನಂತರ ನಾವು ವಾಲೆಟ್ ಪಾರ್ಕಿಂಗ್‌ನಿಂದ ನಮ್ಮ ವಾಹನವನ್ನು ಸ್ವೀಕರಿಸಿ ಹೊರಡುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಡ್ರೈವರ್ ಸೀಟ್ ಕಿಟಕಿಯ ಬಳಿ ಇದ್ದಕ್ಕಿದ್ದಂತೆ ಕಾಣಿಸಿಕೊಂಡು, ನಿಮ್ಮ ವಾಹನವು ತುಂಬಾ ದೊಡ್ಡದಾಗಿದೆ, ಇದ್ದಕ್ಕಿದ್ದಂತೆ ಚಲಿಸಿದಲ್ಲಿ ಅದು ನಮ್ಮನ್ನು ಮುಟ್ಟಬಹುದು ಎಂದು ವಾದಿಸಲು ಪ್ರಾರಂಭಿಸಿದರು.

ನನ್ನ ಪತಿಯ ಚಿನ್ನದ ಸರ ಕಸಿಯಲು ಯತ್ನ : 

ನನ್ನ ಪತಿ “ಇನ್ನು ವಾಹನ ಮೂವ್ ಮಾಡಿಲ್ವಲ್ಲ ಸೈಡು ಬಿಡಿ” ಎಂದು ಹೇಳಿದರು. ಏಕೆಂದರೆ ಅವರು ಸಂಭವನೀಯ ಘಟನೆ ಬಗ್ಗೆ ಮಾತನಾಡುತ್ತಿದ್ದು ಅದರಲ್ಲಿ ಅರ್ಥವಿರಲಿಲ್ಲ. ನಾವು ವಾಹನವನ್ನು ಸ್ವಲ್ಪ ಮುಂದಕ್ಕೆ ಸರಿಸಿದೆವು, ಅಷ್ಟರೊಳಗೆ ಈ ಇಬ್ಬರು ವ್ಯಕ್ತಿಗಳು ನಮ್ಮನ್ನು ಅವರ ಭಾಷೆಯಲ್ಲಿ ನಿಂದಿಸಲು ಪ್ರಾರಂಭಿಸಿದರು, ಈ ಲೋಕಲ್ ಕನ್ನಡಿಗರಿಗೆ ಪಾಠ ಕಲಿಸಬೇಕು ಎಂದು ಹೇಳಿ ನನ್ನ ಪತಿಯ ಮುಖದ ಮೇಲೆ ಹೊಡೆಯಲು ಸಹ ಪ್ರಯತ್ನಿಸಿದರು.

ನನ್ನ ಪತಿ ತುಂಬಾ ತಾಳ್ಮೆಯಿಂದಿದ್ದರು ಮತ್ತು ಹೆಚ್ಚು ಪ್ರತಿಕ್ರಿಯಿಸಲಿಲ್ಲ. ನನಗೆ ಆಶ್ಚರ್ಯವಾಯಿತು. ಏಕೆಂದರೆ ಅವರು ಸಾಮಾನ್ಯವಾಗಿ ತುಂಬಾ ಸಿಟ್ಟು ಸ್ವಭಾವದವರು. 2 – 3 ನಿಮಿಷಗಳಲ್ಲಿ ಅದೇ ಗ್ಯಾಂಗ್‌ನ 20 – 30 ಸದಸ್ಯರ ಗುಂಪು ಜಮಾಯಿಸಿತು ಮತ್ತು ಅವರಲ್ಲಿ 2 ಜನರು ನನ್ನ ಗಂಡನ ಚಿನ್ನದ ಸರವನ್ನು ಕಿತ್ತು, ಅದನ್ನು ಬಹಳ ಕೌಶಲ್ಯದಿಂದ ತಮ್ಮ ಕಡೆಗೆ ಎಳೆಯಲು ಪ್ರಯತ್ನಿಸಿದರು. ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡರು. ಅದನ್ನು ಹಿಡಿದಿಟ್ಟುಕೊಂಡು ನನಗೆ ಕೊಟ್ಟರು.

ಕನ್ನಡ ಮಾತನಾಡಿದ್ದಕ್ಕೆ ನಿಂದನೆ :

ಅಷ್ಟೊತ್ತಿಗಾಗಲೇ ಇಡೀ ತಂಡವು ಚಿನ್ನದ ಸರ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕೈಗೆ ಸಿಗದೆ ರೊಚ್ಚಿಗೆದ್ದು ವಾಹನಕ್ಕೆ ಹಾನಿ ಮಾಡಿ ನಮಗೆ ಅಥವಾ ಯಾರಿಗೂ ಅರ್ಥವಾಗದ ವಿಷಯಗಳನ್ನು ಹೇಳಿ ನಮ್ಮನ್ನು ದೈಹಿಕವಾಗಿ ನಿಂದಿಸಲು ಪ್ರಯತ್ನಿಸಿದರು. ನಮ್ಮ ವಾಹನದಲ್ಲಿ ಮಹಿಳೆಯರು ಮತ್ತು ಕುಟುಂಬದವರು ಇದ್ದ ಕಾರಣ ನನ್ನ ಪತಿ ಹೆಚ್ಚು ಪ್ರತಿಕ್ರಿಯಿಸಲಿಲ್ಲ.

ಅಲ್ಲದೆ, ನಾನು ಗಮನಿಸಿದ್ದು ಏನೆಂದರೆ ಇವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ಅವರು ನೀವು ನಮ್ಮ ಪ್ರದೇಶಕ್ಕೆ ಬಂದು ನಿಮಗೆ ಬೇಕಾದ ಭಾಷೆಗಳಲ್ಲಿ ಮಾತನಾಡುವುದನ್ನು ನಿಲ್ಲಿಸಿ. “ಯೇ ಲೋಕಲ್ ಕನ್ನಡ್ ವಾಲಾ ಹೇ” (ಈ ವ್ಯಕ್ತಿಗಳು ಸ್ಥಳೀಯ ಕನ್ನಡ ಜನರು) ನನ್ನ ಗಂಡ ಮತ್ತು ನಾನು ಕನ್ನಡದಲ್ಲಿ ಮಾತ್ರ ಮಾತನಾಡಿದಾಗ ಅದು ಅವರನ್ನು ಹೆಚ್ಚು ಕೆರಳಿಸಿತು.

ನಿಮ್ಮ “ಕನ್ನಡ ಸ್ಟೈಲ್”ಯನ್ನು ನೀವೇ ಇಟ್ಟುಕೊಳ್ಳಿ ಎಂದರು. ಆ ಗುಂಪಿನಲ್ಲಿ ಹೆಚ್ಚಿನವರು ಹಿಂದಿ, ಉರ್ದು ಮತ್ತು ಕೆಲವರು ಮುರಿದ ಕನ್ನಡದಲ್ಲಿ ಮಾತನಾಡುತ್ತಿದ್ದರು.

ಪೊಲೀಸರೂ ಸಹಾಯ ಮಾಡಲಿಲ್ಲ : 

ನಾನು ನಮಗೆ ಪರಿಚಯವಿದ್ದ ಒಬ್ಬರು ಇನ್ಸ್‌ಪೆಕ್ಟರ್‌ಗೆ ತುರ್ತು ಕರೆ ಮಾಡಿದಾಗ ಅವರೆಲ್ಲರೂ ಏನೂ ಆಗಿಲ್ಲ ಎಂಬಂತೆ ಕೆಲವೇ ಸೆಕೆಂಡುಗಳಲ್ಲಿ ಚದುರಿ ಹೋದರು. ನಾವು ಅವರನ್ನು ಹುಡುಕಲು ಪ್ರಯತ್ನಿಸಿದೆವು. ಆದರೆ ಅವರು ಮಾಯವಾಗಿದ್ದರು. ನಾವು ಸಮೀಪದಲ್ಲಿ ಹತ್ತಿರದ ಪೊಲೀಸ್ ಠಾಣೆಯ ಗಸ್ತು ಪೊಲೀಸ್ ವಾಹನವನ್ನು ಕಂಡು ಘಟನೆಯನ್ನು ASI ಶ್ರೀ ಉಮೇಶ್ ಅವರಿಗೆ ವಿವರಿಸಿದೆವು.

ಅವರು ನಮಗೆ ಸಹಾಯ ಮಾಡಲು ಹೆಚ್ಚು ಆಸಕ್ತಿ ತೋರಲಿಲ್ಲ. ಇಲಾಖೆಯ ಮೇಲಧಿಕಾರಿಗಳ ಜತೆ ಮಾತನಾಡಬೇಕು ಎಂದ ಅವರು, ಬಂದು ಏನಾಯಿತು ಎಂದು ತಿಳಿದುಕೊಳ್ಳುವ ಸೌಜನ್ಯವನ್ನು ತೋರಲಿಲ್ಲ. ಕೇವಲ 2 ಕಟ್ಟಡಗಳ ಮುಂದಿರುವ ರೆಸ್ಟೊರೆಂಟ್‌ನ ಮುಂದೆ ಮೂಸಂಬಿ ಜ್ಯೂಸ್ ಕುಡಿಯುತ್ತ ಕಾರ್ ನಲ್ಲಿ ಕುಳಿತಿದ್ದರು.

ಈ ಘಟನೆಯ ನಂತರ ನಾನು ಮಾನಸಿಕವಾಗಿ ಸಂಪೂರ್ಣ ಆಘಾತಕ್ಕೊಳಗಾಗಿದ್ದೇನೆ. ನಾನು ಹುಟ್ಟಿ ಬೆಳೆದ ನಗರದಲ್ಲಿ ಹೊರಗೆ ಹೋಗಲು ನನಗೆ ಇನ್ನೂ ಭಯವಾಗುತ್ತಿದೆ. ನನಗೆ ಜೀವನದಲ್ಲಿ ಎಲ್ಲವನ್ನು ಕೊಟ್ಟ ನಗರದಲ್ಲಿ ಇಂತಹ ಅನುಭವ ಆಗಿದ್ದು ಇದೇ ಮೊದಲು. ಇದನ್ನು ಪೊಲೀಸ್ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ಗಮನಕ್ಕೆ ತರಲು ಮತ್ತು ಭವಿಷ್ಯದಲ್ಲಿ ಯಾವುದೇ ಮಹಿಳೆ ಅಥವಾ ಕುಟುಂಬಗಳು ಬೆಂಗಳೂರಿನಲ್ಲಿ ಇಂತಹ ಕೆಟ್ಟ ಅನುಭವಕ್ಕೆ ಒಳಗಾಗಬಾರದು ಎಂದು ನಾನು ಇದನ್ನು ಪೋಸ್ಟ್ ಮಾಡುತ್ತಿದ್ದೇನೆ ಎಂದು ಅವರು ಹೇಳಿದ್ದಾರೆ.

ನಾವು ಪಾಕಿಸ್ತಾನದಲ್ಲಿದ್ದೇವಾ? 

ಬೆಂಗಳೂರಿನಲ್ಲಿ ಶಾಂತಿಯುತವಾಗಿ ಜೀವನ ನಡೆಸುತ್ತಿರುವ ಜನರೊಂದಿಗೆ ಇಂತಹ ಗ*ಲಾಟೆ ಸೃಷ್ಟಿಸುವ ಹಕ್ಕು ಯಾರಿಗೂ ಇಲ್ಲ! ಇದನ್ನು ಕಣ್ಣೆದುರು ನೋಡುತ್ತಿರುವಾಗ ನನ್ನ ಮನಸ್ಸಿನಲ್ಲಿ ಒಂದೆರಡು ಪ್ರಶ್ನೆಗಳು ಮೂಡಿದವು.

1. ನಾವು ಪಾಕಿಸ್ತಾನದಲ್ಲಿ ಅಥವಾ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿದ್ದೇವೆಯೇ ?
2. ಹಾಗಿದ್ದರೆ ನಾವು ನಮ್ಮ ಊರಿನಲ್ಲಿ ಕನ್ನಡ ಮಾತನಾಡುವುದೇ ತಪ್ಪಾ?
3. ನಮ್ಮ ಸ್ವಂತ ನಗರದಲ್ಲಿ ನಾವು ಎಷ್ಟು ಸುರಕ್ಷಿತವಾಗಿರುತ್ತೇವೆ?
4. ನಮ್ಮ ಬೆಂಗಳೂರಿನಲ್ಲಿ ಹುಟ್ಟಿ ಬೆಳೆದು, ಇಂತಹ ದೀರ್ಘಾವಧಿಯ ಮಾನಸಿಕ ಆಘಾತಕ್ಕೆ ಕಾರಣವಾಗುವ ಇಂತಹ ಘಟನೆಗಳನ್ನು ಮುಚ್ಚಿ ಹಾಕಬೇಕೆ ?

‘ಕರ್ನಾಟಕದ ಮಾನ್ಯ ಮುಖ್ಯ ಮಂತ್ರಿಗಳು ಹಾಗು ಕರ್ನಾಟಕದ ರಾಜ್ಯ ಪೊಲೀಸ್ ಇಲಾಖೆಯವರು ಈ ಬಗ್ಗೆ ವಿಚಾರಿಸಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಕೇಳಿಕೊಳ್ಳುತ್ತೇನೆ. ಇಂತಿ , ಹರ್ಷಿಕಾ ಪೂಣಚ್ಚ [ಚಿತ್ರನಟಿ]ಬೆಂಗಳೂರು. (ಈ ಇಡೀ ಘಟನೆಯ ನಡುವೆ ನನ್ನ ಕುಟುಂಬದ ಸದಸ್ಯರು ಚಿತ್ರೀಕರಿಸಿದ ವೀಡಿಯೊವನ್ನು ಪೋಸ್ಟ್ ಮಾಡುತ್ತಿದ್ದೇನೆ. ಅಷ್ಟು ಸ್ಪಷ್ಟವಾಗಿಲ್ಲ ಹಾಗು ಘಟನೆಯ ಮದ್ಯದಿಂದ ಅವರಿಗೆ ತಿಳಿದಷ್ಟು ಚಿತ್ರೀಕರಿಸಿದ್ದಾರೆ) ಎಂದು ಹರ್ಷಿಕಾ ಪೋಸ್ಟ್ ಮಾಡಿದ್ದಾರೆ.

 

ಇನ್ನು ಈ ಪೋಸ್ಟ್ ಗೆ ಹಲವರು ಕಮೆಂಟ್ಸ್ ಮಾಡಿದ್ದು, ಕಮಿಷನರ್ ಗೆ ಈ ಪೋಸ್ಟ್ ಟ್ಯಾಗ್ ಮಾಡಿ ಎಂದಿದ್ದಾರೆ. ಇನ್ನು ಕೆಲವರು, ಕಾನೂನು ಕ್ರಮ ಕೈಗೊಳ್ಳಿ ಎಂದಿದ್ದಾರೆ. ಇಂತಹ ಹೋಟೆಲ್ ಹಾಗೂ ಸ್ಥಳಗಳಿಗೆ ಭೇಟಿ ನೀಡಬೇಡಿ ಎಂದು ಸಲಹೆ ನೀಡಿದ್ದಾರೆ.

Continue Reading

LATEST NEWS

Trending