HomeDAKSHINA KANNADAಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ "ಅಬ್ದುಲ್ ಮಜೀದ್ ಕುಟ್ಟಿ" ಭಯೋತ್ಪಾದನಾ ನಿಗ್ರಹ ದಳದ ವಶಕ್ಕೆ..!

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ “ಅಬ್ದುಲ್ ಮಜೀದ್ ಕುಟ್ಟಿ” ಭಯೋತ್ಪಾದನಾ ನಿಗ್ರಹ ದಳದ ವಶಕ್ಕೆ..!

ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರ “ಅಬ್ದುಲ್ ಮಜೀದ್ ಕುಟ್ಟಿ” ಭಯೋತ್ಪಾದನಾ ನಿಗ್ರಹ ದಳದ ವಶಕ್ಕೆ..!

ಅಹಮದಾಬಾದ್: ಭಾರತದ ಮೋಸ್ಟ್ ವಾಂಟೆಡ್ ಪಟ್ಟಿಯಲ್ಲಿರುವ ಕ್ರಿಮಿನಲ್, ಭೂಗತ ಪಾತಕಿ ದಾವೂದ್ ಇಬ್ರಾಹಿಂನ ಸಹಚರ ಅಬ್ದುಲ್ ಮಜೀದ್ ಕುಟ್ಟಿ ಕೊನೆಗೂ ಬಂಧಿಸಲಾಗಿದೆ.

ಕಳೆದ 24 ವರ್ಷಗಳಿಂದ ತಲೆಮರಿಸಿಕೊಂಡಿದ್ದ ಈ ಉಗ್ರನನ್ನ ಇಂದು ಭಯೋತ್ಪಾದನಾ ನಿಗ್ರಹ ದಳ ಜಾರ್ಖಂಡ್​ನಲ್ಲಿ ಬಂಧಿಸಿದೆ.ಅಬ್ದುಲ್ ಮಜೀದ್ ಕುಟ್ಟಿ ಮೂಲತ: ಕೇರಳದವನಾಗಿದ್ದಾನೆ. 1996ರ ಶಸ್ತ್ರಾಸ್ತ ಸಂಗ್ರಹ ಪ್ರಕರಣದ ಸುಳಿಯಲ್ಲಿ ಸಿಲುಕಿಕೊಂಡಿದ್ದ ಈತ 106 ಪಿಸ್ತೂಲ್, 750 ಸಿಡಿಮದ್ದುಗಳು ಮತ್ತು 4 ಕೆ.ಜಿ RDX ಸಂಗ್ರಹಿಸಿದ ಆರೋಪ ಎದುರಿಸುತ್ತಿದ್ದ.

ಇದೇ ಪ್ರಕರಣದ ಉಳಿದ ಆರೋಪಿಗಳನ್ನ 1996ರಲ್ಲೇ ಬಂಧಿಸಲಾಗಿತ್ತು. ಅವ್ರ ವಿಚಾರಣೆ ಸಮಯದಲ್ಲಿ ಈತನ ಹೆಸರು ಕೇಳಿ ಬಂದಿತ್ತು.   ಅಂದು ತಲೆಮರೆಸಿಕೊಂಡಿದ್ದ ಈ ಕ್ರಿಮಿನಲ್‌ ಬರೋಬ್ಬರಿ 24 ವರ್ಷಗಳ ನಂತ್ರ ಬಂಧನಕ್ಕೊಳಗಾಗಿದ್ದಾನೆ.

Latest articles

ಕೆಲಸ ಇಲ್ಲದವನು ಎಂದು ಬೈಯುತ್ತಿದ್ದ ಅಜ್ಜಿಯನ್ನು ಕೊಂದು ಸುಟ್ಟು ಹಾಕಿದ ಕಿರಾತಕ ಮೊಮ್ಮಗ

ಮೈಸೂರು: ದುಡಿಯುವ ವಯಸ್ಸಿನಲ್ಲಿ ಪುಂಡ ಪೋಕರಿಯಂತೆ ಅಲೆಯುತ್ತಿದ್ದುದಕ್ಕೆ ಬೈಯುತ್ತಿದ್ದ ಅಜ್ಜಿಯನ್ನು ಸ್ವಂತ ಮೊಮ್ಮಗನೇ ಕೊಂದು ಸುಟ್ಟು ಹಾಕಿ ಶವವನ್ನು...

ಚಿತ್ರದುರ್ಗ : ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಯ್ತು ಅಕ್ರಮ ಗೋಸಾಗಾಟ- ಆರೋಪಿಗಳ ವಿರುದ್ಧ ಕ್ರಮಕ್ಕೆ ಆಗ್ರಹ..!

ಚಿತ್ರದುರ್ಗದಲ್ಲಿ ರಾತ್ರಿ ವೇಳೆ ಕಳ್ಳರು ಬೀದಿ ಬದಿಯ ಗೋವುಗಳನ್ನು ಕಳ್ಳತನ ಮಾಡಿ ಟೆಂಪೋದಲ್ಲಿ ತುಂಬಿಸಿಕೊಂಡು ಹೋಗುತ್ತಿರುವ ದೃಶ್ಯ ಸಿಸಿಟಿವಿ...

ಕೇರಳಕ್ಕೆಮುಂಗಾರು ಪ್ರವೇಶ- ಮಂಗಳೂರಿನಲ್ಲಿ ಸಂಜೆ ಬಿರುಸಿನ ಮಳೆ..!

ಕೇರಳದಲ್ಲಿ ಇಂದು ಮುಂಗಾರು ಪ್ರವೇಶಿಸಿದ್ದು ಈ ಹಿನ್ನೆಲೆಯಲ್ಲಿ ಕರಾವಳಿಯ ಬಂದರು ನಗರ ಮಂಗಳೂರಿನಲ್ಲಿ ಇಂದು ಸಂಜೆ ಬಿರುಸಿನ ಮಳೆಯಾಗಿದೆ.ಮಂಗಳೂರು...

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ರನ್ನು ಭೇಟಿಯಾದ ಸ್ಪೀಕರ್ ಯು.ಟಿ.ಖಾದರ್

ರಾಜ್ಯ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಸ್ಪೀಕರ್ ಯು.ಟಿ.ಖಾದರ್ ಅವರು ಮೊದಲ ಬಾರಿಗೆ ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ಅವರನ್ನು...