LATEST NEWS
ಹರ್ ಘರ್ ತಿರಂಗ ಅಭಿಯಾನ ಯಾತ್ರೆಗೆ ಚಾಲನೆ ನೀಡಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ
ನವದೆಹಲಿ: ದೇಶದೆಲ್ಲೆಡೆ ಸ್ವಾತಂತ್ರ್ಯ ಹಬ್ಬಕ್ಕೆ ತಯಾರಿ ಶುರುವಾಗಿದೆ. ಸ್ವಾತಂತ್ಯ್ರೋತ್ಸವ ಆಚರಣೆ ಅಂಗವಾಗಿರುವ ಹರ್ ಘರ್ ತಿರಂಗ ಅಭಿಯಾನ ಯಾತ್ರೆಗೆ ಇಂದು ಅಹಮದಾಬಾದ್ನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಚಾಲನೆ ನೀಡಲಿದ್ದಾರೆ.
ಆಗಸ್ಟ್ 11ರಿಂದ ಆರಂಭವಾಗಿರುವ ಈ ಅಭಿಯಾನದ ಭಾಗವಾಗಿ ಬಿಜೆಪಿ ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ತಿರಂಗ ಯಾತ್ರೆ ನಡೆಸುತ್ತಿದೆ. ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಯುದ್ಧ ಸ್ಮಾರಕಗಳಿಗೆ ಪುಷ್ಪ ನಮನ ಸಲ್ಲಿಸುವ ಗೌರವ ಸೂಚಿಸುವ ಸಲುವಾಗಿ ಈ ಯೋಜನೆ ಚಾಲನೆಗೆ ಬಂದಿದೆ.
ಅಹಮದಾಬಾದ್ನ ವಿರಾಟ್ನಗರ ಪ್ರದೇಶದಲ್ಲಿ ಇಂದು ಸಂಜೆ 4.30ರಿಂದ ಈ ಯಾತ್ರೆ ಪ್ರಾರಂಭವಾಗಲಿದೆ. ಆಗಸ್ಟ್ 14ರಂದು ವಿಭಜನೆಯ ಸ್ಮರಣಾರ್ಥ ದಿನವನ್ನು ಎಲ್ಲಾ ಜಿಲ್ಲೆಗಳಲ್ಲಿ ಮೌನ ಮೆರವಣಿಗೆಯೊಂದಿಗೆ ಆಚರಿಸಲಾಗುವುದು ಎಂದು ಹೇಳಲಾಗಿದೆ.
LATEST NEWS
ದಸರಾ ಸಂಭ್ರಮ: ಅಕ್ಟೋಬರ್ 3 ರಿಂದ 20 ರವರೆಗೆ ಶಾಲೆಗಳಿಗೆ ರಜೆ
ಬೆಂಗಳೂರು: ದಸರಾ ಹಬ್ಬ ಹಿನ್ನೆಲೆ ಕರ್ನಾಟಕ ಸಾರ್ವಜನಿಕ ಶಿಕ್ಷಣ ಇಲಾಖೆ ಶಾಲಾ ಮಕ್ಕಳಿಗೆ ಅಕ್ಟೋಬರ್ 3 ರಿಂದ 20 ತನಕ ದಸರಾ ರಜೆ ಘೋಷಿಸಿದೆ.
ಅಕ್ಟೋಬರ್ 3 ರಿಂದ 20ರ ತನಕ ಅಂದರೆ 17 ದಿನಗಳ ಕಾಲ ದಸರಾ ರಜೆ ಸಿಗಲಿದೆ. ಅಕ್ಟೋಬರ್ 21 ರಿಂದ 2ನೇ ಅವಧಿಯು ಪ್ರಾರಂಭವಾಗಲಿದ್ದು, 2025ರ ಏಪ್ರಿಲ್ 10 ತನಕ ನಡೆಯಲಿದೆ.
2024-2025ರ ಶೈಕ್ಷಣಿಕ ವರ್ಷದ ಶಾಲಾ ಅವಧಿಯ ಮಾರ್ಗದರ್ಶಿಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲೆಗಳು ಆರಂಭಕ್ಕೂ ಮುನ್ನ ಪ್ರಕಟಣೆ ಹೊರಡಿಸಿತ್ತು. ಅದರ ನಿಯಮಾನುಸಾರದಂತೆ ರಜೆಗಳು ಘೋಷಣೆಯಾಗಿವೆ. ಈಗ ದಸರಾ ರಜೆ ಹಿನ್ನೆಲೆಯಲ್ಲಿ ಅಕ್ಟೋಬರ್ ತಿಂಗಳಲ್ಲಿ ಕೇವಲ 11 ದಿನಗಳು ತರಗತಿಗಳು ನಡೆಯಲಿವೆ.
ಇಡೀ ಕರ್ನಾಟಕದ ಶಾಲೆಗಳಿಗೆ ಒಂದೇ ಮಾರ್ಗದರ್ಶಿ ರೂಪಿಸಿದೆ.
LATEST NEWS
ದಸರಾ ಆನೆಗಳ ಕಾದಾಟ..! ಬೆಚ್ಚಿಬಿದ್ದ ಜನರು, ಅಧಿಕಾರಿಗಳು..!!
ಮೈಸೂರು/ಮಂಗಳೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಗಜಪಡೆಯ ಆನೆಗಳು ಶುಕ್ರವಾರ(ಸೆ.20) ರಾತ್ರಿ ದಿಢೀರ್ ಕಾದಾಟಕ್ಕೆ ಇಳಿದಿದ್ದು ಕೆಲಕಾಲ ಆತಂಕದ ವಾತಾವರಣ ಸೃಷ್ಟಿಯಾಗಿತ್ತು.
ದಸರಾ ಹಬ್ಬದ ಪ್ರಯುಕ್ತ ಆನೆಗಳಿಗೆ ತಾಲೀಮು ನಡೆಸಲಾಗುತ್ತಿದೆ. ಮಳೆಯಿರುವ ಕಾರಣ ಅರಮನೆ ಮೈದಾನದಲ್ಲೇ ಆನೆಗಳಿಗೆ ತಾಲೀಮನ್ನು ಕೈಗೊಳ್ಳಲಾಗಿತ್ತು. ನಿನ್ನೆ ರಾತ್ರಿ 8 ಗಂಟೆಯ ಸುಮಾರಿಗೆ ಧನುಂಜಯ್ ಹಾಗೂ ಕಂಜನ್ ಆನೆಗಳ ಮಧ್ಯೆ ಗುದ್ದಾಟ ಆಋಂಭವಾಗಿದೆ. ಊಟದ ಸಮಯದಲ್ಲಿ ಈ ಜಗಳ ಶುರುವಾಗಿದ್ದು ಧನುಂಜಯ್ ಆನೆ ಕಂಜನ್ನನ್ನು ಅರಮನೆಯಿಂದ ಹೊರಗೆ ಓಡಿಸಿಕೊಂಡು ಬಂದಿದೆ. ಈ ವೇಳೆ ಕಜನ್ ತನನ್ ಮಾವುತನನನ್ಉ ಕೆಳಗೆ ಬೀಳಿಸಿದೆ. ಧನುಂಜಯ್ ಆನೆ ಕಂಜನ್ನನ್ನು ಓಡಿಸಿಕೊಂಡು ಹೋಗಿದ್ದು ಜಯಮಾರ್ತಾಂಡ ದ್ವಾರದಿಂದ ಹೊರಗೆ ಬಂದಿದೆ. ಇದರಿಂದ ಕೆಲಕಾಲ ಜನ, ಮಾವುತರು, ಅಧಿಕಾರಿಗಳಲ್ಲಿ ಆತಂಕ ಸೃಷ್ಟಿಯಾಯಿತು. ಆನೆಗಳು ದೊಡ್ಡಕೆರೆ ಮೈದಾನ ಬಳಿ ಬ್ಯಾರಿಕೇಡ್ ತಳ್ಳಿಕೊಂಡು ರಸ್ತೆಗೆ ಪ್ರವೇಶಿಸುತ್ತಿದ್ದಂತೆ ಜನರು ಭಯದಿಂದ ದಿಕ್ಕಾಪಾಲಾಗಿ ಓಡಿಹೋದರು.
ಸಾಹಿತಿ ಹಂಪ ನಾಗರಾಜಯ್ಯ ಅವರಿಂದ ದಸರಾ ಉದ್ಘಾಟನೆ : ಸಿಎಂ ಸಿದ್ಧರಾಮಯ್ಯ
ದೊಡ್ಡಕೆರೆ ಮೈದಾನದ ಬೆಂಗಳೂರು- ನೀಲಗಿರಿ ರಸ್ತೆಯಲ್ಲಿನ ವಾಹನಗಳನ್ನು ನೋಡುತ್ತಿದ್ದಂತೆ ಕಂಜನ್ ಬೆದರಿ ನಿಂತಿತು. ಮಾವುತರು ಕಾವಾಡಿಗರು ಸಮಾಧಾನ ಪಡಿಸಿದರು. ಯಾವುದೇ ಅನಾಹುತ ಸಂಭವಿಸಿಲ್ಲ. ಕಾವಾಡಿಗಳ ಚಾಣಾಕ್ಷತದಿಂದ ಆನೆಗಳ ಆಟೋಟಕ್ಕೆ ಬ್ರೇಕ್ ಬಿದ್ದಿದೆ. ಬಳಿಕ ಅರಮನೆಗೆ ಆನೆಗಳನ್ನು ಸಿಬ್ಬಂದಿ ಕರೆತಂದಿದ್ದಾರೆ. ಸದ್ಯ ಕೋಡಿಸೋಮೇಶ್ವರ ದೇವಸ್ಥಾನ ಸಮೀಪ ಇರುವ ಆನೆಗಳು ಬಿಡಾರ ಬಿಟ್ಟಿವೆ.
DAKSHINA KANNADA
ಮಂಗಳೂರು : ಬೈಕ್ಗೆ ಲಾರಿ ಡಿ*ಕ್ಕಿ; ವಿದ್ಯಾರ್ಥಿ ಸಾ*ವು
ಮಂಗಳೂರು : ಲಾರಿಯೊಂದು ಬೈಕ್ಗೆ ಡಿ*ಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೊಬ್ಬ ಮೃ*ತಪಟ್ಟ ಘಟನೆ ಕುಂಟಿಕಾನ ಪ್ಲೈಓವರ್ನ ಮೇಲೆ ಶುಕ್ರವಾರ(ಸೆ.21) ನಡೆದಿದೆ.
ಪಾಣೆಮಂಗಳೂರು ಸಮೀಪದ ಮೆಲ್ಕಾರ್ ನಿವಾಸಿ ಜಾಸಿಮ್ (18) ಮೃ*ತಪಟ್ಟ ವಿದ್ಯಾರ್ಥಿ. ನಗರ ಹೊರಲವಲಯದ ಕೂಳೂರಿನಲ್ಲಿರುವ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಎಂಬಿಎ ಓದುತ್ತಿದ್ದ ಜಾಸಿಮ್ ಶುಕ್ರವಾರ ಸಂಜೆ ಕೂಳೂರಿನಿಂದ ಕೆಪಿಟಿ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಲಾರಿಯೊಂದು ಡಿ*ಕ್ಕಿ ಹೊಡೆಯಿತು ಎನ್ನಲಾಗಿದೆ.
ಇದನ್ನೂ ಓದಿ : ನಾಲ್ಕನೇ ಮಗುವೂ ಹೆಣ್ಣಾಯಿತೆಂದು ಹಸುಗೂಸನ್ನು ನೆಲಕ್ಕೆ ಬಡಿದು ಕೊಂ*ದ ತಂದೆ
ಪರಿಣಾಮ ನಿಯಂತ್ರಣ ತಪ್ಪಿದ ಜಾಸಿಮ್ ರಸ್ತೆಗೆ ಬಿದ್ದಿದ್ದರು. ಇದರಿಂದ ಗಂಭೀ*ರ ಗಾ*ಯಗೊಂಡ ಅವರು ಮೃ*ತಪಟ್ಟಿದ್ದಾರೆ. ಈ ಬಗ್ಗೆ ಮಂಗಳೂರು ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.