Connect with us

DAKSHINA KANNADA

ನಾಳೆ ಜು.5 ರಿಂದ ರಾಜ್ಯದಲ್ಲಿ ಅನ್ ಲಾಕ್ 3.0 ಪ್ರಕ್ರೀಯೆ ಜಾರಿ.. ಯಾರಿಗುಂಟು ಯಾರಿಗಿಲ್ಲ..!!?

Published

on

ಮಂಗಳೂರು : ಕೊರೋನಾ ಎರಡನೇ ಅಲೆ ರಾಜ್ಯದಲ್ಲಿ ಅಪಾರ ಸಾವು-ನೋವಿಗೆ ಕಾರಣವಾಗಿತ್ತು. ಪರಿಣಾಮ ಕಳೆದ ತಿಂಗಳು ಲಾಕ್​ಡೌನ್ ಹೇರಲಾಗಿತ್ತು. ಆದರೆ, ಇದೀಗ ಕೊರೋನಾ ಅಲೆ ಕ್ರಮೇಣ ಇಳಿಕೆಯಾಗುತ್ತಿದೆ.

ಹೀಗಾಗಿ ರಾಜ್ಯದಲ್ಲಿ ಹಂತಹಂತವಾಗಿ ಅನ್​ಲಾಕ್ ಮಾಡಲಾಗುತ್ತಿದೆ. ಈಗಾಗಲೇ ಎರಡು ಹಂತದಲ್ಲಿ ಅನ್​ಲಾಕ್ ಮಾಡಲಾಗಿತ್ತು, ಕೆಲವು ವಿಭಾಗಗಳನ್ನು ಹೊರತುಪಡಿಸಿ ಬಹುತೇಕ ಕ್ಷೇತ್ರಗಳಿಗೆ ಅವಕಾಶ ನೀಡಲಾಗಿತ್ತು.

ಹೀಗಾಗಿ ಜನ ಸಹ ರಸ್ತೆಗೆ ಇಳಿದು ಓಡಾಡಲು ಆರಂಭಿಸಿದ್ದಾರೆ. ಆರ್ಥಿಕತೆ ಪುನಃ ಚೇತರಿಕೆಯ ಹಾದಿ ಹಿಡಿದಿದೆ. ಆದರೆ, ಏನೇ ಆದರೂ ಸರ್ಕಾರ ಮಾತ್ರ ಕೆಲವು ಕ್ಷೇತ್ರಗಳಿಗೆ ಈವರೆಗೆ ಅವಕಾಶ ನೀಡಿರಲಿಲ್ಲ. ಹೀಗಾಗಿ ಅನ್​ಲಾಕ್ 3.0 ರಲ್ಲಿ ಸರ್ಕಾರ ಅನೇಕ ಕ್ಷೇತ್ರಗಳಿಗೆ ಅವಕಾಶ ನೀಡಲಿದೆ ಎನ್ನಲಾಗಿತ್ತು.

ಮುಂದಿನ 15 ದಿನಗಳವರೆಗೆ ಈ ಕೆಳಗಿನ ಸಡಿಲಿಕೆ ಮತ್ತು ನಿರ್ಬಂಧಗಳು ಜಾರಿಯಲ್ಲಿರುತ್ತವೆ.

1. ಚಿತ್ರಮಂದಿರಗಳು / ಸಿನೆಮಾ ಹಾಲ್‌ಗಳು ಮತ್ತು ಪಬ್‌ಗಳ ಮೇಲಿನ ನಿರ್ಬಂಧಗಳು ಹಾಗೆ ಮುಂದುವರೆಯುತ್ತದೆ.

2. ಸ್ಪರ್ಧಾತ್ಮಕ ತರಬೇತಿ ಉದ್ದೇಶಕ್ಕಾಗಿ ಮಾತ್ರ ಈಜುಕೊಳಗಳನ್ನು ತೆರೆಯಲು ಅನುಮತಿ ನೀಡಲಾಗಿದೆ.

3. ಅಭ್ಯಾಸದ ಉದ್ದೇಶಕ್ಕಾಗಿ ಮಾತ್ರ ಕ್ರೀಡಾ ಸಂಕೀರ್ಣಗಳು ಮತ್ತು ಕ್ರೀಡಾಂಗಣಗಳನ್ನು ತೆರೆಯಲಾಗುತ್ತದೆ.

4. ಎಲ್ಲಾ ಸಾಮಾಜಿಕ / ರಾಜಕೀಯ / ಕ್ರೀಡೆ / ಮನರಂಜನೆ / ಶೈಕ್ಷಣಿಕ / ಸಾಂಸ್ಕೃತಿಕ / ಧಾರ್ಮಿಕ ಕಾರ್ಯಗಳು / ಇತರ ಕೂಟಗಳು ಮತ್ತು ದೊಡ್ಡ ಸಭೆಗಳನ್ನು ನಿಷೇಧಿಸಲಾಗಿದೆ.

5. 100 ಕ್ಕಿಂತ ಹೆಚ್ಚು ಜನರನ್ನು ಒಳಗೊಳ್ಳದ ಮದುವೆ ಹಾಗೂ ಕೌಟುಂಬಿಕ ಕಾರ್ಯಗಳನ್ನು ನಡೆಸಲು ಅನುಮತಿ ನೀಡಲಾಗಿದೆ.5. ಶವಸಂಸ್ಕಾರ ಹಾಗೂ ಅಂತ್ಯಕ್ರಿಯೆಗಳನ್ನು ಗರಿಷ್ಠ 20 ಜನರೊಂದಿಗೆ ನಡೆಸಲು ಅನುಮತಿಸಲಾಗಿದೆ.

6. ದರ್ಶನಕ್ಕೆ ಮಾತ್ರ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅವಕಾಶ ನೀಡಲಾಗಿದ್ದು, ಯಾವುದೇ ಸೇವೆಗಳನ್ನು ಮಾಡುವಂತಿಲ್ಲ.

7. ಸಾರ್ವಜನಿಕ ಸಾರಿಗೆಯನ್ನು ಅದರ ಆಸನ ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ.

8. ಎಲ್ಲಾ ಅಂಗಡಿಗಳು, ರೆಸ್ಟೋರೆಂಟ್‌ಗಳು, ಮಾಲ್‌ಗಳು, ಖಾಸಗಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಲಾಗಿದೆ.

9. ಮುಂದಿನ ಆದೇಶದವರೆಗೆ ಎಲ್ಲಾ ಶೈಕ್ಷಣಿಕ ಸಂಸ್ಥೆಗಳು / ಟ್ಯುಟೋರಿಯಲ್ / ಕಾಲೇಜುಗಳು ಮುಚ್ಚಿಯೆ ಇರುತ್ತವೆ.

10. ರಾತ್ರಿ 9.00 ರಿಂದ ಬೆಳಿಗ್ಗೆ 5.00 ರವರೆಗೆ “ರಾತ್ರಿ ಕರ್ಫ್ಯೂ”ವನ್ನು ಮುಂದುವರೆಸಲಾಗಿದೆ, ಆದರೆ ವೀಕೆಂಡ್ ಕರ್ಫ್ಯೂ ಇರುವುದಿಲ್ಲ.

11. ಇದರ ಮೇಲೆ ಜಿಲ್ಲೆಗಳ ಜಿಲ್ಲಾಧಿಕಾರಿಗಳು ಪರಿಸ್ಥಿತಿಯ ಆಧಾರದ ಮೇಲೆ, ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿದ ನಂತರ, ಹೆಚ್ಚುವರಿ ನಿಯಂತ್ರಣ ಕ್ರಮಗಳನ್ನು ವಿಧಿಸಬಹುದಾಗಿದೆ.

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending