Connect with us

LATEST NEWS

ಸದನದಲ್ಲಿ ಅಶಿಸ್ತಿನ ವರ್ತನೆ – ಅಧಿವೇಶನದಿಂದ 10 ಬಿಜೆಪಿ ಶಾಸಕರು ಅಮಾನತು

Published

on

ಸದನದಲ್ಲಿ ಅಗೌರವ ಹಾಗೂ ಅಶಿಸ್ತಿನಿಂದ ನಡೆದುಕೊಂಡ ಹಿನ್ನಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಸದನದಲ್ಲಿ ಅಗೌರವ ಹಾಗೂ ಅಶಿಸ್ತಿನಿಂದ ನಡೆದುಕೊಂಡ ಹಿನ್ನಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಈ ವಿಧಾನಸಭಾ ಅಧಿವೇಶನ ಮುಗಿಯುವವರೆಗೆ ಅಮಾನತು ಮಾಡಿ ಸ್ಪೀಕರ್ ಯು.ಟಿ.ಖಾದರ್ ಆದೇಶ ಹೊರಡಿಸಿದ್ದಾರೆ.

ಅಧಿವೇಶನ ಜು. 21 ರಂದು ಕೊನೆಗೊಳ್ಳಲಿದೆ

ಅಮಾನತುಗೊಂಡ ಶಾಸಕರು:

ಆರ್. ಅಶೋಕ್, ಆರಗ ಜ್ಞಾನೇಂದ್ರ, ವಿ. ಸುನಿಲ್ ಕುಮಾರ್, ಅರವಿಂದ ಬೆಲ್ಲದ, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಡಾ. ಅಶ್ವತ್ಥ ನಾರಾಯಣ, ಉಮಾನಾಥ ಕೋಟ್ಯಾನ್, ಯಶ್ ಪಾಲ್ ಸುವರ್ಣ, ವೇದವ್ಯಾಸ ಕಾಮತ್ ಅವರು ಸೇರಿದ್ದಾರೆ.

ಕರ್ನಾಟಕ ವಿಧಾನಸಭೆ ಕಾರ್ಯವಿಧಾನ ಹಾಗೂ ನಡಾವಳಿ ನಿಯಮ 348 ಮೇರೆಗೆ ಅಮಾನತು ಮಾಡಲಾಗಿದೆ.

ಈ ಪ್ರಸ್ತಾವಕ್ಕೆ ಸ್ಪೀಕರ್ ಖಾದರ್ ಅಂಗೀಕಾರ ನೀಡಿದರು ಹಾಗೂ ಸದಸ್ಯರನ್ನು ಸದನದಿಂದ‌ ಹೊರಗೆ ಹೋಗುವಂತೆ ಸೂಚಿಸಿದರು.

ಸದನದ ಬಾವಿಗಿಳಿದು ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಬಿಜೆಪಿ ಶಾಸಕರು ಬಜೆಟ್ ಪ್ರತಿಗಳ ಕಾಗದಗಳನ್ನು ಹರಿದು ಚೂರು ಮಾಡಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರ ಮೇಲೆ ಎಸೆದಿದ್ದರು.

ಸದನದ ಬಾವಿಗಿಳಿದು ಬಿಜೆಪಿ ಮತ್ತು ಜೆಡಿಎಸ್ ಶಾಸಕರು ಧರಣಿ ನಡೆಸಿದರು.

ಸ್ಪೀಕರ್ ಭೋಜನ ವಿರಾಮ ರದ್ದುಪಡಿಸಿ ಕಲಾಪ ಮುಂದುವರಿಸಿದರು.

ಬಜೆಟ್ ಮೇಲಿನ ಚರ್ಚೆ ಮುಂದುವರಿಸಲಾಗಿದ್ದು, ಮಳವಳ್ಳಿ ಶಾಸಕ ಪಿ.ಎಂ. ನರೇಂದ್ರಸ್ವಾಮಿ ಮಾತನಾಡುತ್ತಿದ್ದರು.

ರಾಜ್ಯ ಸರಕಾರದ ಐದು ಗ್ಯಾರಂಟಿ ಮತ್ತು ಇತರ ಯೋಜನೆಗಳನ್ನು ಹೊಗಳುತ್ತಿದ್ದರು.

ಈ ವೇಳೆ ಬಿಜೆಪಿ ಶಾಸಕರು ಸದನದ ಬಾವಿಗಿಳಿದು ಧರಣಿ ಮುಂದುವರಿಸಿದ್ದರು.

ಉಪಸಭಾಧ್ಯಕ್ಷರು ಸ್ಪೀಕರ್ ಪೀಠದಲ್ಲಿ ಕುಳಿತಿದ್ದರು.

ಬಿಜೆಪಿ ಶಾಸಕರು ಬಜೆಟ್ ಪ್ರತಿಗಳನ್ನ ಹರಿದು ಚೂರು ಮಾಡಿ ಎಸೆದಿದ್ದರು.

ಉಪ ಸ್ಪೀಕರ್ ರುದ್ರಪ್ಪ ಲಮಾಣಿ ಆಕ್ರೋಶ ಹೊರ ಹಾಕಿದ್ದು, ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿದ ಮತದಾರರಿಗೆ ಈ ರೀತಿ ವರ್ತನೆ ತೋರಿ ಅವಮಾನ ಮಾಡಬೇಡಿ ಎಂದರು.

ಸಭೆಯನ್ನು 3 ಗಂಟೆಗೆ ಮುಂದೂಡಿದ್ದರು.

ಕಾಂಗ್ರೆಸ್ ಶಾಸಕರು ಮತ್ತು ಸಚಿವರು ದಲಿತ ಸಮುದಾಯಕ್ಕೆ ಸೇರಿದ ಉಪಸಭಾಪತಿ ಅವರ ವಿರುದ್ಧ ಈ ರೀತಿ ವರ್ತನೆ ಸರಿಯಲ್ಲ ಎಂದು ಕಿಡಿ ಕಾರಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

Published

on

ಮಂಗಳೂರು: ಮಂಗಳೂರು ಸಬ್ ಜೈಲಿನಲ್ಲಿದ್ದ ಕೇರಳ ಮೂಲದ ಖೈದಿಯೊಬ್ಬ ಆಸ್ಪತ್ರೆಯಲ್ಲೇ ಕುಣಿಕೆಗೆ ಕೊರಳೊಡ್ಡಿ ಜೀವಾಂತ್ಯಗೊಳಿಸಿದ್ದಾನೆ. ಕೊಣಾಜೆಯ ಪೊಲೀಸ್ ಠಾಣಾ ವ್ಯಾಪ್ತಿಯ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ 2022 ರಲ್ಲಿ ಈತ ಬಂಧಿತನಾಗಿದ್ದ . ಕೇರಳ ಮೂಲದವನಾಗಿದ್ದ ಮಹಮ್ಮದ್ ನೌಫಲ್ ಜೀವಾಂತ್ಯಗೊಳಿಸಿದ ಖೈದಿಯಾಗಿದ್ದಾನೆ. ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಈತನಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ಏಪ್ರಿಲ್ 25 ರಂದು ಚಿಕಿತ್ಸೆಗಾಗಿ ವೆನ್ಲಾಕ್ ಆಸ್ಪತ್ರೆಯ ಸೆಲ್ ವಾರ್ಡ್ ಗೆ ದಾಖಲಿಸಲಾಗಿತ್ತು. ಸೆಲ್ ವಾರ್ಡನಲ್ಲಿ ಇರುವಾಗಲೇ ಈತ ಜೀವಾಂತ್ಯಗೊಳಿಸಿದ್ದಾನೆ. ಈತನನ್ನು ಉಳಿಸುವ ನಿಟ್ಟಿನಲ್ಲಿ ಸಾಕಷ್ಟು ಪ್ರಯತ್ನಗಳ ನಡೆಸಿದರಾದ್ರೂ ಸಾದ್ಯವಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

 

Continue Reading

LATEST NEWS

ಐವರು ಮೆಡಿಕಲ್ ವಿದ್ಯಾರ್ಥಿಗಳು ನೀರುಪಾಲು…!

Published

on

ಮಂಗಳೂರು ( ಕನ್ಯಾಕುಮಾರಿ ) : ಮದುವೆ ಸಮಾರಂಭಕ್ಕೆಂದು ಕನ್ಯಾಕುಮಾರಿಗೆ ತೆರಳಿದ್ದ ಐವರು ಮೆಡಿಕಲ್ ವಿದ್ಯಾರ್ಥಿಗಳು ಸಮುದ್ರದಲ್ಲಿ ಮುಳುಗಿ ಅಸು ನೀಗಿದ್ದಾರೆ. ಮದುವೆಗೆ ತೆರಳಿದ್ದ ಸ್ನೇಹಿತರು ಲೇಮುರ್ ಬೀಚ್‌ನಲ್ಲಿ ಈಜಲು ಇಳಿದಾಗ ಈ ಧುರ್ಘಟನೆ ಸಂಭವಿಸಿದೆ. ಒಟ್ಟು ಎಂಟು ವಿದ್ಯಾರ್ಥಿಗಳು ಸಮುದ್ರಲ್ಲಿ ಈಜಲು ಹೋಗಿದ್ದು ಮೂವರನ್ನು ಸ್ಥಳಿಯರು ರಕ್ಷಣೆ ಮಾಡಿದ್ದಾರೆ. ಎಲ್ಲರೂ ತಿರುಚಿನಪಳ್ಳಿಯಲ್ಲಿರುವ ಎಸ್‌ಆರ್‌ಎಂ ಮೆಡಿಕಲ್ ಕಾಲೇಜಿನವರು ಎಂದು ಮಾಹಿತಿ ಲಭ್ಯವಾಗಿದೆ. ತಂಜಾವೂರಿನ ಚಾರುಕವಿ, ನೇಯ್ವೇಲಿಯ ಗಾಯತ್ರಿ, ಕನ್ಯಾಕುಮಾರಿಯ ಸರ್ವದರ್ಶಿತ್, ದಿಂಡಿಗಲ್‌ನ ಪ್ರವೀಣ್ ಸ್ಯಾಮ್ ಹಾಗೂ ಆಂದ್ರದ ವೆಂಕಟೇಶ್‌ ನೀರುಪಾಲದ ಮೆಡಿಕಲ್ ವಿದ್ಯಾರ್ಥಿಗಳಾಗಿದ್ದಾರೆ. ಇಂಟರ್ನ್‌ಗಳಾಗಿದ್ದ ಕರೂರಿನ ನೇಶಿ, ಥೆಂಗಿಯ ಪ್ರಿಯಾಂಕಾ ಹಾಗೂ ಮದುರೈನ ಶರಣ್ಯ ಎಂಬ ಯುವತಿಯರನ್ನು ರಕ್ಷಿಸಲಾಗಿದೆ

ನಿಶೇಧವಿದ್ರೂ ಸಮುದ್ರಕ್ಕೆ ಪ್ರವೇಶ ಮಾಡಿದ್ದರು

ಖಾಸಗಿ ಬೀಚ್‌ ಆಗಿರೋ ಲೆಮುರ್ ಬೀಚ್‌ ಒಳಗೆ ಸಾರ್ವಜನಿಕರಿಗೆ ಪ್ರವೇಶ ನಿರಾಕರಿಲಾಗಿತ್ತು. ಇನ್ನು ಭಾನುವಾರದಂದು ಸಮುದ್ರದಲ್ಲಿ ಭಾರಿ ಅಲೆಗಳು ಇದ್ದ ಕಾರಣ ಯಾರೂ ಸಮುದ್ರಕ್ಕೆ ಇಳಿಯಬಾರದು ಅನ್ನೋ ಎಚ್ಚರಿಕೆ ನೀಡಲಾಗಿತ್ತು. ಹೀಗಿದ್ರೂ ಇವರು ಸಮುದ್ರಕ್ಕೆ ಹೇಗೆ ಹೋದ್ರು ಅನ್ನೋದು ತನಿಖೆ ನಡೆಸಲಾಗುತ್ತಿದೆ. ಮದುವೆಗೆ ಬಂದಿದ್ದ ಸ್ನೇಹಿತರೆಲ್ಲ ಬೇರೆ ಬೇರೆ ಗುಂಪುಗಳಾಗಿ ಚದುರಿ ಹೋಗಿದ್ದು, ಈ ಎಂಟು ಜನ ವಿದ್ಯಾರ್ಥಿಗಳು ಸಮುದ್ರ ಕಿನಾರೆ ಬಂದು ಸಮುದ್ರಕ್ಕೆ ಇಳಿದಿದ್ದಾರೆ.

ಕೋರ್ಸು ಮುಗಿಸುವ ಹಂತದಲ್ಲಿ ನಡೆಯಿತು ದುರ್ಘಟನೆ

ಈ ವಿದ್ಯಾರ್ಥಿಗಳ ಕೋರ್ಸ್‌ ಇನ್ನೇನು ಕೆಲವೇ ದಿನಗಳಲ್ಲಿ ಮುಗಿದು ಎಲ್ಲರೂ ವೈದ್ಯರಾಗುವ ಕನಸು ಕಾಣುತ್ತಿದ್ದರು. ಯಾವ ಆಸ್ಪತ್ರೆಯಲ್ಲಿ ಇಂಟರ್ನ್‌ಶಿಪ್‌ ಮಾಡಬೇಕು, ಯಾವ ನಗರಕ್ಕೆ ಹೋದರೆ ಸೂಕ್ತ ಎಂಬ ಕುರಿತು ಅವರ ಮಧ್ಯೆಯೇ ಚರ್ಚೆ ನಡೆಯುತ್ತಿತ್ತು. ಅವರ ಪೋಷಕರು ಕೂಡ ನೂರಾರು ಕನಸು ಕಂಡಿದ್ದರು. ಆದರೆ, ಮದುವೆಗೆ ಹೋದವರು, ಮದುವೆ ಮುಗಿಸಿ ನೇರ ಮನೆಗೆ ಬಂದಿದ್ರೆ ಎಲ್ಲವೂ ಎನಿಸಿದಂತೆ ನಡೆಯುತ್ತಿತ್ತು. ಆದ್ರೆ ವಿಧಿ ಇವರ ಎಲ್ಲಾ ಕನಸುಗಳನ್ನ ಕಿತ್ತುಕೊಂಡಿದೆ.

Continue Reading

LATEST NEWS

ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣ; ದೇವೇಗೌಡ, ಕುಮಾರಸ್ವಾಮಿ ಹೆಸರು ಬಳಸದಂತೆ ನಿರ್ಬಂಧ..!

Published

on

ಬೆಂಗಳೂರು: ಹಾಸನದ ಬಿಜೆಪಿ- ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪೆನ್‌ ಡ್ರೈವ್‌ ಪ್ರಕರಣದಲ್ಲಿ ಮಾಜಿ ಪ್ರಧಾನಿ ಎಚ್. ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೆಸರು ಬಳಸದಂತೆ ಬೆಂಗಳೂರಿನ ನ್ಯಾಯಾಲಯ ನಿರ್ಬಂಧ ಹೇರಿದೆ.

ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ

ಪ್ರಕರಣಕ್ಕೆ ಸಂಬಂಧಿಸಿ ಮಾಧ್ಯಮಗಳು ತಮ್ಮ ಹೆಸರು ಬಳಸುವುದನ್ನು ನಿರ್ಬಂಧಿಸುವಂತೆ ಕೋರಿ‌ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಎಚ್.ಡಿ.ಕುಮಾರಸ್ವಾಮಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಸತ್ರ ನ್ಯಾಯಾಲಯದ ನ್ಯಾಯಾಧೀಶರು ಎಚ್. ಡಿ ದೇವೇಗೌಡ ಮತ್ತು ಎಚ್. ಡಿ. ಕುಮಾರಸ್ವಾಮಿ ಹೆಸರು ಬಳಸಂತೆ ಮಾಧ್ಯಮಗಳು, ಪತ್ರಿಕೆಗಳು ಮತ್ತು ಸಾಮಾಜಿಕ ಜಾಲತಾಣಗಳಿಗೆ ಮಧ್ಯಂತರ ತಡೆಯಾಜ್ಞೆ ನೀಡಿದ್ದಾರೆ. ‘ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧ ಇಲ್ಲ. ಮಾಧ್ಯಮಗಳಲ್ಲಿ ನಮ್ಮ ಹೆಸರು ಬಳಸುವುದರಿಂದ ತಮ್ಮ ಘನತೆ, ಗೌರವಕ್ಕೆ ಧಕ್ಕೆಯಾಗುತ್ತಿದೆ. ಹೀಗಾಗಿ ಮಧ್ಯಂತರ ತಡೆಯಾಜ್ಞೆ ನೀಡಬೇಕು’ ಎಂದು ಅರ್ಜಿದಾರರು ಮನವಿ ಮಾಡಿದ್ದರು.‌ ಮನವಿ ಆಲಿಸಿದ ನ್ಯಾಯಾಧೀಶರು ಮಾಧ್ಯಮಗಳು ಸತ್ಯಕ್ಕೆ ದೂರವಾದ, ಆಧಾರ ರಹಿತ ಸುದ್ದಿಗಳನ್ನು ಅರ್ಜಿದಾರರ ವಿರುದ್ಧ ಪ್ರಸಾರ ಮಾಡದಂತೆ ನಿರ್ಬಂಧ‌ ವಿಧಿಸಿ ಪ್ರತಿವಾದಿಗಳಿಗೆ ಸಮನ್ಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದ್ದಾರೆ.

 

Continue Reading

LATEST NEWS

Trending