Connect with us

    BANTWAL

    ಎಐಸಿಸಿ ಸದಸ್ಯರಾಗಿ ರಮಾನಾಥ್‌ ರೈ-ಖಾದರ್‌-ಐವನ್‌ ನೇಮಕ

    Published

    on

    ಮಂಗಳೂರು: ಅಖಿಲ ಭಾರತ ಕಾಂಗ್ರೆಸ್ ಪಕ್ಷದ ನೂತನ ಸದಸ್ಯರಾಗಿ ದ.ಕ. ಜಿಲ್ಲೆಯಿಂದ ಮಾಜಿ ಸಚಿವ ಬಿ.ರಮಾನಾಥ ರೈ, ಶಾಸಕ ಯು.ಟಿ. ಖಾದರ್, ವಿಧಾನ ಪರಿಷತ್ ಸದಸ್ಯ ಡಾ. ಮಂಜುನಾಥ ಭಂಡಾರಿ ಹಾಗೂ ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್ ಡಿಸೋಜ ಅವರು ನೇಮಕವಾಗಿದ್ದಾರೆ.


    ವಿಶೇಷ ಆಹ್ವಾನಿತರಾಗಿ ಮಾಜಿ ಸಚಿವ ಅಭಯಚಂದ್ರ ಜೈನ್ ಹಾಗೂ ವಿಷಯ ಪರಿಣಿತರಾಗಿ ಪಿಸಿಸಿ ಉಪಾಧ್ಯಕ್ಷ ಪಿ.ವಿ. ಮೋಹನ್ ಅವರನ್ನು ನೇಮಿಸಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆದೇಶಿಸಿರುವುದಾಗಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    BANTWAL

    ಬಂಟ್ವಾಳ: ವೇಷ ಹಾಕಲು ಇದೆ ಎಂದು ಮನೆಯಿಂದ ತೆರಳಿದ ವ್ಯಕ್ತಿ ನಾಪತ್ತೆ

    Published

    on

    ಬಂಟ್ವಾಳ: ವೇಷ ಹಾಕಲು ಇದೆ ಎಂದು ಮನೆಯಲ್ಲಿ ಹೇಳಿ ಹೋದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ವಿಟ್ಲ ಕಸಬಾ ಗ್ರಾಮದ ಪಳಿಕೆ ಅಣ್ಣಮೂಲೆ ನಿವಾಸಿ ಸುಂದರ ನಾಯ್ಕ್‌ (55) ನಾಪತ್ತೆಯಾದವರು.ಸುಂದರ ನಾಯ್ಕ್‌ ರವರು ಕೂಲಿ ಕೆಲಸ ಮಾಡಿಕೊಂಡಿದ್ದು, ದಸರಾ ಹಬ್ಬದ ಪ್ರಯುಕ್ತ ವೇಷ ಹಾಕುತ್ತಿದ್ದರು. ಅದೇ ರೀತಿ ಅ.1 ರಂದು ಬೆಳಿಗ್ಗೆ ಪತ್ನಿಯಲ್ಲಿ ,ನಾಳೆ ನಾನು ದಸರಾ ಹಬ್ಬದ ವೇಷ ಹಾಕಲು ಇದೆ ನಾನು ವಿಟ್ಲ ಠಾಣೆಗೆ ಹೋಗಿ ಅನುಮತಿ ಪಡೆಯಲು ಇದೆಯಂದು ಹೇಳಿದ್ದರು. ಸುಂದರ ನಾಯ್ಕ ಅವರ ಪತ್ನಿ ಸಂಜೆ ಮನೆಗೆ ಬಂದಾಗ ಪತಿ ಇರಲಿಲ್ಲ.

    ದಸರಾ ಹಬ್ಬ ಇರುವುದರಿಂದ ಹಬ್ಬದಲ್ಲಿ ವೇಷ ಹಾಕಿ ಹಬ್ಬ ಮುಗಿದ ನಂತರ ಮನೆಗೆ ಬರಬಹುದೆಂದು ಭಾವಿಸಿದ್ದು ಆದರೆ ಈವರೆಗೂ ಗಂಡ ಮನೆಗೆ ಬಾರದೇ ಇರುವುದರಿಂದ ಸಂಭಂದಿಕರಲ್ಲಿ, ನೆರೆಕರೆಯವರಲ್ಲಿ ವಿಚಾರಿಸಲಾಗಿ ಎಲ್ಲಿಯೂ ಪತ್ತೆಯಾಗದೆ ಕಾಣೆಯಾಗಿದ್ದಾರೆ ಎಂದು ಪತ್ನಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

    Continue Reading

    BANTWAL

    ಬಂಟ್ವಾಳ : ರೈಲ್ವೇ ಹಳಿ ಬದಿ ರುಂ*ಡ – ಮುಂ*ಡ ಬೇರ್ಪಟ್ಟ ಸ್ಥಿತಿಯಲ್ಲಿ ಮೃ*ತದೇಹ ಪ*ತ್ತೆ

    Published

    on

    ಬಂಟ್ವಾಳ: ರೈಲು ಡಿಕ್ಕಿಯಾಗಿ ಸಾ*ವನ್ನಪ್ಪಿದ ಸ್ಥಿತಿಯಲ್ಲಿ ವ್ಯಕ್ತಿಯೋರ್ವನ ಮೃತದೇಹ ಬಿಸಿರೋಡಿನ ರೈಲ್ವೇ ಹಳಿಯಲ್ಲಿ ಪ*ತ್ತೆಯಾಗಿದೆ. ಬಂಟ್ವಾಳ ಕಾಮಾಜೆ ನಿವಾಸಿ ಕರುಣಾಕರ (35) ಸಾ*ವನ್ನಪ್ಪಿದ ವ್ಯಕ್ತಿ ಎಂದು ಗುರುತಿಸಲಾಗಿದೆ.


    ಕಳೆದ 2 ವರ್ಷಗಳ ಹಿಂದೆಯಷ್ಟೇ ಇವರಿಗೆ ಮದುವೆಯಾಗಿದ್ದು, ಒಂದು ವರ್ಷದ ಹೆಣ್ಣು ಮಗುವಿದೆ.

    ಸುಮಾರು 11 ಗಂಟೆಯ ವೇಳೆ ಬಿಜಾಪುರದಿಂದ ಮಂಗಳೂರಿಗೆ ಆಗಮಿಸುವ ರೈಲು ಡಿ*ಕ್ಕಿಯಾಗಿದೆ. ಬಿಸಿರೋಡಿನ ರೈಲ್ವೇ ಸ್ಟೇಷನ್‌ನ ಸಮೀಪದಲ್ಲಿ ಕುತ್ತಿಗೆ ಹಾಗೂ ದೇಹ ಎರಡು ಮಾರ್ಪಾಡು ಆಗಿರುವ ಸ್ಥಿತಿಯಲ್ಲಿ ಮೃ*ತದೇಹ ಪತ್ತೆಯಾಗಿದೆ. ಸಾ*ವಿನ ಕಾರಣ ಇನ್ನೂ ನಿಗೂಢವಾಗಿದ್ದು ನಿಖರ ಮಾಹಿತಿ ಲಭ್ಯಯವಾಗಿಲ್ಲ.

    ಕಾಮಾಜೆಯಿಂದ ಬಿಸಿರೋಡಿಗೆ ಕೆಲಸಕ್ಕೆ ಹೋಗುವ ವೇಳೆ ಇದೇ ರೈಲ್ವೇ ಹಳಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಎಂಬ ವಿಚಾರವನ್ನು ಕುಟುಂಬಿಕರು ತಿಳಿಸಿದ್ದಾರೆ. ಸ್ಥಳಕ್ಕೆ ಬಂಟ್ವಾಳ ನಗರ ಪೊಲೀಸ್ ಹಾಗೂ ರೈಲ್ವೇ ಇಲಾಖೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    Continue Reading

    BANTWAL

    ಚಾಲಕನಿಗೆ ಮೂರ್ಛೆ ರೋಗ..! ಕಂಬಕ್ಕೆ ಡಿಕ್ಕಿ ಹೊಡೆದ ಶಾಲಾ ಬಸ್‌ : ವಿದ್ಯಾರ್ಥಿಗಳು ಪಾರು

    Published

    on

    ಬಂಟ್ವಾಳ : ಖಾಸಗಿ ಶಾಲೆಯ ವಿದ್ಯಾರ್ಥಿಗಳನ್ನು ಕರೆದುಕೊಂಡು ಬರುತ್ತಿದ್ದ, ಬಸ್ ಚಾಲಕನಿಗೆ ಮೂರ್ಛೆ ರೋಗ ಕಾಣಿಸಿಕೊಂಡು ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಪೊಳಲಿ ಸಮೀಪದ ಬಡಕಬೈಲಿನಲ್ಲಿ ಇಂದು (ಅ.14) ಬೆಳಿಗ್ಗೆ ನಡೆದಿದೆ.


    ಬಡಕಬೈಲು ಸೈಂಟ್ ಡೊಮಿನಿಕ್ ಆಂಗ್ಲ ಮಾಧ್ಯಮ ಶಾಲೆಯ ಬಸ್ ಚಾಲಕ ಅಡ್ಡೂರು ನಿವಾಸಿ ಸುರೇಶ್ ಎಂಬುವವರಿಗೆ ಮೂರ್ಛೆ ರೋಗ ಬಾಧಿಸಿದ ಪರಿಣಾಮ ಬಸ್ ನಿಯಂತ್ರಣ ಕಳೆದುಕೊಂಡು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿಹೊಡೆದಿದೆ.

     

    ಇದನ್ನೂ ಓದಿ : ಸಂಪಾಜೆ : ಕಾರು ನಿಯಂತ್ರಣ ತಪ್ಪಿ ತೋಟಕ್ಕೆ ಪಲ್ಟಿ

     

    ಘಟನೆಯಲ್ಲಿ ಯಾವುದೇ ಅಪಾಯವಿಲ್ಲದೆ ಚಾಲಕ ಸಹಿತ ವಿದ್ಯಾರ್ಥಿಗಳು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending