LATEST NEWS
ದೇವಸ್ಥಾನದ ಅರ್ಚಕನನ್ನೇ ಹೊತ್ತೊಯ್ದ ಚಿರತೆ; 11 ದಿನದಲ್ಲಿ ಏಳನೇ ಪ್ರಕರಣ
ಮಂಗಳೂರು/ರಾಜಸ್ಥಾನ: ಚಿರತೆ ದಾಳಿಯು ರಾಜಸ್ಥಾನದ ಉದಯಪುರದಲ್ಲಿ ಮತ್ತೆ ಹೆಚ್ಚಾಗುತ್ತಿವೆ. ಇಂದು (ಸೆ.30) ಮುಂಜಾನೆ ಸ್ಥಳೀಯ ದೇವಸ್ಥಾನದ ಅರ್ಚಕನನ್ನು ಚಿರತೆ ಹೊತ್ತೊಯ್ದಿದೆ ಎಂದು ಹೇಳಲಾಗಿತ್ತು. ಬಳಿಕ ಪಕ್ಕದ ಕಾಡಿನಲ್ಲಿ ಅವರ ಮೃತದೇಹ ಪತ್ತೆಯಾಗಿದೆ.
ಕಳೆದ ಹನ್ನೊಂದು ದಿನದಿಂದ ಏಳು ಜನರ ಮೇಲೆ ಚಿರತೆ ದಾಳಿ ನಡೆಸಿರುವುದಾಗಿ ವರದಿಯಾಗಿದ್ದು, ಗ್ರಾಮದ ಜನ ಭಯಭೀತರಾಗಿದ್ದಾರೆ. ಸೆ.24 ರಿಂದ ಚಿರತೆ ಹಿಡಿಯುವ ಅಭಿಯಾನವನ್ನು ಅರಣ್ಯಾಧಿಕಾರಿಗಳು ಕೈಗೊಂಡಿದ್ದರು. ಇಲ್ಲಿಯವರೆಗೆ ನಾಲ್ಕು ಚಿರತೆಗಳನ್ನು ಸೆರೆ ಹಿಡಿದು ಉದಯಪುರ ಸಜ್ಜನ್ಗಢ ಜೈವಿಕ ಉದ್ಯಾನವನಕ್ಕೆ ಬಿಡಲಾಗಿದೆ ಎಂದು ತಿಳಿದು ಬಂದಿದೆ.
ಈ ನಡುವೆಯೂ ಮತ್ತೆ ಗ್ರಾಮದಲ್ಲಿ ಚಿರತೆ ದಾ*ಳಿ ಮುಂದುವರೆದಿದ್ದು, ಸ್ಥಳೀಯರಲ್ಲಿ ಭಯದ ವಾತಾವರಣ ಸೃಷ್ಠಿಯಾಗಿದೆ. ಹೊರಗೆ ಹೋಗುವಾಗ ಗುಂಪು ಗುಂಪಲ್ಲೇ ಹೋಗಿ, ಯಾವುದೇ ಕಾರಣಕ್ಕೂ ಒಂಟಿಯಾಗಿ ಹೋಗುವುದನ್ನು ಕಡೆಗಣಿಸಿ ಮತ್ತು ಜಾನುವಾರುಗಳನ್ನು ಮೇಯಿಸುವಾಗ ಎಚ್ಚರದಿಂದಿರುವಂತೆ ಅರಣ್ಯ ಇಲಾಖೆ ಸ್ಥಳೀಯರಲ್ಲಿ ಮನವಿ ಮಾಡಿದೆ
LATEST NEWS
ದೇವರನ್ನು ರಾಜಕೀಯದಿಂದ ದೂರವಿಡಿ ; ಸುಪ್ರೀಂ ಕೋರ್ಟ್ ಸೂಚನೆ..!
ನವ ದೆಹಲಿ : ತಿರುಪತಿ ಲಡ್ಡು ವಿವಾದದಲ್ಲಿ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ದೇವರನ್ನು ರಾಜಕೀಯದಿಂದ ಹೊರಗೆ ಇಡಿ ಎಂದು ಕೋರ್ಟ್ ಹೇಳಿದೆ. ಕನಿಷ್ಟ ಪಕ್ಷ ದೇವರುಗಳನ್ನು ರಾಜಕೀಯದಿಂದ ದೂರ ಇಡಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್, ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂದು ಸಿಎಂ ಚಂದ್ರಬಾಬು ನಾಯ್ಡು ಅವರ ಹೇಳಿಕೆಯನ್ನೇ ಪ್ರಶ್ನೆ ಮಾಡಿದೆ. ಸಿಎಂ ಮಾಡಿರುವ ಆರೋಪಕ್ಕೆ ಸಾಕ್ಷಿ ಒದಗಿಸುವಂತೆ ಕೋರ್ಟ್ ಸೂಚನೆ ನೀಡಿದೆ. ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ ಮತ್ತು ಕೆ.ವಿ ವಿಶ್ವನಾಥನ್ ಅವರ ಪೀಠವು ಸಿಎಂ ಚಂದ್ರಬಾಬು ನಾಯ್ಡು ಅವರು ನೀಡಿದ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದೆ.
ಸಾಂವಿಧಾನಕವಾಗಿ ಉನ್ನತ ಹುದ್ದೆಯಲ್ಲಿ ಇರುವ ವ್ಯಕ್ತಿಯಾಗಿ ಈ ರೀತಿ ಕೋಟ್ಯಾಂತರ ಜನರ ಭಾವನೆ ಮೇಲೆ ಪರಿಣಾಮ ಬೀರುವ ಹೇಳಿಕೆ ನೀಡಬಾರದು ಎಂದು ಪೀಠ ಹೇಳಿದೆ. ತಿರುಪತಿ ಲಡ್ಡು ತಯಾರಿಕೆಯಲ್ಲಿ ಪ್ರಾಣಿಗಳ ಕೊಬ್ಬು ಬಳಸಲಾಗಿದೆ ಎಂಬ ವಿಚಾರವಾಗಿ ನ್ಯಾಯಾಲಯದ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಲು ಕೋರಿ ಸಲ್ಲಿಸಿದ ಅರ್ಜಿಗಳನ್ನು ಪೀಠವು ವಿಚಾರಣೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ದೇವರನ್ನು ರಾಜಕೀಯದಿಂದ ದೂರ ಇಡಬೇಕು ಎಂದು ನಿರೀಕ್ಷಿಸುವುದಾಗಿ ಪೀಠ ಆಂಧ್ರ ಸಿಎಂ ಚಂದ್ರಬಾಬು ನಾಯ್ಡುಗೆ ಚಾಟಿ ಬೀಸಿದೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 3 ಕ್ಕೆ ಮುಂದೂಡಲಾಗಿದೆ.
LATEST NEWS
ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವು
ಮಂಗಳೂರು: ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುವಾಗ ಬಾವಿಗೆ ಬಿದ್ದು ವ್ಯಕ್ತಿ ಸಾ*ವನ್ನಪ್ಪಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ಕೋಟೆಕಾರುನಲ್ಲಿ ಸ್ಥಳ ಕಾಳಿಕಾಂಬ ದೇವಸ್ಥಾನದ ಬಳಿಯ ನೆತ್ತಿಲ ಎಂಬಲ್ಲಿ ನಡೆದಿದೆ.
ನವೀನ್ ಬೆಳ್ಳಾಡ(48) ಮೃತ ವ್ಯಕ್ತಿ. ನವೀನ್ ಅವರು ಭಾನುವಾರ ಸಂಜೆ ಮನೆಯ ಹಿಂಭಾಗದ ಬಾವಿಯ ಕಾಂಪೌಂಡ್ ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಆಯ ತಪ್ಪಿ ಬಾವಿಗೆ ಬಿದ್ದು ಮೃ*ತಪಟ್ಟಿದ್ದಾರೆ. ಮನೆಯೊಳಗೆ ನವೀನ್ ಕಾಣದಾಗ ಪತ್ನಿ ಮತ್ತು ಮಕ್ಕಳು ಹುಡುಕಾಡಿ ಬಾವಿಯ ಬಳಿ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.
ಸ್ಥಳೀಯರು ಸೇರಿ ನವೀನ್ ರನ್ನು ಬಾವಿಯಿಂದ ಮೇಲಕ್ಕೆತ್ತಿದ್ದು ಅದಾಗಲೇ ಅವರು ಮೃ*ತಪಟ್ಟಿದ್ದರು ಎನ್ನಲಾಗಿದೆ. ಸೆಂಟ್ರಿಗ್ ಕೆಲಸ ಮಾಡುತ್ತಿದ್ದ ನವೀನ್ ಅವರಿಗೆ ದ್ವಿತೀಯ ಪಿಯುಸಿ ವ್ಯಾಸಂಗ ಮಾಡುತ್ತಿರುವ ಪುತ್ರಿ ಮತ್ತು ನಾಲ್ಕನೇ ತರಗತಿ ಓದುತ್ತಿರುವ ಪುತ್ರನಿದ್ದಾನೆ. ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
DAKSHINA KANNADA
ಕಾರ್ಕಳದಲ್ಲಿ ಭೀಕರ ಅಪಘಾತ; ತಂದೆ ಸಹಿತ ಮೂರು ಮಕ್ಕಳ ದುರ್ಮರಣ
ಕಾರ್ಕಳ : ಕಾರ್ಕಳ – ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಇಂದು (ಸೆ.30) ಭೀಕರ ಅಪಘಾತ ಸಂಭವಿಸಿದೆ. ಮಿನಿ ಲಾರಿ ಮತ್ತು ಬೈಕ್ ಮುಖಾಮುಖಿಯಾಗಿ ಡಿಕ್ಕಿ ಹೊಡೆದು ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿದ್ದಾರೆ.
ವೇಣೂರಿನಿಂದ ನಲ್ಲೂರು ಕಡೆಗೆ ಬರುತ್ತಿದ್ದ ಬೈಕ್ಗೆ ಕಾರ್ಕಳದಿಂದ ಗುರುವಾಯನಕೆರೆಯತ್ತ ಸಾಗುತ್ತಿದ್ದ ಲಾರಿ ಡಿಕ್ಕಿ ಹೊಡೆದಿದೆ.
ಬೈಕ್ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳಿದ್ದರು. ತಂದೆ ಸುರೇಶ್ ಆಚಾರ್ಯ (36), ಮಕ್ಕಳಾದ ಸಮಿಕ್ಷಾ (7) ಸುಶ್ಮಿತಾ (5) ಸುಶಾಂತ್ (2) ಮೃತಪಟ್ಟವರು. ತಾಯಿ ಮೀನಾಕ್ಷಿ (32) ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- LATEST NEWS5 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ
- LATEST NEWS6 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS6 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS6 days ago
ಬಜೆಟ್ ಬೆಲೆಯ ಐಫೋನ್ ಹುಡುಕುತ್ತಿದ್ದೀರಾ? ಸದ್ಯದಲ್ಲೇ ಬರಲಿದೆ iPhone SE4