DAKSHINA KANNADA
ವಾಗೀಶ್ವರಿ ಯಕ್ಷಗಾನ: ಶತಮಾನೋತ್ಸದೊಳಗೊಂದು ರಜತ ಸಂಭ್ರಮ
ಮಂಗಳೂರು: ಶತಮಾನೋತ್ಸವದ ಕಾರ್ಯಕ್ರಮದೊಳಗೊಂದು ರಜತ ಸಂಭ್ರಮಾಚರಣೆ ಮಾಡುತ್ತಿರುವ ವಾಗೀಶ್ವರೀ ಕಲಾವರ್ಧಕ ಸಂಘದ ಪೂರ್ವ ಸೂರಿಗಳು ಸ್ಮರಣೀಯರು. ಕುಡುಮಲ್ಲಿಗೆಯವರ ಅಪೂರ್ವ ಸಾಹಿತ್ಯ ಸಂಗ್ರಹ ಅಭಿನಂದನೀಯ.
ಬಾಲ್ಯದಲ್ಲಿ ಮಹಾಮಾಯಾ ದೇವಸ್ಥಾನದ ಅಂಗಣದಲ್ಲಿ ಆಟವಾಡುತ್ತಿದ್ದಾಗ ಹಿರಿಯ ಯಕ್ಷಗಾನ ಕಲಾವಿದರು ತಾಳಮದ್ದಳೆ ನಡೆಸುತ್ತಿದ್ದ ದಿನಗಳನ್ನು ನೆನಪಿನಿಂದ ಪುಳಕ ಗೊಂಡಿದ್ದೇನೆ ” ಎಂದು ಆಚಾರ್ಯ ಮಠದ ಪಂಡಿತ್ ನರಸಿಂಹ ಆಚಾರ್ಯರು ಅಧ್ಯಕ್ಷೀಯ ಭಾಷಣದಲ್ಲಿ ನುಡಿದರು.
ಕರ್ನಾಟಕ ಯಕ್ಷಗಾನ ಅಕಾಡಮಿಯ ಸಹಯೋಗದಲ್ಲಿ 25 ವಾರಗಳಿಂದ ನಡೆಯುತ್ತಿರುವ ವಾಗೀಶ್ವರೀ ಯಕ್ಷಗಾನ ಕಲಾವರ್ಧಕ ಸಂಘದ ಸಂಮಾನ – ಸಂಸ್ಮರಣೆ – ತಾಳಮದ್ದಳೆ ಕೂಟ ಕಾರ್ಯಕ್ರಮದ ಸಂಯೋಜಕರನ್ನು ,ಕಲಾವಿದರನ್ನು ನಾಗೇಶ್ ಪ್ರಭು ಮತ್ತು ಮಕ್ಕಳು ಭಗವದ್ಗೀತೆ ಯ ಪ್ರತಿಗಳನ್ನು ನೀಡಿ ಗೌರವಿಸಿದರು.
ಮಹಾಮಾಯಾ ದೇವಸ್ಥಾನದ ಟ್ರಸ್ಟಿ ಕೆ.ಪ್ರಕಾಶ್ ಕಾಮತ್ ಹಾಗೂ ಸುರಭಿ ಸಂಸ್ಥೆಯ ಸುಭಾಶ್ಚಂದ್ರ ಪ್ರಭು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.
ಸಾಂತೂರು ಸಂಸ್ಮರಣೆ
ಪ್ರಧಾನ ಕಾರ್ಯದರ್ಶಿ ಪಿ.ಸಂಜಯ ಕುಮಾರ್ ರಾವ್ ಅವರು ಹಿರಿಯ ಅರ್ಥಧಾರಿ , ಶಿಕ್ಷಕರಾಗಿದ್ದ ಕೀರ್ತಿಶೇಷ ಸಾಂತೂರು ಸದಾಶಿವ ರಾವ್ ಅವರು ಯಕ್ಷಗಾನ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ಮಾತುಗಾರಿಕೆಯ ಸೊಗಡನ್ನು ನೆನಪಿಸಿದರು.
ಕುಡುಮಲ್ಲಿಗೆಯವರಿಗೆ ವಾಗೀಶ್ವರೀ ಸಂಮಾನ
ಯಕ್ಷಗಾನ ಅರ್ಥಧಾರಿ, ಕವಿ , ಸಾಹಿತಿ, ಪತ್ರಕರ್ತ ,ವಿಮರ್ಷಕ ಹಾಗೂ ಪುರಸಣ ಮಾಹಿತಿಗಳನ್ನೊಳಗೊಂಡ ಇಪ್ಪತ್ತೈದು ಕೃತಿ ರಚಿಸಿದ ಕುಡುಮಲ್ಲಿಗೆ ಕೃಷ್ಣ ಶೆಟ್ಟಿ ಅವರಿಗೆ ವಾಗೀಶ್ವರೀ ಸಂಮಾನ- 25 ನೀಡಿ ಗೌರವಿಸಲಾಯಿತು.
ಪ್ರಧಾನ ಸಂಚಾಲಕ ಕದ್ರಿ ನವನೀತ ಶೆಟ್ಟಿಯವರು ಅಭಿನಂದಿಸಿದರು.ಅಶೋಕ ಬೋಳೂರು ಸಂಮಾನಪತ್ರ ವಾಚಿಸಿದರು. ಶೋಭಾ ಐತಾಳ್ ನಿರೂಪಿಸಿದರು.
ಸಂಘದ ಅಧ್ಯಕ್ಷ ಶ್ರೀನಾಥ್ ಪ್ರಭು , ಉಪಾಧ್ಯಕ್ಷೆ ಪ್ರಪುಲ್ಲಾ ನಾಯಕ್ , ಕೋಶಾಧಿಕಾರಿ ಶಿವಪ್ರಸಾದ್ ಪ್ರಭು ಉಪಸ್ಥಿತರಿದ್ದರು.
ಮಾಯಾ ರಾಮ ತಾಳಮದ್ದಳೆ
ಶ್ರೀ ರಾಮ ಚರಿತಾಮೃತ ಸರಣಿಯ ಅಂಗದ ಸಂಧಾನ ಪ್ರಸಂಗದ ಉತ್ತರಾರ್ಧ ಹಾಗೂ ನಾಗಾಸ್ತ್ರ ಕುಂಭಕರ್ಣ ಕಾಳಗ ಪ್ರಸಂಗದ ಪೂರ್ವಾರ್ಧದಲ್ಲಿರುವ ” ಮಾಯಾ ರಾಮ” ತಾಳಮದ್ದಳೆ ಸಂಘದ ಕಲಾವಿದರಿಂದ ಜರಗಿತು.
DAKSHINA KANNADA
ಕಡೆ ಕ್ಷಣ ವರನಿಂದ ತಾಳಿ ಕಟ್ಟಲು ನಿರಾಕರಿಸಿದ ವಧು; ಮುರಿದು ಬಿದ್ದ ಮದುವೆ
ಉಪ್ಪಿನಂಗಡಿ: ಇತ್ತೀಚಿನ ದಿನಗಳಲ್ಲಿ ಕಡೆ ಕ್ಷಣದಲ್ಲಿ ಅದೆಷ್ಟೋ ಮದುವೆಗಳು ಮುರಿದು ಬಿದ್ದ ಘಟನೆ ನಡೆದಿದೆ. ಹಾಗೆಯೇ ಇಲ್ಲೊಂದು ಮದುವೆ ಮಂಟಪದಲ್ಲಿ ಕೊನೆಯ ಕ್ಷಣ ವರನಿಂದ ತಾಳಿ ಕಟ್ಟಲು ವಧು ನಿರಾಕರಸಿದ ಕಾರಣ ಮದುಮೆ ಮುರಿದು ಬಿದ್ದ ಘಟನೆ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ನಡೆದಿದೆ.
ಕೊಣಾಲು ಗ್ರಾಮದ ಕೋಲ್ಪೆ ದಿ। ಬಾಬು ಗೌಡ ಅವರ ಪುತ್ರ ಉಮೇಶ ಅವರ ಮದುವೆಯು ಬಂಟ್ವಾಳ ತಾಲೂಕು ಕುಳ ಗ್ರಾಮದ ಕಂಟ್ರಮಜಲು ದಿ। ಕೊರಗಪ್ಪ ಗೌಡ ಅವರ ಪುತ್ರಿ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಎ.26 ರಂದು ಬೆಳಗ್ಗೆ 11.35ರ ಮೂಹೂರ್ತದಲ್ಲಿ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ಮದುವೆ ನಿಗದಿಯಾಗಿತ್ತು. ಅದರಂತೆ ವರ ಹಾಗೂ ವಧುವಿನ ಕಡೆಯವರು ಮದುವೆಯ ದಿಬ್ಬಣದಲ್ಲಿ ಬಂದಿದ್ದರು. ವಧು ದಾರೆ ಸೀರೆ ಹಾಕಿ ಪರಸ್ಪರ ಹೂಮಾಲೆ ಕೂಡ ಹಾಕಿದ್ದರು. ಆದರೆ ತಾಳಿ ಕಟ್ಟಲು ಮುಂದಾದಗ ನನಗೆ ಈ ಮದುವೆ ಇಷ್ಟ ವಿಲ್ಲ ಎಂದು ವಧು ಹೇಳಿದ್ದಾಳೆ.
ಇದರಿಂದ ಎರಡೂ ಕಡೆಯವರು ಕಂಗಾಲಾಗಿ ವಧುವಿನ ಮನವೊಲಿಕೆಗೆ ಮುಂದಾದರು. ಆದರೆ ವಧು ಒಪ್ಪಲಿಲ್ಲ. ಬಳಿಕ ಎರಡೂ ಕಡೆ ಅವರು ಉಪ್ಪಿನಂಗಡಿ ಪೊಲೀಸ್ ಠಾಣೆಗೆ ತೆರಳಿದರು.
ಔತಣ ಕೂಟಕ್ಕೆ ಸಿದ್ಧತೆ:
ವರನ ಮನೆಯಲ್ಲಿ ಮಧ್ಯಾಹ್ನದ ಔತಣ ಕೂಟಕ್ಕೆ ಸುಮಾರು 500 ಜನರಿಗೆ ಮಾಂಸಾಹಾರಿ ಊಟ ತಯಾರಾಗಿತ್ತು. 1 ಸಾವಿರದಷ್ಟು ಐಸ್ಕ್ರೀಮ್ ವ್ಯವಸ್ಥೆಯನ್ನು ಮಾಡಲಾಗಿತ್ತು. ಮದುವೆ ಮುರಿದು ಬಿದ್ದ ಕಾರಣ ಲಕ್ಷಾಂತರ ರೂಪಾಯಿ ನಷ್ಟವಾಗಿದೆ.
ಮತ್ತೆ ಮದುವೆಯಾಗಲು ಒಪ್ಪಿದ ವಧು:
ಪೊಲೀಸ್ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಮತ್ತೆ ಮದುವೆ ಆಗಲು ಒಪ್ಪಿದ್ದರು. ಆದರೆ ಆಗ ವರ ಉಮೇಶ್ ಅವರು ಮದುವೆ ಆಗಲು ನಿರಾಕರಿಸಿದರು. ಇದರಿಂದಾಗಿ ಎರಡೂ ಕಡೆಯವರು ಪೊಲೀಸ್ ಠಾಣೆಯಲ್ಲಿ ಮುಚ್ಚಳಿಕೆ ಬರೆಯಿಸಿಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.
BANTWAL
ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!
ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.
ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.
DAKSHINA KANNADA
ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ
ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.
ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು
ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.
- FILM5 days ago
ಸುದೀಪ್ ಮಗಳು ನಾಯಕಿಯಾಗಿ ಎಂಟ್ರಿ… ಸ್ಮೈಲ್ ಗುರು ರಕ್ಷಿತ್ಗೆ ಜೋಡಿಯಾದ ಜೆರುಶಾ
- FILM5 days ago
‘ಬಘೀರ’ ಸಿನೆಮಾ ಶೂಟಿಂಗ್ ವೇಳೆ ಅವಘಡ.. ರೋರಿಂಗ್ ಸ್ಟಾರ್ ಆಸ್ಪತ್ರೆ ದಾಖಲು
- FILM6 days ago
ವಿಚ್ಛೇದನದ ಸುದ್ದಿಗೆ ಉತ್ತರ ಕೊಟ್ಟ ಐಶ್ – ಅಭಿ ಆ್ಯನಿವರ್ಸರಿ ಫೋಟೋ!
- chikkamagaluru5 days ago
ಎಟಿಎಂ ಮೆಷಿನ್ಗೆ ಬೆಂಕಿ ಅವಘಡ..! ಸುಟ್ಟು ಕರಕಲಾದ ಲಕ್ಷಾಂತರ ರೂಪಾಯಿ..!!