bengaluru
ಕಾಂತಾರ ಚಿತ್ರಕ್ಕೆ 1 ವರ್ಷ-ನಾಳೆ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್
ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ. ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.
ಜಗತ್ತೆ ನಿಬ್ಬೆರಗಾಗಿ ನೋಡಿದ ಕಾಂತಾರ ಸಿನೆಮಾ ರಿಲೀಸ್ ಆಗಿ ನಾಳೆಗೆ ಭರ್ತಿ 1 ವರ್ಷ.
ಇದೇ ಖುಷಿಯಲ್ಲಿ ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಹೊಸ ಘೋಷಣೆಯಾಗಿದ್ದು ಸೆ.30ರಂದು ಕಾಂತಾರ ಚಿತ್ರದ ‘ವರಾಹ ರೂಪಂ’ ವಿಡಿಯೋ ಸಾಂಗ್ ರಿಲೀಸ್ ಮಾಡುವ ಪ್ಲಾನ್ ನಡೆಯುತ್ತಿದೆ.
ಸಣ್ಣ ಬಜೆಟ್ ನಲ್ಲಿ ಕಾಂತಾರ ಸಿನೆಮಾ ನಿರ್ಮಾಣವಾಗಿದ್ದು ಚಿತ್ರ ಗಳಿಸಿದ್ದು ಮಾತ್ರ ಬರೋಬ್ಬರಿ 400 ಕೋಟಿಗಿಂತಲೂ ಅಧಿಕ ಮೊತ್ತ.
ರಿಷಬ್ ಶೆಟ್ಟಿ, ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಸೇರಿ ಅನೇಕ ಕಲಾವಿದರು ಕಾಂತಾರ ಚಿತ್ರದಲ್ಲಿ ನಟಿಸಿ ಪ್ರತಿಯೊಬ್ಬ ಸಿನಿ ರಸಿಕರ ಮನದಲ್ಲಿ ಹಚ್ಚೊತ್ತಿದ್ರು.
ನಿರೀಕ್ಷೆಗೂ ಮೀರಿ ನೇಮು-ಫೇಮು ಎಲ್ಲವೂ ಸಿಕ್ಕಿತು.
ಇದೀಗ ಚಿತ್ರ ಬಿಡುಗಡೆಯಾಗಿ ಒಂದು ವರ್ಷ ಆಗಿದೆ. ಈ ಹಿನ್ನಲೆ ನಾಳೆ ಸೆ. 30 ರಂದು ಬೆಳಿಗ್ಗೆ ಕಾಂತಾರ ಚಿತ್ರದಲ್ಲಿ ಭರ್ಜರಿ ಯಶಸ್ಸು ಕಂಡ ‘ವರಾಹ ರೂಪಂ’ ಹಾಡಿನ ವಿಡಿಯೋ ವರ್ಷನ್ ರಿಲೀಸ್ ಆಗಲಿದೆ.
ಈ ಕುರಿತು ಹೊಂಬಾಳೆ ಫಿಲ್ಮ್ಸ್ ಮಾಹಿತಿ ಹಂಚಿಕೊಂಡಿದೆ.
bangalore
ನ. 29ಕ್ಕೆ ಮಳೆ ಹುಡುಗಿ ಪೂಜಾ ಗಾಂಧಿ ಮದುವೆ…
ಬೆಂಗಳೂರು : ಮಳೆ ಹುಡುಗಿ ಪೂಜಾ ಗಾಂಧಿ ಕೊನೆಗೂ ಮದುವೆ ಆಗುತ್ತಿದ್ದಾರೆ. ಬಹು ದಿನಗಳ ಗೆಳೆಯ ಉದ್ಯಮಿ ವಿಜಯ್ ಜೊತೆಗೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ, ಮಕ್ಕಳು, ಸಂಸಾರ ಅನ್ನುವ ವಿಚಾರದ ಬಗ್ಗೆ ಪೂಜಾ ಯೋಚನೆ ಮಾಡಿದ್ದರು. ಆದರೆ ಅದು ಈಗಲೇ ಅಲ್ಲ ಅನ್ನುವ ಮಾತನ್ನು ಹೇಳಿಕೊಳ್ಳುತ್ತಿದ್ದರು. ಅದರ ಮಧ್ಯೆ ಆನಂದ್ ಗೌಡ ಜೊತೆಗೆ ನಿಶ್ಚಿತಾರ್ಥವೂ ಆಗಿತ್ತು. ಅದು ಅಷ್ಟೇ ಬೇಗ ಮುರಿದು ಬಿತ್ತು. ಆದರೆ ಇದೀಗ ಪೂಜಾ ಗಾಂಧಿ ದಾಂಪತ್ಯ ಜೀವನಕ್ಕೆ ಕಾಲಿಡಲು ಡಿಸೈಡ್ ಮಾಡಿದ್ದಾರೆ.
ಇದೇ ನವೆಂಬರ್ 29ರಂದು ಬೆಂಗಳೂರಿನ ಯಲಂಹಕದ ಸಮೀಪ ನಟಿ ಪೂಜಾ ಗಾಂಧಿ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದಾರೆ. ವಿಶೇಷ ಅಂದರೆ, ಮಂತ್ರ ಮಾಂಗಲ್ಯ ಪದ್ಧತಿಯ ಪ್ರಕಾರ ಈ ಮದುವೆ ನಡೆಯಲಿದೆ ಎಂದು ವರದಿಯಾಗಿದೆ.ಪೂಜಾಗಾಂಧಿ ಮೂಲತ: ಉತ್ತರ ಪ್ರದೇಶದ ಮೀರತ್ನವರು. ಪಂಜಾಬಿ ಕುಟುಂಬದಲ್ಲಿ ಜನಿಸಿದ್ದ ಪೂಜಾ ಗಾಂಧಿ ದೆಹಲಿಯಲ್ಲಿ ನೆಲೆಸಿದ್ದರು. ಜಾಹೀತಾರು ಹಾಗೂ ಮಾಡಲಿಂಗ್ ಮೂಲಕ ಜನಪ್ರಿಯರಾಗಿದ್ದ ನಟಿ ‘ಮುಂಗಾರು ಮಳೆ’ ಮೂಲಕ ಕನ್ನಡಕ್ಕೆ ಪಾದಾರ್ಪಣೆ ಮಾಡಿದ್ದರು. ಕನ್ನಡ ಚಿತ್ರರಂಗಕ್ಕೆ ಕಾಲಿಡುತ್ತಿದ್ದಂತೆ ಒಂದರ ಹಿಂದೊಂದರಂತೆ ಯಶಸ್ಸು ಇವರನ್ನು ಹಿಂಬಾಲಿಸಿಕೊಂಡು ಬಂದಿತ್ತು.
2012ರಲ್ಲಿ ಪೂಜಾ ಗಾಂಧಿ ಅವರಿಗೆ ಉದ್ಯಮಿ ಆನಂದ್ ಗೌಡ ಜತೆ ನಿಶ್ಚಿತಾರ್ಥವಾಗಿ, ನಂತರ ಮುರಿದು ಬಿದ್ದಿತ್ತು. ಆದರೆ, ಈಗ ಹರಿದಾಡುತ್ತಿರುವ ಮದುವೆ ವಿಷಯದ ಬಗ್ಗೆ ನಟಿ ಎಲ್ಲಿಯೂ ಮಾಹಿತಿ ಹಂಚಿಕೊಂಡಿಲ್ಲ.ಕನ್ನಡವನ್ನು ಕಲಿತು ಕನ್ನಡಿಗರಿಂದ ಬೇಷ್ ಎನಿಸಿಕೊಂಡಿರೋ ಮುಂಗಾರು ಮಳೆ ಬೆಡಗಿ ಹಾಗೂ ವಿಜಯ್ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಯಲ್ಲಿದ್ದರು, ಇದೀಗ ಮದುವೆಗೆ ರೆಡಿ ಆಗಿದ್ದಾರೆ. ಕನ್ನಡ ಕಲಿತು ಕನ್ನಡಿಗನನ್ನು ಮದುವೆಯಾಗುವ ಮೂಲಕ ಕರ್ನಾಟಕದ ಸೊಸೆ ಆಗಲು ಪೂಜಾ ಸಿದ್ಧವಾಗುತ್ತಿದ್ದಾರೆ ಎನ್ನಲಾಗಿದೆ
bengaluru
ನೇಜಾರು ಕೊಲೆ ಪ್ರಕರಣದ ಆರೋಪಿ ಪರಪ್ಪನ ಅಗ್ರಹಾರ ಜೈಲಿಗೆ ಶಿಪ್ಟ್
ಉಡುಪಿ: ಪ್ರಾಣ ಭಯ ಹಾಗೂ ಭದ್ರತೆಯ ಹಿನ್ನೆಲೆಯಲ್ಲಿ ಹಿರಿಯಡ್ಕ ಜಿಲ್ಲಾ ಕಾರಾಗೃಹದಲ್ಲಿದ್ದ ನೇಜಾರಿನ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣದ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಇಂದು ಸ್ಥಳಾಂತರಿಸಲಾಗಿದೆ.
ನ.22ರಿಂದ ಹಿರಿಯಡ್ಕ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಪ್ರವೀಣ್ ಚೌಗುಲೆಯನ್ನು ಗಂಭೀರ ಪ್ರಕರಣದ ಕಾರಣಕ್ಕೆ ಸುರಕ್ಷತೆಯ ಹಿನ್ನೆಲೆಯಲ್ಲಿ ಪ್ರತ್ಯೇಕ ಸೆಲ್ ಮತ್ತು ವಿಶೇಷ ಭದ್ರತೆಯೊಂದಿಗೆ ಇರಿಸಲಾಗಿತ್ತು. ಜಿಲ್ಲಾ ಕಾರಾಗೃಹದಲ್ಲಿನ ಭದ್ರತೆ ಕೊರತೆಯ ಹಿನ್ನೆಲೆಯಲ್ಲಿ ಆತನನ್ನು ಬೇರೆ ಜೈಲಿಗೆ ಸ್ಥಳಾಂತರಿಸುವ ಬಗ್ಗೆ ಜೈಲಾಧಿಕಾರಿಗಳು ಉಡುಪಿ ನ್ಯಾಯಾಲಯದಿಂದ ಅನುಮತಿಯನ್ನು ಪಡೆದುಕೊಂಡಿದ್ದರು. ಇದೀಗ ಬಂಧಿಖಾನೆ ಇಲಾಖೆಯ ಮೇಲಾಧಿಕಾರಿಗಳ ಅನುಮತಿ ಹಾಗೂ ನಿರ್ದೇಶನದಂತೆ ಇಂದು ಬೆಳಗ್ಗೆ ಪೊಲೀಸ್ ಭದ್ರತೆಯಲ್ಲಿ ಆರೋಪಿ ಪ್ರವೀಣ್ ಚೌಗುಲೆಯನ್ನು ಬೆಂಗಳೂರಿನ ಕಾರಾಗೃಹಕ್ಕೆ ಕೊಂಡೊಯ್ಯಲಾಯಿತು. ಸಂಜೆ ವೇಳೆ ಬೆಂಗಳೂರು ತಲುಪಿದ್ದು ಅಲ್ಲಿನ ಕೇಂದ್ರ ಕಾರಾಗೃಹಕ್ಕೆ ಆರೋಪಿಯನ್ನು ಹಸ್ತಾಂತರಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
bangalore
‘ಕಾಂತಾರ-1’ ಫಸ್ಟ್ ಲುಕ್ ಟೀಸರ್ 7 ಭಾಷೆಗಳಲ್ಲಿ ಬಿಡುಗಡೆ..!
ಕುಂದಾಪುರ: ತುಳುನಾಡ ಮಣ್ಣಿನ ಶಕ್ತಿ ದೈವಾರಾಧನೆ ಮಹತ್ವವನ್ನು ಇಡೀ ಜಗತ್ತಿಗೆ ತೋರಿಸಿದ ಚಿತ್ರ ಕಾಂತಾರ ನಟ ರಿಷಬ್ ಶೆಟ್ಟಿ ನಟಿಸಿ, ನಿರ್ದೇಶನ ಮಾಡಿರುವ ಈ ಸೂಪರ್ ಹಿಟ್ ಸಿನಿಮಾದ ಪ್ರೀಕ್ವೆಲ್ ಅಂದರೆ ಎರಡನೇ ಭಾಗದ ಫಸ್ಟ್ ಲುಕ್ ಹಾಗೂ ಟೀಸರ್ ಸೋಮವಾರ ಬಿಡುಗಡೆಯಾಗಿದೆ.
ಇಂದು ಬೆಳಿಗ್ಗೆ ಕುಂದಾಪುರದ ಕುಂಭಾಶಿ ಆನೆಗುಡ್ಡೆ ಶ್ರೀ ವಿನಾಯಕ ಸನ್ನಿಧಿಯಲ್ಲಿ ಸಿನಿಮಾದ ಮೂಹೂರ್ತ ಕಾರ್ಯಕ್ರಮ ನೆರವೇರಿದೆ. ಮುಹೂರ್ತದ ಜೊತೆಗೆ ಫಸ್ಟ್ ಲುಕ್ ಹಾಗೂ ಟೀಸರ್ ನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ಟೀಸರ್ ಕನ್ನಡ, ಇಂಗ್ಲಿಷ್, ಹಿಂದಿ, ತಮಿಳು, ತೆಲುಗು, ಮಲಯಾಳಂ ಹಾಗೂ ಬಂಗಾಳಿ ಭಾಷೆಯಲ್ಲಿ ಬಿಡುಗಡೆಯಾಗಿದ್ದು, ಟೀಸರ್ ನ್ನು ಹೊಂಬಾಳೆ ಫಿಲ್ಮ್ಸ್ ತನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ಹಂಚಿಕೊಂಡಿದೆ. ಯುಟ್ಯೂಬ್ನಲ್ಲಿ ಟೀಸರ್ ಬಿಡುಗಡೆಯಾಗಿದ್ದು, ಕಾಂತಾರ ಪ್ರೀಕ್ವೆಲ್ ಕತೆ ಕದಂಬರ ಕಾಲಕ್ಕೆ ಕರೆದುಕೊಂಡು ಹೋಗಲಿದೆ ಎಂಬುದು ಬಹಿರಂಗವಾಗಿದೆ.
ದೈವಿಕ ಭೂಮಿ ಕಡೆಗೆ ಹೆಜ್ಜೆ ಎಂದು ಕಾಂತಾರ ಪ್ರೀಕ್ವೆಲ್ ಅನ್ನು ಹೊಂಬಾಳೆ ಬಣ್ಣಿಸಿದೆ. ಟೀಸರ್ ಜೊತೆಗೆ ಚಿತ್ರದ ಫಸ್ಟ್ ಲುಕ್ ಕೂಡ ಇಂದು ಬಿಡುಗಡೆಯಾಗಿದ್ದು, ಫಸ್ಟ್ ಲುಕ್ ನಲ್ಲಿ ರಿಷಬ್ ಶೆಟ್ಟಿಯವರು ರೌದ್ರಾವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಅವತಾರ ಅಭಿಮಾನಿಗಳಲ್ಲಿ ಕುತೂಹಲವನ್ನು ಹೆಚ್ಚುವಂತೆ ಮಾಡಿದೆ. ಚಿತ್ರದಲ್ಲಿ ರಿಷಬ್ ಶೆಟ್ಟಿ ಅವರು ರೌದ್ರವತಾರದಲ್ಲಿ ಅಚ್ಚರಿ ಮೂಡುವಂತೆ ಕಂಡು ಬಂದಿದ್ದಾರೆ. ಶಿವನ ಅವತಾರದ ಮತ್ತೊಂದು ರೂಪವಾಗಿ ರಿಷಬ್ ಬದಲಾಗಿದ್ದಾರೆ. ಒಂದು ಕೈಯಲ್ಲಿ ತ್ರಿಶೂಲ ಮತ್ತೊಂದು ಕೈಯಲ್ಲಿ ಜಮದಗ್ನಿ ಕೊಡಲಿಯನ್ನು ಹಿಡಿದುಕೊಂಡಿರುವುದು ಕಂಡು ಬಂದಿದ್ದು, ಈ ಪೋಸ್ಟರ್ ಹಲವು ಕುತೂಹಲವನ್ನು ಸೃಷ್ಟಿಸಿದೆ. ಕಾಂತಾರ’ ಚಿತ್ರವನ್ನು ‘ಹೊಂಬಾಳೆ ಫಿಲ್ಮ್ಸ್’ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಾಣ ಮಾಡಿದ್ದರು. ಸಣ್ಣ ಬಜೆಟ್ನಲ್ಲಿ ಸಿದ್ಧವಾದ ಈ ಸಿನಿಮಾ, ದೊಡ್ಡ ಮಟ್ಟದಲ್ಲಿ ಗೆಲುವು ಕಂಡಿತು. ಈಗ ‘ಕಾಂತಾರ 2’ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಲು ತಂಡ ನಿರ್ಧರಿಸಿದೆ. ರಿಷಬ್ ಶೆಟ್ಟಿ ಅವರು ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ.
- FILM7 days ago
ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ ನೋಡಿ ‘ಕತ್ತೆ’ ಎಂದ ಕಿಚ್ಚ ಸುದೀಪ
- bengaluru6 days ago
ಇನ್ಸ್ಟಾಗ್ರಾಂನಲ್ಲಿ 11 ಸಾವಿರ ಫಾಲೋವರ್ಸ್ ಕಳೆದುಕೊಂಡ ಬಿಗ್ ಬಾಸ್ ಸ್ಪರ್ಧಿ ಸಂಗೀತಾ
- LATEST NEWS7 days ago
36 ಮಂದಿ ಶಬರಿಮಲೆ ಯಾತ್ರಿಕರನ್ನು ಒಯ್ಯುತ್ತಿದ್ದ ಬಸ್ ಪಲ್ಟಿ-7ಮಂದಿಗೆ ಗಾಯ..!
- DAKSHINA KANNADA6 days ago
Breaking news :ಮಂಗಳೂರಿನ ಹೊಟೇಲ್ ರೂಂನಲ್ಲಿ ಬೆಂಕಿ-ಒಳಗಿದ್ದ ವ್ಯಕ್ತಿ ಸಾವು