Connect with us

    LATEST NEWS

    ಇಂದು ಮಂಗಳೂರಿನವರನ್ನು ಕಂಡರೆ ಛೀ ಥೂ ಅಂತಾರೆ: ಪತ್ರಕರ್ತ ದಿನೇಶ್‌ ಅಮೀನ್‌ ಮಟ್ಟು

    Published

    on

    ಮಂಗಳೂರು: ಇಂದು ಮಂಗಳೂರಿನವರಾ, ಉಡುಪಿಯವರು ಅಂದಾಕ್ಷಣ ನಿಮ್ಮ ಊರಲ್ಲಿ ಲವ್‌ ಜಿಹಾದ್‌, ಹಿಜಾಬ್, ಹಲಾಲ್, ಜಡ್ಕಾ, ಛೀ …ಥೂ ಹೇಳ್ತಾರೆ. ನಮಗೆ ನೋವಾಗುತ್ತದೆ ಎಂದು ಹಿರಿಯ ಪತ್ರಕರ್ತ, ಅಂಕಣಕಾರ ದಿನೇಶ್‌ ಅಮೀನ್‌ ಮಟ್ಟು ಖೇದ ವ್ಯಕ್ತಪಡಿಸಿದರು.


    ಪತ್ರಕರ್ತ ದಿನೇಶ್ ಅಮೀನ್‌ ಮಟ್ಟು ಅವರ ಸಂಪಾದನೆಯ ಮುಂಗಾರು ಪತ್ರಿಕೆಯ ಸಂಪಾದಕ ವಡ್ಡರ್ಸೆ ರಘುರಾಮ ಶೆಟ್ಟರ ಬರೆಹಗಳ ಸಂಕಲನ ‘ಬೇರೆಯೇ ಮಾತು’ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಅವರು ಮಾತನಾಡುತ್ತಿದ್ದರು.


    ಇಂದು ಬೆಳಗ್ಗೆ ಪತ್ರಿಕೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಓದುತ್ತಿದ್ದಾಗ ಅನಿಸಿದ್ದು ಹೊಸ ದಕ್ಷಿಣ ಮತ್ತು ಹೊಸ ಉಡುಪಿ ಜಿಲ್ಲೆಯನ್ನು ನೋಡುತ್ತಿದ್ದೇವೆ ಎಂದು,

    ಐದು ಬ್ಯಾಂಕ್‌ ಸ್ಥಾಪಿಸಿದ, ಸಾವಿರಾರು ಹೊಟೇಲ್ ಕಟ್ಟಿಸಿದ ಜಿಲ್ಲೆ, ಅತ್ಯಂತ ಸಾಕ್ಷರತೆ ಹೊಂದಿರುವ, ಅಂಡರ್‌ ವಲ್ಡ್‌ನಿಂದ ಮಿಸ್‌ ವಲ್ಡ್‌, ಸ್ಯಾಂಡಲ್‌ವುಡ್‌ನಿಂದ ಬಾಲಿವುಡ್‌ವರೆಗೆ ಎಲ್ಲೆಂದರಲ್ಲಿ ಖ್ಯಾತಿ ಪಡೆದ ಜಿಲ್ಲೆ.

    ಮುಂಗಾರಿನ ಗೈರು ಹಾಜರಿಯಲ್ಲಿ ಬೆಳೆದ ಜಿಲ್ಲೆ. 1990ರ ಹೊತ್ತಿಗೆ ಮುಂಗಾರಿನ ಅಂತ್ಯ ಕಂಡಿತು. ಇದೇ ವೇಳೆ ಎರಡು ದೊಡ್ಡ ದೆವ್ವಗಳು ಬಾಬ್ರಿ ಮಸೀದಿ ಧ್ವಂಸ ಹಾಗೂ ಹೊಸ ಆರ್ಥಿಕ ನೀತಿ ಬಂದಿತು.

    ಇವತ್ತು ಹೊರಗೆ ಹೋದಾಗ ನೀವು ಮಂಗಳೂರಿಗರಾ ಎಂದಾಗ ನೀವು ಹೊಟೇಲ್‌ ಕಟ್ಟಿದವರಾ, ನೀವು ಬ್ಯಾಂಕ್‌ ಪ್ರಾರಂಭ ಮಾಡಿದವರಾ, ಭೂಸುಧಾರಣೆಯಲ್ಲಿ ಭೂಮಿ ಹಂಚಿದವರಾ, ನೀವು ಸಾಕ್ಷರತಾ, ಎಂದು ಕೇಳುವ ಬದಲು ಲವ್‌ ಜಿಹಾದ್‌, ಹಿಜಾಬ್, ಹಲಾಲ್, ಜಡ್ಕಾ, ಛೀ …ಥೂ ಹೇಳ್ತಾರೆ. ನಮಗೆ ನೋವಾಗುತ್ತದೆ.

    ಹುಟ್ಟಿದ ಊರು-ಬೆಳೆದ ಊರು ತಂದೆ-ತಾಯಿ ಇದ್ದಂತೆ. ಅದಕ್ಕೆ ಬೈದರೆ ನಮಗೆ ಹರ್ಟ್‌ ಆಗುತ್ತದೆ. ಈಗ ನಾವು ನಾಚಿಕೆ, ಮಾನ ಮರ್ಯಾದೆ ಬಿಟ್ಟು ಬೆತ್ತಲೆಯಾಗಿದ್ದೇವೆ. ಹೌದು ಎಂದು ಒಪ್ಪಿಕೊಂಡು ಏನೂ ಮಾಡಲಾಗದ ಸ್ಥಿತಿಯಲ್ಲಿದ್ದೇವೆ.

    ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ಸಿನ ಹಿರಿಯ ನಾಯಕ ಬಿ ಕೆ ಹರಿಪ್ರಸಾದ್ ಪುಸ್ತಕ ಬಿಡುಗಡೆ ಮಾಡಿ, ಹುಟ್ಟಿದ ಬಳಿಕ ಸಮಾಜಕ್ಕೆ ನಾವೇನು ಮಾಡಿದೆವು ಎನ್ನುವುದು ಮುಖ್ಯವಾಗಬೇಕು. ದೀನದಲಿತರ ನೋವನ್ನು ಮರೆಸುವ ಕೆಲಸ ಮಾಡಬೇಕು.

    ಅಂಬೇಡ್ಕರ್‌, ಬ್ರಹ್ಮಶ್ರೀ ನಾರಾಯಣ ಗುರು ಮೊದಲಾದವರು 500 ವರ್ಷ ಕಳೆದರೂ ನಮ್ಮ ನಡುವೆ ಚಿರಸ್ಥಾಯಿಯಾಗಿ ಉಳಿಯಲು ಕಾರಣ ಅವರ ಯೋಚನೆ, ಕೆಲಸ ಕಾರ್ಯಗಳು ಎಂದರು.
    ಅಧ್ಯಕ್ಷತೆಯನ್ನು ವಾರ್ತಾಭಾರತಿ ಪತ್ರಿಕೆಯ ಸಂಪಾದಕ ಅಬ್ದುಸ್ಸಲಾಮ್‌ ಪುತ್ತಿಗೆ ವಹಿಸಿದ್ದರು.

    ವೇದಿಕೆಯಲ್ಲಿ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್‌ ಇಂದಾಜೆ, ರಂಗಚಾವಡಿ ಸಂಚಾಲಕ ಜಗನ್ನಾಥ ಶೆಟ್ಟಿ ಬಾಳ, ಪ್ರಕಾಶಕಿ ಅಕ್ಷತಾ ಮೊದಲಾದವರಿದ್ದರು.

    DAKSHINA KANNADA

    ಬೆಂ*ಕಿಗೆ ಆಹುತಿಯಾದ ಹಡಗಿನಿಂದ ಅಪಾಯವಿಲ್ಲ, ಆತಂಕ ಬೇಡ : ಜಿಲ್ಲಾಧಿಕಾರಿ ಮುಲೈ ಮುಗಿಲನ್ ಸ್ಪಷ್ಟನೆ

    Published

    on

    ಮಂಗಳೂರು : ಮಂಗಳೂರು ಕರಾವಳಿಯ ಸಮುದ್ರದಲ್ಲಿ ಬೆಂ*ಕಿಗೆ ಆಹುತಿಯಾದ ವಿದೇಶಿ ಹಡಗಿನಿಂದ ಮಂಗಳೂರು ಕರಾವಳಿಗೆ ಯಾವುದೇ ಆತಂಕ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟ ಪಡಿಸಿದ್ದಾರೆ.

    ಜುಲೈ 19 ರಂದು ಗುಜರಾತ್‌ನಿಂದ ಕೊಲೊಂಬೋಕ್ಕೆ ತೆರಳುತ್ತಿದ್ದ ಸರಕು ಸಾಗಟದ ಹಡುಗು ಬೆಂ*ಕಿಗೆ ಆಹುತಿಯಾಗಿತ್ತು. ತಕ್ಷಣ ಕೋಸ್ಟ್‌ಗಾರ್ಡ್ ತಂಡ ನಿರಂತರ ನಲುವತ್ತು ಗಂಟೆ ಪ್ರಯತ್ನ ನಡೆಸಿ ಬೆಂಕಿ ನಂದಿಸುವ ಕೆಲಸವಾಗಿತ್ತು. ಬಳಿಕ ಹಡಗನ್ನು ಮಂಗಳೂರು ಕರಾವಳಿಯ 30 ನಾಟಿಕಲ್ ದೂರದಲ್ಲಿ ನಿಲ್ಲಿಸಲಾಗಿತ್ತು. ಇದರಿಂದ ತೈಲ ಸೋರಿಕೆ ಆಗುವ ಆತಂಕವನ್ನು ಹಲವರು ವ್ಯಕ್ತಪಡಿಸಿದ್ದರು.

    ಇದನ್ನೂ ಓದಿ : 5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    ಹಡಗು ಮುಳುಗಡೆಯಾಗುವ ಭೀತಿ ಇದ್ದು ಹಾಗಾದಲ್ಲಿ ಹಡಗಿನಲ್ಲಿರುವ ತೈಲ ಸೋರಿಕೆ ಆಗಬಹುದು ಎಂದು ಸುದ್ದಿಯಾಗಿತ್ತು. ಆದ್ರೆ, ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು, ಅಂತಹ ಯಾವುದೇ ಅಪಾಯ ಇಲ್ಲ ಎಂದು ಹೇಳಿದ್ದಾರೆ. ಅಂತಹ ಅವ*ಘಡ ನಡೆದಲ್ಲಿ ಅದನ್ನು ಎದುರಿಸಲು ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಹಾಗೂ ಕೋಸ್ಟ್‌ಗಾರ್ಡ್‌ ಮತ್ತು ಕರಾವಳಿ ಕಾವಲು ಪಡೆ ಸನ್ನದ್ಧವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

    Continue Reading

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    Trending