LATEST NEWS
ಸೋಲಿನ ಹತಾಶೆಯಿಂದ ಕಾಂಗ್ರೇಸ್ ಮುಖಂಡರ ಆರೋಪ – ಶಾಸಕ ಕಾಮತ್
ಮಂಗಳೂರು ನವೆಂಬರ್ 11: ಮಂಗಳೂರಿನಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡದೆ ರಸ್ತೆ ಸಂಚಾರ ಬದಲಿಸಿರುವ ಅಧಿಕಾರಿಗಳ ವಿರುದ್ಧ ಸಾರ್ವಜನಿಕ ವಲಯದಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಅಧಿಕಾರಿಗಳನ್ನು ಕರೆದು ಮಾಹಿತಿ ಪಡೆದುಕೊಂಡಿದ್ದೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದರು.
ಅಭಿವೃದ್ಧಿ ಕಾಮಗಾರಿಯ ಹಿನ್ನೆಲೆಯಲ್ಲಿ ರಸ್ತೆ ಬದಲಿಸಿದ ಕಾರಣ ಉಂಟಾದ ಟ್ರಾಫಿಕ್ ಸಮಸ್ಯೆಯ ಕುರಿತು ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳ ಜೊತೆ ಸಭೆ ನಡೆಸಿ ಒಂದು ದಿನದಲ್ಲಿ ಸಮಸ್ಯೆ ಪರಿಹರಿಸುವ ಕಾರ್ಯದಲ್ಲಿ ಅಲ್ಪ ಮಟ್ಟಿಗೆ ಯಶಸ್ಸು ದೊರೆತಿದೆ. ಅಧಿಕಾರಿಗಳು ಪ್ರಮುಖ ರಸ್ತೆಯಲ್ಲಿ ಕಾಮಗಾರಿ ಪ್ರಾರಂಭಿಸುವ ಮುನ್ನ ಸಾರ್ವಜನಿಕರಿಗೆ ಮಾಹಿತಿ ನೀಡದಿರುವ ಕಾರಣ ಸಹಜವಾಗಿ ಗೊಂದಲ ಉಂಟಾಗಿತ್ತು. ಹಾಗಾಗಿ ಸೋಮವಾರವೇ ತುರ್ತು ಸಭೆ ನಡೆಸಿ ಸಾರ್ವಜನಿಕರು ಹಾಗೂ ಅಧಿಕಾರಿಗಳ ಅಭಿಪ್ರಾಯ ಪಡೆದುಕೊಂಡು ಬದಲಿಯ ವ್ಯವಸ್ಥೆಯ ಆದೇಶ ನೀಡಿದ್ದೆ ಎಂದು ಶಾಸಕ ಕಾಮತ್ ತಿಳಿಸಿದ್ದಾರೆ.
ಸೋಮವಾರ ರಾತ್ರಿಯ ವೇಳೆಗೆ ಬದಲಿ ವ್ಯವಸ್ಥೆಯನ್ನು ಅಧಿಕಾರಿಗಳೊಂದಿಗೆ ತೆರಳಿ ಪರಿಶೀಲನೆ ನಡೆಸಿ, ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸಿದ್ದೇನೆ. ಹಾಗೂ ತ್ವರಿತವಾಗಿ ಬಿಟ್ಟುಕೊಡಬಹುದಾದ ಕಡೆಗಳಲ್ಲಿ ರಾತ್ರಿಯ ವೇಳೆ ಕಾಮಗಾರಿ ಪೂರ್ಣಗೊಳಿಸಿ ವಾಹನ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿದೆ. ಆ ಕಾರಣಗಳಿಂದ ಒಂದೇ ದಿನದಲ್ಲಿ ಟ್ರಾಫಿಕ್ ಸಮಸ್ಯೆಯನ್ನು ಪರಿಹರಿಸಲು ಸಹಾಯಕವಾಗಿದೆ ಎಂದರು.
ಜೆ.ಆರ್ ಲೋಬೋ- ಮಿಥುನ್ ರೈಗೆ ಶಾಸಕ ಕಾಮತ್ ತಿರುಗೇಟು
ವೇದವ್ಯಾಸ್ ಕಾಮತ್ ಅವರಿಗೆ ಅನುಭವದ ಕೊರತೆಯಿದೆ ಎಂದಿದ್ದ ಮಾಜಿ ಶಾಸಕ ಜೆ.ಆರ್ ಲೋಬೋ ಹಾಗೂ ಮಿಥುನ್ ರೈ ಅವರ ಹೇಳಿಕೆಗೆ ಪ್ರತಿಕ್ರಯಿಸಿರುವ ಶಾಸಕ ಕಾಮತ್,ಸರಕಾರಿ ಅಧಿಕಾರಿಯಾಗಿ ಕಾರ್ಯ ನಿರ್ವಹಿಸಿ ಅನುಭವವಿದ್ದ ಜೆ.ಆರ್ ಲೋಬೋ ಅವರು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಹಾಗೂ ಎಡಿಬಿ – 1 ಮುಖ್ಯಸ್ಥರಾಗಿದ್ದ ಯೋಜನೆ ಯಾಕೆ ವಿಫಲವಾಗಿತ್ತು ?
ಮಂಗಳೂರಿನ ಶಕ್ತಿನಗರದಲ್ಲಿ ವಸತಿ ಯೋಜನೆಯ 930ವಸತಿ ನಿರ್ಮಾಣಕ್ಕೆ ಆಯ್ಕೆ ಮಾಡಿದ ಜಮೀನು ಅರಣ್ಯ ಪ್ರದೇಶವಾಗಿದ್ದರೂ ಕೂಡ ಅವೆಲ್ಲವನ್ನೂ ಗಣನೆಗೆ ತೆದುಕೊಳ್ಳದೆ ತುರ್ತಾಗಿ ಹಕ್ಕುಪತ್ರ ವಿತರಿಸಿ, ಗುದ್ದಲಿಪೂಜೆ ನೆರವೇರಿಸಿದಾಗ ಜೆ.ಆರ್ ಲೋಬೊ ಅವರಿಗೆ ಅನುಭವದ ಕೊರತೆಯಿತ್ತೆ. ಕಂಕನಾಡಿ ಹಾಗೂ ಕದ್ರಿ ಮಾರುಕಟ್ಟೆ ನಿರ್ಮಾಣ ಯೋಜನೆಗೆ ಬ್ಯಾಂಕ್ ಸಾಲದ ಕುರಿತು ಯಾವುದೇ ರೀತಿಯ ಪ್ರಕ್ರಿಯೆ ಪೂರ್ಣಗೊಳಿಸದೆ ಗುದ್ದಲಿಪೂಜೆ ನೆರವೇರಿಸಿದಾಗ ಅವರಿಗೆ ಅನುಭವದ ಕೊರತೆ ಇತ್ತೇ ಎಂದು ಪ್ರಶ್ನಿಸಿದ್ದಾರೆ.
ದೇಶದೆಲ್ಲೆಡೆ ಕಾಂಗ್ರೇಸ್ ಹೀನಾಯವಾಗಿ ಸೋಲುತ್ತಿದೆ. ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿಯೂ ಭಾರತೀಯ ಜನತಾ ಪಾರ್ಟಿ ಜಯ ಗಳಿಸಿದೆ. ಇದು ಜನರಿಗೆ ನಮ್ಮ ಪಕ್ಷದ ಮೇಲಿನ ನಂಬಿಕೆಯಾಗಿದೆ. ಇವೆಲ್ಲಾ ಕಾರಣಗಳಿಂದ ಹತಾಶರಾಗಿರುವ ಕಾಂಗ್ರೇಸ್ ಮುಖಂಡರು ಮಿಥ್ಯಾರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ