Connect with us

    LATEST NEWS

    ಮಂಗಳೂರಿನಲ್ಲಿ ಗ್ರಾಹಕರ ಕೈಸುಡುತ್ತಿದೆ ತರಕಾರಿ: ತುಟ್ಟಿಯಾಗಿದೆ ಮೀನು-ಕೋಳಿ

    Published

    on

    ಮಂಗಳೂರು: ಇದೀಗ ಮಂಗಳೂರಿನ ಮಹಿಳೆಯರಿಗೆ ಅಡಿಗೆಯದ್ದೇ ಚಿಂತೆ, ಕಾರಣ 200ಕ್ಕಿಂತ ಕಡಿಮೆ ಮೀನು ಸಿಗುವುದಿಲ್ಲ. ಅತ್ತ ತರಕಾರಿ ತಗೊಳೋಣ ಎಂದರೆ ತರಕಾರಿ ಬೆಲೆಯೂ ಗಗನಕ್ಕೇರಿದೆ.

    ಇದಕ್ಕೆ ಕಾರಣಗಳು ಬೇರೆ ಬೇರೆ ಮಳೆ, ಸಾಗಾಟ ವೆಚ್ಚ, ಬೇಡಿಕೆ, ಹಬ್ಬ ಹೀಗೆ ಹತ್ತು ಹಲವು ಕಾರಣಗಳಿದ್ದರೂ ತರಕಾರಿ ಬೆಲೆಯ ಬಗ್ಗೆ ನಮ್ಮ ಕುಡ್ಲ ವಾಹಿನಿಯ ಪ್ರತ್ಯಕ್ಷ ವರದಿ ಹೀಗೆ.
    ನಗರದ ಸೆಂಟ್ರಲ್‌, ಕಂಕನಾಡಿ, ಜೆಪ್ಪು, ಕದ್ರಿ ಮಾರ್ಕೆಟ್‌ನಲ್ಲಿ ಕೆಲವು ತರಕಾರಿಗಳ ಬೆಲೆ ಇಂತಿದೆ.
    ಟೊಮ್ಯಾಟೊ ಬೆಲೆ 50ರೂಪಾಯಿಯಿಂದ 55 ರೂಪಾಯಿ,
    ಕೊತ್ತಂಬರಿ ಸೊಪ್ಪು 150 ರಿಂದ 160
    ಕ್ಯಾಪ್ಸಿಕಮ್‌ 140 ರಿಂದ 150 ರೂಪಾಯಿ
    ಬೆಂಡೆಕಾಯಿ 80ರಿಂದ 100
    ನೀರುಳ್ಳಿ 45 ರಿಂದ 50
    ಬೀನ್ಸ್‌ 80 ರಿಂದ 85
    ಪಾಲಕ್‌ 80ರಿಂದ 85
    ಇನ್ನು ತೆಂಗಿನ ಕಾಯಿಗೆ ಕೆಜಿಗೆ 45ರಿಂದ 60 ರೂಪಾಯಿ ಇದೆ.

    ಸ್ಥಳೀಯ ತರಕಾರಿ ಬರುತ್ತಿಲ್ಲ
    ಈಗೀಗ ಮಾರುಕಟ್ಟೆಗೆ ಸ್ಥಳೀಯ ತರಕಾರಿಗಳು ಬರುತ್ತಿಲ್ಲ. ಕಾರಣ ಎಲ್ಲಿ ಅವರು ಬೆಳೆಯುತ್ತಾರೋ ಅಲ್ಲಿಯೇ ಮಾರಾಟವಾಗುತ್ತದೆ. ಜೊತೆಗೆ ಹೆಚ್ಚಿನ ಪ್ರಮಾಣದ ತರಕಾರಿಯನ್ನು ಬೆಳೆಯುತ್ತಿಲ್ಲ ಎನ್ನುತ್ತಾರೆ ಮಾರಾಟಗಾರರೊಬ್ಬರು.

    ಕೋಳಿ, ಮೀನು, ತರಕಾರಿಗೂ ಬೆಲೆ ಜಾಸ್ತಿ
    ಕರಾವಳಿಗರ ನೆಚ್ಚಿನ ಆಹಾರ ಮೀನು, ಅದರ ನಂತರ ಕೋಳಿ ಇದರ ಮಧ್ಯೆ ತರಕಾರಿ. ಆದರೆ ಇತ್ತೀಚೆಗೆ ಮೀನಿನ ಬೆಲೆ 200ರ ಗಡಿ ದಾಟಿದ್ದು ಪ್ರತಿನಿತ್ಯ ಮೀನು ತಿನ್ನುತ್ತಿದ್ದ ಮಧ್ಯಮವರ್ಗದವರು ತಿಂಗಳಿಗೆ 2-3 ಸಲ ಮೀನೂಟ ಮಾಡುತ್ತಿದ್ದಾರೆ.

    ಅತ್ತ ಮೀನು ದುಬಾರಿಯಾಗುತ್ತಿದೆಯೆಂದು ಕೋಳಿ ಮಾಂಸ ತೆಗೆದುಕೊಳ್ಳೋಣ ಎಂದರೆ ಅದರ ದರವೂ ದಿನನಿತ್ಯ ಹೆಚ್ಚುತ್ತಿದೆ.

    ಇದೆಲ್ಲವೂ ಬೇಡ ತರಕಾರಿ ತೆಗೆದುಕೊಳ್ಳೋಣ ಎಂದರೆ ತರಕಾರಿ ದರವೂ ದುಪದಪಟ್ಟಾಗಿದೆ.
    ಅದರಲ್ಲೂ ಟೊಮ್ಯಾಟೋ, ಕೊತ್ತಂಬರಿ ಸೊಪ್ಪು, ಕ್ಯಾಪ್ಸಿಕಮ್‌, ಪಾಲಕ್‌ ಸೇರಿ ಹಲವು ತರಕಾರಿಗಳ ಬೆಲೆ ಗಗನಕ್ಕೇರಿದೆ.

    ಮತ್ತೊಂದು ಅತಿವೃಷ್ಟಿಯಿಂದ ಬೆಳೆಗಳು ಕೊಳೆತು ಹೋಗಿದ್ದು, ತರಕಾರಿ ಬೆಲೆಗೆ ಮತ್ತೊಂದು ಕಾರಣವಾಗಿದೆ.
    ಈ ಬಾರಿ ಭಾರೀ ಮಳೆಯಿಂದಾಗಿ ಕೃಷಿ ಹಾನಿ ಉಂಟಾಗಿದೆ. ದರ ದುಪ್ಪಟ್ಟಾಗಿದೆ. ನಾವು ದರ ಹೆಚ್ಚು ಮಾಡುವುದಿಲ್ಲ. ತರಕಾರಿ ತಂದಾಗ ನಮಗೆ ಅದರಲ್ಲೂ ನಷ್ಟ ಉಂಟಾಗುತ್ತದೆ.

    ಎಲ್ಲಾ ತರಕಾರಿ ಬೆಲೆ ದುಪ್ಪಟ್ಟಾಗಿದೆ. ವ್ಯಾಪಾರ ಮಾಡುವವರಿಗೂ ಏನಾದರೂ ಆದಾಯ ಬೇಕಲ್ಲ ಎಂದು ತಮ್ಮ ದಯನೀಯ ಅಳಲು ತೋಡುತ್ತಾರೆ ಮಾರುಕಟ್ಟೆ ವ್ಯಾಪಾರಿಗಳು.
    ಒಟ್ಟಿನಲ್ಲಿ ಮಾರುಕಟ್ಟೆ ದರ ಇಳಿಕೆಯಾದರೆ ಬಡ ಹಾಗೂ ಮಧ್ಯಮ ವರ್ಗದ ಮಂದಿ ಸ್ವಲ್ಪ ನಿರಾಳರಾಗುತ್ತಾರೆ.

    ಒಂದೆಡೆ ಮೀನು, ಮಾಂಸದ ದರವೂ ದುಪ್ಪಟ್ಟಾಗಿದ್ದು, ತರಕಾರಿಯತ್ತ ಜನರ ಒಲವು ಸಹಜವಾಗಿಯೇ ಹೆಚ್ಚಿರುತ್ತದೆ. ಡೀಸೆಲ್‌ ಬೆಲೆ ಇಳಿಕೆ ಕಂಡಿದ್ದರಿಂದ ದರವೂ ಇಳಿಕೆ ಕಾಣಬೇಕಾಗಿದೆ. ಈ ನಿಟ್ಟಿನಲ್ಲಿ ದಳ್ಳಾಲಿಗಳು ಗಮನಹರಿಸಬೇಕಾಗಿದೆ.

    ಅವಿನಾಶ್‌ ನಮ್ಮ ಕುಡ್ಲ 24*7

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending