BELTHANGADY
ವೇಣೂರು: ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ 3.30 ಲಕ್ಷ ರೂ. ವಂಚನೆ..!
ಇತ್ತೀಚಿನ ದಿನಗಳಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಹಣ ವಂಚನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅದೇ ರೀತಿ ಬೆಳ್ತಂಗಡಿ ತಾಲೂಕಿನ ಒಬ್ಬ ಯುವಕನಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಸುಮಾರು 3.30 ಲಕ್ಷ ರೂ. ವಂಚನೆ ಮಾಡಿದ್ದಾರೆ. ಈ ಬಗ್ಗೆ ಇಬ್ಬರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೇಣೂರು: ಇತ್ತೀಚಿನ ದಿನಗಳಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಹಣ ವಂಚನೆ ಮಾಡುವ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಅದೇ ರೀತಿ ಬೆಳ್ತಂಗಡಿ ತಾಲೂಕಿನ ಒಬ್ಬ ಯುವಕನಿಗೆ ವಿದೇಶದಲ್ಲಿ ಉದ್ಯೋಗ ಕೊಡಿಸುತ್ತೇವೆ ಎಂದು ನಂಬಿಸಿ ಸುಮಾರು 3.30 ಲಕ್ಷ ರೂ. ವಂಚನೆ ಮಾಡಿದ್ದಾರೆ. ಈ ಬಗ್ಗೆ ಇಬ್ಬರು ಆರೋಪಿಗಳ ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಳ್ತಂಗಡಿ ತಾಲೂಕಿನ ನಾರಾವಿಯ ಅಟ್ಯಡ್ಕ ನಿವಾಸಿ ಲಿಯೋ ಪಾಯಸ್ ವಂಚನೆಗೊಳಗಾದವರು.
ಲಿಯೋ ಪಾಯಸ್ರವರ ಮನೆಗೆ ಆರೋಪಿಗಳಿಬ್ಬರು ಜ. 18ರಂದು ಬಂದು ಅವರ ಪುತ್ರ ಸುರೇಶ್ ಪಾಯಸ್ ಗೆ ವಿದೇಶದಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಮಾತುಕತೆ ನಡೆಸಿದ್ದರು.
ಉದ್ಯೋಗ ಕೊಡಿಸುವುದಾಗಿ ಆರೋಪಿಗಳು 1.25 ಲಕ್ಷ ರೂ. ನಗದು ಪಡೆದು ಬಳಿಕ ವಿವಿಧ ಹಂತಗಳಲ್ಲಿ 1.37 ಲಕ್ಷ ರೂ., 40 ಸಾವಿರ, 28 ಸಾವಿರ ರೂ. ನಗದನ್ನು ತಮ್ಮ ಖಾತೆಗೆ ವರ್ಗಾವಣೆ ಮಾಡಿಕೊಂಡಿದ್ದಾರೆ.
ಬಲಿಕ ಆರೋಪಿಗಳು ಸುರೇಶ್ ಪಾಯಸ್ ಗೆ ಮೊಬೈಲ್ ಮೂಲಕ ಬಲ್ಗೇರಿಯಾಕ್ಕೆ ವಿಮಾನ ಟಿಕೆಟ್ ಬುಕ್ ಮಾಡಿದ
ನಕಲಿಪ್ರತಿಯನ್ನು ವಾಟ್ಸ್ ಆ್ಯಪ್ ನಲ್ಲಿ ಕಳುಹಿಸಿ ಮುಂಬೈಗೆ ಬರುವಂತೆ ತಿಳಿಸಿದ್ದಾರೆ.
ಹಾಗಗಿ ಸುರೇಶ್ ಪಾಯಸ್ ಮುಂಬೈಗೆ ತೆರಳಿದ್ದಾನೆ.
ಮುಂಬೈನಲ್ಲಿ ಆತನಿಗೆ ಆರೋಪಿಗಳು ವೀಸಾ ಹಾಗೂ ವಿದೇಶಿ ಕರೆನ್ಸಿ ತರುವುದಾಗಿ ಹೇಳಿ ಹೋದವರು ಹಿಂದಿರುಗದೆ ವಂಚಿಸಿದ್ದಾರೆ.
ಈ ಬಗ್ಗೆ ಕಳೆದ ಮಾರ್ಚ್ ತಿಂಗಳಲ್ಲಿ ಲಿಯೋ ಪಾಯಸ್ರವರ ಮೊಬೈಲ್ಗೆ ಮೆಸೇಜ್ ಮಾಡಿ ನಿಮ್ಮ ಪುತ್ರನ ಟಿಕೆಟ್ ಕ್ಯಾನ್ಸಲ್ ಆಗಿದೆ.
ಹಣ ಮತ್ತು ಪಾಸ್ಪೋರ್ಟನ್ನು ಕೊರಿಯರ್ ಮೂಲಕ ಕಳುಹಿಸುವುದಾಗಿ ತಿಳಿಸಿ ಪಾಸ್ಪೋರ್ಟ್ ಮಾತ್ರ ಕಳುಹಿಸಿ ವಂಚಿಸಿದ್ದರು.
ಪ್ರಕರಣದ ಓರ್ವ ಆರೋಪಿ ತಲೆಮರೆಸಿಕೊಂಡಿದ್ದು, ಮತ್ತೋರ್ವ ಆರೋಪಿಯನ್ನು ಮಂಗಳೂರಿನ ಸುಧೀರ್ ಎಂದು ಗುರುತಿಸಲಾಗಿದ್ದು, ಈತನ ಮೇಲೇ ಈಗಾಗಲೇ ಬಂಟ್ವಾಳ ನಗರ, ಗ್ರಾಮಾಂತರ, ಮೂಡುಬಿದಿರೆ, ಮಂಗಳೂರು ಸೇರಿದಂತೆ ಹಲವು ಠಾಣೆಗಳಲ್ಲಿ ಕೇಸುಗಳಿದ್ದು, ನ್ಯಾಯಾಂಗ ಬಂಧನದಲ್ಲಿದ್ದಾನೆ.
ಪ್ರಕರಣದ ಓರ್ವ ಆರೋಪಿ ಈಗಾಗಲೇ ಬಂಧನ ದಲ್ಲಿದ್ದು, ಮತ್ತೋರ್ವ ಆರೋಪಿಯ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ.
BELTHANGADY
ದ್ವಿಚಕ್ರ ವಾಹನಕ್ಕೆ ಪಿಕ್ಅಪ್ ಡಿ*ಕ್ಕಿ ಹೊಡೆದು ಪರಾರಿ..! ಸವಾರ ಸ್ಪಾಟ್ ಡೆ*ತ್..!
ಬೆಳ್ತಂಗಡಿ: ದ್ವಿಚಕ್ರ ವಾಹನಕ್ಕೆ ಪಿಕಪ್ ಡಿ*ಕ್ಕಿ ಹೊಡೆದು ದ್ವಿಚಕ್ರ ಸವಾರ ಮೃತಪಟ್ಟ ಘಟನೆ ಬೆಳ್ತಂಗಡಿಯ ವಾಣಿ ಕಾಲೇಜು ಬಳಿ ಮಾ.25ರಂದು ಮಧ್ಯಾಹ್ನ ನಡೆದಿದೆ.
ಗುರುವಾಯನಕೆರೆಯಿಂದ ಬೆಳ್ತಂಗಡಿಗೆ ದ್ವಿಚಕ್ರವಾಹದಲ್ಲಿ ಬರುತ್ತಿದ್ದ ವೇಳೆ ಬೆಳ್ತಂಗಡಿಯಿಂದ ಹೋಗುತ್ತಿದ್ದ ಪಿಡ್ಅಪ್ ಡಿಕ್ಕಿ ಹೊಡೆದಿದೆ. ಘಟನೆಯಿಂದ ದ್ವಿಚಕ್ರ ವಾಹನ ಸವಾರ ಪುರುಷೋತ್ತಮ(19 ವ)ರವರು ಸ್ಥಳದಲ್ಲೇ ಮೃ*ತಪಟ್ಟಿದ್ದಾರೆ. ದ್ವಿಚಕ ವಾಹನದಲ್ಲಿದ್ದ ಇನ್ನೋರ್ವ ಸಹಸವಾರ ತೌಫಿಕ್(18 ವ) ಗಂಭೀರ ಗಾಯಗೊಂಡಿದ್ದು ಇವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಡಿಕ್ಕಿ ಹೊಡೆದ ಪಿಕ್ ಅಪ್ ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದೆ. ಪಿಕ್ಅಪ್ ಡಿ*ಕ್ಕಿ ಹೊಡೆದ ರಭಸಕ್ಕೆ ಯುವಕರು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ಈ ವೇಳೆ ಲಾಯಿಲ ರಾಘವೇಂದ್ರ ನಗರದ ನಿವಾಸಿ ದಿ.ಜಯರಾಮ ಎಂಬವರ ಪುತ್ರ ಪುರುಷೋತ್ತಮ ಸ್ಥಳದಲ್ಲೇ ಅಸುನೀಗಿದ್ದಾರೆ. ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
BELTHANGADY
ಬೆಳ್ತಂಗಡಿ: ಬೊಳ್ಮಿನಾರು ಅರಣ್ಯ ಪರಿಸರದಲ್ಲಿ ಅಸ್ಥಿಪಂಜರದ ಸ್ಥಿತಿಯಲ್ಲಿ ವ್ಯಕ್ತಿಯ ಶ*ವ ಪತ್ತೆ..!
ಬೆಳ್ತಂಗಡಿ: ಇಲ್ಲಿನ ಪುದುವೆಟ್ಟು ಗ್ರಾಮದ ಬೊಳ್ಮಿನಾರು, ಅರಣ್ಯ ಪರಿಸರದಲ್ಲಿ ಬುಧವಾರ(ಮಾ.20) ಅಸ್ತಿಪಂಜರ ಸ್ಥಿತಿಯಲ್ಲಿ ಓರ್ವ ವ್ಯಕ್ತಿಯ ಶ*ವ ಪತ್ತೆಯಾಗಿದೆ. ಸ್ಥಳದಲ್ಲಿ ದೊರೆತ ಆಧಾರ್ ಕಾರ್ಡ್ ಹಾಗೂ ಇತರ ಸ್ವತ್ತುಗಳ ಪ್ರಕಾರ ಮೃತ ವ್ಯಕ್ತಿಯನ್ನು ಕಳೆಂಜಗ್ರಾಮದ ಕಾಯರ್ತಡ್ಕದ ರಾಜು ಜೋಸೆಫ್ ಎಂದು ಗುರುತಿಸಲಾಗಿದೆ.
ಬುಧವಾರ ಮಧ್ಯಾಹ್ನದ ವೇಳೆ ಅರಣ್ಯ ಪ್ರದೇಶದಿಂದ ಸೊಪ್ಪು ತರಲು ತೆರಳಿದ್ದ ಸ್ಥಳೀಯರು ರಸ್ತೆಯಿಂದ ಸುಮಾರು 100 ಮೀಟರ್ ದೂರ ಪ್ರದೇಶದಲ್ಲಿ ಮಲಗಿರುವ ಸ್ಥಿತಿಯಲ್ಲಿದ್ದ ಶವವನ್ನು ಗುರುತಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಸ್ಥಳದಲ್ಲಿ ಸಿಕ್ಕಿದ ದಾಖಲೆಗಳ ಪ್ರಕಾರ ರಾಜು ಅವರ ಮನೆಯವರನ್ನು ಸ್ಥಳಕ್ಕೆ ಕರೆಯಿಸಿದ್ದು ಅಲ್ಲಿದ್ದ ಬ್ಯಾಗ್ ಹಾಗೂ ಆಧಾರ್ ಕಾರ್ಡ್ ಆಧಾರದಲ್ಲಿ ಮೃತಪಟ್ಟ ವ್ಯಕ್ತಿ ರಾಜು ಎಂದು ಮನೆಯವರು ಸ್ಪಷ್ಟಪಡಿಸಿದ್ದಾರೆ.
ರಾಜು ಅವರು ಕೆಲವು ವರ್ಷಗಳ ಹಿಂದೆಯೇ ಮನೆ ಬಿಟ್ಟಿದ್ದರು ಎಂದು ಮನೆಯವರು ತಿಳಿಸಿದ್ದಾರೆ. ಪೊಲೀಸರು ಹೆಚ್ಚಿನ ಪರಿಶೀಲನೆ ನಡೆಸುತ್ತಿದ್ದು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ. ತಜ್ಞರ ತಂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಲಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
BELTHANGADY
ಆಡಿನ ಮರಿಗಳನ್ನು ಕಾರಿಗೆ ಹಾಕಿಕೊಂಡ್ರು… ಆಮೇಲೆ ನಡೆದಿದ್ದೇ ಬೇರೆ..!
ಕೊಟ್ಟಿಗೆಹಾರ : ರಸ್ತೆ ಬದಿಯಲ್ಲಿ ಮೇಯುತ್ತಿದ್ದ ಆಡು ಹಾಗೂ ಮರಿಗಳನ್ನು ಕಾರಿನಲ್ಲಿ ಹಾಕಿ ತೆಗೆದುಕೊಂಡು ಹೋದ ಕುಟುಂಬವನ್ನ ಜನರು ಅಡ್ಡಗಟ್ಟಿ ಹ*ಲ್ಲೆ ಮಾಡಿದ ಘಟನೆ ಕೊಟ್ಟಿಗೆಹಾರದ ಸಮೀಪ ನಡೆದಿದೆ. ಜಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆ ಹಾರದ ಅತ್ತಿಗೆರೆ ಎಂಬಲ್ಲಿ ಈ ಘಟನೆ ನಡೆದಿದೆ. ಆಡು ಹಾಗೂ ಮರಿಯನ್ನು ಕಾರಿನಲ್ಲಿ ಹಾಕಿ ತೆಗೆದುಕೊಂಡು ಹೋದ ವಿಚಾರ ತಿಳಿದ ಆಡಿನ ಮಾಲೀಕ ಸಾರ್ವಜನಿಕರ ಜೊತೆ ಕಾರನ್ನು ಬೆನ್ನಟ್ಟಿದ್ದಾರೆ. ಈ ವೇಳೆ ಜನರು ಕಾರಿನ ಗಾಜು ಪುಡಿ ಮಾಡಿದ್ದು, ಕಾರಿನ ಒಳಗಿದ್ದ ಕುಟುಂಬಕ್ಕೆ ಗಾಯಗಳಾಗಿದೆ.
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಜಬೀವುಲ್ಲಾ ಹಾಗೂ ಅವರ ಕುಟುಂಬ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ದಾರಿಯಲ್ಲಿ ಕಂಡ ಆಡು ಹಾಗೂ ಮರಿಗಳನ್ನು ಕಾರಿನಲ್ಲಿ ಹಾಕಿಕೊಂಡು ಹೋಗಿದ್ದರು. ಇದನ್ನು ನೋಡಿದ ಸ್ಥಳೀಯರೊಬ್ಬರು ಆಡಿನ ಮಾಲೀಕರಿಗೆ ಮಾಹಿತಿ ನೀಡಿದ್ದರು. ತಕ್ಷಣ ಕಾರನ್ನು ಹಿಂಬಾಲಿಸಿ ಅಡ್ಡಗಟ್ಟಿದ ಜನರು ಈ ಕೃತ್ಯ ಎಸಗಿದ್ದಾರೆ. ಕಾರಿನಲ್ಲಿ ಮಕ್ಕಳು , ಮಹಿಳೆಯರಿದ್ದರೂ ಕೆಟ್ಟದಾಗಿ ವರ್ತಿಸಿ ಕಾರಿನ ಗಾಜು ಪುಡಿಗೈದು ಕಾರಿನಲ್ಲಿದ್ದವರನ್ನು ಅ*ವ್ಯಾಚ ಪದಗಳಿಂದ ನಿಂಧಿಸಿದ್ದಾರೆ. ಬಳಿಕ ಬಣ್ಕಲ್ ಪೊಲೀಸರಿಗೆ ಮಾಹತಿ ನೀಡಿ ಅವರನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು, ಆಡು ಹಾಗೂ ಮರಿಗಳನ್ನು ಕದ್ದ ಆರೋಪದಲ್ಲಿ ಕಾರಿನಲ್ಲಿದ್ದ ಕುಟುಂಬದ ಮೇಲೆ ದೂರು ದಾಖಲಿಸಿಕೊಂಡಿದ್ದಾರೆ. ಆದ್ರೆ ಈ ರೀತಿ ಮಹಿಳೆಯರು ಹಾಗೂ ಮಕ್ಕಳ ಮೇಲೆ ದೌರ್ಜನ್ಯ ನಡೆಸಿದ ಸಾರ್ವಜನಿಕರ ಮೇಲೆ ಯಾಕೆ ಕೇಸು ದಾಖಲಿಸಿಲ್ಲ ಅನ್ನೋದು ಪ್ರಶ್ನೆಯಾಗಿದೆ.