Connect with us

DAKSHINA KANNADA

ಗ್ರಹ ಮಂಡಲದಲ್ಲಿ ಅಪರೂಪದಲ್ಲೇ ಅಪರೂಪದ ವಿದ್ಯಮಾನ : ಲೋಕ ಕಲ್ಯಾಣಕ್ಕೆ ವಿಶೇಷ ಪ್ರಾರ್ಥನೆ..!

Published

on

ಗ್ರಹ ಮಂಡಲದಲ್ಲಿ ಅಪರೂಪದಲ್ಲೇ ಅಪರೂಪದ ವಿದ್ಯಮಾನ : ಲೋಕ ಕಲ್ಯಾಣಕ್ಕೆ ವಿಶೇಷ ಪ್ರಾರ್ಥನೆ..!

ಚಿತ್ರ : ಮಂಜು ನೀರೇಶ್ವಾಲ್ಯ

ಮಂಗಳೂರು : ಇಂದು  ಭಾನುವಾರದ ವಿಶೇಷ ದಿನ. ಈ ದಿನ ಗ್ರಹ ಮಂಡಲದಲ್ಲಿ ಅಪರೂಪದಲ್ಲೇ ಅಪರೂಪದ ವಿದ್ಯಮಾನ ನಡೆದಿದೆ.  ಛಾಯಾಗ್ರಹಗಳಾದ ರಾಹು-ಕೇತುಗಳನ್ನು ಹೊರತುಪಡಿಸಿ, ಮಿಕ್ಕ ಏಳು ಗ್ರಹಗಳಲ್ಲಿ ಆರು ಗ್ರಹಗಳು ತಮ್ಮ ತಮ್ಮ ಸ್ವಕ್ಷೇತ್ರಗಳಲ್ಲಿ ನಿಂತಿರುವುದು ಇಂದಿನ ವಿಶೇಷವಾಗಿದೆ.

250 ವರ್ಷಗಳಿಗೊಮ್ಮೆ ಈ ಕೌತುಕ ನಡೆಯುತ್ತಿದೆ.  ಗುರುವು  ಧನಸ್ಸು ರಾಶಿಯಲ್ಲಿ, ಶನಿಯು ಮಕರದಲ್ಲಿ, ಕುಜನು ಮೇಷದಲ್ಲಿ, ಚಂದ್ರನು ಕಟಕದಲ್ಲಿ ಶುಕ್ರನೊಂದಿಗೆ, ರವಿಯು ಸಿಂಹದಲ್ಲಿ, ಬುಧನು ಉಚ್ಛ ಕ್ಷೇತ್ರವು, ಸ್ವಕ್ಷೇತ್ರವೂ ಆದ ಕನ್ಯಾರಾಶಿಯಲ್ಲಿರುತ್ತಾನೆ, ಇಂದು ಬೆಳಿಗ್ಗೆ 11-45 ರಿಂದ 12.45ರ ವರೆಗೆ ಈ ವಿದ್ಯಮಾನ ನಡೆಯಿತು.

ಇಂದು ದಿನಾಂಕ 13-09-2020 ರ ಬೆಳಿಗ್ಗೆ 6 ಗ್ರಹಗಳು ಅವರವರ ಸ್ವಕ್ಷೇತ್ರ ದಲ್ಲಿ ಇರುತ್ತಾರೆ.

ಇದೊಂದು ಒಳ್ಳೆಯ ಮುಹೂರ್ತ ಎಂದು ಜ್ಯೋತಿಷ್ಯ ಶಾಸ್ತ್ರದಲ್ಲಿ ತಿಳಿಸಲಾಗಿದೆ, (ಇಂದು) ಭಾನುವಾರದ ದಿನ ಗ್ರಹ ಮಂಡಲದಲ್ಲಿ ಅಪರೂಪದಲ್ಲೇ ಅಪರೂಪದ ವಿದ್ಯಮಾನವನ್ನು ನಾವೆಲ್ಲರೂ ಕಾಣಬಹುದಾಗಿದೆ.

ಛಾಯಾಗ್ರಹಗಳಾದ ರಾಹು-ಕೇತುಗಳನ್ನು ಹೊರತುಪಡಿಸಿ, ಮಿಕ್ಕ ಏಳು ಗ್ರಹಗಳಲ್ಲಿ ಆರು ಗ್ರಹಗಳು ತಮ್ಮ ತಮ್ಮ ಸ್ವಕ್ಷೇತ್ರಗಳಲ್ಲಿ ಇರುವುದು ಅತ್ಯಂತ ವಿಶೇಷವು. ಗುರುವು (ಪೂರ್ವಾಷಾಢ) ಧನಸ್ಸು ರಾಶಿಯಲ್ಲಿ, ಶನಿಯು(ಉತ್ತರಾಷಾಢ) ಮಕರದಲ್ಲಿ, ಕುಜನು(ಅಶ್ವಿನಿ) ಮೇಷದಲ್ಲಿ, ಚಂದ್ರನು ಕಟಕದಲ್ಲಿ ಶುಕ್ರನೊಂದಿಗೆ(ಪುನರ್ವಸು ನಕ್ಷತ್ರದಲ್ಲಿ), ರವಿಯು ಸಿಂಹದಲ್ಲಿ(ಉತ್ತರಾ ನಕ್ಷತ್ರ), ಬುಧನು ಉಚ್ಛ ಕ್ಷೇತ್ರವು, ಸ್ವಕ್ಷೇತ್ರವೂ ಆದ ಕನ್ಯಾರಾಶಿಯಲ್ಲಿ(ಹಸ್ತಾ ನಕ್ಷತ್ರ) ಇರುವುದು ವಿಶೇಷವೂ, ಅಪರೂಪವೂ ಆಗಿದೆ.

ವಾರ ಗ್ರಹರಾಜನಾದ ರವಿಯು ವಾರ. ಈ ಸಂದರ್ಭದಲ್ಲಿ ಬೆಳಿಗ್ಗೆ 11ರ ಸಮಯಕ್ಕೆ ವೃಶ್ಚಿಕ ಲಗ್ನ(10-45ರಿಂದ12-45ರ ವರೆಗೆ) ಇರುವುದು. ಆ ಲಗ್ನಕ್ಕೆ ಹೊಂದಿಕೊಂಡಂತೆ, ಗುರುವು ಧನಸ್ಥಾನವಾದ 2ನೇ ಮನೆಯಲ್ಲಿ, ಶನಿಯು 3ರಲ್ಲಿ, ಕುಜನು 6ರಲ್ಲಿ, ಚಂದ್ರನು (ಶುಕ್ರನೊಂದಿಗೆ)9ರಲ್ಲಿ, ರವಿಯು 10ರಲ್ಲಿ, ಬುಧನು 11ರಲ್ಲಿ ಇರುತ್ತಾರೆ.

ಇದು ಅತ್ಯಂತ ಸುಸಮಯ. ಅಂದು ಸುಮಾರು ಬೆಳಿಗ್ಗೆ 10-45ರಿಂದ 12-45ರ ವರೆಗೂ ವೃಶ್ಚಿಕ ಲಗ್ನ ಇರುವುದು ಈ ಹಿನ್ನೆಲೆಯಲ್ಲಿ ಮಂಗಳೂರಿನ  ಶ್ರೀ ವೆಂಕಟರಮಣ ದೇವಸ್ಥಾನ ದಲ್ಲಿ ಲೋಕ ಕಲ್ಯಾಣಾರ್ಥ ವಿಶೇಷ ಪ್ರಾರ್ಥನೆ ಆಯೋಜನೆ ಮಾಡಲಾಗಿತ್ತು.

ಈ ಸಮಯದಲ್ಲಿ ಯಾರು ಯಾವುದೇ ಸತ್ಕಾರ್ಯ, ಜಪ,ಹೋಮ,ತಪ, ದಾನ, ಗೋ ಸೇವೆ, ದೀನ ಜನೋಪಚಾರ, ಮಂತ್ರ ಪಾರಾಯಣ, ಸಹಸ್ರನಾಮದಿ ಪಾರಾಯಣಗಳು, ಪ್ರಾಣಿ-ಪಕ್ಷಿಗಳಿಗೆ ಆಹಾರ ಕೊಡವುದು, ಸತ್ಪಾತ್ರರಿಗೆ ದಾನ, ಮಹಾಲಯ ಪಕ್ಷದ ತನ್ನಿಮಿತ್ತ ಕಾರ್ಯ ಇತ್ಯಾದಿ ಸತ್ಕಾರ್ಯ ಮಾಡುವುದು ಶ್ರೇಯಸ್ಕರ. ಆದುದರಿಂದ ಲೋಕ ಕಲ್ಯಾಣಾರ್ಥವಾಗಿ ಇಡೀ ಪ್ರಪಂಚಕ್ಕೆ ತಗಲಿದ ಈ ಮಹಾಮಾರಿಯು ಶೀಘ್ರವಾಗಿ ತೊಲಗಲಿ , ಶ್ರೀ ದೇವಳಗಳಲ್ಲಿ ನಡೆಯುವ ಎಲ್ಲಾ ಪೂಜಾ ಕೈ೦ಕರ್ಯಗಳು ಹಿಂದಿನಂತೆ ಸುಸೂತ್ರವಾಗಿ ನಡೆಯಲಿ , ಜನರ ಕಷ್ಟಗಳು ಬೇಗನೆ ನಿವಾರಣೆ ಯಾಗಲಿ ಎಂಬ ಹಿತ ದ್ರಷ್ಟಿಯಿಂದ ಶ್ರೀ ದೇವಳದಲ್ಲಿ 11:30 ಕ್ಕೆ ಸರಿಯಾಗಿ ದೇವಳದ ಆಡಳಿತ ಮಂಡಳಿ , ವೈದಿಕ ರು ಹಾಗೂ ಸಮಾಜ ಬಾಂಧವರು ಎಲ್ಲರೊಡಗೂಡಿ ಶ್ರೀ ವೀರ ವೆಂಕಟೇಶ್ ದೇವರ ಸನ್ನಿಧಾನದಲ್ಲಿ ಮಹಾ ಪ್ರಾರ್ಥನೆ ಸಲ್ಲಿಸಲಾಯಿತು .

ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಕೆ . ಪಿ . ಪ್ರಶಾಂತ್ ರಾವ್ ಹಾಗೂ ನೂರಾರು ಭಜಕರು ಉಪಸ್ಥಿತರಿದ್ದರು .

DAKSHINA KANNADA

ದೇಶದಲ್ಲಿ ಮೊದಲ ಬಾರಿಗೆ QR ಕೋಡ್ ವೋಟರ್ ಸ್ಲಿಪ್

Published

on

ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಇದೇ ಮೊದಲ ಬಾರಿ ಮತದಾರರಿಗೆ ಕ್ಯೂ ಆರ್‌ ಕೋಡ್‌ ಹೊಂದಿರುವ ವೋಟರ್‌ ಸ್ಲಿಪ್‌ ನೀಡಲಾಗುವುದು.

ರಾಜ್ಯದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತಗಟ್ಟೆ ಸುಲಭವಾಗಿ ಹುಡುಕಲು ಸಾಧ್ಯವಾಗದಂತೆ ಮನೆ ಮನೆಗೆ ನೀಡಲಾಗುವ ವೋಟರ್‌ ಸ್ಲಿಪ್‌ ಗಳಲ್ಲಿ ಮತಗಟ್ಟೆಯ ಕ್ಯೂ ಆರ್‌ ಕೋಡ್‌ ಮುದ್ರಿಸಲಾಗಿದೆ.

ನಗರದ ನಿವಾಸಿಗಳು ಕ್ಯೂ ಆರ್‌ ಕೋಡ್‌ ಮೂಲಕ ತಮ್ಮ ಮತಗಟ್ಟೆಯನ್ನು ಸುಲಭವಾಗಿ ಗುರುತಿಸಬಹುದಾಗಿದೆ. ಮತದಾರರ ಮಾಹಿತಿ ಚೀಟಿಯನ್ನು ಮತಗಟ್ಟೆ ಮಟ್ಟದ ಅಧಿಕಾರಿಗಳ ಮೂಲಕ ನೋಂದಾಯಿತ ಎಲ್ಲಾ ಮತದಾರರಿಗೆ ಒದಗಿಸಲಾಗುವುದು.

Continue Reading

DAKSHINA KANNADA

ಒಂದು ತಿಂಗಳಿನಿಂದ ಮೊಬೈಲ್‌ ಫೋನ್‌ ಸಂಪರ್ಕವಿಲ್ಲದೆ ಪರದಾಡುತ್ತಿದ್ದಾರೆ ಈ ಜನರು..!!

Published

on

ಉಡುಪಿ: ಜಿಲ್ಲೆಯ ಕಟಪಾಡಿ ಪೇಟೆ ಸುತ್ತಮುತ್ತಲಿನ ಒಂದೂವರೆ ಕಿ.ಮೀ. ವ್ಯಾಪ್ತಿಯಲ್ಲಿ ಕಳೆದ ಒಂದು  ತಿಂಗಳಿನಿಂದ ಮೊಬೈಲ್ ನೆಟ್ವರ್ಕ್ ಸಂಪೂರ್ಣ ಸ್ಥಗಿತವಾಗಿದ್ದು, ಖಾಸಗಿ ಕಂಪೆನಿಗಳ ಮೊಬೈಲ್ ಫೋನ್ ಮತ್ತು ಇಂಟರ್‌ನೆಟ್ ಬಳಕೆದಾರರು ತೀವ್ರ ಅಡಚಣೆ ಅನುಭವಿಸುತ್ತಿದ್ದಾರೆ.

katapadi

ಮೊಬೈಲ್ ಕಂಪೆನಿ ಹಾಗೂ ಟವರ್ ಅಳವಡಿಸಲಾಗಿರುವ ಜಾಗದ ಮಾಲೀಕರ ನಡುವಿನ ಒಪ್ಪಂದ ಮುಗಿದ ಹಿನ್ನೆಲೆಯಲ್ಲಿ ಏರ್‌ಟೆಲ್, ವಿಐ ಮತ್ತು ಜಿಯೋ ಬಳಕೆದಾರರಿಗೆ ನೆಟ್ ವರ್ಕ್ ಸಿಗದಂತಾಗಿದೆ. ಫೋನ್ ಕರೆ ಮಾಡಲು, ಸ್ವೀಕರಿಸಲು ಸಾಧ್ಯವಾಗುತ್ತಿಲ್ಲ, ಆನ್‌ಲೈನ್ ಹಣಕಾಸಿನ ವ್ಯವಹಾರ, ವರ್ಕ್ ಫ್ರಮ್ ಹೋಮ್, ಕಚೇರಿಯ ದೈನಂದಿನ ಕೆಲಸ ನಿರ್ವಹಿಸಲು ಕಷ್ಟಪಡುತ್ತಿದ್ದು, ಜನರ ಗೋಳು ಕೇಳುವವರೇ ಇಲ್ಲವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ. ಮೊಬೈಲ್ ಸೇವೆ ಒದಗಿಸುವ ಕಂಪೆನಿಗಳು ಟವರ್ ಲಭ್ಯವಿಲ್ಲದೆ ನಾವೇನೂ ಮಾಡಲಾಗುತ್ತಿಲ್ಲ. ಸಮೀಪದಲ್ಲಿ ಪರ್ಯಾಯ ಜಾಗವೂ ಸಿಗುತ್ತಿಲ್ಲ ಎಂದು ಹೇಳುತ್ತಿವೆ. ಏರ್‌ಟೆಲ್ ಸಂಸ್ಥೆಯ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿದಾಗ, ‘ಪರ್ಯಾಯ ಟವರ್‌ಗೆ ವ್ಯವಸ್ಥೆಯಾಗದೆ ಏನೂ ಮಾಡುವಂತಿಲ್ಲ, ಪರ್ಯಾಯ ಜಾಗದ ವ್ಯವಸ್ಥೆ ಆದಲ್ಲಿ ಟವರ್ ನಿರ್ಮಾಣ ಮಾಡುತ್ತೇವೆ’ ಎಂದು ಹೇಳುತ್ತಿದ್ದಾರೆ.

READ MORE..; ಅರ್ಚಕರಿಂದಲೇ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ..!! ವಿಡಿಯೋ ವೈರಲ್

ನೆಟ್ ವರ್ಕ್ ಸಿಗದೆ ಹೈರಾಣಾಗಿರುವ ಸ್ಥಳೀಯರು ಮೊಬೈಲ್ ಸೇವೆ ಕಲ್ಪಿಸುವ ಸಂಸ್ಥೆಗಳ ವಿರುದ್ಧ – ಅಸಮಾಧಾನ ವ್ಯಕ್ತಪಡಿಸುತ್ತಿದ್ದು, ಜನರಲ್ಲಿ ಕಂಪೆನಿ ವಿರುದ್ದ ಆಕ್ರೋಶ ಹೆಚ್ಚುತ್ತಿದೆ. ಜಾಗದ ಮಾಲೀಕರು ಮತ್ತು ನೆಟ್ವರ್ಕ್ ಸಂಸ್ಥೆಗಳು ಪರಸ್ಪರ ಮಾತನಾಡಿ ಸಮಸ್ಯೆ ಬಗೆಹರಿಸಿಕೊಳ್ಳಬೇಕು. ಕೂಡಲೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳ ಬೇಕು ಎಂದು ಒತ್ತಾಯಿಸು ತ್ತಿರುವ ಸ್ಥಳೀಯರು ಸಂಘಟಿತ ಹೋರಾಟಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

 

Continue Reading

DAKSHINA KANNADA

ಪ್ರತಿಭಾವಂತೆ ವಿದ್ಯಾರ್ಥಿನಿಯನ್ನು ಬಲಿ ಪಡೆದ ಮೆದುಳು ಜ್ವರ

Published

on

ಮೂಡಬಿದಿರೆ: ಮೆದುಳು ಜ್ವರಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಮೂಡಬಿದರೆಯಲ್ಲಿ ನಡೆದಿದೆ. ಶಿರ್ತಾಡಿ ಮೌಂಟ್ ಕಾರ್ಮೆಲ್ ಹೈಸ್ಕೂಲ್‌ನ 10ನೇ ತರಗತಿಯ ಸ್ವಸ್ತಿ ಶೆಟ್ಟಿ (15) ಮೃತ ವಿದ್ಯಾರ್ಥಿನಿ. ಸ್ವಸ್ತಿ ಶೆಟ್ಟಿ ಮೆದುಳು ಜ್ವರ ಉಲ್ಬಣಗೊಂಡ ಪರಿಣಾಮ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Swasthi

ಉತ್ತಮ ತ್ರೋಬಾಲ್ ಆಟಗಾರ್ತಿಯಾಗಿದ್ದ ಈಕೆ ಉತ್ತಮ ನೃತ್ಯಪಟುವೂ ಆಗಿದ್ದಳು.ತಂದೆ ಸತೀಶ್‌ ಶೆಟ್ಟಿ ಗೋವಾದಲ್ಲಿ ಉದ್ಯೋಗದಲ್ಲಿದ್ದು ತಾಯಿ ಸರಿತಾ ಶೆಟ್ಟಿ ಶಿರ್ತಾಡಿ ನವಮೈತ್ರಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉದ್ಯೋಗಿ. ಮೂಲತಃ ವಾಲ್ಪಾಡಿಯವರಾದ ಇವರು ಪ್ರಸ್ತುತ ಮೂಡಬಿದಿರೆಯಲ್ಲಿ ನೆಲೆಸಿದ್ದಾರೆ.

READ MORE..; ಪ್ರಚಾರದ ಭರದಲ್ಲಿ ತೇಜಸ್ವಿ ಸೂರ್ಯ ಕಿರಿಕ್‌..! ಸಂಸದರಿಗೆ ಡೌನ್ ಡೌನ್ ಎಂದ ಸಭಿಕರು

Continue Reading

LATEST NEWS

Trending