FILM
ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ
ಮಂಗಳೂರು/ನವದೆಹಲಿ: ಹಿರಿಯ ನಟ ಮಿಥುನ್ ಚಕ್ರವರ್ತಿ ಅವರಿಗೆ ಭಾರತೀಯ ಚಲನಚಿತ್ರೋದ್ಯಮದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿಯ ಗರಿ ಲಭಿಸಿದೆ. ಭಾರತೀಯ ಚಿತ್ರರಂಗದಲ್ಲಿ ಅವರ ಪ್ರಯಾಣ ಹಾಗೂ ಸಿನಿ ರಂಗಕ್ಕೆ ನೀಡಿದ ಕೊಡುಗೆಗಾಗಿ ಈ ಪ್ರತಿಷ್ಠಿತ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಅ.8 ರಂದು ಪ್ರಶಸ್ತಿ ಪ್ರದಾನ:
ಈ ಸಂಬಂಧ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಕೇಂದ್ರ ರೈಲ್ವೆ ಹಾಗೂ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅಶ್ವಿನಿ ವೈಷ್ಣವ್, ಮಿಥುನ್ ಚಕ್ರವರ್ತಿ ಅವರ ಗಮನಾರ್ಹ ಸಿನಿ ಜರ್ನಿ ಈಗಿನ ಮತ್ತು ಬರುವ ಮುಂದಿನ ಪೀಳಿಗೆಗೆ ಸ್ಫೂರ್ತಿಯಾಗಿದೆ. ಭಾರತೀಯ ಚಿತ್ರರಂಗಕ್ಕೆ ಅವರ ಅಪ್ರತಿಮ ಕೊಡುಗೆ ಗಮನಿಸಿ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ತೀರ್ಪುಗಾರರ ಆಯ್ಕೆ ಸಮಿತಿಯು ಅವರ ಹೆಸರನ್ನು ಆಯ್ಕೆ ಮಾಡಿದ್ದಾರೆ.
ಈ ಗೌರವವನ್ನು ಅಕ್ಟೋಬರ್ 8 ರಂದು ನಡೆಯುವ ನ್ಯಾಷನಲ್ ಫಿಲಂ ಅವಾರ್ಡ್ ಸಮಾರಂಭದಲ್ಲಿ ಮಿಥುನ್ ಚಕ್ರವರ್ತಿ ಅವರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಉಡುಪಿ : ಪೊಲೀಸ್ ಠಾಣೆ ಪಕ್ಕದಲ್ಲೇ ಸರಣಿ ಕಳ್ಳತನ; ಆರು ಮನೆಯ ಬೀಗ ಒಡೆದು ಕನ್ನ
ಮಿಥುನ್ ಚಕ್ರವರ್ತಿ 1976ರಲ್ಲಿ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದರು. ‘ಮೃಗಯಾ’ ಅವರ ನಟನೆಯ ಮೊದಲ ಸಿನಿಮಾ. ಈ ಸಿನಿಮಾದ ಅವರ ಅದ್ಭುತ ಅಭಿನಯಕ್ಕಾಗಿ ರಾಷ್ಟ್ರ ಪ್ರಶಸ್ತಿ ಲಭಿಸಿದೆ. ನಟನಾಗಿ ಮಾತ್ರವಲ್ಲದೇ, ಟಿವಿ ನಿರೂಪಕ, ನಿರ್ಮಾಪಕ, ರಾಜಕಾರಣಿ ಆಗಿ ಖ್ಯಾತಿ ಗಳಿಸಿದ್ದಾರೆ.
FILM
ತಿರುಪತಿ ಲಡ್ಡು ಪ್ರಸಾದ ಅಪವಿತ್ರಕ್ಕೆ ನಟ ಸುಮನ್ ಆಕ್ರೋಶ
ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಮೀನಿನ ಎಣ್ಣೆ ಬಳಕೆಯಾಗಿರುವ ವಿಚಾರದಲ್ಲಿ ನಟ ಸುಮನ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ತೆಲುಗು ಚಿತ್ರರಂಗದಲ್ಲಿ ನೂರಾರು ಚಿತ್ರದಲ್ಲಿ ನಾಯಕ ನಟನಾಗಿ ನಟಿಸಿರುವ ನಟ ಸುಮನ್ ಈ ಪ್ರತಿಕ್ರಿಯೆ ನೀಡಿದ್ದಾರೆ. ಇಂತಹ ಅಪಚಾರ ಎಸಗಿರುವ ಯಾರೇ ಆದರೂ ಅವರ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಅನಂತಪುರ ಜಿಲ್ಲೆಯ ಗುಂಟಕಲ್ಲಿನಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ಸುಮನ್ ಈ ವಿಚಾರವಾಗಿ ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಇದು ಹಿಂದೂಗಳ ಭಾವನೆಗೆ ದೊಡ್ಡ ಆಘಾತ ನೀಡಿದ ಘಟನೆಯಾಗಿದ್ದು, ಇಂತಹ ಕೃತ್ಯವನ್ನು ಎಸಗಲು ಭಯೋತ್ಪಾಧಕರು ಹಾಗೂ ಫ್ಯಾಸಿಸ್ಟ್ ಶಕ್ತಿಗಳಿಂದಷ್ಟೇ ಸಾಧ್ಯ. ಅಂತಹ ಒಂದು ಘೋರ ಕೃತ್ಯ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ನಡೆದಿದೆ ಎಂದು ಅವರು ಹೇಳಿದ್ದಾರೆ. ತಿರುಪತಿ ದೇವಸ್ಥಾನದ ಆಡಳಿತ ಹಾಗೂ ಟ್ರಸ್ಟ್ನಲ್ಲಿ ತಿಮ್ಮಪ್ಪನ ಭಕ್ತರನ್ನು ನೇಮಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
BIG BOSS
BBK11 ವೇದಿಕೆಗೆ ಬರುತ್ತಿದ್ದಂತೆ ರೀಲ್ಸ್ ಸ್ಟಾರ್ ಮೇಲೆ ಕೋಪಗೊಂಡ ಕಿಚ್ಚ: ಇಂತವರನ್ನ ಏಕೆ ಕರೆಸಿದ್ರಿ ಎಂದು ಗರಂ?
ಮಂಗಳೂರು: ರೀಲ್ಸ್ ಸ್ಟಾರ್ ಹಾಗೂ ಕಾಮಿಡಿ ಕಲಾವಿದ ಧನರಾಜ್ ಆಚಾರ್ ಅವರು ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಇನ್ನೂ ಧನರಾಜ್ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಡುತ್ತಿದ್ದಂತೆ ಕಿಚ್ಚ ಸುದೀಪ್ ಗರಂ ಆಗಿದ್ದಾರೆ.
ಕಿಚ್ಚ ಕೊಂಚ ಮುನಿಸಿಕೊಳ್ಳಲು ಕಾರಣವೂ ಇದೆ. ಹಿಂದೆ ಬಿಗ್ ಬಾಸ್’ ಬಗ್ಗೆ, ಧನರಾಜ್ ಅವರು ಒಂದು ವಿಡಿಯೋ ಮಾಡಿದ್ದರು. ಜಗಳ ನಡೆಯೋದು ಟಿಆರ್ಪಿಗಾಗಿ ಎಂದು ಅವರು ಹೇಳಿದ್ದರು. ಈ ವಿಡಿಯೋನ ಬಿಗ್ಬಾಸ್ ವೇದಿಕೆಯ ಮೇಲೆ ಪ್ಲೇ ಮಾಡಲಾಯಿತು. ಆ ಬಳಿಕ ಸುದೀಪ್ ಗಂಭೀರವಾಗಿ ಕ್ಲಾಸ್ ತೆಗೆದುಕೊಂಡರು.
‘ನಾವು ಹೆಂಗ್ ಕಾಣಿಸ್ತೀವಿ? ನಾನು ತಮಾಷೆ ಮಾಡೋ ಹಾಗೆ ಕಾಡ್ತಾ ಇದೀನಾ? ಜಗಳ ಮಾಡೋದು ಟಿಆರ್ಪಿಗಾ? ನಾನು ನೋಡದನ್ನು ಬದಲಾಯಿಸಿಕೊಳ್ಳೋಕೆ ಆಗಲ್ಲ. ಬಿಗ್ಬಾಸ್ ಮೇಲೆ ಗೌರವ ಇಲ್ಲದ ವ್ಯಕ್ತಿನ ಏಕೆ ಕಳುಹಿಸುತ್ತಿದ್ದೀರಿ” ಎಂದು ಸುದೀಪ್ ಪ್ರಶ್ನೆ ಮಾಡಿದರು. ನಾನು ಮಾಡಿರೋದು ತಮಾಷೆಗೆ ಇದನ್ನು ಗಂಭೀರವಾಗಿ ಸ್ವೀಕರಿಸಬೇಡಿ’ ಎಂದು ಧನರಾಜ್ ಕೇಳಿಕೊಂಡರು.
ಆ ಬಳಿಕ ಸುದೀಪ್ ನಮಗೂ ರೀಲ್ಸ್ ಮಾಡೋಕೆ ಬರುತ್ತೇರಿ ಎಂದು ಜೋರಾಗಿ ನಕ್ಕರು. ಆಗ ಧನರಾಜ್ ನಿಟ್ಟುಸಿರು ಬಿಟ್ಟರು. ಒಂದು ಕಡೆಯಿಂದ ಧನರಾಜ್ ಪತ್ನಿ ಅವರ ಪ್ರಶ್ನೆ ಹಾಗೂ ಸುದೀಪ್ ಅವರ ವರ್ತನೆಯನ್ನು ಕಂಡು ಜೋರಾಗಿ ಅಳಲು ಆರಂಭಿಸಿದರು. ನಂತರ ಇದು ತಮಾಷೆಗಾಗಿ ಎಂದು ಅವರಿಗೆ ತಿಳಿಯಿತು.
ಧನರಾಜ್ಗೆ ಮಗು ಜನಿಸಿ ಇನ್ನೂ ಒಂದು ತಿಂಗಳೂ ಆಗಿಲ್ಲ. ಮಗು ಜನಿಸಿದ ಕೂಡಲೇ ಅವರು ಆಸ್ಪತ್ರೆಯಲ್ಲಿ ಇರುವಾಗಲೇ ಬಿಗ್ಬಾಸ್ ನಿಂದ ಆಫರ್ ಬಂದಿತ್ತು. ಮೊದಲಿಗೆ ಹೋಗುವುದೋ ಬೇಡವೋ ಎಂದುಕೊಂಡರು. ನಂತರ ಮಗಳ ಹುಟ್ಟಿದ ನಂತರ ಹೊಸ ಅವಕಾಶ ಸಿಕ್ಕಿದೆ. ಅವಳಿಗೋಸ್ಕರ ನಾನು ಬಿಗ್ಬಾಸ್ ಗೆ ಹೋಗುತ್ತೇನೆ ಎಂದರು. ಹೀಗಾಗಿ, ಇದಕ್ಕೆ ಒಪ್ಪಿಕೊಂಡರು. ನಂತರ ಒಂದು ತಿಂಗಳ ಮಗುವಿನ ಮುಖ ನೋಡಿ ಬಿಗ್ಬಾಸ್ ಮನೆಗೆ ಎಂಟ್ರಿ ಕೊಟ್ಟರು.
BIG BOSS
ದೊಡ್ಮನೆ ಶೋಗೂ ಮೊದಲೇ ಸ್ವರ್ಗ, ನರಕದ ಲುಕ್ ರಿವೀಲ್-ಸ್ಪರ್ಧಿಗಳು ಶಾಕ್
ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 11ರ ಶೋ ಶುರುವಾಗಿದೆ. ಈಗಾಗಲೇ ದೊಡ್ಮನೆಗೆ 17 ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಶೋ ಪ್ರಸಾರಕ್ಕೂ ಮೊದಲೇ ದೊಡ್ಮನೆಯ ಸ್ಬರ್ಗ ಮತ್ತು ನರಕ ಝಲಕ್ ಅನ್ನು ವಾಹಿನಿ ರಿವೀಲ್ ಮಾಡಿದೆ.
ಕಳೆದ 10 ಸೀಸನ್ಗಳಿಂದ ಬಿಗ್ ಬಾಸ್ ಮನೆ ಒಂದರಕ್ಕಿಂತ ಒಂದು ಅದ್ಧೂರಿಯಾಗಿ ತೋರಿಸಲಾಗಿತ್ತು. ಈ ಬಾರಿಯು ಮತ್ತಷ್ಟು ವಿಜೃಂಭಣೆಯಿಂದ ಬಿಗ್ ಬಾಸ್ ಮನೆಯನ್ನು ರೆಡಿ ಮಾಡಲಾಗಿದೆ. ಹೊಸ ಸಮಾಚಾರ ಏನೆಂದರೆ, ಈ ಬಾರಿ ಸ್ವರ್ಗ ಮತ್ತು ನರಕ ಎಂದು 2 ಕಾನ್ಸೆಸ್ಟ್ಗಳು ಇರುತ್ತವೆ. ಈ ಬಾರಿ ಕೂಡ ಹೊಸ ಥೀಮ್ನೊಂದಿಗೆ ದೊಡ್ಮನೆಯನ್ನು ವಾಹಿನಿ ಸ್ವರ್ಗ ಮತ್ತು ನರಕದಂತೆಯೇ ಸಿದ್ಧಪಡಿಸಿದ್ದಾರೆ. ಸ್ವರ್ಗದ ಮನೆ ಐಷಾರಾಮಿಯಾಗಿದ್ರೆ, ಇತ್ತ ನರಕದ ಮನೆ ಭಯಾನಕವಾಗಿದೆ.
ಇದೆಲ್ಲದರ ನಡುವೆ ಸುದೀಪ್ ಸನ್ಗ್ಲಾಸ್ ಧರಿಸಿ `ಬಿಗ್ ಬಾಸ್’ ವೇದಿಕೆ ಸ್ಟೈಲೀಶ್ ಎಂಟ್ರಿ ಕೊಟ್ಟಿದ್ದಾರೆ. ಮೋಕ್ಷಿತಾ ಪೈ, ಭವ್ಯಾ ಗೌಡ, ಚೈತ್ರಾ ಕುಂದಾಪುರ, ಅನುಷಾ ರೈ, ಧರ್ಮ ಕೀರ್ತಿರಾಜ್, ಉಗ್ರಂ ಮಂಜು, ಧನರಾಜ್ ಆಚಾರ್, ಐಶ್ವರ್ಯಾ ಸಿಂದೋಗಿ, ಯಮುನಾ ಶ್ರೀನಿಧಿ, ತ್ರಿವಿಕ್ರಮ್, ಶೀಶಿರ್, ಗೋಲ್ಡ್ ಸುರೇಶ್, ಗೌತಮಿ, ಮಾನಸಾ, ರಂಜಿತ್ ಬಿಗ್ ಬಾಸ್ಗೆ ಎಂಟ್ರಿ ಕೊಟ್ಟಾಗಿದೆ.
- LATEST NEWS5 days ago
ಲಕ್ಷ್ಮೀ ಹೆಬ್ಬಾಳ್ಕರ್ಗೆ 1 ಕೆಜಿ ಬಂಗಾರದ ಆಫರ್ ನೀಡಿದ ಮಾಜಿ ಸಚಿವ
- LATEST NEWS6 days ago
ಸೆಪ್ಟಂಬರ್ 29 ರಿಂದ ಆಕಾಶದಲ್ಲಿ ಎರಡು ಚಂದ್ರ ಗೋಚರ..! ಏನಿದು ವಿಸ್ಮಯ..?
- LATEST NEWS6 days ago
ಮಂಗಳೂರು: ಕಾಸ್ಮೆಟಿಕ್ ಸರ್ಜರಿ ವೇಳೆ ಯುವಕ ಮೃ*ತ್ಯು
- LATEST NEWS6 days ago
ಬಜೆಟ್ ಬೆಲೆಯ ಐಫೋನ್ ಹುಡುಕುತ್ತಿದ್ದೀರಾ? ಸದ್ಯದಲ್ಲೇ ಬರಲಿದೆ iPhone SE4