Connect with us

FILM

bengaluru : ಹಿರಿಯ ಚಿತ್ರ ನಿರ್ಮಾಪಕ ಕೆಸಿಎನ್ ಮೋಹನ್ ವಿಧಿವಶ..!

Published

on

ಸ್ಯಾಂಡಲ್‌ವುಡ್ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಅವರು ಚಿಕಿತ್ಸೆ ಫಲಿಸದೇ ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.

ಬೆಂಗಳೂರು :  ಸ್ಯಾಂಡಲ್‌ವುಡ್ ಹಿರಿಯ ನಿರ್ಮಾಪಕ ಕೆಸಿಎನ್ ಮೋಹನ್ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಅವರು ಚಿಕಿತ್ಸೆ ಫಲಿಸದೇ ಭಾನುವಾರ ಬೆಳಿಗ್ಗೆ ವಿಧಿವಶರಾಗಿದ್ದಾರೆ.

ಮೋಹನ್ ಒಡೆತನದಲ್ಲಿ ಜಯಸಿಂಹ, ಭಲೇ ಚತುರ, ರಮ್ಯಾ (Ramya) ನಟನೆಯ ಜೂಲಿ (Julie Film), ಹೂಮಳೆ, ಅಳಿಮಯ್ಯ, ಆಚಾರ್ಯ, ಪೊಲೀಸ್ ಪವರ್, ಸಿನಿಮಾ ಸೇರಿದಂತೆ ಹಲವು ಸಿನಿಮಾಗಳಿಗೆ ನಿರ್ಮಾಣ ಮಾಡಿದ್ದ ಕೆಸಿಎನ್ ಮೋಹನ್ ಅವರು ತಮ್ಮ ತಂದೆ ನಿರ್ಮಾಪಕ ಕೆಸಿಎನ್ ಗೌಡ್ರು ಅವರ ನಿಧನ ಬಳಿಕ ಅನುಪಮ್ ಮೂವೀಸ್ ಜವಾಬ್ದಾರಿಯನ್ನ ಹೊತ್ತಿದ್ದರು.

ಕನ್ನಡದ ಸಾಕಷ್ಟು ಸಿನಿಮಾಗಳಿಗೆ ಬಂಡವಾಳ ಹೂಡುವ ಮೂಲಕ ಕೆಸಿಎನ್ ಮೋಹನ್ ಸಾಥ್ ನೀಡಿದ್ರು.

ನಿರ್ಮಾಪಕ ಮೋಹನ್, ಬೆಂಗಳೂರಿನ ನವರಂಗ್ ಚಿತ್ರಮಂದಿರದ ಮಾಲಿಕರಾಗಿದ್ದಾರೆ.ಇದೀಗ 62ನೇ ವಯಸ್ಸಿಗೆ ಎಂದೂ ಬಾರದ ಲೋಕಕ್ಕೆ ಕೆಸಿಎನ್ ಮೋಹನ್ ಹೋಗಿದ್ದಾರೆ.

ಕೆಲ ವರ್ಷಗಳ ಹಿಂದೆ ಮೋಹನ್ ಅವರ ಪತ್ನಿ ನಿಧನರಾಗಿದ್ದರು. ಸಹೋದರ ಚಂದ್ರಶೇಖರ್ ಕೂಡ ನಿಧನರಾಗಿದ್ದಾರೆ.

ಇದೀಗ ಇಬ್ಬರೂ ಹೆಣ್ಣು ಮಕ್ಕಳನ್ನು ಬಿಟ್ಟು ಮೋಹನ್ ಅಗಲಿದ್ದಾರೆ.

ಸಾಕಷ್ಟು ಸಮಯದಿಂದ ಮೋಹನ್ ಅನಾರೋಗ್ಯದಿಂದ ಬಳಲುತ್ತಿದ್ದರು. ಹಾಗಾಗಿ ಮಣಿಪಾಲ್ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನ ಕೂಡ ಪಡೆಯುತ್ತಿದ್ದರು.

ಜುಲೈ 2ರ ಬೆಳಿಗ್ಗೆ ಕಿಡ್ನಿ ವೈಪಲ್ಯದಿಂದ ಕೆಸಿಎನ್ ಮೋಹನ್ ವಿಧಿವಶರಾಗಿದ್ದಾರೆ.

ಮೋಹನ್ ನಿಧನಕ್ಕೆ ಚಿತ್ರರಂಗದ ಗಣ್ಯರು, ಆಪ್ತರು ಸಂತಾಪ ಸೂಚಿಸಿದ್ದಾರೆ.

ಕಸ್ತೂರಿ ನಿವಾಸ, ಭಕ್ತ ಸಿರಿಯಾಳ, ರಂಗನಾಯಕಿ, ಸನಾದಿ ಅಪ್ಪಣ್ಣ, ಸತ್ಯ ಹರಿಶ್ಚಂದ್ರ, ಬಬ್ರುವಾಹನ ಸೇರಿ ಅನೇಕ ಚಿತ್ರಗಳ ನಿರ್ಮಾಣ ಸಂಸ್ಥೆಯ ಕುಡಿ ಕೆಸಿಎನ್ ಮೋಹನ್ ಅವರಾಗಿದ್ದು, ಮೋಹನ್ ನಿಧನದ ಮೂಲಕ 50 ವರ್ಷಗಳ ಇತಿಹಾಸವುಳ್ಳ ಸಂಸ್ಥೆಯೇ ಯುಗಾಂತ್ಯವಾಗಿದೆ.

ಕನ್ನಡ ಚಿತ್ರೋದ್ಯಮದಲ್ಲಿ ಬಿಗ್ ಬಜೆಟ್ ಚಿತ್ರಗಳನ್ನ ಪರಿಚಯಿಸಿದ್ದ ಸಂಸ್ಥೆ ಡಾ.ರಾಜ್ ಕುಮಾರ್ ಚಿತ್ರಗಳನ್ನ ನಿರ್ಮಿಸುವುದರ ಮೂಲಕ ಸ್ಯಾಂಡಲ್ ವುಡ್ ಶ್ರೀಮಂತ ಚಿತ್ರ ನಿರ್ಮಾಣ ಸಂಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಕಳೆದ ಕೆಲ ವರ್ಷಗಳ ಹಿಂದೆ ಲೆಜೆಂಡ್ ‘ಕಸ್ತೂರಿ ನಿವಾಸ’ ಚಿತ್ರವನ್ನು ಕಲರ್ ಟಚ್ ಕೊಟ್ಟು ಆಧುನೀಕರಿಸಿ ನಿರ್ಮಾಪಕ ಕೆಸಿಎನ್ ಮೋಹನ್ ರೀ-ರಿಲೀಸ್ ಮಾಡಿದ್ದರು.

Click to comment

Leave a Reply

Your email address will not be published. Required fields are marked *

FILM

ಮಲಯಾಳಂನ ‘2018’ ಚಿತ್ರ ಆಸ್ಕರ್ ಗೆ ನಾಮಿನೇಟ್

Published

on

OSCAR AWARD : 2024ಕ್ಕೆ ಭಾರತವು ಆಸ್ಕರ್ ಪ್ರಶಸ್ತಿಗೆ ಮಲಯಾಳಂ ಭಾಷೆಯ ‘2018’ ಚಿತ್ರವನ್ನು ನಾಮಿನೇಟ್ ಮಾಡಿದೆ.

ಬಾರಿ ಆಸ್ಕರ್​ಗೆ ಭಾರತದದಿಂದ ಕಳಿಸಲಾಗುವ ಅಧಿಕೃತ ಸಿನಿಮಾ ಘೋಷಣೆ ಆಗಿದ್ದು, ಮಲಯಾಳಂ ನ ‘2018’ ಸಿನೆಮಾ ಆಯ್ಕೆಯಾಗಿದೆ.

ಕಳೆದ ಸಲ ರಾಜಮೌಳಿ ನಿರ್ದೇಶನದ ಆರ್.ಆರ್.ಆರ್ ಸಿನಿಮಾದ ನಾಟು ನಾಟು ಹಾಡಿಗಾಗಿ ಆಸ್ಕರ್ ಪ್ರಶಸ್ತಿ ಬಂದಿತ್ತು.

ಈ ಬಾರಿ ದಕ್ಷಿಣದ ಮತ್ತೊಂದು ಸಿನಿಮಾ ಈ ವರ್ಷದ ಆಸ್ಕರ್ ಪ್ರಶಸ್ತಿಗಾಗಿ ನಾಮಿನೇಟ್ ಆಗಿದೆ.

ಮಲಯಾಳಂನ 2018 ಹೆಸರಿನ ಚಿತ್ರ ಈ ಬಾರಿ ಆಸ್ಕರ್ ಪ್ರಶಸ್ತಿಗಾಗಿ ಸೆಣಸಲಿದೆ. ಈ ವಿಷಯವನ್ನು ಆಸ್ಕರ್ ಆಯ್ಕೆ ಸಮಿತಿ ಅಧ್ಯಕ್ಷ, ಕನ್ನಡದವರೇ ಆಗಿರುವ ಗಿರೀಶ್ ಕಾಸರವಳ್ಳಿ ತಿಳಿಸಿದ್ದಾರೆ.

ಟೊವಿನೋ ಥಾಮಸ್ ನಟನೆಯ 2018 ಹೆಸರಿನ ಮಲಯಾಳಂ ಸಿನಿಮಾ ವಿಶೇಷ ಕಥಾವಸ್ತುವನ್ನು ಹೊಂದಿದೆ.

ಕೇರಳದಲ್ಲಿ ನಾಲ್ಕು ವರ್ಷಗಳ ಹಿಂದೆ ನಡೆದ ಅತಿವೃಷ್ಠಿ ಸೃಷ್ಟಿಸಿದ ಆವಾಂತರವನ್ನು ಆಧರಿಸಿದ ಚಿತ್ರಿಸಲಾಗಿದೆ.

ಈ ಚಿತ್ರಕ್ಕೆ ಭಾರೀ ಪ್ರತಿಕ್ರಿಯೆ ಕೂಡ ಉತ್ತಮವಾಗಿತ್ತು. ಈ ಸಿನಿಮಾವನ್ನು ಕಾಸರವಳ್ಳಿ ಅಧ್ಯಕ್ಷತೆಯ ಕಮೀಟಿಯು ಆಸ್ಕರ್ ಪ್ರಶಸ್ತಿ ಸ್ಪರ್ಧೆಗಾಗಿ ಆಯ್ಕೆ ಮಾಡಲಾಗಿದೆ.

ಈ ಆಯ್ಕೆಯು ಫಿಲ್ಮ್ ಫೆಡರೇಶನ್ ಆಫ್ ಇಂಡಿಯಾ ಮೂಲಕ ನಡೆಯುತ್ತದೆ. ಇದು ಪ್ರತಿ ವರ್ಷವೂ ಒಂದು ಸಿನಿಮಾವನ್ನು ಆಯ್ಕೆ ಮಾಡಿ, ಸರಕಾರವೇ ಉಳಿದ ವೆಚ್ಚವನ್ನು ಭರಿಸಿ ಕಳುಹಿಸುತ್ತದೆ.

ಜೊತೆಗೆ ಖಾಸಗಿಯಾಗಿ ಯಾವ ಸಿನಿಮಾಗಳು ಕೂಡ ಸ್ಪರ್ಧಿಸಬಹುದಾಗಿದೆ.

Continue Reading

FILM

ಲೇಡಿ ಸೂಪರ್ ಸ್ಟಾರ್ ನಯನತಾರಾ ಅವಳಿ ಮಕ್ಕಳ ಬರ್ತ್ ಡೇ ಸೆಲೆಬ್ರೇಷನ್

Published

on

ದಕ್ಷಿಣ ಚಿತ್ರರಂಗದ ‘ಲೇಡಿ ಸೂಪರ್ ಸ್ಟಾರ್’ ಜನಪ್ರಿಯತೆಯ ನಯನತಾರಾ ಹಾಗೂ ಸೌತ್​​ ಸ್ಟಾರ್ ಡೈರೆಕ್ಟರ್​​​ ವಿಘ್ನೇಶ್ ಶಿವನ್ ದಂಪತಿಯ ಅವಳಿ ಮಕ್ಕಳು ಉಯಿರ್​ ಮತ್ತು ಉಲಗಮ್​​ ಮೊದಲ ವರ್ಷದ ಜನ್ಮದಿನ ಆಚರಿಸಿಕೊಂಡಿದ್ದಾರೆ.

 

ಅವಳಿ ಮಕ್ಕಳ ಮೊದಲ ವರ್ಷದ ಹುಟ್ಟುಹಬ್ಬವಾಗಿರೋ ಕಾರಣ, ಸ್ಪೆಷಲ್ ಆಗಿ ಸೆಲೆಬ್ರೇಟ್ ಮಾಡಿದ್ದಾರೆ. ಇಬ್ಬರೂ ಮಕ್ಕಳಿಗೆ ಬ್ಲ್ಯಾಕ್ & ವೈಟ್ ಡ್ರೆಸ್ ಧರಿಸಿ ಚೆಂದದ ಫೋಟೋಶೂಟ್ ಮಾಡಿಸಿ ಶೇರ್ ಮಾಡಿದ್ದಾರೆ.


ಸ್ಟಾರ್ ಕಪಲ್ ಸೋಷಿಯಲ್ ಮೀಡಿಯಾದಲ್ಲಿ ಅವಳಿ ಮಕ್ಕಳ ಪೋಟೋಗಳನ್ನು ಹಂಚಿಕೊಂಡು ಶುಭ ಹಾರೈಸಿದ್ದಾರೆ.

“ನಿಮ್ಮಿಬ್ಬರಿಗೆ ಹುಟ್ಟು ಹಬ್ಬದ ಶುಭಾಶಯಗಳು. ನಗು, ಸಂತೋಷ, ಮತ್ತು ಆಶೀರ್ವಾದಕ್ಕೆ ಒಂದು ವರ್ಷ. ನಮ್ಮ ಪ್ರೀತಿಯ ಉಯಿರ್ ಮತ್ತು ಉಲಗಮ್ ಗೆ ಹುಟ್ಟು ಹಬ್ಬದ ಶುಭಾಶಯಗಳು.

ನಿಮ್ಮ ಸುತ್ತ ಮುತ್ತಲಿರುವ ಎಲ್ಲರಲ್ಲೂ ಸಂತೋಷ ತರುವಂತೆ ಜೀವನದಲ್ಲಿ ನೀವಿಬ್ಬರೂ ಬಹಳ ಎತ್ತರಕ್ಕೆ ಸಾಗಿ. ನಿಮ್ಮನ್ನು ಬಹಳ ಪ್ರೀತಿಸುತ್ತೇವೆ.

ನೀವು ನಮ್ಮ ಜೀವನವನ್ನು ಪ್ರಜ್ವಲಿಸಿದ್ದೀರಿ. ವರ್ಣಮಯ ಮಾಡಿದ್ದೀರಿ. ನಿಮ್ಮೊಂದಿಗಿರುವುದು ಹಬ್ಬದಂತೆ. ನಿಮ್ಮಂತೆ ಇರುವ ಪವರ್ ಫುಲ್ ಟವರ್ ಎಂದು ಮೊದಲ ಜನ್ಮ ದಿನ ಆಚರಿಸಬೇಕೆಂದುಕೊಂಡಿದ್ದೆವು.

ಕನಸು ಈಡೇರಿದ್ದಕ್ಕಾಗಿ ಆ ಭಗವಂತನಿಗೆ ಧನ್ಯವಾದಗಳು. ಎಂದಿನಂತೆ ಆಶೀರ್ವದಿಸಲ್ಪಟ್ಟಿದ್ದೇವೆ ಎಂದು ಬರೆದುಕೊಂಡಿದ್ದಾರೆ.

ಫೋಟೋ ನೋಡಿ ಲಕ್ಷಕ್ಕೂ ಮೀರಿ ಹುಟ್ಟು ಹಬ್ಬದ ಶುಭಾಶಯಗಳು ಹರಿದು ಬಂದಿದೆ.

Continue Reading

FILM

ರುಕ್ಮಿಣಿ ವಸಂತ್ ಸ್ಟಿಲ್ ಸಿಂಗಲ್ – ರಕ್ಷಿತ್ ಶೆಟ್ಟಿ ಫ್ಯಾನ್ಸ್ ಹ್ಯಾಪಿ

Published

on

ಸಪ್ತ ಸಾಗರದಾಚೆ ಎಲ್ಲೋ ಸಿನೆಮಾ ಖ್ಯಾತಿಯ ನಟಿ ರುಕ್ಮಿಣಿ ವಸಂತ್ ನಾನು ಇನ್ನೂ ಸಿಂಗಲ್ ಅನ್ನೋ  ಮೂಲಕ ರಕ್ಷಿತ್ ಶೆಟ್ಟಿ ಫ್ಯಾನ್ಸ್ ಗೆ ಸಿಹಿ ಸುದ್ದಿ  ನೀಡಿದ್ದಾರೆ. ಈ ಸುದ್ದಿ ಕೇಳಿದ ರಕ್ಷಿತ್ ಶೆಟ್ಟಿ ಫ್ಯಾನ್ಸ್ ಹಬ್ಬ ಮಾಡ್ತಿದ್ದಾರೆ. 

 

ಬೆಂಗಳೂರು : ಸಪ್ತ ಸಾಗರದಾಚೆ ಎಲ್ಲೋ ಸಿನೆಮಾ ಬಂದ ಮೇಲಂತೂ ನಟಿ ರುಕ್ಮಿಣಿ ವಸಂತ್ ಕರ್ನಾಟಕದ ಹೊಸ ಕ್ರಶ್ ಆಗಿ ಬದಲಾಗಿದ್ದಾರೆ.ಅವರ ಸರಳವಾದ ಸೌಂದರ್ಯ, ಸಂಯಮದ ನಟನೆಗೆ ಕನ್ನಡ ಪ್ರೇಕ್ಷಕರು ಮಾರು ಹೋಗಿದ್ದಾರೆ. ಅದೆಷ್ಟೋ ಹುಡುಗರ ಮೊಬೈಲ್ ವಾಲ್ ಪೇಪರ್ ಕೂಡ ರುಕ್ಮಿಣಿ ವಸಂತ್ ಆಗಿದ್ದಾರೆ.


ಆದ್ರೆ ಪುಟ್ಟಿಗೆ ಲವ್ವರ್ ಇದ್ದರಾ ಅನ್ನೋ ಪ್ರಶ್ನೆ ಮಾತ್ರ ರುಕ್ಮಿಣಿ ಫ್ಯಾನ್ಸಲ್ಲಿ ಕಾಡ್ತಿತ್ತು. ಯಾಕಂದ್ರೆ ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಒಂದು ಫೋಟೋ ವೈರಲ್ ಆಗಿತ್ತು. ಆ ಫೋಟೋ ನೋಡಿ ರಕ್ಷಿತ್ ಫ್ಯಾನ್ಸ್ ನಿರಾಸೆಗೆ ಒಳಗಾಗಿದ್ರು.

ಹೌದು ಯುವಕನೊಬ್ಬನೊಟ್ಟಿಗೆ ರುಕ್ಮಿಣಿ ಆತ್ಮೀವಾಗಿ ಕಂಡ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಆ ಚಿತ್ರಕ್ಕೆ ರುಕ್ಮಿಣಿ ಕೂಡ “ಐ ಲವ್ ಯೂ” ಅಂತ ಪ್ರತಿಕ್ರಿಯೆ ನೀಡಿದ್ದು ಸಾಕಷ್ಟು ಅನುಮಾನಗಳಿಗೆ ಕಾರಣವಾಗಿತ್ತು.

ಇದೀ ಈ ಸುದ್ದಿಗೆ ಸ್ವತಃ ರುಕ್ಮಿಣಿ ವಸಂತ್ ಪ್ರತಿಕ್ರಿಯೆ ನೀಡಿದ್ದು, ಆ ವೈರಲ್ ಆಗಿರುವ ಚಿತ್ರದಲ್ಲಿರುವುದು ನನ್ನ ಗೆಳೆಯ, ನಾನು ಇನ್ನೂ ಸಿಂಗಲ್ ಎಂದು ಸ್ಪಷ್ಟನೆ ನೀಡಿದ್ದಾರೆ.

ಹೊಸಬಳಾಗಿದ್ದರೂ ನನ್ನ ಸಿನಿಮಾಗಳ ಬಗ್ಗೆ, ನನ್ನ ಖಾಸಗಿ ಜೀವನದ ಬಗ್ಗೆ ಜನ ಕೇರ್ ಮಾಡುತ್ತಿರುವುದು ಖುಷಿ ಆಗುತ್ತದೆ. ಇದೇ ಸಮಯದಲ್ಲಿ ಸುಳ್ಳು ಸುದ್ದಿಗಳು, ನೆಗೆಟಿವ್ ಕಮೆಂಟ್​ಗಳು ಬೇಸರವನ್ನು ತರಿಸುತ್ತವೆ” ಎಂದಿದ್ದಾರೆ.


ಈ ಮಾತುಗಳನ್ನು ಸ್ವತಃ ರುಕ್ಮಿಣಿ ವಸಂತ್ ಬಾಯಾರೆ ಕೇಳಿ ರಕ್ಷಿತ್ ಶೆಟ್ಟಿ ಫ್ಯಾನ್ಸ್ ನಿಟ್ಟುಸಿರು ಬಿಟ್ಟಿದ್ದಾರೆ. ನಿಜ ಜೀವನದಲ್ಲೂ ರಕ್ಷಿತ್-ರುಕ್ಮಿಣಿ ಒಂದಾಗಲಿ ಅಂತ ಮನಸಾರೆ ಹಾರೈಸುತ್ತಿದ್ದಾರೆ.

Continue Reading

LATEST NEWS

Trending