LATEST NEWS
‘ಕ್ರೈಂ ಗಣೇಶ್’ ಎಂದೇ ಖ್ಯಾತರಾಗಿದ್ದ ಹಿರಿಯ ಪತ್ರಕರ್ತ ಗಣೇಶ್ ಇನ್ನಿಲ್ಲ
ಮಂಗಳೂರು/ಬೆಂಗಳೂರು : ಕ್ರೈಂ ಗಣೇಶ್ ಎಂದೇ ಖ್ಯಾತರಾಗಿದ್ದ ಹಿರಿಯ ಪತ್ರಕರ್ತ ಗಣೇಶ್ ಇಹಲೋಕ ತ್ಯಜಿಸಿದ್ದಾರೆ. ಅನಾರೋಗ್ಯದಿಂದಾಗಿ ನಗರದ ಮಹಾವೀರ್ ಜೈನ್ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಬೆಳಿಗ್ಗೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕಳೆದ 20 ವರ್ಷಗಳಿಂದ ಪತ್ರಿಕಾರಂಗದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರು ಸದ್ಯ ಟಿವಿ 5 ಚಾನಲ್ ನಲ್ಲಿ ಔಟ್ ಪುಟ್ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು.
ಇದನ್ನೂ ಓದಿ : WATCH VIDEO : ಅಬ್ಬಬ್ಬಾ! ಕಾಳಿಂಗ ಸರ್ಪಕ್ಕೆ ನೀರುಣಿಸಿದ ಭೂಪ! ದೈತ್ಯ ಹಾವು ಏನ್ಮಾಡಿತು ಗೊತ್ತಾ!?
ಮೂಲತಃ ಮಾಗಡಿ ತಾಲೂಕಿನ ತಾಳೆಕೆರೆಯವರಾಗಿದ್ದ ಗಣೇಶ್ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ. ಕಸ್ತೂರಿ ಟಿವಿ ಮೂಲಕ ಕಸ್ತೂರಿ ಗಣೇಶ್ ಎಂದು ಪರಿಚಿತರಾಗಿದ್ದ ಗಣೇಶ್ ಅವರ ಕ್ರೈಂ ವರದಿಗಾರಿಕೆಯಲ್ಲಿ ಹೆಸರುವಾಸಿಯಾಗಿದ್ದರು.
LATEST NEWS
ಮಹಿಳೆಯ ಕೊ*ಲೆಗೈದು ಶ*ವದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಆಟೋ ಚಾಲಕ
ಮುಳಬಾಗಿಲು(ಕೋಲಾರ): ಮಹಿಳೆಯನ್ನು ಕೊಲೆ ಮಾಡಿದ ಆಟೋ ಚಾಲಕನೊಬ್ಬ ಶ*ವದೊಂದಿಗೇ ಅತ್ಯಾ*ಚಾರವೆಸಗಿದ ಕೃ*ತ್ಯ ಕೋಲಾರ ಜಿಲ್ಲೆ ಮುಳಬಾಗಿಲಿನಲ್ಲಿ ಬೆಳಕಿಗೆ ಬಂದಿದೆ.
ಮುಳಬಾಗಿಲು ತಾಲೂಕಿನ ಹೈದರಿನಗರದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ಆಟೋ ಚಾಲಕ ಸೈಯ್ಯದ್ ಸುಹೇಲ್ ಎಂಬಾತ ಸುಶೀಲಮ್ಮ ಎಂಬ ಮಹಿಳೆಯನ್ನು ಕೊ*ಲೆ ಮಾಡಿ ಬಳಿಕ ಅತ್ಯಾ*ಚಾರ ಎಸಗಿದ್ದಾನೆಂದು ಪೊಲೀಸರು ತಿಳಿಸಿದ್ದಾರೆ.
ಸೆಪ್ಟೆಂಬರ್ 24 ರಂದು ಮುಳಬಾಗಿಲಿನ ಹೈದರಿನಗರದಲ್ಲಿ 50 ವರ್ಷದ ಸುಶೀಲಮ್ಮ ಎಂಬ ಮಹಿಳೆಯನ್ನು ಕೊ*ಲೆ ಮಾಡಿ ಆಟೋ ಚಾಲಕ ಸೈಯ್ಯದ್ ಸುಹೇಲ್ ಬಳಿಕ ಶ*ವದೊಂದಿಗೆ ಅತ್ಯಾ*ಚಾರವೆಸಗಿದ್ದ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ. ಮುಳಬಾಗಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
LATEST NEWS
ಜಮ್ಮು- ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ‘ಒಮರ್ ಅಬ್ದುಲ್ಲಾ’ ಆಯ್ಕೆ
ನವದೆಹಲಿ: ನ್ಯಾಷನಲ್ ಕಾನ್ಫರೆನ್ಸ್ ಶಾಸಕಾಂಗ ಪಕ್ಷದ ನಾಯಕರಾಗಿ ಒಮರ್ ಅಬ್ದುಲ್ಲಾ ಅವರನ್ನ ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ ಎಂದು ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಗುರುವಾರ ಪ್ರಕಟಿಸಿದ್ದಾರೆ.
“ಶಾಸಕಾಂಗ ಪಕ್ಷದ ಸಭೆ ನಡೆಯಿತು. ಅಲ್ಲಿ ಎಲ್ಲರೂ ಒಮರ್ ಅಬ್ದುಲ್ಲಾ ಅವರನ್ನ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆ ಮಾಡಿದರು ಎಂದು ಅವರು ತಿಳಿಸಿದ್ದಾರೆ. ಹೊಸ ಸರ್ಕಾರ ರಚಿಸುವ ಪ್ರಕ್ರಿಯೆಯನ್ನು ಮುಂದುವರಿಸಲು ಚುನಾವಣಾ ಪೂರ್ವ ಮೈತ್ರಿ ಸದಸ್ಯರ ಸಭೆಯನ್ನು ಶುಕ್ರವಾರ ನಿಗದಿಪಡಿಸಲಾಗಿದೆ ಎಂದು ಅವರು ಘೋಷಿಸಿದರು.
ಇದಕ್ಕೂ ಮುನ್ನ, ನ್ಯಾಷನಲ್ ಕಾನ್ಫರೆನ್ಸ್ (NC)ನಿಂದ ಹೊಸದಾಗಿ ಆಯ್ಕೆಯಾದ ಶಾಸಕರು ಪಕ್ಷದ ಪ್ರಧಾನ ಕಚೇರಿ ನವಾ-ಇ-ಸುಬಾದಲ್ಲಿ ಸಭೆ ಸೇರಿ ತಮ್ಮ ನಾಯಕನನ್ನ ಆಯ್ಕೆ ಮಾಡಿದರು. ಒಮರ್ ಜಮ್ಮು ಮತ್ತು ಕಾಶ್ಮೀರದ ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ.
LATEST NEWS
ಟೆನ್ನಿಸ್ʼ ನಿಂದ ನಿವೃತ್ತಿ ಘೋಷಿಸಿದ ರಫೆಲ್ ನಡಾಲ್
ಟೆನಿಸ್ ಸೂಪರ್ಸ್ಟಾರ್ ರಫೆಲ್ ನಡಾಲ್ ನಿವೃತ್ತಿ ಘೋಷಿಸಿದ್ದು, ನವೆಂಬರ್ನಲ್ಲಿ ನಡೆಯಲಿರುವ ಡೇವಿಸ್ ಕಪ್ ಫೈನಲ್ ತನ್ನ ಕೊನೆಯದು ಎಂದು ಸೋಷಿಯಲ್ ಮೀಡಿಯಾ ಪೋಸ್ಟ್ ಮೂಲಕ ತಿಳಿಸಿದ್ದಾರೆ.
‘ಎಲ್ಲರಿಗೂ ಧನ್ಯವಾದಗಳು’ ಎಂದು ಅವರು ಪೋಸ್ಟ್ನಲ್ಲಿ ಬರೆದಿದ್ದಾರೆ. “ನಾನು ವೃತ್ತಿಪರ ಟೆನಿಸ್ನಿಂದ ನಿವೃತ್ತಿಯಾಗುತ್ತಿದ್ದೇನೆ. ವಾಸ್ತವವೆಂದರೆ ಇದು ಕೆಲವು ಕಷ್ಟಕರ ವರ್ಷಗಳು, ವಿಶೇಷವಾಗಿ ಕಳೆದ ಎರಡು ವರ್ಷಗಳು, “ಎಂದು ನಡಾಲ್ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡ ವೀಡಿಯೊದಲ್ಲಿ ಹೇಳಿದ್ದಾರೆ.
“ಇದು ಕಠಿಣ ನಿರ್ಧಾರವಾಗಿದೆ, ನನಗೆ ಸ್ವಲ್ಪ ಸಮಯ ತೆಗೆದುಕೊಂಡಿದೆ. ಆದರೆ ಈ ಜೀವನದಲ್ಲಿ ಪ್ರತಿಯೊಂದಕ್ಕೂ ಪ್ರಾರಂಭ ಮತ್ತು ಅಂತ್ಯವಿದೆ” ಎಂದು ಅವರು ತಿಳಿಸಿದ್ದಾರೆ. ನಡಾಲ್ ಅವರು ಸ್ಪೇನ್ನ ಮಲಗಾದಲ್ಲಿ ನಡೆಯಲಿರುವ ಡೇವಿಸ್ ಕಪ್ನಲ್ಲಿ ತಮ್ಮ ವೃತ್ತಿಜೀವನವನ್ನು ಪೂರ್ಣಗೊಳಿಸಲು ಉತ್ಸುಕರಾಗಿದ್ದಾರೆ.
ನಡಾಲ್ ಐದು ಬಾರಿ ವಿಶ್ವದ ನಂಬರ್ ಒನ್ ಆಗಿದ್ದರು ಮತ್ತು 2005 ರಿಂದ ಈ ವರ್ಷದ ಮಾರ್ಚ್ ವರೆಗೆ ಟಾಪ್ 10 ಅನ್ನು ಬಿಟ್ಟು ಹೋಗಿರಲಿಲ್ಲ. ವಾಸ್ತವವಾಗಿ, ಸ್ಪೇನ್ ಆಟಗಾರ ಪ್ಯಾರಿಸ್ ಒಲಿಂಪಿಕ್ಸ್ನ ನಂತರ ಆಡಿಲ್ಲ, ಅಲ್ಲಿ ಅವರು ಸಿಂಗಲ್ಸ್ ಪಂದ್ಯಾವಳಿಯ ಎರಡನೇ ಸುತ್ತಿನಲ್ಲಿ ಹಳೆಯ ಪ್ರತಿಸ್ಪರ್ಧಿ ಜೊಕೊವಿಕ್ಗೆ ಸೋತರು ಮತ್ತು ಕಾರ್ಲೋಸ್ ಅಲ್ಕಾರಾಜ್ ಅವರೊಂದಿಗೆ ಪುರುಷರ ಡಬಲ್ಸ್ನ ಕ್ವಾರ್ಟರ್ ಫೈನಲ್ ತಲುಪಿದ್ರುದರು.
- BIG BOSS6 days ago
ಕನ್ನಡ ಬಿಗ್ಬಾಸ್ನಿಂದ ಲಾಯರ್ ಜಗದೀಶ್ ಎಲಿಮಿನೇಷನ್..!
- LATEST NEWS4 days ago
ಶಿಕ್ಷಕಿಯ ಅ*ಶ್ಲೀಲ ವಿಡಿಯೋ ಹಂಚಿಕೆ; ನಾಲ್ವರು ವಿದ್ಯಾರ್ಥಿಗಳ ಬಂಧನ
- BIG BOSS6 days ago
BBK11: ಬಿಗ್ಬಾಸ್ ಮನೆಯಲ್ಲಿರೋ ಮಹಿಳಾ ಸ್ಪರ್ಧಿಗಳ ಖಾಸಗಿತನಕ್ಕೆ ಧಕ್ಕೆ; ಶೋ ವಿರುದ್ಧ ದೂರು ದಾಖಲು
- FILM2 days ago
ಎರಡನೇ ಮದುವೆಯಾಗುತ್ತಿರುವ ಬಿಗ್ಬಾಸ್ ಕಂಟೆಸ್ಟೆಂಟ್