Saturday, April 1, 2023

ಕನ್ನಡದ ಹಿರಿಯ ನಟ ಮನ್​ದೀಪ್ ರಾಯ್ ಹೃದಯಾಘಾತದಿಂದ ನಿಧನ..!

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್ ಹೃದಯಾಘಾತದಿಂದ ತಡರಾತ್ರಿ ಬೆಂಗಳೂರಿನ ಕಾವಲ್​ಭೈರಸಂಧ್ರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಅವರಿಗೆ 73 ವರ್ಷ ವಯಸ್ಸಾಗಿತ್ತು. ಸುಮಾರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಮನ್​ದೀಪ್ ಅವರು ಮೂಲತಃ ಮುಂಬೈಯವರು.

ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದ ಅವರನ್ನು ಶಂಕರ್​ ನಾಗ್​ ಮತ್ತು ಅನಂತ್​ ನಾಗ್​ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು.

ಶಂಕರ್ ನಾಗ್ ರ ‘ಮಿಂಚಿನ ಓಟ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ಬಣ್ಣಹಚ್ಚಿದ ಅವರು ಮಿಂಚಿದ್ದರು. ಡಾ.ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನೆಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ.

ಕಳೆದ ಡಿಸೆಂಬರ್​ನಲ್ಲಿ ಹೃದಯಾಘಾತವಾಗಿತ್ತು, ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್​, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್​ ತಪ್ಪಾ, ಏಳು ಸುತ್ತಿನ ಕೋಟೆ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ ಸೇರಿದಂತೆ ಅನೇಕ ಸಿನೆಮಾಗಳಲ್ಲಿ ಮನ್​ದೀಪ್​ ರಾಯ್​ ನಟಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics