Connect with us

FILM

ಕನ್ನಡದ ಹಿರಿಯ ನಟ ಮನ್​ದೀಪ್ ರಾಯ್ ಹೃದಯಾಘಾತದಿಂದ ನಿಧನ..!

Published

on

ಬೆಂಗಳೂರು : ಕನ್ನಡ ಚಿತ್ರರಂಗದ ಹಿರಿಯ ನಟ ಮನ್​ದೀಪ್ ರಾಯ್ ಹೃದಯಾಘಾತದಿಂದ ತಡರಾತ್ರಿ ಬೆಂಗಳೂರಿನ ಕಾವಲ್​ಭೈರಸಂಧ್ರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ಅವರಿಗೆ 73 ವರ್ಷ ವಯಸ್ಸಾಗಿತ್ತು. ಸುಮಾರು 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ಮನ್​ದೀಪ್ ಅವರು ಮೂಲತಃ ಮುಂಬೈಯವರು.

ರಂಗಭೂಮಿಯಲ್ಲಿ ತೊಡಗಿಸಿಕೊಂಡಿದ್ದ ಅವರನ್ನು ಶಂಕರ್​ ನಾಗ್​ ಮತ್ತು ಅನಂತ್​ ನಾಗ್​ ಕನ್ನಡ ಚಿತ್ರರಂಗಕ್ಕೆ ಪರಿಚಯಿಸಿದರು.

ಶಂಕರ್ ನಾಗ್ ರ ‘ಮಿಂಚಿನ ಓಟ’ ಚಿತ್ರದಲ್ಲಿ ಪೋಷಕ ಪಾತ್ರದಲ್ಲಿ ಬಣ್ಣಹಚ್ಚಿದ ಅವರು ಮಿಂಚಿದ್ದರು. ಡಾ.ರಾಜ್​ಕುಮಾರ್​ ಸೇರಿದಂತೆ ಅನೇಕ ದಿಗ್ಗಜ ನಟರ ಸಿನೆಮಾಗಳಲ್ಲಿ ಬಣ್ಣ ಹಚ್ಚಿದ ಖ್ಯಾತಿ ಅವರಿಗಿದೆ.

ಕಳೆದ ಡಿಸೆಂಬರ್​ನಲ್ಲಿ ಹೃದಯಾಘಾತವಾಗಿತ್ತು, ಅವರನ್ನು ಬೆಂಗಳೂರಿನ ಶೇಷಾದ್ರಿಪುರಂನಲ್ಲಿರುವ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಮಿಂಚಿನ ಓಟ, ಬಾಡದ ಹೂವು, ಆಕಸ್ಮಿಕ, ಅಗ್ನಿ ಐಪಿಎಸ್​, ದೀಪಾವಳಿ, ಅಯ್ಯ, ಅಪೂರ್ವ ಸಂಗಮ, ಪ್ರೀತ್ಸೋದ್​ ತಪ್ಪಾ, ಏಳು ಸುತ್ತಿನ ಕೋಟೆ, ಗಜಪತಿ ಗರ್ವಭಂಗ, ಆಸೆಗೊಬ್ಬ ಮೀಸೆಗೊಬ್ಬ ಸೇರಿದಂತೆ ಅನೇಕ ಸಿನೆಮಾಗಳಲ್ಲಿ ಮನ್​ದೀಪ್​ ರಾಯ್​ ನಟಿಸಿದ್ದಾರೆ.

FILM

ನಾಳೆ ದ್ವಾರಕೀಶ್ ಅಂತ್ಯಕ್ರಿಯೆ.. ಸ್ಥಳ.. ಸಮಯ.. ಇಲ್ಲಿದೆ ಮಾಹಿತಿ

Published

on

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ​​ಇಂದು ಕತ್ತಲು ಆವರಿಸಿದೆ. ಹಿರಿಯ ನಟ ದ್ವಾರಕೀಶ್ ಇಂದು ಸಾವನ್ನಪ್ಪಿದ್ದಾರೆ. ಅನೇಕ ನಟರು ಈ ಹಿರಿಯ ನಟನ ಸಾವಿಗೆ ಕಂಬನಿ ಮಿಡಿದಿದ್ದಾರೆ.

81ನೇ ವಯಸ್ಸಿನಲ್ಲಿ ನಟ ದ್ವಾರಕೀಶ್​ ಸಾವನ್ನಪ್ಪಿದ್ದಾರೆ. ಪತ್ನಿ ಅಂಬುಜ ಸಾವನ್ನಪ್ಪಿದ ದಿನ, ತಿಂಗಳಂದೇ ದ್ವಾರಕೀಶ್​ ಕೊನೆಯುಸಿರೆಳೆದಿದ್ದಾರೆ. ಮಗನ ಬಳಿ ಕೊಂಚ ಹೊತ್ತು ಮಗಲುತ್ತೇನೆಂದು ಹೇಳಿದವರು ಇಹಲೋಕ ತ್ಯಜಿಸಿದ್ದಾರೆ.

ದ್ವಾರಕೀಶ್​ ಪಾರ್ಥಿವ ಶರೀರ ಕಾಣಲು ಅನೇಕ ಮಂದಿ ಅವರ ಮನೆಯತ್ತ ತೆರಳುತ್ತಿದ್ದಾರೆ. ಹಿರಿಯ ನಟರು ಕೂಡ ದ್ವಾರಕೀಶ್​​ ಪಾರ್ಥಿವ ಶರೀರದ ದರ್ಶನ ಪಡೆಯುತ್ತಿದ್ದಾರೆ. ಹಿರಿಯ ನಟನನ್ನು ಕಾಣಲು ಸಾರ್ವಜನಿಕರಿಗೂ ಅವಕಾಶ ಮಾಡಲಾಗಿದ್ದು, ನಾಳೆ ರವೀಂದ್ರ ಕಲಾಕ್ಷೇತ್ರದಲ್ಲಿ ದರ್ಶನ ಪಡೆಯಬಹುದಾಗಿದೆ.

ನಾಳೆ ಬೆಳಗ್ಗೆ 6 ಕ್ಕೆ ಮನೆಯಿಂದ ಹೊರಟು 7 ಗಂಟೆಗೆ ರವೀಂದ್ರ ಕಲಾಕ್ಷೇತ್ರದಲ್ಲಿ ಕಲಾವಿದರು ಹಾಗೂ ಸಾರ್ವಜನಿಕರ ದರ್ಶನಕ್ಕೆ ಇಡಲಾಗುತ್ತೆ. 11 ಗಂಟೆಯವರೆಗೂ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 11 ಗಂಟೆಗೆ ಚಾಮರಾಜಪೇಟೆಯ ಟಿಆರ್ ಮೀಲ್ ನತ್ತ ಪಾರ್ಥಿವ ಶರೀರ ರವಾನಿಸಲಾಗುತ್ತದೆ. ನಂತರ ಅವರ ಅಂತ್ಯಕ್ರಿಯೆ ನೆರವೇರಲಿದೆ. 1 ಗಂಟೆಯ ನಂತರ ಅಂತ್ಯಕ್ರಿಯೆಗೆ ನಿರ್ಧಾರ ಮಾಡಲಾಗುತ್ತದೆ.

Continue Reading

FILM

ಹಿರಿಯ ನಟ ನಿರ್ಮಾಪಕ…ಕಳ್ಳ ‘ಕುಳ್ಳ’ ಖ್ಯಾತಿಯ ದ್ವಾರಕೀಶ್ ಇನ್ನಿಲ್ಲ

Published

on

ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ಮೇರು ನಟನಾಗಿ ಗುರುತಿಸಿಕೊಂಡಿದ್ದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್(81 ವ) ರವರು ಎ.16ರಂದು ಹೃದಯಾಘಾತದಿಂದ ನಿಧನಹೊಂದಿದ್ದಾರೆ. ಕನ್ನಡದಲ್ಲಿ ಸಾಲು ಸಾಲು ಸೂಪರ್ ಹಿಟ್ ಚಿತ್ರಗಳನ್ನು ನೀಡಿದ ಅವರು ಇನ್ನಿಲ್ಲ ಎಂಬ ಸುದ್ದಿ ಸಾಕಷ್ಟು ನೋವುಂಟು ಮಾಡಿದೆ. ಹಲವು ದಿಗ್ಗಜರ ಜೊತೆ ನಟಿಸಿದ್ದ ಇವರು ವಿಷ್ಣುವರ್ದನ್ ಜೊತೆ ನಡಿಸಿದ್ದ ಕಳ್ಳ-ಕುಳ್ಳ ಸಿನೆಮಾದಲ್ಲಿ ಇವರಿಬ್ಬರ ಜೋಡಿ ಬಹಳಷ್ಟು ಸದ್ದು ಮಾಡಿತ್ತು.

ರಾತ್ರಿ ಭೇದಿ ಆರಂಭ ಆಗಿದ್ದರಿಂದ ರಾತ್ರಿ ನಿದ್ದೆ ಮಾಡಿರಲಿಲ್ಲ. ಬೆಳಿಗ್ಗೆ ಕಾಫಿ ಕುಡಿದು ಎರಡು ಗಂಟೆ ಮಲಗುತ್ತೇನೆ ಎಂದು ಮಲಗಿದ್ದವರು ಮತ್ತೆ ಏಳಲೇ ಇಲ್ಲ.  ಅವರಿಗೆ ಹೃದಯಾಘಾತ ಆಗಿದೆ ಎಂದು ದ್ವಾರಕೀಶ್ ಪುತ್ರ ಯೋಗಿ ಅವರು ಮಾಹಿತಿ ನೀಡಿದ್ದಾರೆ.

ಈ ಹಿಂದೆ ದ್ವಾರಕೀಶ್ ಸಾವಿನ ಸುಳ್ಳು ಸುದ್ದಿ ಹರಡಿತ್ತು…!
ದ್ವಾರಕೀಶ್ ಅವರ ನಿಧನವಾರ್ತೆ ತಿಳಿಯುತ್ತಿದ್ದಂತೆ ಕನ್ನಡ ಚಿತ್ರರಂಗದ ಸೆಲೆಬ್ರಿಟಿಗಳು ಹಾಗೂ ಅವರ ಅಭಿಮಾನಿಗಳು ಸಂತಾಪ ಸೂಚಿಸುತ್ತಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಫ್ಯಾನ್ಸ್ ಸಂತಾಪ ಸೂಚಿಸುತ್ತಿದ್ದಾರೆ. ಈ ಹಿಂದೆ ದ್ವಾರಕೀಶ್ ಮರಣ ಫೇಕ್ ಸುದ್ದಿ ಹರಿದಾಡಿತ್ತು. ಇದೇ ರೀತಿ ಈ ಬಾರಿಯೂ ಆಗಿರಬಹುದು ಎಂದು ಹಲವರು ಭಾವಿಸಿದ್ದರು. ಇದೀಗ ದ್ವಾರಕೀಶ್ ರವರ ಕುಟುಂಬದವರು ಅವರ ನಿಧನ ಸುದ್ದಿಯನ್ನು ಖಚಿತಪಡಿಸಿದ್ದಾರೆ.

READ MORE..; ಅರ್ಚಕರಿಂದಲೇ ಭಕ್ತರ ಮೇಲೆ ಮಾರಣಾಂತಿಕ ಹಲ್ಲೆ..!! ವಿಡಿಯೋ ವೈರಲ್

ರಾಜ್‌ಕುಮಾರ್, ವಿಷ್ಣವರ್ಧನ್, ಶ್ರೀನಾಥ್ ಸೇರಿದಂತೆ ಹಲವು ದಿಗ್ಗಜರೊಂದಿಗೆ ಸ್ಕ್ರೀನ್ ಹಂಚಿಕೊಂಡಿದ್ದರು. ಇವರ ಮಂಕು ತಿಮ್ಮ ಸಿನೆಮಾ ಸುಪರ್ ಹಿಟ್ ಆಗಿತ್ತು. ನಟಿ ಮಂಜುಳಾ ಜೊತೆ ಹಲವು ಸಿನೆಮಾದಲ್ಲಿ ನಟಿಸಿದ್ದರು. ನಟನಾಗಿ ನಿರ್ದೇಶನಕ್ಕೂ ಇಳಿದಿದ್ದ ಇವರು ಹಲವು ಹಿಟ್ ಸಿನೆಮಾಗಳನ್ನು ನೀಡಿದ್ದಾರೆ. ಮಮತೆಯ ಬಂಧನ ಇವರ ಮೊದಲ ನಿರ್ಮಾಣದ ಚಿತ್ರವಾಗಿದ್ದು, ‘ವೀರ ಸಂಕಲ್ಪ’ ಅವರು ನಟಿಸಿರುವ ಕೊನೆಯ ಚಿತ್ರವಾಗಿದೆ.

 

Continue Reading

FILM

ಮೂಗುತಿ ಸುಂದರಿ ಮೇಲೆ ತೆಲುಗು ಹೀರೋ ಕಣ್ಣು…!

Published

on

ಮಂಗಳೂರು ( ಸ್ಯಾಂಡಲ್‌ವುಡ್‌ ) : ಸುಪರ್ ಹಿಟ್ ಕಾಂತಾರದ ಮೂಲಕ ಮೂಗುತಿ ಸುಂದರಿ ಅಂತ ಫೇಮಸ್ ಆಗಿದ್ದ ಸಪ್ತಮಿ ಗೌಡ ಮೇಲೆ ತೆಲುಗು ನಿರ್ಮಾಪಕರ ಕಣ್ಣು ಬಿದ್ದಿದೆ. ಹೀಗಾಗಿ ಸಪ್ತಮಿ ಗೌಡಗೆ ತೆಲುಗು ಸಿನೆಮಾದಲ್ಲಿ ಉತ್ತಮ ಅವಕಾಶ ನೀಡಿ ಕರೆಸಿಕೊಂಡಿದ್ದಾರೆ. ಹೀಗಾಗಿ ಕರ್ನಾಟಕದ ಮೂಗುತಿ ಸುಂದರಿ ಸಪ್ತಮಿ ಗೌಡ ತೆಲುಗಿನ ‘ತಮ್ಮುಡು’ ಸಿನೆಮಾದಲ್ಲಿ ಹೀರೋ ನಿತಿನ್ ಜೊತೆ ನಟಿಸಲಿದ್ದಾರೆ.

ಕೆಲ ನಟಿಯರು ಇರೋ ಉದ್ಯಮದಲ್ಲಿ ಏನಾದರೂ ಸಾಧಿಸಿ ಬೇರೆ ಭಾಷೆಯತ್ತ ಮುಖ ಮಾಡ್ತಾರೆ. ಇನ್ನು ಕೆಲ ನಟಿಯರು ಏನಾದರೂ ಸಾಧಿಸಲೆಬೇಕು ಅಂತ ಪಕ್ಕದ ಮನೆಗಳತ್ತ ಮುಖ ಮಾಡ್ತಾರೆ. ಇದಕ್ಕೆ ಸಪ್ತಮಿಗೌಡ ಅತ್ಯುತ್ತಮ ಉದಾಹರಣೆ.ಹೌದು. ಕಾಂತಾರ ಮೂಲಕ ಭಾಷೆಯ ಭೇದ ಭಾವ ಇಲ್ಲದೇ, ಎಲ್ಲ ವರ್ಗದ ಜನರ ಹೃದಯವನ್ನ ಗೆದ್ದ ಸಪ್ತಮಿಗೌಡ ‘ಯುವ’ದಲ್ಲಿಯೂ ತಮ್ಮ ಛಾಪು ಮೂಡಿಸಿದರು. ಕಳೆದ ನಾಲ್ಕು ವರ್ಷದಲ್ಲಿ ಪಾಪ್‌ ಕಾರ್ನ್ ಮಂಕಿ ಟೈಗರ್, ಕಾಂತಾರ, ಯುವ ಹೀಗೆ ಮೂರು ಕನ್ನಡ ಸಿನಿಮಾಗಳನ್ನ ಮಾಡಿರುವ ಸಪ್ತಮಿ ಗೌಡ, ಇದೀಗ ತೆಲುಗು ಚಿತ್ರವನ್ನು ಒಪ್ಪಿಕೊಂಡಿದ್ದಾರೆ. `ಜಯಂ’ ಸಿನಿಮಾ ಹೀರೊ ನಿತಿನ್‌ ಅವರ ಮುಂದಿನ ಚಿತ್ರ ʻತಮ್ಮುಡುʼದಲ್ಲಿ ಸಪ್ತಮಿ ಗೌಡ ಹೀರೊಯಿನ್.

ತಮ್ಮುಡು ಚಿತ್ರದಲ್ಲಿನ ತಮ್ಮ ಪಾತ್ರಕ್ಕೆ ನ್ಯಾಯ ಸಲ್ಲಿಸಲು ಸಪ್ತಮಿ ಗೌಡ ತೂಕ ಇಳಿಸಿಕೊಂಡಿದ್ದಾರೆ. ಸ್ಲಿಮ್ ಆಗಿದ್ದಾರೆ. ಇನ್ನೂ ರೇಸ್‌ ಕೋರ್ಸ್ ಮೈದಾನದಲ್ಲಿನ ಜಾಕಿಗಳಿಗೂ ಸೆಡ್ಡು ಹೊಡೆಯುವಂತೆ ಸಪ್ತಮಿ ಗೌಡ ಈ ಚಿತ್ರಕ್ಕೆ ಕುದುರೆ ಸವಾರಿಯನ್ನ ಕಲಿತಿದ್ದಾರೆ.

ಇನ್ನೂ ತಮ್ಮ ಮೊದಲ ತೆಲುಗು ಚಿತ್ರದಲ್ಲಿಯೇ ನಿತಿನ್ ಅವರಂತಹ ಪ್ರತಿಭಾವಂತ ನಟನ ಜೊತೆ ತೆರೆಹಂಚಿಕೊಳ್ಳುತ್ತಿರುವುದಕ್ಕೆ ಸಪ್ತಮಿಗೌಡ ಅವರಿಗೆ ಸಿಕ್ಕಾಪಟ್ಟೆ ಖುಷಿ ಇದೆ. ಸೋನೆ ಪೆ ಸುಹಾಗ ಅನ್ನುವಂತೆ ವಕೀಲ್ ಸಾಬ್ ಅಂತಹ ಚಿತ್ರವನ್ನ ನಿರ್ದೇಶಿಸಿರುವ ವೇಣು ಶ್ರೀರಾಮ್ ಈ ಚಿತ್ರವನ್ನ ನಿರ್ದೇಶಿಸುತ್ತಿದ್ದಾರೆ. ಟಾಲಿವುಡ್‌ನ ಖ್ಯಾತ ನಿರ್ಮಾಪಕ ದಿಲ್ ರಾಜು ಚಿತ್ರವನ್ನ ನಿರ್ಮಾಣ ಮಾಡುತ್ತಿದ್ದಾರೆ. ಇವೆಲ್ಲ ಕಾರಣಗಳಿಂದ ಸಪ್ತಮಿ ಗೌಡ ಸದ್ಯಕ್ಕೆ ಕ್ಲೌಡ್ ನೈನ್‌ ನಲ್ಲಿದ್ದಾರೆ. ಒಟ್ನಲ್ಲಿ ಕನ್ನಡದಲ್ಲಿ ತಮ್ಮ ಸಾಮರ್ಥ್ಯ ಪ್ರದರ್ಶಿಸಿ, ಕನ್ನಡಿಗರ ಮನಗೆದ್ದ ಸಪ್ತಮಿ ಗೌಡ ಈಗ ಬಾಲಿವುಡ್‌ ನಂತರ ಟಾಲಿವುಡ್‌ ಕಡೆ ಹೊರಟಿದ್ದಾರೆ.

Continue Reading

LATEST NEWS

Trending