ವಿಶ್ವಹಿಂದೂ ಪರಿಷತ್ ಪುಂಡು ಪೋಕರಿಗಳ ಸಂಸ್ಥೆಯಲ್ಲ..!!
ಉಡುಪಿ :ವಿಶ್ವಹಿಂದೂ ಪರಿಷತ್ ಪುಂಡು ಪೋಕರಿಗಳ ಸಂಸ್ಥೆಯಲ್ಲ ಮತ್ತು ರಾಮಜನ್ಮಭೂಮಿ ಟ್ರಸ್ಟ್ ಬೇನಾಮಿ ಸಂಸ್ಥೆ ಅಲ್ಲ . ಅದೊಂದು ನೊಂದಣಿಯಾಗಿರುವ ಸಂಸ್ಥೆ ಎಂದು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ರಾಮಜನ್ಮಭೂಮಿ ಬಗ್ಗೆ ಅಪಸ್ವರ ತೆಗೆದ ರಾಜಕೀಯ ನೇತಾರರಿಗೆ ಕಿವಿಮಾತು ಹೇಳಿದ್ದಾರೆ.
ರಾಮ ಮಂದಿ ನಿರ್ಮಾಣಕ್ಕೆ ನಿಧಿ ಸಂಗ್ರಹ ಅಭಿಯಾನ ವಿಚಾರಕ್ಕೆ ಸಂಬಂಧ ಪಟ್ಟಂತೆ ವಿರೋಧ ಪಕ್ಷ ನಾಯಕ ಸಿದ್ಧರಾಮಯ್ಯ ಹಾಗು ಮಾಜಿ ಮುಖ್ಯಮಂತ್ರಿ ಎಚ್ಡಿ ಕುಮಾರ ಸ್ವಾಮಿ ನೀಡಿರುವ ಹೇಳಿಕೆಗೆ ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿ ಮಾತನಾಡಿದ ಅವರು ಟ್ರಸ್ಟ್ ನೊಂದವಣೆಗೆ ಅದರದ್ದೆ ಆದ ನೀತಿ ನಿಯಮಾವಳಿಗಳು ಇದೆ.
ದೇಣಿಗೆ ಸಂಗ್ರಹ ಮಾಡಲು ಅದರದ್ದೇ ಆದ ಕಾನೂನು ಇದೆ. ಹಾಗಾಗಿ ಸಂಶಯಗಳನ್ನು ಇಟ್ಟು ಆರೋಪ ಮಾಡುವುದು ಸೂಕ್ತವಲ್ಲ.
ದೇಣಿಗೆ ಸಂಗ್ರಹಕ್ಕೆ ವಿಶ್ವ ಹಿಂದೂ ಪರಿಷತ್ ನ ಕಾರ್ಯರ್ತರಿಗೆ ಜವಾಬ್ದಾರಿ ನೀಡಲಾಗಿದೆ. ವಿಶ್ವ ಹಿಂದೂ ಪರಿಷತ್ ನ ಮುಖ್ಯಸ್ಥರು ಆಯಾ ಊರಿನಲ್ಲಿ ನಿಧಿ ಸಂಗ್ರಹ ಕಾಯಕದಲ್ಲಿ ನಿರತರಾಗಿದ್ದಾರೆ.
ವಿಶ್ವಹಿಂದೂ ಪರಿಷತ್ ಪುಂಡು ಪೋಕರಿಗಳ ಸಂಸ್ಥೆಯಲ್ಲ, ಇದು ಅಧಿಕೃತ ಸಂಸ್ಥೆ. ಹಾಗಾಗಿ ಇಂತಹ ಮಾತು ಬಳಸುವುದು ಯುಕ್ತವಲ್ಲ, ಸಂಶಯಕ್ಕೆ ಪರಿಹಾರ ಇದೆ. ಸಂಶಯ ಇದೆ ಎಂದು ಅರೋಪ ಮಾಡಿದರೆ, ಆರೋಪದಲ್ಲಿಯೇ ಮುಗಿಯುತ್ತದೆ. ಆರೋಪಕ್ಕೆ ಪ್ರತ್ಯಾರೋಪ ಸಿಗುತ್ತದೆ, ಪ್ರಶ್ನೆಗೆ ಉತ್ತರ ಸಿಗುವುದಿಲ್ಲ .ಪ್ರಶ್ನೆ ಮಾಡಿದರೆ ಉತ್ತರ ಕೊಡಬಹುದು ಅಂತ ರಾಜಕೀಯ ನಾಯಕರುಗಳ ಸಂಶಯದ ಮಾತುಗಳಿಗೆ ಶ್ರೀಗಳು ತಿರುಗೇಟು ನೀಡಿದರು.