DAKSHINA KANNADA
ಜೆಇಇ ಮೇನ್ಸ್ನಲ್ಲಿ ವೈಬ್ರೆಂಟ್ ಕಾಲೇಜು ವಿದ್ಯಾರ್ಥಿಗಳ ಅಪ್ರತಿಮ ಸಾಧನೆ- ಚಂದನ್ಗೆ 99.60 ಪರ್ಸೆಂಟೈಲ್
ಮೂಡುಬಿದಿರೆ: ನ್ಯಾಷನಲ್ ಟೆಸ್ಟಿಂಗ್ ಏಜನ್ಸಿ ರಾಷ್ಟ್ರ ಮಟ್ಟದಲ್ಲಿ ನಡೆಸಿದ ಜೆಇಇ ಮೇನ್ಸ್ ಪರೀಕ್ಷೆಯಲ್ಲಿ ಮೂಡುಬಿದಿರೆಯ
ಕಲ್ಲಬೆಟ್ಟುವಿನಲ್ಲಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜಿನ ವಿದ್ಯಾರ್ಥಿಗಳು ಕಾಲೇಜಿನ ಪ್ರಾರಂಭದ ವರ್ಷದ ಪ್ರಥಮ
ಜೆಇಇ ಪರೀಕ್ಷೆಯಲ್ಲಿಯೇ ಅಪ್ರತಿಮ ಸಾಧನೆ ಮಾಡುವ ಮೂಲಕ ಸರ್ವಶ್ರೇಷ್ಠ ಫಲಿತಾಂಶವನ್ನು ದಾಖಲಿಸಿದೆ.
ಕಳೆದೆರಡು ವರ್ಷದಿಂದ ಮೂಡುಬಿದಿರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯೂ ವೈಬ್ರೆಂಟ್ ಪಿಯು ಕಾಲೇಜು ಪಿಯು ವಿಜ್ಞಾನ ಶಿಕ್ಷಣದೊಂದಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ಅತ್ಯುತ್ತಮ ಪೂರಕ ತರಬೇತಿಯನ್ನು ನೀಡುತ್ತಿದೆ ಎಂಬುವುದಕ್ಕೆ ಈ ಫಲಿತಾಂಶವೇ ಸಾಕ್ಷಿಯಾಗಿದೆ.
ವಿದ್ಯಾರ್ಥಿ ಚಂದನ್ ಆರ್. 99.60 ಪರ್ಸೆಂಟೈಲ್ (ಭೌತಶಾಸ್ತ್ರ 99.80, ರಸಾಯನಶಾಸ್ತ್ರ 99.97, ಗಣಿತಶಾಸ್ತ್ರ 96.50), ಪಡೆಯುವ ಮೂಲಕ ಮೂಡುಬಿದಿರೆಗೆ ಅತಿ ಹೆಚ್ಚು ಪರ್ಸೆಂಟೈಲ್ ಪಡೆದ ವಿದ್ಯಾರ್ಥಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುತ್ತಾರೆ. ಸಂಸ್ಥೆಯಿಂದ ಪರೀಕ್ಷೆ ಬರೆದ ವಿದ್ಯಾರ್ಥಿಗಳಲ್ಲಿ 11 ವಿದ್ಯಾರ್ಥಿಗಳು 95ಕ್ಕಿಂತ ಅಧಿಕ, 34 ವಿದ್ಯಾರ್ಥಿಗಳು 90ಕ್ಕಿಂತ ಅಧಿಕ ಪರ್ಸೆಂಟೈಲ್ ಪಡೆದಿರುತ್ತಾರೆ. ಹಾಗೆಯೇ ವೈಯಕ್ತಿಕ ವಿಷಯಗಳಲ್ಲಿ ಭೌತಶಾಸ್ತ್ರ 60 ವಿದ್ಯಾರ್ಥಿಗಳು, ರಸಾಯನಶಾಸ್ತ್ರ 73 ವಿದ್ಯಾರ್ಥಿಗಳು, ಗಣಿತಶಾಸ್ತ್ರ 16 ವಿದ್ಯಾರ್ಥಿಗಳು 90ಕ್ಕಿಂತಲೂ ಹೆಚ್ಚು ಪರ್ಸೆಂಟೈಲ್ನ್ನು ಗಳಿಸಿರುತ್ತಾರೆ.
ಮಹೇಶ್ 99.05 ಪರ್ಸೆಂಟೈಲ್(ಭೌತಶಾಸ್ತ್ರ 98.98, ರಸಾಯನಶಾಸ್ತ್ರ 99.71, ಗಣಿತಶಾಸ್ತ್ರ 87.46), ಅಶ್ವಿನ್ ಉಪಾಧ್ಯ 98.9 ಪರ್ಸೆಂಟೈಲ್ (ಭೌತಶಾಸ್ತ್ರ 96.62, ರಸಾಯನಶಾಸ್ತ್ರ 98.98, ಗಣಿತಶಾಸ್ತ್ರ 98.67), ಸಿಂಚನಾ ಅರಸ್ 98.34 ಪರ್ಸೆಂಟೈಲ್(ಭೌತಶಾಸ್ತ್ರ 98.98, ರಸಾಯನಶಾಸ್ತ್ರ 98.28, ಗಣಿತಶಾಸ್ತ್ರ 82.98), ಪ್ರಜ್ವಲ್ ಎಂ. 96.43 ಪರ್ಸೆಂಟೈಲ್, ಅನಿಲ್ ಕುಮಾರ್ 96.21 ಪರ್ಸೆಂಟೈಲ್, ಅಭಿಷೇಕ್ ಶೇಟ್ 95.85 ಪರ್ಸಂಟೈಲ್, ಆಕಾಶ್ ಮಲ್ಲಪ್ಪ 95.78 ಪರ್ಸೆಂಟೈಲ್, ಸುಜಯ್ ಪಿ.ವಿ. 95.73 ಪರ್ಸೆಂಟೈಲ್, ಐರೋಲ್ ಡೀನಾ ರೋಡ್ರಿಗಸ್ 95.04 ಪರ್ಸೆಂಟೈಲ್, ಸಿಂಚನಾ ವಿ.ವೈ. 95.01 ಪರ್ಸೆಂಟೈಲ್, ಎನ್.ಎಸ್. ಹರ್ಷಿತ್ 94.87 ಪರ್ಸೆಂಟೈಲ್, ಜಿ.ಎಚ್. ವಿನಾಯಕ್ 94.76 ಪರ್ಸೆಂಟೈಲ್, ಕಲ್ಪಿತಾ ಕೃಷ್ಣ ಘಾಟೆ 94.74 ಪರ್ಸೆಂಟೈಲ್, ಹೆಚ್.ಜಿ. ಚಿರಂತನ್ 94.48 ಪರ್ಸೆಂಟೈಲ್, ಅಶ್ವಿನ್ ಸಿ. ನ್ಯಾಕ್ 94.26 ಪರ್ಸೆಂಟೈಲ್, ಪ್ರಜ್ವಲ್ 94.04 ಪರ್ಸೆಂಟೈಲ್, ಪ್ರತೀಕ್ 94.01 ಪರ್ಸೆಂಟೈಲ್, ಸಮೃದ್ ಎಸ್. ಕುಂದರಗಿ 93.89 ಪರ್ಸೆಂಟೈಲ್, ಆದಿತ್ಯ ಎನ್. ಶೆಣೈ 93.83 ಪರ್ಸೆಂಟೈಲ್, ನೂತನ್ ಪ್ರಸಾದ್ 93.33 ಪರ್ಸೆಂಟೈಲ್, ತುಷಾರ್ ರವೀಂದ್ರ ಪಾವಸ್ಕರ್ 92.73 ಪರ್ಸೆಂಟೈಲ್, ಮಹೇಂದ್ರ ರೆಡ್ಡಿ 92.57 ಪರ್ಸೆಂಟೈಲ್, ಶ್ರೀರಕ್ಷಾ 92.53 ಪರ್ಸೆಂಟೈಲ್, ಪ್ರಗತಿ ಕೆ. 92.27 ಪರ್ಸೆಂಟೈಲ್, ಬೆನಕ ಜಿ.ಎಸ್. 92.09 ಪರ್ಸೆಂಟೈಲ್, ಪಲ್ಲವಿ 91.83 ಪರ್ಸೆಂಟೈಲ್, ಜ್ಞಾನವಿ ಆರ್. 91.74 ಪರ್ಸೆಂಟೈಲ್, ಧನುಶ್ರೀ 91.64 ಪರ್ಸೆಂಟೈಲ್, ಸೂರಜ್ ಎಂ. ಸಾಗರ್ 91.31 ಪರ್ಸೆಂಟೈಲ್, ನಿತೇಶ್ ಹರಸೂರ್ 90.77 ಪರ್ಸೆಂಟೈಲ್, ಸಿಮ್ರಾನ್ ತಾನೆದರ್ 90.66 ಪರ್ಸೆಂಟೈಲ್, ವರ್ಷಿಣಿ ಎ. 90.59 ಪರ್ಸೆಂಟೈಲ್, ಆದಿತ್ಯ ಬಿ.ಎಸ್. 90.38 ಪರ್ಸೆಂಟೈಲ್ ಪಡೆಯುವ ಮೂಲಕ ಅತ್ಯುತ್ತಮ ಸಾಧನೆ ಮಾಡಿರುತ್ತಾರೆ.
ವಿದ್ಯಾರ್ಥಿಗಳ ಸಾಧನೆಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು, ಅಧ್ಯಾಪಕ ಮತ್ತು ಅಧ್ಯಾಪಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
DAKSHINA KANNADA
ವಿದೇಶಿ ಹಡಗಿನಲ್ಲಿ ಬೆಂಕಿ ಅವಘಡ; ಕರ್ನಾಟಕ ಕರಾವಳಿಯಲ್ಲಿ ಲಂಗರು ಹಾಕಿದ ಕಾರ್ಗೋ ಹಡಗು
ಮಂಗಳೂರು: ಗುಜರಾತ್ನಿಂದ ಕೊಲಂಬೋಕ್ಕೆ ವಿವಿಧ ಸರಕುಗಳನ್ನು ಸಾಗಾಟ ಮಾಡುತ್ತಿದ್ದ ವಿದೇಶಿ ಮೂಲದ ಸರಕು ಸಾಗಾಟ ಹಡಗಿನಲ್ಲಿ ಅಗ್ನಿ ಆಕಸ್ಮಿಕ ನಡೆದ ಘಟನೆ ಬೆಳಕಿಗೆ ಬಂದಿದೆ.
ಜುಲೈ 19 ರಂದು ಕರ್ನಾಟಕ ಕರಾವಳಿಯ ಸಮುದ್ರದಲ್ಲಿ ಈ ದುರ್ಘಟನೆ ನಡೆದಿದ್ದು, ಕೋಸ್ಟ್ ಗಾರ್ಡ್ ತಂಡ ಹೆಲಿಕಾಪ್ಟರ್ ಹಾಗೂ ರಕ್ಷಣಾ ಹಡಗಿನ ಮೂಲಕ ಸತತ ನಲುವತ್ತು ಘಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದೆ. ಹಡಗಿನಲ್ಲಿ ಒಟ್ಟು 21 ಸಿಬ್ಬಂದಿ ಇದ್ದು ಒಬ್ಬ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.
ಹಡಗಿನ ಬೆಂಕಿ ನಂದಿಸಿ ಸಿಬ್ಬಂದಿಗಳ ರಕ್ಷಣೆ ಮಾಡಿದ ಬಳಿಕ ಹಡಗನ್ನು ಕರ್ನಾಟಕ ಕರಾವಳಿ ಭಾಗಕ್ಕೆ ತೆಗೆದುಕೊಂಡು ಬರಲಾಗಿದೆ. ಸದ್ಯ ಸುರತ್ಕಲ್ ಕಡಲ ಕಿನಾರೆಯಿಂದ ಸುಮಾರು 33 ನಾಟಿಕಲ್ ಮೈಲ್ ದೂರದಲ್ಲಿ ಹಡಗು ಲಂಗರು ಹಾಕಲಾಗಿದೆ. ಗುಜಾರಾತ್ನ ಮುಂದ್ರಾ ಬಂದರಿನಿಂದ ಹೊರಟಿದ್ದ ಈ ಹಡಗು ಪನಾಮ ದೇಶಕ್ಕೆ ಸೇರಿದ್ದಾಗಿ ಮಾಹಿತಿ ಲಭ್ಯವಾಗಿದೆ.
ಬೆಂಕಿ ಅವಘಡದಿಂದ ಸಂಪೂರ್ಣ ಹಾನಿಯಾಗಿರುವ ಹಡಗು ಅಪಾಯಕಾರಿ ಪರಿಸ್ಥಿತಿಯಲ್ಲಿದ್ದು, ಕೋಸ್ಟ್ ಗಾರ್ಡ್ ಸಿಬ್ಬಂದಿ ಹಡಗಿನ ಮೇಲೆ ನಿಗಾ ಇರಿಸಿದ್ದಾರೆ. ಹಡಗು ಮುಳುಗಡೆಯಾಗುವ ಸಾದ್ಯತೆಯ ಜೊತೆಗೆ ಹಡಗಿನಲ್ಲಿ ಮತ್ತೆ ಬೆಂಕಿ ಕಾಣಿಸಿಕೊಳ್ಳುವ ಸಂಭವ ಕೂಡಾ ಇದೆ. ಹೀಗಾಗಿ ಹಡಗು ಮುಳುಗಡೆಯಾದಲ್ಲಿ ಸಮುದ್ರಕ್ಕೆ ತೈಲ ಸೋರಿಕೆಯ ಆತಂಕ ಕೂಡಾ ಎದುರಾಗಿದೆ. ಹೀಗಾಗಿ ಹಡಗಿನ ಮೇಲೆ ನಿಗಾ ವಹಿಸಿರುವ ಕೋಸ್ಟ್ ಗಾರ್ಡ್ ಮುನ್ನೆಚ್ಚರಿಕಾ ಕ್ರಮ ಕೈಗೊಂಡಿದೆ.
DAKSHINA KANNADA
ದಕ್ಷಿಣ ಕನ್ನಡ ಜಿಲ್ಲೆಯ ಮಹಾಪ್ರವಾಹಕ್ಕೆ 50 ವರ್ಷ; ಮರುಕಳಿಸದಿರಲಿ ‘ಆ ಶುಕ್ರವಾರ’ ಎನ್ನುತ್ತಿದ್ದಾರೆ ಕರಾವಳಿಗರು!
ಮಂಗಳೂರು: 1974 ಜುಲೈ 26ರ ಶುಕ್ರವಾರ ರಾತ್ರಿ ಇಡೀ ಸುರಿದ ಭಾರೀ ಮಳೆ ಮುಂಜಾನೆಯ ವೇಳೆಗೆ ನೆರೆ ರೌದ್ರಾವತಾರ ತಾಳಿತ್ತು.
ಹಿಂದೆ ಎಂದೂ ಕಾಣದ ರೀತಿ ನೇತ್ರಾವತಿ ನದಿ ಉಕ್ಕಿ ಹರಿದಿತ್ತು. ನಸುಕಿನ ಜಾವ ನೇತ್ರಾವತಿ ನದಿ ಮನೆಯೊಳಗೆಯೇ ಪ್ರವೇಶಿಸಿತ್ತು.
ಬಂಟ್ವಾಳ ಪೇಟೆ, ಪಕ್ಕದೂರುಗಳಿಗೆ ಸಂಪರ್ಕಿಸುವ ರಸ್ತೆಗಳೆಲ್ಲವೂ ಕ್ಷಣಮಾತ್ರದಲ್ಲೆ ಜಲಮಯ. ಎಲ್ಲಿಗೆ ಹೋಗೋದು? ಏನು ಮಾಡೋದು ಅನ್ನೋದನ್ನು ಯೋಚಿಸುವಷ್ಟರಲ್ಲೇ ಊರಿಗೆ ಊರೇ ಮುಳುಗಿತ್ತು. ಬಂಟ್ವಾಳ ಮತ್ತು ಉಪ್ಪಿನಂಗಡಿ ಪೇಟೆಯಲ್ಲಿ ವಾಹನಗಳ ಬದಲು ದೋಣಿಗಳು ಸಂಚರಿಸಿದ್ದವು. ಆ ಕಾಲದಲ್ಲಿಯೇ ಐವತ್ತು ಲಕ್ಷ ರೂಪಾಯಿ ನಷ್ಟ ಉಂಟಾಗಿತ್ತು.
ಆ ಸಮಯದಲ್ಲಿ ಜಿಲ್ಲೆಯ ಬಹುತೇಕ ಪ್ರದೇಶಗಳು ನೆರೆ ನೀರಿನಿಂದ ಆವರಿಸಿದ್ದವು, ಆವತ್ತಿನ ಕಾಲದಲ್ಲಿ ಮಣ್ಣಿನಿಂದ ನಿರ್ಮಿಸಿದ್ದ ನೂರಾರು ಮನೆ ಅಂಗಡಿ ನೆರೆ ನೀರಿಗೆ ಕೊಚ್ಚಿಕೊಂಡು ಹೋಗಿದ್ದವು. ಈಗಲೂ ಕೂಡಾ ಆ ಭೀಕರ ನೆರೆಯು ನಮ್ಮ ಹಿರಿಯರ ಬಾಯಲ್ಲಿ (ಎಲ್ಪತ್ತ ನಾಲೆತ್ತ ಬೊಲ್ಲ) ಎಂದು ಪ್ರಖ್ಯಾತಿ ಹೊಂದಿದೆ.
ಕಾಕತಾಳೀಯ ಎಂಬಂತೇ ಪ್ರವಾಹದ ಆ ದಿನ, ವಾರ ಎಲ್ಲವೂ ಸೇಮ್ ಆಗಿದ್ದು, ಮತ್ತೆ ಅದೇ ರೀತಿಯ ಪ್ರವಾಹ ಪರಿಸ್ಥಿತಿಯೂ ನೇತ್ರಾವತಿ ತಟದಲ್ಲಿದೆ. ಈಗಾಗಲೇ ನೇತ್ರಾವತಿ ಅಪಾಯ ಮಟ್ಟ ಮೀರಿದ್ದು, ಈ ಆತಂಕಕ್ಕೆ ಕಾರಣವೂ ಆಗಿದೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ