LATEST NEWS
Vijayapura: ಡೆತ್ನೋಟ್ ಬರೆದು ಆತ್ಮಹತ್ಯೆ ಮಾಡಿಕೊಂಡ ಪೋಕ್ಸೋ ಆರೋಪಿ!
ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿದ್ದ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಕುರಿತು ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಟನಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ವಿಜಯಪುರ: ಅಪ್ರಾಪ್ತ ಬಾಲಕಿಯನ್ನು ಮದುವೆಯಾಗಿದ್ದ ಯುವಕನ ಮೇಲೆ ಪೋಕ್ಸೋ ಪ್ರಕರಣ ದಾಖಲಾದ ಕುರಿತು ನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಟನಪೇಟೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಶಿಧರ ಭಜಂತ್ರಿ ಆತ್ಮಹತ್ಯೆ ಮಾಡಿಕೊಂಡ ಪೋಕ್ಸೋ ಆರೋಪಿಯಾಗಿದ್ದಾನೆ.
ಶಶಿಧರನು ಅಪ್ರಾಪ್ತ ಬಾಲಕಿಯನ್ನು ಮದುವೆಯಾದ ಆರೋಪಕ್ಕೆ ಕಾಟನಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಹಾಗಗಿ ನೊಂದ ಯುವಕ ಶಶಿಧರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತನ್ನ ಮಗನಿಗೆ ಅನ್ಯಾಯವಾಗಿದೆ ಎಂದು ಶಶಿಧರನ ಕುಟುಂಬಸ್ಥರು ಬಸವನ ಬಾಗೇವಾಡಿ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ಮೃತದೇಹ ಇಟ್ಟು ಪ್ರತಿಭಟನೆಗೆ ಮುಂದಾಗಿದ್ದಾರೆ.
ಬಳಿಕ ಬಸವೇಶ್ವರ ವೃತ್ತದಲ್ಲಿ ಜಮಾಯಿಸಿದ ವಡವಡಗಿ ಗ್ರಾಮಸ್ಥರು ಹಾಗೂ ಸಂಬಂಧಿಕರು ಯುವಕನ ಸಾವಿಗೆ ನ್ಯಾಯ ಕೊಡಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ.
ಈ ಸಂದರ್ಭ ಕುಟುಂಬಸ್ಥರನ್ನು ಪೊಲೀಸರು ತಡೆದಿದ್ದಾರೆ.
ಯುವಕ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ತನ್ನ ಸಾವಿಗೆ ಕಾರಣರಾದವರ ಹೆಸರು ಹೇಳಿದ್ದು, ಅವರನ್ನು ಬಂಧಿಸಬೇಕು, ಯುವಕನ ಸಾವಿಗೆ ನ್ಯಾಯ ಕೊಡಬೇಕು ಎಂದು ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಆಕ್ರೋಶ ಮಾಡಿದ್ದಾರೆ.
ಇದೀಗ ಶಶಿಧರನ ಸಂಬಂಧಿಕರ ಅಕ್ರಂದನ ಮುಗಿಲೇರಿದೆ.
ಡೆತ್ ನೋಟ್ ..?
ಆತ ಬರೆದ ಡೆತ್ ನೋಟ್ ನಲ್ಲಿ ‘ಇನ್ಸ್ಟಾಗ್ರಾಂನಲ್ಲಿ ಪರಿಚಯವಾದ ಆಕೆ ನನ್ನನ್ನು ಆರು ವರ್ಷ ಲವ್ ಮಾಡಿ ಮದುವೆ ಮಾಡಿಕೊಂಡಿದ್ದಾಳೆ. ಆದರೆ ಇವಾಗ ಜಾತಿ ಸಲುವಾಗಿ ಆಕೆ ಹಾಗೂ ಆಕೆಯ ಕುಟುಂಬಸ್ಥರು ತನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆಕೆಯ ಅಪ್ಪ ಅವ್ವ ಮತ್ತೆ ಅವರ ಕಾಕಾ ಅವರಜ್ಜಿ, ಅವರ ಊರಿನವರು ಮತ್ತು ಡೆಂಗಿ ಬಸವರಾಜ ಇವೆರಲ್ಲಾ ನನ್ನ ಸಾವಿಗೆ ಕಾರಣರಾಗಿದ್ದಾರೆ.
ಆಕೆಯು ಇವಾಗ ನನಗೆ ಉಲ್ಟಾ ಮಾತನಾಡುತ್ತಾಳೆ. ನನ್ನ ಹೆಂಡತಿ ನನ್ನ ಜೊತೆ ಆರು ವರ್ಷದಿಂದ ಸಂಸಾರ ಮಾಡಿದ್ದಾಳೆ. ನನ್ನ ಜೊತೆ ಫೋಟೋ ವಿಡಿಯೋ ಇದೆ. ಅದರ ಜೊತೆ ಮದುವೆ ಪೋಟೋ ವಿಡಿಯೋ ಕೂಡ ಇದೆ. ಇದನ್ನೆಲ್ಲಾ ಪೊಲೀಸರಿಗೆ ಹೇಳಿದರೆ ಕಂಪ್ಲೇಟ್ ತಗೋತಾ ಇಲ್ಲ.
ನನಗೆ ಮೇಲಧಿಕಾರಿಗಳು ತನಿಖೆ ಮಾಡಬೇಕು ಅಂತ ವಿನಂತಿ. ನನ್ನ ಸಾವಿಗೆ ಇವರೆಲ್ಲ ಕಾರಣ’ ಎಂದು ಬರೆದುಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಶಶಿಧರನಿಗೆ ಹುಡುಗಿಯನ್ನು ಮದುವೆಯಾಗಿದ್ದಕ್ಕೆ ಹೊಡೆಯುವುದಾಗಿ ಯುವತಿಯ ಮನೆಯವರು ಧಮ್ಕಿ ಹಾಕಿದ್ದರು ಎನ್ನಲಾಗಿದೆ.
ಇದಲ್ಲದೇ ಆತನ ಮೇಲೆ ಬಾಲ್ಯವಿವಾಹ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಪೋಕ್ಸೋ ಪ್ರಕರಣವೂ ದಾಖಲಾಗಿತ್ತು ಎಂದು ವಿಜಯಪುರ ಜಿಲ್ಲಾ ಎಸ್ಪಿ, ಅನಂತ್ ಕುಮಾರ್ ಮಾಹಿತಿ ನೀಡಿದ್ದಾರೆ.
ಇದರಿಂದ ಯುವಕ ಶಿವಾನಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಾಯುವ ಮುನ್ನ ಯಾರ ಮೇಲೆ ಆರೋಪ ಮಾಡಿದ್ದಾನೋ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾನೆ.
LATEST NEWS
ಈ ಸರ್ವಾಧಿಕಾರಿಗೆ ಬೇಕಂತೆ ವರ್ಷಕ್ಕೆ 25 ಕನ್ಯೆಯರು..!! ಏನಿದು ಕರ್ಮಕಾಂಡ?
ಉತ್ತರ ಕೊರಿಯಾದ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ನ ಕರ್ಮಕಾಂಡವನ್ನು ಅಲ್ಲಿನ ಯುವತಿಯೊಬ್ಬಳು ಬಯಲಿಗೆಳೆದಿದ್ದಾಳೆ. ಉತ್ತರ ಕೊರಿಯಾದಿಂದ ಪರಾರಿಯಾಗಿ ತನ್ನ ದೇಶದ ಸರ್ವಾಧಿಕಾರಿಯ ಕರಾಳ ಮುಖವನ್ನು ಬಿಚ್ಚಿಟ್ಟಿದ್ದಾಳೆ. ಇಯೋನ್ಮಿ ಪಾರ್ಕ್ ಎಂಬ ಯುವತಿ ದೇಶದ ನಾಯಕ ಕಿಮ್ ಜಾಂಗ್ ಉನ್ ಬಗ್ಗೆ ಸಂವೇದನಾಶೀಲ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಕಿಮ್ ಜೊಂಗ್-ಉನ್ ತನ್ನ “ಸಂತೋಷದ ತಂಡ(Pleasure Squad)” ಗಾಗಿ ಪ್ರತಿ ವರ್ಷ 25 ಕನ್ಯೆಯರನ್ನು ಆರಿಸಿಕೊಳ್ಳುತ್ತಾನಂತೆ.
ಇನ್ನು ಕನ್ಯೆಯರನ್ನು ಅವರ ನೋಟ ಮತ್ತು ರಾಜಕೀಯ ನಿಷ್ಠೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಕಿಮ್ನ “ಪ್ಲೆಶರ್ ಸ್ಕ್ವಾಡ್” ಗಾಗಿ ತಾನು ಎರಡು ಬಾರಿ ಸ್ಕೌಟ್ ಮಾಡಲ್ಪಟ್ಟಿದ್ದೇನೆ ಆದರೆ ತನ್ನ ಕುಟುಂಬದ ಸ್ಥಾನಮಾನದ ಕಾರಣದಿಂದ ಆಯ್ಕೆಯಾಗಲಿಲ್ಲ ಎಂದು ಪಾರ್ಕ್ ಬಹಿರಂಗಪಡಿಸಿದ್ದಾರೆ.
ಹುಡುಗಿಯರ ಆಯ್ಕೆ ಹೇಗಾಗುತ್ತೆ ಗೊತ್ತಾ?
ಇನ್ನು ಕನ್ಯೆಯರನ್ನು ಅವರ ಸೌಂದರ್ಯ ನೋಡಿ ಆಯ್ಕೆ ಮಾಡಲಾಗುತ್ತದೆ. ಅಧಿಕಾರಿಗಳ ತಂಡ ಶಾಲಾ ಮೈದಾನಕ್ಕೆ, ಶಾಲೆಗಳಿಗೆ ಭೇಟಿ ಕೊಡ್ತಾರೆ. ಈ ವೇಳೆ ಸುಂದರವಾದ ಹುಡುಗಿಯರು ಕಂಡರೆ ಮೊದಲು ಹುಡುಗಿಯ ಮನೆಯ ಬ್ಯಾಕ್ಗ್ರೌಂಡ್ ವಿಚಾರಣೆ ಮಾಡ್ತಾರೆ. ನಂತರ ಕುಟುಂಬದ ಸ್ಥಿತಿ ಹಾಗೂ ರಾಜಕೀಯ ಸ್ಥಿತಿಯನ್ನು ಪರಿಶೀಲನೆ ಮಾಡ್ತಾರೆ. ಬಳಿಕ ಇದರಲ್ಲಿ ಆಯ್ಕೆ ಆದ ಹುಡುಗಿಯರನ್ನು ಕಿಮ್ ಜಾಂಗ್ ಉನ್ ತಂಡ ಬಳಸಿಕೊಳ್ಳುತ್ತದೆ. ಇದಕ್ಕೂ ಮೊದಲು ಕನ್ಯೆಯರನ್ನು ಕನ್ಯತ್ವ ಪರೀಕ್ಷೆಗೆ ವೈದ್ಯಕೀಯ ಪರಿಕ್ಷೆಯನ್ನು ಮಾಡಲಾಗುತ್ತದೆ. ಪರೀಕ್ಷೆಯ ಸಮಯದಲ್ಲಿ ಹುಡುಗಿಯರ ಮೈ ಮೇಲೆ ಸಣ್ಣ ಗಾಯದಂತಹ ಸಣ್ಣ ದೋಷ ಕಂಡ ಬಂದರೂ ರಿಜೆಕ್ಟ್ ಮಾಡಲಾಗುತ್ತೆ. ಇನ್ನೂ ಕಠಿಣ ಪರೀಕ್ಷೆ ಬಳಿಕ ಆಯ್ಕೆ ಆದ ಹುಡುಗಿಯರನ್ನು ಪೊಂಗ್ಯಾಂಗ್ಗೆ ಕಳುಹಿಸಲಾಗುತ್ತದೆ. ಅವರ ಏಕೈಕ ಉದ್ದೇಶ ಅಲ್ಲಿನ ಸರ್ವಾಧಿಕಾರಿಯ ಆಸೆಗಳನ್ನು ಪೂರೈಸುವುದಾಗಿದೆ ಎಂದು ಪಾರ್ಕ್ ಹೇಳಿದ್ದಾರೆ.
ಮುಂದೆ ಓದಿ..; ಎರಡು ಬಾರಿ ಅಕ್ರಮವಾಗಿ ಗರ್ಭಿಣಿಯಾದ ಅಪ್ರಾಪ್ತೆ..! ಪೋಷಕರ ವಿರುದ್ಧ ದೂರು.!!ಮುಂದೇನಾಯ್ತು?
ಮೂರು ತಂಡಗಳಾಗಿ ವಿಂಗಡಣೆ:
ಹುಡುಗಿಯರನ್ನು ಮೂರು ತಂಡಗಳಾಗಿ ವಿಂಗಡಿಸಲಾಗುತ್ತದೆ. ಒಂದು ತಂಡದಲ್ಲಿ ಮಸಾಜ್ ತರಬೇತಿ ನೀಡಿದರೆ ಇನ್ನೊಂದು ತಂಡದಲ್ಲಿ ಹಾಡುಗಳನ್ನು ಹಾಗೂ ನೃತ್ಯಗಳನ್ನು ಮಾಡಲು ಇವರನ್ನು ತಯಾರು ಮಾಡ್ತಾರೆ. ಇನ್ನೊಂದು ತಂಡದಲ್ಲಿ ಸರ್ವಾಧಿಕಾರಿ ಹಾಗೂ ಇತರ ಪುರುಷರಿಗೆ ಲೈಂಗಿಕವಾಗಿ ಖುಷಿ ನೀಡುವುದನ್ನು ಕಲಿಸಲಾಗುವುದು. ಈ ಕುರಿತಾಗಿ ಅವರಿಗೆ ಟ್ರೈನ್ ಮಾಡಲಾಗುತ್ತದೆ ಎಂದು ಪಾರ್ಕ್ ಹೇಳಿದ್ದಾರೆ.
ಇದರಲ್ಲಿ ಅತ್ಯಂತ ಅಕರ್ಷಕ ಕನ್ಯೆಯರನ್ನು ಸರ್ವಾಧಿಕಾರಿಯ ಸೇವೆ ಮಾಡಲು ನೇಮಿಸಿದರೆ, ಇನ್ನೂ ಕೆಳ ಶ್ರೇಣಿಯ ಹುಡುಗಿಯರನ್ನು ರಾಜಕಾರಣಿಗಳು, ಕೆಲ ಜನರನ್ನು ತೃಪ್ತಿ ಪಡಿಸಲು ನಿಯೋಜನೆ ಮಾಡಲಾಗುತ್ತದೆ. ಇನ್ನು ಹುಡುಗಿಯರಿಗೆ 20 ವರ್ಷ ದಾಟಿದ ಬಳಿಕ ಅವರನ್ನು ಈ ತಂಡದಲ್ಲಿ ಉಳಿಸಿಕೊಳ್ಳುವುದಿಲ್ಲ. ಇದರಲ್ಲಿ ಕೆಲವು ಹುಡುಗಿಯರು ನಾಯಕರ ಅಂಗರಕ್ಷರನ್ನು ಮದುವೆಯಾಗುತ್ತಾರೆ. ಈ ‘ಪ್ಲೆಶರ್ ಸ್ಕ್ವಾಡ್’ ಅನ್ನೋದು ಕಿಮ್ ಜಾಂಗ್-ಉನ್ ತಂದೆಯ ಕಾಲದಿಂದಲೂ ಹೀನ ಕೃತ್ಯ ನಡೆದುಕೊಂಡು ಬಂದಿದೆ ಎಂದು ಪಾರ್ಕ್ ಉತ್ತರ ಕೊರಿಯಾ ಸರ್ವಾಧಿಕಾರಿಯ ಕರ್ಮಕಾಂಡವನ್ನು ಎಳೆ ಎಳೆಯಾಗಿ ವಿವರಿಸಿದ್ದಾರೆ.
LATEST NEWS
ತಿಮ್ಮಪ್ಪನ ಸನ್ನಿಧಾನದಲ್ಲಿ ಮಾಂಗಲ್ಯ ಮಾರಾಟ; ಮಾಂಗಲ್ಯ ಪಡೆಯುವುದು ಹೇಗೆ?
ಮಂಗಳೂರು : ತಿರುಪತಿ ದೇವಸ್ಥಾನ ಈಗಾಗಲೇ ಭಕ್ತರಿಗಾಗಿ ಮಾಂಗಲ್ಯವನ್ನು ಮಾರಾಟ ಮಾಡುವ ನಿರ್ಣಯದ ಮೂಲಕ ಈಗಾಗಲೇ ಶುಭ ಸುದ್ದಿ ನೀಡಿತ್ತು. ಈ ಮೂಲಕ ಮನೆಯಲ್ಲಿ ಮದುವೆ ಕಾರ್ಯ ಇದ್ದಲ್ಲಿ ತಿರುಮಲ ತಿರುಪತಿ ದೇವಸ್ಥಾನದಿಂದ ಮಾಂಗಲ್ಯವನ್ನು ಖರೀದಿಸಬಹುದು. ಅಲ್ಲದೇ, ತಿಮ್ಮಪ್ಪನ ದರ್ಶನವನ್ನು ಉಚಿತವಾಗಿ ಪಡೆಯಬಹುದಾಗಿದೆ.
ಕಾಣಿಕೆಯಿಂದ ಮಾಂಗಲ್ಯ ತಯಾರಿ :
ತಿರುಮಲ ತಿರುಪತಿ ದೇವಸ್ಥಾನ ಕಳೆದ ಫೆಬ್ರವರಿಯಲ್ಲಿ ಭಕ್ತರಿಗೆ ಮಾಂಗಲ್ಯ ಸರ ಒದಗಿಸಬೇಕೆಂಬ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಂಡಿತ್ತು. ತಿರುಪತಿಗೆ ಕಾಣಿಕೆಯಾಗಿ ನೀಡುವ ಚಿನ್ನದಿಂದ 5 ಮತ್ತು 10 ಗ್ರಾಂ ತೂಕದ ಮಾಂಗಲ್ಯವನ್ನು ತಯಾರಿಸಲಾಗುತ್ತದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಹೇಳಿದೆ.
ಪಡೆಯುವುದು ಹೇಗೆ?
* ನವದಂಪತಿ ತಮ್ಮ ಮದುವೆ ಕಾರ್ಡ್ನೊಂದಿಗೆ ತಿರುಪತಿ ವಿಳಾಸಕ್ಕೆ ಪೋಸ್ಟ್ ಕಳುಹಿಸಬಹುದು.
* ತಿರುಪತಿಯಲ್ಲಿಯೂ ಮಾಂಗಲ್ಯ ಖರೀದಿ ಮಾಡಬಹುದು.
* ನವ ದಂಪತಿ ಸ್ವತ: ತಿರುಪತಿಗೆ ಹೋಗಿ ಮಾಂಗಲ್ಯ ಖರೀದಿ ಮಾಡಬಹುದು.
* ಜೊತೆಗೆ ತಿಮ್ಮಪ್ಪನ ದರ್ಶನವನ್ನೂ ಪಡೆಯಬಹುದು
ಇದನ್ನೂ ಓದಿ : ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!
ವಿಶಿಷ್ಟ ಕಲ್ಯಾಣಮಸ್ತು ಕಾರ್ಯಕ್ರಮ :
ಈಗಾಗಲೇ ತಿರುಪತಿ ದೇವಸ್ಥಾನಂ ಟ್ರಸ್ಟ್ ತನ್ನ ವಿಶಿಷ್ಟ ಕಲ್ಯಾಣಮಸ್ತು ಕಾರ್ಯಕ್ರಮದ ಮೂಲಕ 32,000 ಬಡ ಜೋಡಿಗಳಿಗೆ ವಿವಾಹ ಮಾಡಿದೆ. ಇವರಿಗೆ ದೇವಸ್ಥಾನದ ಆಡಳಿತ ಮಂಡಳಿ 2 ಗ್ರಾಂ ಚಿನ್ನದ ತಾಳಿಯನ್ನು ನೀಡಿದೆ. ಇದೀಗ ಮಾಂಗಲ್ಯ ಮಾರಾಟವನ್ನು ಪರಿಚಯಿಸುವ ಮೂಲಕ, ನವ ದಂಪತಿಯ ಬಾಂಧವ್ಯವನ್ನು ಇನ್ನಷ್ಟು ಬಲಪಡಿಸುತ್ತದೆ. ಸಂತೋಷದ ದಾಂಪತ್ಯ ಜೀವನಕ್ಕೆ ಸಹಾಯ ಮಾಡುತ್ತದೆ ಎಂದು ದೇವಸ್ತಾನಂ ಅರ್ಚಕರು ಹೇಳುತ್ತಾರೆ.
ಈ ಮಂಗಲ ಸೂತ್ರಗಳು 5 ಗ್ರಾಂ ಮತ್ತು 10 ಗ್ರಾಂ ಗಾತ್ರದಲ್ಲಿ ನಾಲ್ಕೈದು ವಿನ್ಯಾಸಗಳಲ್ಲಿ ಬೆಲೆಗೆ ಅನುಗುಣವಾಗಿ ಲಭ್ಯವಿರುತ್ತದೆ. ಇವುಗಳ ಜತೆಗೆ ಲಕ್ಷ್ಮೀ ಕಾಸನ್ನೂ ಮಾರಾಟ ಮಾಡಲು ನಿರ್ಧರಿಸಲಾಗಿದೆ ಎಂದು ದೇವಸ್ತಾನದ ಅಧ್ಯಕ್ಷ ಭೂಮನ ಕರುಣಾಕರ ರೆಡ್ಡಿ ಆಡಳಿತ ಮಂಡಳಿ ಸಭೆಯ ಬಳಿಕ ಮಾಹಿತಿ ನೀಡಿದ್ದಾರೆ.
LATEST NEWS
ಏನಾಶ್ಚರ್ಯ! ರೋಬೋಟ್ ಜೊತೆ ಮದುವೆಯಾಗುತ್ತಿದ್ದಾನೆ ಈ ಯುವಕ!
ಮಂಗಳೂರು : ಜಗತ್ತು ಹೊಸ ಹೊಸ ಆವಿಷ್ಕಾರಗಳಲ್ಲಿ ತೊಡಗಿಕೊಳ್ಳುತ್ತದೆ. ಹೊಸ ಆವಿಷ್ಕಾರಗಳು ಜನರ ಹುಬ್ಬೇರಿಸುವಂತೆ ಮಾಡುತ್ತದೆ. ರೋಬೋಟ್ ತಂತ್ರಜ್ಞಾನವೇನೋ ಹಳತು. ಆದ್ರೆ, ಈಗ ಈ ರೊಬೋಟ್ ಬಗ್ಗೆ ನಾವು ಹೇಳುತ್ತಿರುವ ಸುದ್ದಿ ಹೊಸತು. ಹೌದು, ಇಲ್ಲೊಬ್ಬ ರೋಬೋಟ್ ಅನ್ನೇ ಮದುವೆಯಾಗುತ್ತಿದ್ದಾನೆ. ಇದು ಸಾಧ್ಯನಾ ಅನ್ಬೇಡಿ! ಇದು ಸಾಧ್ಯ ಎಂದು ಯುವಕ ಸಾರಲು ಹೊರಟಂತಿದೆ.
ಎಲ್ಲಿ ನಡೆಯಲಿದೆ ಈ ಅಚ್ಚರಿಯ ಘಟನೆ?
ರೋಬೋಟ್ ತಂತ್ರಜ್ಞಾನ ಆವಿಷ್ಕಾರ ಆದಂದಿನಿಂದಲೂ ಅಚ್ಚರಿ ಹುಟ್ಟು ಹಾಕುತ್ತಿರುವುದೇನೋ ಸರಿ. ಆದ್ರೆ ಮದುವೇನೂ ಆಗ್ಬೋದಾ!? ಈ ಹಿಂದೆ ಸಿನಿಮಾವೊಂದರಲ್ಲಿ ರೋಬೋಟ್ ನ್ನು ಮದುವೆಯಾಗಿದ್ದ ಕಥೆ ಹೆಣೆಯಲಾಗಿತ್ತು. ‘ತೇರೆ ಬಾತೋಮೆ ಅಯ್ಸಾ ಉಲ್ಜಾದಿಯಾ’ ಅನ್ನೋ ಈ ಹಿಂದಿ ಸಿನೆಮಾದಲ್ಲಿ ಹೀರೋ ರೋಬೋಟ್ ಅನ್ನು ಮದುವೆಯಾಗಿ, ಸಂಸಾರ ಮಾಡುವ ಕಥೆ ಇದೆ.
ಇದೀಗ ರಾಜಸ್ಥಾನದಲ್ಲಿ ಯುವಕನೊಬ್ಬ ರೋಬೋಟ್ ಜೊತೆ ಮದುವೆ ಆಗಲು ಮುಂದಾಗಿದ್ದಾನೆ. ಅಂದಹಾಗೆ, ಈ ಯುವಕ ಸಾಫ್ಟ್ ವೇರ್ ಇಂಜಿನಿಯರ್. ಆತನ ಹೆಸರು ಸೂರ್ಯಪ್ರಕಾಶ್ ಸುಮೋತಾ. ಸಿಕರ್ ಎಂಬ ಗ್ರಾಮವೊಂದರ ಸೂರ್ಯಪ್ರಕಾಶ್ ಸುಮೋತಾ ರೋಬೋಟ್ ಜೊತೆ ಮದುವೆಯಾಗಲು ಮುಂದಾಗಿದ್ದಾರೆ.
ಮದುವೆ ದಿನಾಂಕ ಫಿಕ್ಸ್ ಆಗಿಲ್ಲ :
ಮಾರ್ಚ್ 22 ರಂದು ರೋಬೋಟ್ ಜೊತೆ ಎಂಗೇಜ್ ಮೆಂಟ್ ಮುಗಿಸಿಕೊಂಡಿದ್ದು, ಮದುವೆಯ ದಿನಾಂಕ ಇನ್ನೂ ಫಿಕ್ಸ್ ಆಗಿಲ್ಲ. ರೋಬೋಟ್ ಜೊತೆ ಮದುವೆಗೆ ಮುಂದಾಗಿರುವ ಸೂರ್ಯಪ್ರಕಾಶ್ ಸುಮೋತಾ ಮೂಲತಃ ಬಡ ಕೃಷಿ ಕುಟುಂಬದಿಂದ ಬಂದವರು. ತಂದೆ – ತಾಯಿ ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ಮಗ ರೋಬೋಟ್ ಜೊತೆ ಸಂಸಾರ ಮಾಡುತ್ತೇನೆ ಅಂದ್ರೆ ತಂದೆ – ತಾಯಿ ಒಪ್ತಾರೆಯೇ ? ಸೂರ್ಯಪ್ರಕಾಶ ತಂದೆ – ತಾಯಿ ಈ ಮದುವೆಗೆ ಸಮ್ಮತಿ ಸೂಚಿಸಿಲ್ಲ. ಕುಟುಂಬದ ಸದಸ್ಯರು ಸೂರ್ಯಪ್ರಕಾಶ್ಗೆ ಓಕೆ ಅಂದಿದ್ದಾರೆ. ಹೀಗಾಗಿ ಅನಿವಾರ್ಯವಾಗಿ ತಂದೆ ತಾಯಿ ಕೂಡಾ ಈ ರೋಬೋಟ್ ಜೊತೆಗಿನ ಮದುವೆಯನ್ನು ಒಪ್ಪಿಕೊಂಡಿದ್ದಾರೆ.
ಇದನ್ನೂ ಓದಿ : ನಾಯಿಗಳಿಗೂ ಬಂತು ಆಧಾರ್ ಕಾರ್ಡ್.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?
ರೋಬೋ ತಯಾರಿಗೆ 19 ಲಕ್ಷ ಖರ್ಚು :
ಎನ್ಎಮ್ಎಸ್ 5.0 ಗಿಗಾ ಎಂದು ರೋಬೋಟ್ಗೆ ಹೆಸರಿಟ್ಟಿದ್ದು, ಈ ರೋಬೋಟ್ ತಯಾರು ಮಾಡಲು ಸೂರ್ಯಪ್ರಕಾಶ್ 19 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಿದ್ದಾರಂತೆ. ರೋಬೋಟನ್ನು ತಮಿಳನಾಡು ಹಾಗೂ ನೋಯ್ಡಾದ ಕಂಪೆನಿಗಳು ಜಂಟಿಯಾಗಿ ತಯಾರು ಮಾಡುತ್ತಿದೆ. ಇನ್ನು ರೋಬೋಟ್ಗೆ ಬೇಕಾದ ಸಾಫ್ಟ್ವೇರ್ ಹಾಗೂ ಅದರ ಕಮಾಂಡ್ಗಳನ್ನು ಖುದ್ದು ಸೂರ್ಯಪ್ರಕಾಶ್ ರೆಡಿ ಮಾಡುತ್ತಿದ್ದಾರೆ. ಕಳೆದ ಮೂರು ವರ್ಷದ ಹಿಂದೆ ರೋಬೋಟ್ಗಳನ್ನು ಕೃಷಿಯಲ್ಲಿ ಬಳಕೆ ಮಾಡಿ ಅವುಗಳ ವರ್ತನೆಯನ್ನು ಸೂರ್ಯಪ್ರಕಾಶ ಅಧ್ಯಯನ ಮಾಡಿದ್ದಾನೆ.
ಇದೇ ವೇಳೆ ಮನೆಯವರು ಮದುವೆಗೆ ಒತ್ತಾಯಿಸಿದಾಗ ಈ ರೀತಿ ರೋಬೋಟ್ ಜೊತೆ ಮದುವೆ ಆಗುವ ಇಚ್ಚೆ ವ್ಯಕ್ತಪಡಿಸಿದ್ದಾನೆ. ಹೀಗಾಗಿ ಕಳೆದ ಎರಡು ವರ್ಷದಿಂದ ಪರಿಪೂರ್ಣ ಮನುಷ್ಯರಂತೆ ವರ್ತಿಸೋ ರೋಬೋಟ್ ತಯಾರಿಯಲ್ಲಿ ಸೂರ್ಯಪ್ರಕಾಶ್ ತೊಡಗಿಸಿಕೊಂಡಿದ್ದರು.
- FILM7 days ago
ಮತ್ತೆ ಬಾಯ್ ಫ್ರೆಂಡ್ ಬದಲಾಯಿಸಿದ ಶೃತಿ ಹಾಸನ್..!
- FILM6 days ago
PHOTOS : ಗೀತಾ ‘ವಿಜಯ್’ ಅದ್ದೂರಿ ಮದುವೆ; ಮೆಚ್ಚುಗೆ ಪಡೆದ ಧನುಷ್ ಮಾಡಿದ ಆ ಒಂದು ಕಾರ್ಯ!
- LATEST NEWS7 days ago
ವಧು ಕೇಳಿದ ಆ ಒಂದು ಪ್ರಶ್ನೆ; ತಬ್ಬಿಬ್ಬಾದ ವರ..ಮದುವೆ ಕ್ಯಾನ್ಸಲ್!
- DAKSHINA KANNADA6 days ago
ಅಮೇರಿಕಾದಲ್ಲಿ ಕಾರು ಅಪಘಾತ…! ಮೂವರು ಭಾರತೀಯ ಮಹಿಳೆಯರ ಸಾ*ವು…!