LATEST NEWS
ವಿಜಯಪುರದಲ್ಲಿ ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆ ಪತಿಯ ಬರ್ಬರ ಹತ್ಯೆ..!
ಮಹಾನಗರಪಾಲಿಕೆ ಸದಸ್ಯೆಯ ಪತಿಯನ್ನು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ವಿಜಯಪುರದಲ್ಲಿ ಶನಿವಾರ ನಡೆದಿದೆ.
ವಿಜಯಪುರ: ಮಹಾನಗರಪಾಲಿಕೆ ಸದಸ್ಯೆಯ ಪತಿಯನ್ನು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ವಿಜಯಪುರದಲ್ಲಿ ಶನಿವಾರ ನಡೆದಿದೆ.
ವಿಜಯಪುರದ ವಾರ್ಡ್ ನಂಬರ್ 19ರ ಪಾಲಿಕೆ ಸದಸ್ಯೆ ನಿಶಾತ್ ಹೈದರ್ ನದಾಫ್ ಅವರ ಪತಿ ರೌಡಿಶೀಟರ್ ಹೈದರ್ ನದಾಫ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ವ್ಯಕ್ತಿ.
ನಗರದ ಚಾಂದಪುರ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ನದಾಫ್ ಮೇಲೆ ಆರು ಸುತ್ತು ಗುಂಡು ಹಾರಿಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಹಾಡಹಗಲೇ ಈ ಶೂಟೌಟ್ ನಡೆದಿದ್ದು ಜನರನ್ನು ಬೆಚ್ಚಿ ಬೀಳಿಸಿದೆ.
ಘಟನೆ ಜಲನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಆನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮೃತನ ಕುಟಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
LATEST NEWS
ಮಕ್ಕಳ ಮುಂದೆಯೇ ದಾಂಪತ್ಯಕ್ಕೆ ಕಾಲಿಟ್ಟ ವೃದ್ದರು..!! ಅಚ್ಚರಿಯಾದ್ರು ಇದು ಸತ್ಯ..!!
ಇತ್ತೀಚೆಗೆ ಹದಿ ಹರೆಯದ ಯುವತಿಯರು ಐವತ್ತು ಮೇಲ್ಪಟ್ಟ ವಯಸ್ಸಿನವರನ್ನು ವರಿಸೋದನ್ನ ಕೇಳಿದ್ದೇವೆ. ಇನ್ನೂ ಅದೆಷ್ಟೋ ಜೋಡಿಗಳು ಪ್ರೀತಿಯಲ್ಲಿದ್ದು ಮದುವೆಯಾಗಲು ಸಾಧ್ಯವಾಗದೆ ನರಕಯಾತನೆಯನ್ನೂ ಅನುಭವಿಸ್ತಾರೆ. ಆದರೆ ಇಲ್ಲೊಂದು ವೃದ್ಧ ಜೋಡಿ 60 ವರ್ಷಗಳಿಂದ ಪ್ರೀತಿಯಲ್ಲಿದ್ದು ಇದೀಗ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಹೌದು, ಇದು ಅಚ್ಚರಿಯಾದ್ರು ಸತ್ಯ. ಈ ಅಪರೂಪದ ಘಟನೆ ಮಹಬೂಬಾಬಾದ್ ಜಿಲ್ಲೆಯಲ್ಲಿ ನಡೆದಿದೆ.
80 ವರ್ಷದ ಸಮೀದಾ ನಾಯ್ಕ, 70 ವರ್ಷದ ಗೋಗುಲೋತ್ ಲಾಲಿ ಎಂಬ ತನ್ನಗೆಳತಿಯನ್ನು ಮದುವೆಯಾಗಿದ್ದಾರೆ. ಅಷ್ಟಕ್ಕೂ ಇವರಿಬ್ಬರು ಒಟ್ಟಿಗೆ ಜೀವನ ನಡೆಸ್ತಾ ಇದ್ರು. ಆದರೆ ಅಗ್ನಿಸಾಕ್ಷಿಯಾಗಿ ಮದುವೆ ಆಗಿರಲಿಲ್ಲ. ಅಲ್ಲದೆ ಇವರಿಬ್ಬರಿಗೂ ಮಕ್ಕಳು ಕೂಡಾ ಇದ್ದಾರೆ. ಇಬ್ಬರೂ ಪ್ರೀತಿಸಿ ಹಿಂದಿನ ಕಾಲದಲ್ಲಿ ಆಗುವ ಹಾಗೆ ಗಂಧರ್ವ ವಿವಾಹವಾಗಿದ್ದಾರೆ. ಕೇವಲ ಹಾರ ಮಾತ್ರ ಬದಲಾಯಿಸಿಕೊಂಡಿದ್ದಾರೆ. ಹಿಂದಿನ ಕಾಲದಲ್ಲಿ ತಾಳಿ ಕಟ್ಟುವ ಸಂಪ್ರದಾಯ ಇರಲಿಲ್ಲ. ಹಾಗಾಗಿ ಹಾರ ಮಾತ್ರ ಬದಲಾಯಿಸಿಕೊಂಡು ಸಂಸಾರ ನಡೆಸಿದ್ದಾರೆ. ಇವರಿಗೆ ನಾಲ್ಕು ಗಂಡು ಮಕ್ಕಳು ಹಾಗೂ ಒಂದು ಹೆಣ್ಣು ಮಗಳಿದ್ದಾಳೆ.
ಮುಂದೆ ಓದಿ..; ಕೈಗಳನ್ನು ತೋರಿಸಿ ಲಕ್ಷಗಟ್ಟಲೆ ಹಣ ಸಂಪಾದಿಸುತ್ತಾಳಂತೆ ಈ ಮಹಿಳೆ..! ಅಷ್ಟಕ್ಕೂ ಯಾರು ಈಕೆ?
ಮದುವೆಯಾಗದೆ ಒಟ್ಟಿಗೆ ಜೀವನ ನಡೆಸುತ್ತಿದ್ದ ಇವರಿಬ್ಬರಿಗೆ ಮಕ್ಕಳು ಮೊಮ್ಮಕ್ಕಳು ಸೇರಿ ಮದುವೆ ಮಾಡಿಸಿದ್ದಾರೆ. ತಾಯಿಯ ಕೊರಳಲ್ಲಿ ತಾಳಿ ಇರಲಿಲ್ಲ. ಈ ನೋವನ್ನು ಅರ್ಥ ಮಾಡಿಕೊಂಡ ಈ ಕಾರ್ಯವನ್ನು ಮಾಡಿದ್ದಾರೆ. ಈ ವೃದ್ಧ ದಂಪತಿಗೆ ಸಂಪ್ರದಾಯದಂತೆ ಕುಟುಂಬದವರು ಸೆರಿಕೊಂಡು ಮದುವೆ ಮಾಡಿಸಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗ್ತಾ ಇದೆ.
LATEST NEWS
ಕೋವಿಶೀಲ್ಡ್ ಲಸಿಕೆ ಅಡ್ಡ ಪರಿಣಾಮ ಬೀರಲಿದೆ; ಸತ್ಯ ಒಪ್ಪಿಕೊಂಡ ಆಸ್ಟ್ರಾಜೆನಿಕಾ! ಏನಿದರ ಪರಿಣಾಮ?
ನವದೆಹಲಿ : ಕೋವಿಡ್ 19 ವೈರಸ್ ಪ್ರತಿರೋಧಕ ಲಸಿಕೆ ಕೋವಿಶೀಲ್ಡ್ ಅಡ್ಡ ಪರಿಣಾಮ ಬೀರಬಲ್ಲದು ಎಂದು ತಯಾರಿಕಾ ಕಂಪೆನಿ ಆಕ್ಸ್ ಫರ್ಡ್ ಆಸ್ಟ್ರಾ ಜೆನಿಕಾ ಬ್ರಿಟನ್ ನ್ಯಾಯಾಲಯದಲ್ಲಿ ಒಪ್ಪಿಕೊಂಡಿದೆ. ಬ್ರಿಟಿಷ್ ಔಷಧೀಯ ದೈತ್ಯ ಕಂಪನಿ ಅಸ್ಟ್ರಾಜೆನೆಕಾ, ತನ್ನ ಕೋವಿಡ್-19 ಲಸಿಕೆ ಕೋವಿಶೀಲ್ಡ್ ಇದು ಥ್ರಂಬೋಸಿಸ್ ವಿಥ್ ಥ್ರಂಬೋಸೈಟೋಪೆನಿಯಾ ಸಿಂಡ್ರೋಮ್ ಎಂಬ ಅಪರೂಪದ ಅಡ್ಡ ಪರಿಣಾಮವನ್ನು ಉಂಟುಮಾಡಬಹುದು ಎಂದು ಒಪ್ಪಿಕೊಂಡಿದೆ. ಕಂಪನಿಯ ವಿರುದ್ಧ ದಾಖಲಾಗಿರುವ ಒಂದು ಮೊಕದ್ದಮೆಯ ಸಂದರ್ಭದಲ್ಲಿ ಇದನ್ನು ಒಪ್ಪಿಕೊಂಡಿದೆ.
ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಸಹಯೋಗದಲ್ಲಿ ಆಸ್ಟ್ರಾಜೆನಿಕಾ ಕಂಪನಿ ಕೋವಿಶೀಲ್ಡ್ ಲಸಿಕೆಯನ್ನು ಅಭಿವೃದ್ಧಿಪಡಿಸಿತ್ತು. ಲಸಿಕೆ ಪಡೆದ ಹಲವರು ಕಂಪೆನಿ ವಿರುದ್ಧ ಬ್ರಿಟನ್ ಕೋರ್ಟ್ ನಲ್ಲಿ ದಾವೆ ಹೂಡಿದ್ದರು.
ರಕ್ತ ಹೆಪ್ಪುಗಟ್ಟುವಿಕೆಗೆ ಕಾರಣವಾಗಲಿದೆ ಕೋವಿಶೀಲ್ಡ್ :
ಪ್ರಕರಣದ ವಿಚಾರಣೆ ನಡೆಸಿದ ಕಂಪೆನಿಯು ಕೆಲವು ಅಪರೂಪದ ಪ್ರಕರಣಗಳಲ್ಲಿ ಅಡ್ಡ ಪರಿಣಾಮ ಬೀರುವ ಸಾಧ್ಯತೆ ಇದೆ. ರಕ್ತ ಹೆಪ್ಪುಗಟ್ಟುವಿಕೆ, ಪ್ಲೇಟ್ ಲೆಟ್ ಗಳ ಸಂಖ್ಯೆ ಕಡಿಮೆಯಾಗುವ ಥ್ರಂಬೋಸಿಸ್ ವಿತ್ ಥ್ರಂಬೋ ಸೈಟೋಪೆನಿಯಾ ಸಿಂಡ್ರೋಮ್(ಟಿಟಿಎಸ್) ಎಂಬ ಅಡ್ಡ ಪರಿಣಾಮದ ತೀವ್ರತೆಗೆ ಕಾರಣವಾಗುದೆಂದು ಕಂಪೆನಿಯು ಒಪ್ಪಿಕೊಂಡಿದೆ.
ಇದನ್ನೂ ಓದಿ : ಪತಂಜಲಿಯ 14 ಉತ್ಪನ್ನಗಳ ಲೈಸನ್ಸ್ ರದ್ದು..!
ಕಂಪೆನಿ ವಿರುದ್ಧ ಹಲವು ಪ್ರಕರಣ :
ಆ್ಯಸ್ಟ್ರಾಜೆನಿಕಾ ಕಂಪನಿಯ ವಿರುದ್ಧ ಲಂಡನ್ ಹೈಕೋರ್ಟ್ ನಲ್ಲಿ 51 ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ ಹಲವಾರು ಮಂದಿ ಕಂಪನಿಯಿಂದ ತಮಗೆ ಅಥವಾ ತಮ್ಮ ಸಂಬಂಧಿಕರಿಗೆ ಆಗಿರುವ ಪ್ರಾಣ ಹಾನಿ, ಅಂಗಾಂಗ ಹಾನಿ, ಆರೋಗ್ಯ ಹಾನಿಗೆ ಪ್ರತಿಯಾಗಿ ಪರಿಹಾರವನ್ನು ಆಕ್ಸ್ ಫರ್ಡ್ ಆ್ಯಸ್ಟ್ರಾಜೆನಿಕಾ ಕಂಪನಿಯಿಂದ ಕೊಡಿಸಬೇಕು ಎಂದು ಕೋರಿದ್ದಾರೆ. ಆ ದಾವೆಗಳ ಒಟ್ಟಾರೆ ಪರಿಹಾರ ಮೊತ್ತ 100 ದಶಲಕ್ಷ ಪೌಂಡ್ (1047.32 ಕೋಟಿ ರೂಪಾಯಿ) ಆಗಿದೆ.
LATEST NEWS
ಪತಂಜಲಿಯ 14 ಉತ್ಪನ್ನಗಳ ಲೈಸನ್ಸ್ ರದ್ದು..!
ದೆಹಲಿ: ಸುಪ್ರೀಂಕೋರ್ಟ್ ನಲ್ಲಿ ಪ್ರತೀ ಬಾರಿಯೂ ಛೀಮಾರಿ ಹಾಕಿಸಿಕೊಳ್ಳುತ್ತಿರುವ ಯೋಗಗುರು ಬಾಬಾರಾಮದೇವ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೀಗ ಉತ್ತರಾಖಂಡ ಸರಕಾರ ಬಾಬಾರಾಮದೇವ್ ವಿರುದ್ಧ ಖಡಕ್ ನಿರ್ಧಾರ ತೆಗೆದುಕೊಂಡಿದೆ.
ಆರ್ಯುವೇದ ಉತ್ಪನ್ನಗಳ ಕುರಿತು ವಿವಾದಾ ತ್ಮಕ ಜಾಹೀರಾತು ನೀಡಿದ ಎದುರಿಸುತ್ತಿರುವ ಯೋಗ ಗುರು ಬಾಬಾ ರಾಮ್ದೇವ್ ಅವರ ಪತಂಜಲಿ ಸಂಸ್ಥೆಯ 14 ಉತ್ಪನ್ನಗಳ ಲೈಸೆನ್ಸ್ ಅನ್ನು ರದ್ದು ಮಾಡಿ ಉತ್ತರಾಖಂಡ ಸರ್ಕಾರ ನಿರ್ಧಾರ ಕೈಗೊಂಡಿದೆ.
ಮುಂದೆ ಓದಿ..; ಕೈಗಳನ್ನು ತೋರಿಸಿ ಲಕ್ಷಗಟ್ಟಲೆ ಹಣ ಸಂಪಾದಿಸುತ್ತಾಳಂತೆ ಈ ಮಹಿಳೆ..! ಅಷ್ಟಕ್ಕೂ ಯಾರು ಈಕೆ?
ಈ ಕುರಿತು ಅದು ಸೋಮವಾರ ಸುಪ್ರೀಂಕೋರ್ಟ್ಗೆ ಅಫಿಡವಿಟ್ ಸಲ್ಲಿಕೆ ಮಾಡಿದೆ. ಪತಂಜಲಿ ಸಂಸ್ಥೆಗೆ ಸೇರಿದ ದಿವ್ಯಾ ಫಾರ್ಮಸಿ ಉತ್ಪಾದಿಸುವ ‘ದೃಷ್ಟಿ ಐ ಡ್ರಾಪ್’, ‘ಸ್ವಾಸರಿ ಗೋಲ್ಡ್’, ‘ಸ್ವಾಸರಿ ವಟಿ’, ‘ಬೋನ್ಚೋಂ’, ‘ಸ್ವಾಸರಿ ಪ್ರವಾಹಿ’, ‘ಸ್ವಾಸರಿ ಅವಲೇಹ್’, ‘ಮುಕ್ತಾ ವಟಿ ಎಕ್ಸ್ಟ್ರಾ ಪವರ್’, ‘ಲಿಪಿ ಡೋಮ್ “, ‘ಮಧುಗ್ರಿಟ್’, ‘ಮಧುನಾ ಶಿನಿ ವಟಿ ಎಕ್ಷಾ ಪವರ್’, ‘ಲಿವಾಮೃತ್ ಅಡ್ವಾನ್ಸ್’, ‘ಲಿವೋ ಗ್ರಿಟ್’, ‘ಐಗ್ರಿಟ್ ಗೋಲ್ಡ್’ ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಲಾಗಿದೆ.