FILM
ದೊಡ್ಮನೆ ‘ಆನೆ’ಗೆ ಪಟ್ಟಾಭಿಷೇಕ…ಕ್ಯಾಪ್ಟೆನ್ಸಿ ಅಬ್ಬರ ಹೇಗಿರ್ಬೋದು?
bangalore : ಬಿಗ್ ಬಾಸ್ ಮನೆಯ ‘ಆನೆ’ ಎನಿಸಿಕೊಂಡಿರುವ ವಿನಯ್ ಗೌಡ ಮನೆಯ ಕ್ಯಾಪ್ಟನ್ ಆಗಿದ್ದಾರೆ.
ಬಿಗ್ ಬಾಸ್’ ಮನೆಯ ‘ಆನೆ’ ಎನಿಸಿಕೊಂಡಿರುವ ವಿನಯ್ ಗೌಡ ಮನೆಯ ಕ್ಯಾಪ್ಟನ್ ಆಗಿದ್ದಾರೆ.ಹಿಂದಿನ ಎಪೀಸೋಡ್ನಲ್ಲಿ ಏಕವಚನದಲ್ಲಿ ಮಾತನಾಡಿಸಬೇಡ ಅಂತ ವಿನಯ್ಗೆ ಸಂಗೀತಾ ವಾರ್ನಿಂಗ್ ಕೊಟ್ಟಿದ್ದಾರೆ.
ಇದಲ್ಲದೇ ತನಿಷಾ ಕುಪ್ಪಂಡ ಅವರಿಗೂ ಸಹ ‘ಏನೇ..’ ಅಂತ ಏಕವಚನದಲ್ಲಿಯೇ ಮಾತನಾಡಿಸಿ ವೀಕ್ಷಕರ ಬೇಸರಕ್ಕೆ ಕಾರಣವಾಗಿದ್ದಾರೆ.
ಬಿಗ್ಬಾಸ್ ಈ ಸೀಸನ್ನ ಪ್ರಾರಂಭದ ದಿನಂದಿಗಲೂ ಸಂಗೀತಾ ವರ್ಸಸ್ ವಿನಯ್ ಜಟಾಪಟಿ ನಡೆಯುತ್ತಲೇ ಇದೆ. ಹಳ್ಳಿಜೀವನದ ಟಾಸ್ಕ್ಗಳಲ್ಲಿಯಂತೂ ಅದು ಅತಿರೇಕಕ್ಕೇ ಹೋಗಿತ್ತು.
ಸಂಗೀತಾ ಮತ್ತು ಅವರ ತಂಡದ ಎಲ್ಲ ಸದಸ್ಯರೂ ವಿನಯ್ ಅವರನ್ನು ಕೆಣಕಿ, ಅವರ ಮಾತಿಗೆ ನೇರವಾಗಿ ಕೌಂಟರ್ ಕೊಟ್ಟು ಸಾಕಷ್ಟು ಕೆರಳಿಸಿದ್ದರು. ಆದರೆ ಇದೀಗ ವಿನಯ್ ಈ ವಾರದ ಕ್ಯಾಪ್ಟನ್ ಆಗಿದ್ದಾರೆ.
ಹಾಗಾಗಿ ಸಂಗೀತಾ ಶೃಂಗೇರಿ ಅವರನ್ನು ವಿನಯ್ ಟಾರ್ಗೆಟ್ ಮಾಡಬಹುದು.ಅಲ್ಲದೇ, ಇತ್ತೀಚೆಗಿನ ಹಳ್ಳಿ ಟಾಸ್ಕ್ ವೇಳೆ ನಟಿ ತನಿಷಾ ಕುಪ್ಪಂಡ ಕೂಡ ವಿನಯ್ ಜೊತೆ ಜಗಳ ಮಾಡಿದ್ದಾರೆ.
ತನಿಶಾ ಕುಪ್ಪಂಡ ವಿಚಾರದಲ್ಲಿ ವಿನಯ್ ಅವರು ಕಟ್ಟುನಿಟ್ಟಾಗಿ ನಡೆದುಕೊಳ್ಳುವ ಸಾಧ್ಯತೆ ಇದೆ.ಇನ್ನು ವಿನಯ್ ಕ್ಯಾಪ್ಟೆನ್ಸಿಯಲ್ಲಿ ಡ್ರೋನ್ ಪ್ರತಾಪ್ ಗೂ ಕಷ್ಟ ಆಗುವ ಸಾಧ್ಯತೆ ಇದೆ.
FILM
ಬ್ಯಾಂಡೇಜ್ ಸುತ್ತಿಕೊಂಡೇ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಕಾಣಿಸಿಕೊಂಡ ಐಶ್ವರ್ಯ ರೈ
ಐಶ್ವರ್ಯ ರೈ ಬಚ್ಚನ್ ಕೇನ್ಸ್ ಫಿಲ್ಮ್ ಫೆಸ್ಟಿವಲ್ನಲ್ಲಿ ಮತ್ತೆ ಮಿಂಚಿದ್ದಾರೆ. ಅವರು ಪ್ರತಿ ಬಾರಿ ವಿಭಿನ್ನ ಲುಕ್ ನಲ್ಲಿ ಕಾಣಿಸಿಕೊಳ್ಳುತ್ತಾರೆ. ಈ ಬಾರಿಯೂ ವಿಭಿನ್ನವಾಗಿ ಅವರು ಕಾಣಿಸಿಕೊಂಡಿದ್ದಾರೆ. ಅವರ ಲುಕ್ ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಆದರೆ, ಈ ವೇಳೆ ಎಲ್ಲರ ನೋಟ ಐಶ್ವರ್ಯಾ ರೈ ಕೈ ಮೇಲೆ ಬಿದ್ದಿದೆ. ಹೌದು, ಐಶ್ವರ್ಯ ರೈ ಅವರ ಕೈಗೆ ಏಟಾಗಿದೆ ಅನ್ನೋ ವಿಚಾರ ವೈರಲ್ ಆಗಿತ್ತು. ಇದೀಗ ಅವರು ಕೈನಲ್ಲಿ ಬ್ಯಾಂಡೇಜ್ ಇರುವಂತೆಯೇ ಕೇನ್ಸ್ ಫಿಲ್ಮ್ಸ್ ಫೆಸ್ಟಿವಲ್ ನಲ್ಲಿ ಕಾಣಿಸಿಕೊಂಡಿದ್ದಾರೆ.
ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಐಶ್ ಹೆಜ್ಜೆ ಹಾಕಿದ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿವೆ. ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ.
ಗಾಯ ಲೆಕ್ಕಿಸದೆ ಹೆಜ್ಜೆ:
2002ರಲ್ಲಿ ಮೊದಲ ಬಾರಿ ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಐಶ್ವರ್ಯಾ ರೈ ಕಾಣಿಸಿಕೊಂಡಿದ್ದರು. ಅಂದಿನಿಂದ ಪ್ರತಿ ವರ್ಷ ಅವರು ಕೇನ್ಸ್ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕುತ್ತಿದ್ದಾರೆ. ಪ್ರತಿ ಬಾರಿಯೂ ವಿಭಿನ್ನ ಲುಕ್ಗಳಲ್ಲಿ ಅವರು ಗುರುತಿಸಿಕೊಂಡಿದ್ದಾರೆ. ಕೆಲವೊಮ್ಮೆ ತಮ್ಮ ಲುಕ್ ಕಾರಣಕ್ಕೆ ಟ್ರೋಲ್ ಕೂಡ ಆಗಿದ್ದಿದೆ. ಟೀಕೆಗಳಿಗೆ ಅಂಜದೆ, ಐಶ್ವರ್ಯಾ ರೈ 21 ಬಾರಿ ಕೇನ್ಸ್ ಫಿಲ್ಮ್ ಫೆಸ್ಟಿವಲ್ ರೆಡ್ ಕಾರ್ಪೆಟ್ ಮೇಲೆ ನಡೆದಿದ್ದಾರೆ. ಈ ಬಾರಿ ಗಾಯವನ್ನು ಲೆಕ್ಕಿಸದೇ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿರೋದು ವಿಶೇಷ. ನಗುನಗುತ್ತಲೇ ಪೋಸ್ ನೀಡಿ ಎಲ್ಲರಲ್ಲೂ ಅಚ್ಚರಿ ಮೂಡಿಸಿದ್ದಾರೆ.
ಏರ್ ಪೋರ್ಟ್ ಫೋಟೋ ವೈರಲ್ :
ಬುಧವಾರ (ಮೇ 15) ರಾತ್ರಿ ಮುಂಬೈ ವಿಮಾನ ನಿಲ್ದಾಣದಲ್ಲಿ ಐಶ್ವರ್ಯಾ ರೈ ಕಾಣಿಸಿಕೊಂಡಿದ್ದರು. ಈ ಸಂದರ್ಭ ಪಾಪರಾಜಿಗಳ ಕ್ಯಾಮೆರಾ ಕಣ್ಣಿಗೆ ಬಿದ್ದಿದ್ದ ಅವರ ಕೈಗೆ ಏಟಾಗಿರುವುದು ಗಮನಕ್ಕೆ ಬಂದಿತ್ತು. ಮಗಳು ಆರಾಧ್ಯ ಜೊತೆ ಮುಂಬೈ ಏರ್ಪೋರ್ಟ್ನಲ್ಲಿ ಕಾಣಿಸಿಕೊಂಡಿದ್ದ ಐಶ್ವರ್ಯಾ ರೈ ಅವರು ಬಲ ತೋಳಿಗೆ ಚೀಲವನ್ನು ಧರಿಸಿದ್ದು ಕಂಡು ಬಂದಿತ್ತು.
ಇದನ್ನೂ ಓದಿ : ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ
ವಿಮಾನ ನಿಲ್ದಾಣದಲ್ಲಿ ಫೋಟೋ ಚಿತ್ರಿಕರಿಸುತ್ತಿದ್ದವರ ಕಣ್ಣಿಗೆ ಐಶ್ವರ್ಯಾ ರೈ ಹಾಗೂ ಆರಾಧ್ಯ ಕಾಣಿಸಿಕೊಂಡಿದ್ದರು. ಹೀಗಾಗಿ ತಕ್ಷಣ ಅವರ ಫೋಟೋ ವಿಡಿಯೋ ಶೂಟ್ ಮಾಡುತ್ತಿದ್ದ ಫೋಟೋಗ್ರಾಫರ್ಸ್ ಕಣ್ಣಿಗೆ ಐಶ್ವರ್ಯಾ ರೈ ಧರಿಸಿದ್ದ ತೋಳಿನ ಚೀಲ ಕಾಣಿಸಿದೆ. ಆದ್ರೆ ಈ ಬಗ್ಗೆ ಯಾವುದೇ ಉತ್ತರ ನೀಡದೆ ಐಶ್ವರ್ಯಾ ರೈ ಬೈ ಎಂದು ಅಲ್ಲಿಂದ ಮುಂದೆ ಸಾಗಿದ್ದರು.
DAKSHINA KANNADA
ಪುಷ್ಪ 2 ರಿಲೀಸ್ ಡೇಟ್ ಬದಲು…? ಸ್ಪಷ್ಟನೆ ನೀಡಿದ ಚಿತ್ರ ತಂಡ
ಮಂಗಳೂರು : ಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಕಾಂಬಿನೇಷನ್ ನ ಬಹು ನಿರೀಕ್ಷಿತ ಪುಷ್ಪ 2 ಚಿತ್ರ ಯಾವಾಗ ತೆರೆಗೆ ಬರುತ್ತೆ ಅಂತ ಅಭಿಮಾನಿಗಳು ಕಾಯುತ್ತಿದ್ದಾರೆ. ಈ ನಡುವೆ ಸಿನೆಮಾ ರಿಲೀಸ್ ದಿನಾಂಕ ಮುಂದಕ್ಕೆ ಹೋಗಿದೆ. ಆಗಸ್ಟ್ 15 ರಂದು ನಿಗದಿಯಾಗಿದ್ದ ಬಿಡುಗಡೆಯ ದಿನವನ್ನು ಬದಲಾಯಿಸಲಾಗಿದೆ. ಹೀಗೊಂದು ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಓಡಾಡುತ್ತಿದ್ದು ಅಭಿಮಾನಿಗಳು ನಿರಾಶೆಗೊಂಡಿದ್ದಾರೆ.
ಎಡಿಟಿಂಗ್ ಸಮಸ್ಯೆಯಿಂದ ಪುಷ್ಪ 2 ರಿಲೀಸ್ ವಿಳಂಬವಾಗಲಿದೆ ಎಂಬ ಊಹಾಪೋಹಗಳು ಹರಡಿದೆ. ಪತ್ರಿಕೆಯೊಂದು ಈ ಬಗ್ಗೆ ವರದಿ ಮಾಡಿದ್ದು, ಆಂಟೋನಿ ರೂಬೆನ್ ಪುಷ್ಪ 2 ತಂಡದಿಂದ ಹೊರಬಂದಿದ್ದಾರೆ ಎಂದು ಹೇಳಿತ್ತು.
ಆಂಟೋನಿ ರೂಬೆನ್ ಜಾಗಕ್ಕೆ ನವೀನ್ ನೂಲಿ ಬರಲಿದ್ದು, ಪುಷ್ಪ 2 ಬಿಡುಗಡೆ ವಿಳಂಬವಾಗಲಿದೆ ಎಂದು ಹೇಳಿತ್ತು. ಇದು ಎಲ್ಲೆಡೆ ಸುದ್ದಿಯಾಗಿದ್ದು, ಸಿನೆಮಾ ರಿಲೀಸ್ನ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳು ನಿರಾಸೆಗೊಂಡಿದ್ದಾರೆ.
ಆದ್ರೆ, ಇದೊಂದು ಸುಳ್ಳು ಸುದ್ದಿಯಾಗಿದ್ದು, ನಿಗದಿತ ದಿನಾಂಕ ಆಗಸ್ಟ್ 15 ರಂದೇ ಸಿನೆಮಾ ರಿಲೀಸ್ ಆಗಲಿದೆ ಎಂದು ಸಿನೆಮಾ ತಂಡ ಸ್ಪಷ್ಟನೆ ನೀಡಿದೆ. ಅಲ್ಲೂ ಅರ್ಜುನ್ ಅವರ ಭಾಗದ ಚಿತ್ರೀಕರಣ ಬಹುತೇಕ ಮುಗಿದಿದ್ದು, ಈ ಜೂನ್ ಅಂತ್ಯಕ್ಕೆ ಚಿತ್ರೀಕರಣ ಪೂರ್ಣಗೊಳ್ಳಲಿದೆ. ಹೀಗಾಗಿ ಎಡಿಟಿಂಗ್ ಕೂಡಾ ನಿರಾಂತಕವಾಗಿ ನಡೆಯಲಿದ್ದು, ಈಗಾಗಲೇ ಟೀಸರ್ ಕೂಡಾ ಭಾರೀ ಸದ್ದು ಮಾಡಿದೆ. ರಿಲೀಸ್ ಜೊತೆಗೆ ಬಾಕ್ಸ್ ಆಫೀಸಿನಲ್ಲಿ ಚಿಂದಿ ಉಡಾಯಿಸಲಿರುವ ಪುಷ್ಪಾ 2 ನಿಗದಿಯಾದ ದಿನದಂತೆ ಬಿಡುಗಡೆ ಆಗಲಿದೆ ಅಂತ ಸ್ಪಷ್ಟನೆ ನೀಡಿದ್ದಾರೆ.
FILM
ರಾಖಿ ಸಾವಂತ್ ಗೆ ಕ್ಯಾನ್ಸರ್!? ಮಾಜಿ ಪತಿ ಹೇಳಿದ್ದೇನು?
ಮುಂಬೈ : ಸದಾ ಸುದ್ದಿಯಲ್ಲಿರುವ ರಾಖಿ ಸಾವಂತ್, ಇತ್ತೀಚೆಗೆ ಎದೆ ನೊವಿನಿಂದ ಆಸ್ಪತ್ರೆಗೆ ದಾಖಲಾಗಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನಟಿ ರಾಖಿ ಸಾವಂತ್ಗೆಹೃದಯ ಸಂಬಂಧಿ ಕಾಯಿಲೆ ಇದೆ ಎಂದು ಅಭಿಮಾನಿಗಳು ಹೇಳಿದ್ದರು. ಇದೀಗ ರಾಖಿ ಸಾವಂತ್ ಮಾಜಿ ಪತಿ ರಿತೇಶ್ ರಾಜ್ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ರಾಖಿಗೆ ಏನಾಯಿತು?
ಶೂಟಿಂಗ್ ವಿಚಾರದಲ್ಲಿ ಪ್ರಯಾಣ ಮಾಡುತ್ತಿದ್ದ ಸಮಯದಲ್ಲಿ ರಾಖಿ ಸಾವಂತ್ಗೆ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ರಸ್ತೆಯಲ್ಲೇ ಇದ್ದ ಒಂದು ಆಸ್ಪತ್ರೆಗೆ ದಾಖಲು ಮಾಡಿದ್ದೇವೆ. ಆಕೆಯ ಕಂಡಿಷನ್ ಕ್ರಿಟಿಕಲ್ ಇದೆ ಎಂದು ರಿತೇಶ್ ಹೇಳಿದ್ದಾರೆ. ರಾಖಿ ಸಾವಂತ್ಗೆ ಹೃದಯ ಸಂಬಂಧಿ ಎಲ್ಲಾ ಪರೀಕ್ಷೆಗಳನ್ನು ಮಾಡಲಾಗಿದ್ದು, ಇದೀಗ ಆಂಜಿಯೋಪ್ಲಾಸ್ಟಿ ಮಾಡಲಾಗುತ್ತಿದೆ. ಇದರ ಜೊತೆಗೆ ರಾಖಿಗೆ ಗರ್ಭಕೋಶದ ಕ್ಯಾನ್ಸರ್ ಕೂಡಾ ಕಾಣಿಸಿಕೊಂಡಿದೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.
ಆಸ್ಪತ್ರೆಯ ವೈದ್ಯರು ಹೃದಯಾಘಾತದ ಬಗ್ಗೆ ಯಾವುದೇ ರೀತಿಯ ಮಾಹಿತಿ ನೀಡಿಲ್ಲ. ಅದೇ ರೀತಿ ಗರ್ಭಕೋಶದ ಕ್ಯಾನ್ಸರ್ ಬಗ್ಗೆ ಖಚಿತವಾಗಿ ಹೇಳಲು ಸಾದ್ಯವಿಲ್ಲ. ಆದ್ರೆ ಆಕೆಯ ಗರ್ಭಕೋಶದಲ್ಲಿ ಗೆಡ್ಡೆ ಕಾಣಿಸಿಕೊಂಡಿದ್ದು ಅದರ ಪರೀಕ್ಷೆಗೆ ಲ್ಯಾಬ್ಗೆ ಕಳುಹಿಸಲಾಗಿದೆ. ಆದ್ರೆ ವೈದ್ಯರು ಇದು ಕ್ಯಾನ್ಸರ್ ಆಗಿರಬಹುದು ಎಂದು ಹೇಳಿದ್ದಾರೆ ಅಂತ ಮಾಹಿತಿ ನೀಡಿದ್ದಾರೆ.
ರಾಖಿ ಸಾವಂತ್ಗೆ ಈ ಹಿಂದೆಯೇ ಗರ್ಭಕೋಶದಲ್ಲಿ ಸಮಸ್ಯೆ ಇದೆ ಎಂದು ವೈದ್ಯರು ಹೇಳಿದ್ದು, ಆಕೆಗೆ ಮಕ್ಕಳಾಗುವುದಿಲ್ಲ ಎಂದು ಹೇಳಿದ್ದರು. ಅವರ ಕುಟುಂಬದಲ್ಲಿಯೂ ತಾಯಿ, ಸಹೋದರಿಗೆ ಕ್ಯಾನ್ಸರ್ ಇತ್ತು ಅನ್ನೋ ಮಾಹಿತಿ ಕೂಡಾ ಇದೆ.
ಇದನ್ನೂ ಓದಿ : WATCH VIDEO : ಕೈ ಮುರಿದುಕೊಂಡ್ರಾ ಐಶ್ವರ್ಯಾ ರೈ..?
ನಾಟಕವಲ್ಲ ಎಂದ ಮಾಜಿ ಪತಿ :
ರಾಖಿ ಸಾವಂತ್ ವಿಚಾರದಲ್ಲಿ ಆಕೆಯ ಮಾಜಿ ಪತಿ ಸರಿಯಾದ ಮಾಹಿತಿ ನೀಡುತ್ತಿಲ್ಲ ಅನ್ನೋ ಅನುಮಾನ ಮಾಧ್ಯಮದವರಲ್ಲಿ ಇದೆ. ವೈದ್ಯರು ಈ ಬಗ್ಗೆ ಯಾವುದೇ ಮಾಹಿತಿ ಮಾಧ್ಯಮದವರಿಗೆ ನೀಡದ ಕಾರಣ ಇವರ ಹೇಳಿಕೆಯಲ್ಲಿ ಅನುಮಾನ ಮೂಡಿದೆ.
ರಾಖಿ ಸಾವಂತ್ ಆರ್ಥಿಕ ಪರಿಸ್ಥಿತಿ ಕೂಡಾ ಸರಿ ಇಲ್ಲದೆ ಇರುವುದು ಕೂಡಾ ಆಕೆಯ ಈಗಿನ ಈ ಆಸ್ಪತ್ರೆಗೆ ದಾಖಲಾಗಿರುವ ವಿಚಾರಕ್ಕೆ ತಳುಕು ಹಾಕಲಾಗುತ್ತಿದೆ. ಆದ್ರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರಿತೇಶ್, ರಾಖಿ ಈ ಹಿಂದೆ ಹಲವು ಬಾರಿ ಹಲವು ನಾಟಕ ಮಾಡಿರಬಹುದು. ಆದ್ರೆ, ಇದೀಗ ನಿಜವಾಗಿ ಆಕೆ ಆಸ್ಪತ್ರೆಗೆ ದಾಖಲಾಗಿದ್ದಾಳೆ ಎಂದು ಹೇಳಿದ್ದಾರೆ.
ತಾಯಿಯನ್ನು ಕಳೆದುಕೊಂಡಿರುವುದು ಹಾಗೂ ಇತರ ಘಟನೆಗಳು ಆಕೆಯ ಮನಸಿನ ಮೇಲೆ ಗಂಭೀರ ಪರಿಣಾಮ ಬೀರಿದೆ ಎಂದು ಅವರು ಹೇಳಿದ್ದು, ಇದು ಪ್ರಚಾರಕ್ಕೆ ಆಸ್ಪತ್ರೆಗೆ ದಾಖಲಾಗಿರುವುದಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ.
- LATEST NEWS7 days ago
ವರ್ತೂರು ಸಂತೋಷ್ ತೋಟದಲ್ಲಿ ಮತ್ತೆ ಸೇರಿದ ಬಿಗ್ಬಾಸ್ ಸ್ಪರ್ಧಿಗಳು
- LATEST NEWS6 days ago
ಖಾಲಿ ಬಿಯರ್ ಬಾಟಲಿಗಳಿಂದ ಲಕ್ಷಾಧಿಪತಿಯಾದ ವ್ಯಕ್ತಿ..!
- LATEST NEWS6 days ago
ಪ್ರೇಯಸಿಯ ಜೊತೆ ಗೋವಾ ಟೂರ್..! ಕ್ಷೌರಿಕನಿಗೆ ದುಬಾರಿಯಾದ ಟೂರ್..!
- DAKSHINA KANNADA6 days ago
ದೇವರಿಗೆ ಇಟ್ಟ ಹೂವುಗಳನ್ನು ಒಣಗಿದ ನಂತರ ಹೀಗೆ ಮಾಡಿ..!