LATEST NEWS
ರಾಜಕೀಯ ಅಖಾಡದಲ್ಲಿ ಗೆದ್ದು ಬೀಗಿದ ವಿನೇಶ್ ಪೋಗಟ್..!
ಮಂಗಳೂರು/ಹರಿಯಾಣ : ಹರಿಯಾಣ ವಿಧಾನಸಭಾ ಚುನಾವಣಾ ಅಖಾಡದಲ್ಲಿ ನಡೆಸಿದ ಹೋರಾಟದಲ್ಲಿ ಕುಸ್ತಿಪಟು ವಿನೇಶ್ ಪೋಗಟ್ ಗೆಲುವಿನ ನಗೆ ಬೀರಿದ್ದಾರೆ. ಜೂಲಾನ ಕ್ಷೇತ್ರದಿಂದ ಕಾಂಗ್ರೆಸ್ನಲ್ಲಿ ಸ್ಪರ್ಧೆ ಮಾಡಿದ್ದ ಪೋಗಟ್ ಪ್ರತಿಸ್ಪರ್ಧಿ ಯೋಗೇಶ್ ಕುಮಾರ್ ವಿರುದ್ಧ 6015 ಮತಗಳ ಅಂತರದಿಂದ ಜಯಗಳಿಸಿದ್ದಾರೆ.
ಸೆಪ್ಟಂಬರ್ 6 ರಂದು ಕಾಂಗ್ರೆಸ್ ಸೇರ್ಪಡೆಯಾಗಿದ್ದ ವಿನೇಶ್ ಫೋಗಟ್ ಅವರು ಅಕ್ಟೋಬರ್ 5 ರಂದು ಹರಿಯಾಣ ವಿಧಾನ ಸಭೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿದ್ದರು. ಜಿಂದ್ ಜಿಲ್ಲೆಯ ಜೂಲಾನ ಕ್ಷೇತ್ರ ವಿನೇಶ್ ಸ್ಪರ್ಧೆಯಿಂದ ಹೈ ಪ್ರೋಫೈಲ್ ಕ್ಷೇತ್ರವಾಗಿ ಬದಲಾಗಿತ್ತು.
ಮತ ಎಣಿಕೆ ಆರಂಭವಾದಾಗ ಆರಂಭದಲ್ಲಿ ಮುನ್ನಡೆ ಸಾಧಿಸಿದ್ದ ಪೋಗಟ್ ಒಂದು ಹಂತದಲ್ಲಿ ಹಿನ್ನಡೆ ಅನುಭವಿಸಿದ್ದರು. ಬಳಿಕ ಮತ್ತೆ ಮುನ್ನಡೆ ಸಾಧಿಸಿದ ಪೋಗಟ್ ಕೊನೆಗೂ ಜಯದ ನಗೆ ಬೀರಿದ್ದಾರೆ. 2009 ರಿಂದ ಈ ಕ್ಷೇತ್ರ ಕಾಂಗ್ರೆಸ್ ಕೈ ತಪ್ಪಿದ್ದು, ಈ ಭಾರಿ ವಿನೇಶ್ ಪೋಗಟ್ ಮೂಲಕ ಮತ್ತೆ ಪಡೆದುಕೊಂಡಿದೆ.
ಇದನ್ನೂ ಓದಿ : BBK11: ಬಿಗ್ ಬಾಸ್ ನರಕ ನಿವಾಸಿಗಳಿಗೆ ಬಂಪರ್ ಆಫರ್
ಬಿಜೆಪಿ ಸಂಸದ ಮತ್ತು ಕುಸ್ತಿ ಫೆಡರೇಶ್ ಆಫ್ ಇಂಡಿಯಾದ ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್ ವಿರುದ್ಧ ಪ್ರತಿಭಟನೆ ನಡೆಸಿ ವಿನೇಶ್ ಪೋಗಟ್ ಸುದ್ದಿಯಾಗಿದ್ದರು. ಬಳಿಕ 2024 ರ ಪ್ಯಾರಿಸ್ ಒಲಿಂಪಿಕ್ಸ್ನಲ್ಲಿ 50ಕೆಜಿ ವಿಭಾಗದಲ್ಲಿ ತೂಕ ಹೆಚ್ಚಾದ ಕಾರಣಕ್ಕೆ ಫೈನಲ್ ಪ್ರವೇಶಿಸಿದ್ರೂ ಪದಕದಿಂದ ವಂಚಿತರಾಗಿದ್ದರು. ಇದಾದ ಬಳಿಕ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ವಿನೇಶ್ ಪೋಗಟ್ ಇದೀಗ ರಾಜಕೀಯ ಅಖಾಡದಲ್ಲಿ ತನ್ನ ಗೆಲವು ದಾಖಲಿಸಿಕೊಂಡಿದ್ದಾರೆ
LATEST NEWS
ವರದಕ್ಷಿಣೆ ಕಿರುಕುಳ – ಕೆರೆಗೆ ಹಾರಿ ಮಹಿಳೆ ಆತ್ಮ*ಹತ್ಯೆ
ಮಂಗಳೂರು/ಕೊಲಾರ: ಪತಿ ಮತ್ತು ಆತನ ಕುಟುಂಬಸ್ಥರಿ0ದ ನಿರಂತರ ವರದಕ್ಷಿಣಿ ಕಿರುಕುಳದಿಂದಾಗಿ ಬೇಸತ್ತು ಮಹಿಳೆ ಕೆರೆಗೆ ಹಾರಿ ಆತ್ಮ*ಹತ್ಯೆಗೆ ಶರಣಾದ ಘಟನೆ ಬಂಗಾರಪೇಟೆ ಪಟ್ಟಣದಲ್ಲಿ ನಡೆದಿದೆ.
ಆತ್ಮ*ಹತ್ಯೆಗೆ ಶರಣಾದ ಮಹಿಳೆಯನ್ನು ಕೊಲಾರದ ಕೆಜಿಎಫ್ನ ಕಂಗನಲ್ಲೂರು ಗ್ರಾಮದ ಸೌಮ್ಯ (25) ಎಂದು ಗುರುತಿಸಲಾಗಿದೆ.
ಅ. 6ರ ಭಾನುವಾರ ಬಂಗಾರಪೇಟೆ ಪಟ್ಟಣದ ಅಮರಾವತಿ ಬಡಾವಣೆಯಲ್ಲಿರುವ ತಾಯಿಯ ಮನೆಗೆ ಬಂದಿದ್ದ ಸೌಮ್ಯ, ರಾತ್ರಿ ಮನೆಯಿಂದ ಹೊರ ಬಂದು ಕೆರೆಗೆ ಹಾರಿ ಆತ್ಮ*ಹತ್ಯೆಗೆ ಶರಣಾಗಿದ್ದಾರೆ. ಎರಡು ವರ್ಷದ ಹಿಂದೆ ಸುನಿಲ್ ಕುಮಾರ್ ಎಂಬಾತನ ಜೊತೆ ಸೌಮ್ಯ ಮದುವೆಯಾಗಿದ್ದರು.
ಮೃ*ತ ಮಹಿಳೆಯ ಪೋಷಕರು ಆಕೆಯ ಪತಿ ಸುನಿಲ್ ಕುಮಾರ್ ಹಾಗೂ ಕುಟುಂಬಸ್ಥರ ಕಿರುಕುಳದಿಂದ ಸೌಮ್ಯ ಆತ್ಮ*ಹತ್ಯೆಗೆ ಶರಣಾಗಿದ್ದಾಳೆ ಎಂದು ಆರೋಪಿಸಿ ಬಂಗಾರಪೇಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
LATEST NEWS
ವಿದ್ಯುತ್ ತಂತಿ ಸ್ಪರ್ಶಿಸಿ ಮಗು ಸಹಿತ ಎರಡು ಕರಡಿ ಮೃ*ತ್ಯು
ಮಂಗಳೂರು/ಹಾಸನ: ವಿದ್ಯುತ್ ತಂತಿ ಸ್ಪರ್ಶಿಸಿ 3 ಕರಡಿಗಳು ಮೃ*ತಪಟ್ಟ ಘಟನೆ ಅರಸೀಕೆರೆ ತಾಲೂಕಿನ ಕಲ್ಲುಸಾಗರಹಳ್ಳಿ ಅರಣ್ಯ ಪ್ರದೇಶದಲ್ಲಿ ನಡೆದಿದೆ. ತಡವಾಗಿ ಸ್ಥಳೀಯರ ಗುರುತಿಸಿದ್ದಾರೆ.
ಹಾಸನದ ಗುಡ್ಡಗಾಡು ಪ್ರದೇಶಗಳಲ್ಲಿ ಕರಡಿಗಳು ಹೆಚ್ಚಾಗಿದ್ದು, ಕಳೆದ 6 ತಿಂಗಳಲ್ಲಿ ಸುಮಾರು ಐದಾರು ಮಂದಿ ದಾಳಿ ಮಾಡಿ ಗಾಯ**ಗೊಳಿಸಿದ್ದವು.
ಅರಣ್ಯ ಪ್ರದೇಶದ ಬಳಿ ವಿದ್ಯುತ್ ಕಂಬದಿಂದ ತಂಡಾಗಿ ಬಿದ್ದಿದ್ದ ತಂತಿ ತುಳಿದ ಹಿನ್ನಲೆ ತಾಯಿ ಮತ್ತು ಮರಿ ಕರಡಿಯ ಜೊತೆ ಗಂಡು ಕರಡಿ ಸಾವಿಗೀಡಾಗಿದೆಯೆಂದು ಅಧಿಕಾರಿಗಳು ತಿಳಿಸಿದ್ದಾರೆ.
LATEST NEWS
ಕೇಕ್ಗಳಲ್ಲಿ ಕಾರ್ಸಿನೋಜೆನಿಕ್ ಅಂಶ ಪತ್ತೆ – ಎಫ್ಎಸ್ಎಸ್ಎಐ ಎಚ್ಚರಿಕೆ
ಬೆಂಗಳೂರು: ರಾಜ್ಯಾದ್ಯಂತ ಪರೀಕ್ಷೆಗೆ ಒಳಪಡಿಸಲಾದ 235 ಕೇಕ್ ಮಾದರಿಗಳ ಪೈಕಿ 12ರಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಭಾರತೀಯ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರ (ಎಫ್ಎಸ್ಎಸ್ಎಐ) ಕರ್ನಾಟಕದ ಕೇಕ್ ಪ್ರಿಯರಿಗೆ ಎಚ್ಚರಿಕೆ ನೀಡಿದೆ.
ರೆಡ್ ವೆಲ್ವೆಟ್ ಮತ್ತು ಬ್ಲ್ಯಾಕ್ ಫಾರೆಸ್ಟ್ ಸೇರಿದಂತೆ ಜನಪ್ರಿಯ ಕೇಕ್ ಪ್ರಭೇದಗಳಲ್ಲಿ ಹಾನಿಕಾರಕ ಪದಾರ್ಥಗಳು ಪತ್ತೆಯಾಗಿವೆ ಎಂದು FSSAI ಬಹಿರಂಗಪಡಿಸಿದೆ.ಬೇಕರಿ ಮಾಲೀಕರಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿರುವ ಆಹಾರ ಸುರಕ್ಷತಾ ಆಯುಕ್ತ ಶ್ರೀನಿವಾಸ್ ಕೆ, ಕ್ಯಾನ್ಸರ್ ಗೆ ಕಾರಣವಾಗುವ ಯಾವುದೇ ರಾಸಾಯನಿಕ ಅಥವಾ ಬಣ್ಣಗಳನ್ನು ಕೇಕ್ ಗಳಲ್ಲಿ ಬಳಸಬಾರದು. ರಾಜ್ಯಾದ್ಯಂತ ಕೇಕ್ಗಳಲ್ಲಿ ಕ್ಯಾನ್ಸರ್ ಉಂಟುಮಾಡುವ ಪದಾರ್ಥಗಳನ್ನು ಬಳಸಲಾಗುತ್ತಿದೆ ಎಂಬ ಶಂಕೆಯಿಂದಾಗಿ 235 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಇವುಗಳಲ್ಲಿ 12 ಮಾದರಿಗಳಲ್ಲಿ ಅಲೂನಾ ರೆಡ್, ಸನ್ಸೆಟ್ ಯೆಲ್ಲೋ, ಪೊನ್ಸೆಯು 4ಆರ್ ಮತ್ತು ಕಾರ್ಮೋಸಿನ್ನಂತಹ ಹಾನಿಕಾರಕ ಅಂಶಗಳು ಕಂಡುಬಂದಿವೆ.
ಈ ಹಿಂದೆ ಆಹಾರ ಸುರಕ್ಷತಾ ಇಲಾಖೆಯು ಗೋಬಿ ಮಂಚೂರಿಯನ್, ಕಬಾಬ್, ಪಾನಿ ಪುರಿಯಂತಹ ಆಹಾರ ಪದಾರ್ಥಗಳಲ್ಲಿ ಕೃತಕ ಬಣ್ಣಗಳನ್ನು ಬಳಸುವುದನ್ನು ನಿಷೇಧಿಸಿತ್ತು. ಕೇಕ್ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಹೆಚ್ಚಾಗಿ ಬಳಸುವುದರಿಂದ, ಇಲಾಖೆಯು ಈಗ ರೆಡ್ ವೆಲ್ವೆಟ್ ಮತ್ತು ಬ್ಲ್ಯಾಕ್ ಫಾರೆಸ್ಟ್ ಕೇಕ್ಗಳಲ್ಲಿ ಅವುಗಳ ಬಳಕೆಯನ್ನು ನಿಷೇಧಿಸಿದೆ. ಆಹಾರ ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇಕ್ ತಯಾರಕರಿಗೆ ಎಚ್ಚರಿಕೆ ನೀಡಲಾಗಿದೆ.