Connect with us

LATEST NEWS

ರಣರಂಗವಾದ ನವದೆಹಲಿ: ರೈತರು-ಪೋಲೀಸರ ಸಂಘರ್ಷ, ಲಾಠಿಚಾರ್ಜ್..! ಒಂದು ಸಾವು

Published

on

ರಣರಂಗವಾದ ನವದೆಹಲಿ: ರೈತರು-ಪೋಲೀಸರ ಸಂಘರ್ಷ, ಲಾಠಿಚಾರ್ಜ್..! ಒಂದು ಸಾವು

violent-clashes-as-indian-farmers-storm-delhis-red-fort- one dead..!

ನವದೆಹಲಿ : ಕೇಂದ್ರ ಸರ್ಕಾರ ರೂಪಿಸಿರುವ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ ದೆಹಲಿಯಲ್ಲಿ ರೈತರು ನಡೆಸಿದ ಟ್ರ್ಯಾಕ್ಟರ್ ಪರೇಡ್‍ನಲ್ಲಿ ಹಿಂಸಾಚಾರ ನಡೆದಿದ್ದು, ಪರಿಸ್ಥಿತಿ ನಿಯಂತ್ರಿಸಲು ಲಾಠಿಚಾರ್ಜ್, ಅಶ್ರು ವಾಯು ಬಳಕೆಯಾಗಿದ್ದು ಗೋಲಿಬಾರಿಗೆ ಒಂದು ಸಾವು ಸಂಭವಿಸಿದೆ.  

ಎಪ್ಪತ್ತೆರಡನೇ ಗಣರಾಜ್ಯೋತ್ಸವ ಸಂಭ್ರಮಾಚರಣೆಯಲ್ಲಿ ಒಂದೆಡೆ ದೆಹಲಿಯಲ್ಲಿ ಸೈನಿಕರ ಪರೇಡ್ ನಡೆಯುತ್ತಿದ್ದರೆ, ದೆಹಲಿಯ ಹೊರ ಭಾಗದಲ್ಲಿಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರ ಟ್ರ್ಯಾಕ್ಟರ್ ಪರೇಡ್ ನಡೆಯಿತು.

ಜೈ ಜವಾನ್ ಜೈ ಕಿಸಾನ್‍ಗೆ ಅನುಗುಣವಾಗಿ ಒಂದೆಡೆ ಸಂಭ್ರಮಾಚರಣೆ ಪರೇಡ್, ಮತ್ತೊಂದೆಡೆ ಪ್ರತಿಭಟನೆಯಾರ್ಥವಾಗಿ ರೈತರ ಗಣತಂತ್ರ ಪರೇಡ್‍ಗೆ ರಾಷ್ಟ್ರ ರಾಜಧಾನಿ ನವದೆಹಲಿ ಸಾಕ್ಷಿಯಾಯಿತು.

ರೈತರು ಪೋಲೀಸರ ಬ್ಯಾರಿಕೇಡ್‍ಗಳು, ಸಶಸ್ತ್ರ ಪೋಲೀಸರ ಮಾನವ ತಡೆಗೋಡೆಗಳು, ರಸ್ತೆಗೆ ಅಡ್ಡಲಾಗಿ ನಿಲಿಸಿದ್ದ ಬಸ್‍ಗಳು, ಕಟೈನರ್ ಲಾರಿಗಳು, ಕ್ರೇನ್‍ಗಳು, ಸಿಮೆಂಟ್ ಬ್ಲಾಕ್‍ಗಳು ಇದ್ಯಾವುದನ್ನೂ ಲೆಕ್ಕಿಸದೆ ಮುನ್ನುಗ್ಗುವ ಮೂಲಕ ತಮ್ಮ ಆಕ್ರೋಶವನ್ನು ಹೊರ ಹಾಕಿದರು.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ ಸೇರಿದಂತೆ ವಿವಿಧ ರಾಜ್ಯಗಳಿಂದ ಸುಮಾರು 2 ಲಕ್ಷಕ್ಕೂ ಹೆಚ್ಚಿನ ಟ್ರ್ಯಾಕ್ಟರ್‍ಗಳಲ್ಲಿ ಸಾವಿರಾರು ರೈತರು ದೆಹಲಿಯತ್ತ ದಾವಿಸಿ ಬಂದಿದ್ದರು.

ನಿನ್ನೆಯಿಂದಲೂ ಪ್ರಯಾಣ ಆರಂಭಿಸಿದ ರೈತರು ಇಂದು ಮುಂಜಾನೆ ದೆಹಲಿಯ ಸಿಂಗು, ಟಿಕ್ರಿ, ಗಾಜಿಯಾಪುರ್ ಗಡಿಗೆ ಲಗ್ಗೆಯಿಟ್ಟರು. ದೆಹಲಿಯ ಗಡಿ ಭಾಗಗಳ ಸುತ್ತಲೂ ಟ್ರ್ಯಾಕ್ಟರ್‍ಗಳ ಪರೇಡ್ ಭಾರೀ ಸದ್ದು ಮಾಡಿದವು.

ಕೆಲವೊಮ್ಮೆ ಪೋಲೀಸರ ಸೂಚನೆಗಳನ್ನು ಉಲ್ಲಂಘಿಸಿದ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಅಶ್ರುವಾಯು ಸಿಡಿಸಿ ಲಾಠಿಚಾರ್ಜ್ ಮಾಡಲಾಯಿತು.

ಪರಿಸ್ಥಿತಿ ನಿಯಂತ್ರಿಸಲು ಪೋಲೀಸರು ಹಾಗೂ ಇತರ ಭದ್ರತಾ ಸಿಬ್ಬಂದಿಗಳು ಹರಸಾಹಸ ಪಡಬೇಕಾಯಿತು. ಘಟನೆಯಲ್ಲಿ ಹಲವಾರು ರೈತರು ಮತ್ತು ಪೆÇಲೀಸರು ಗಾಯಗೊಂಡಿದ್ದಾರೆ.

ದೆಹಲಿಯ ಸಿಂಗು ಗಡಿಯಲ್ಲಿ ರೈತರ ಪರೇಡ್‍ಗೆ ತಡೆಯೊಡ್ಡಲು ಪೋಲೀಸರು ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್‍ಗಳನ್ನು ಹಾಕಿದರು. ಆದರೆ, ರೈತರು ಬ್ಯಾರಿಕೇಡ್‍ಗಳನ್ನು ಕಿತ್ತೊಗೆದು ಮುಂದೆ ಬಂದರು.

ದೆಹಲಿಯ ಪಾಂಡವನಗರದ ಮೀರತ್‍ಎಕ್ಸ್‍ಪ್ರೆಸ್‍ವೇ ಬಳಿ ಸಾವಿರಾರು ಸಂಖ್ಯೆಯಲ್ಲಿದ್ದ ರೈತರು ಬ್ಯಾರಿಕೇಡ್‍ಗಳನ್ನು ತಳ್ಳಿ ನುಗ್ಗಲು ಯತ್ನಿಸಿದಾಗ ಅವರನ್ನು ನಿಯಂತ್ರಿಸಲು ಲಾಠಿ ಪ್ರಹಾರ ನಡೆಸಲಾಗಿದೆ.

ಸಿಂಗು ಗಡಿಯ ಸಂಜಯ್‍ಗಾಂಧಿಯ ಟ್ರಾನ್ಸ್‍ಪೋರ್ಟ್‍ನಗರದಲ್ಲಿ ಮತ್ತು ಘಾಜಿಪುರ್ ಗಡಿಯಲ್ಲಿ ಅಶ್ರುವಾಯು ಸಿಡಿಸಿ ರೈತರನ್ನು ನಿಯಂತ್ರಿಸುವ ಪ್ರಯತ್ನಗಳು ನಡೆದಿವೆ. ಕಲಂ ಬೈಪಾಸ್‍ನಲ್ಲಿ ಪೋಲೀಸರ ಅಶ್ವದಳದ ಭದ್ರತೆ, ಬ್ಯಾರಿಕೇಡ್‍ಗಳನ್ನು ಭೇದಿಸಿ ರೈತರು ಪ್ರತಿಭಟನೆ ಮುಂದುವರೆಸಿದ್ದಾರೆ.

ಟ್ರ್ಯಾಕ್ಟರ್, ಜೀಪು, ಲಾರಿ, ಬಸ್, ದ್ವಿಚಕ್ರವಾಹನ ಸೇರಿದಂತೆ ನಾನಾ ರೀತಿಯ ವಾಹನಗಳಲ್ಲಿ ರೈತರು ದೆಹಲಿಗೆ ದೌಡಾಯಿಸಿದ್ದಾರೆ. ದೆಹಲಿ ಒಳಗೆ ನುಗ್ಗಲು ಪ್ರಯತ್ನಿಸಿದ ರೈತರನ್ನು ತಡೆಯಲು ಪೋಲೀಸರು ಮತ್ತು ಸೇನಾ ತುಕಡಿಗಳು ಹರಸಾಹಸ ಪಡಬೇಕಾಯಿತು.

ಏಕಕಾಲಕ್ಕೆ ಲಕ್ಷಾಂತರ ಮಂದಿ ಆಗಮಿಸಿದ್ದರಿಂದ ದೆಹಲಿಯ ಗಡಿಭಾಗಗಳಲ್ಲಿ ಕಿಸಾನ್ ಘೋಷಣೆಗಳು ಬೊಬ್ಬಿರಿದವು.

ಇದಷ್ಟೇ ಅಲ್ಲದೆ ಎಲ್ಲಾ ರಾಜ್ಯಗಳಲ್ಲೂ ರೈತರ ಬೆಂಬಲವಾಗಿ ಪ್ರತಿಭಟನೆಗಳು ನಡೆದಿವೆ. ಕರ್ನಾಟಕ, ಮಹಾರಾಷ್ಟ್ರ, ಕೇರಳ, ತಮಿಳುನಾಡು, ಉತ್ತರ ಪ್ರದೇಶ, ಮಧ್ಯ ಪ್ರದೇಶ ಸೇರಿದಂತೆ ನಾನಾ ರಾಜ್ಯಗಳ ರೈತರು ದೆಹಲಿಯ ಟ್ರ್ಯಾಕ್ಟರ್ ಪರೇಡ್‍ಗೆ ಬೆಂಬಲ ವ್ಯಕ್ತಪಡಿಸಿ ರಾಜ್ಯಮಟ್ಟಗಳಲ್ಲಿ ಟ್ರ್ಯಾಕ್ಟರ್ ರಾಲಿ ನಡೆಸಿದ್ದಾರೆ.

ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಗ್ರಾಮ ಮಟ್ಟಗಳಲ್ಲೇ ರೈತರನ್ನು ತಡೆಯುವ ಪ್ರಯತ್ನ ಮಾಡಿದ್ದಾರೆ. ಕೆಲವು ಭಾಗಗಳಲ್ಲಿ ಮನೆ ಮನೆಗೆ ಹೋಗಿ ಟ್ರ್ಯಾಕ್ಟರ್‍ಗಳನ್ನು ಹೊರ ತೆಗೆಯದಂತೆ ರೈತರಿಗೆ ಎಚ್ಚರಿಕೆ ನೀಡಲಾಗಿತ್ತು. ಇದನ್ನೂ ಮೀರಿ ಪ್ರತಿಭಟನೆಗೆ ಮುಂದಾದವರನ್ನು ಹೆದ್ದಾರಿ, ಜಿಲ್ಲಾ ರಸ್ತೆಗಳಲ್ಲಿ ತಡೆದು ನಿಲ್ಲಿಸಲಾಗಿದೆ.

ಕಾಂಗ್ರೆಸ್, ಆಮ್‍ಆದ್ಮಿ, ಎಡಪಕ್ಷಗಳು ಸೇರಿದಂತೆ ಅನೇಕ ವಿರೋಧ ಪಕ್ಷಗಳು ರೈತ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿವೆ. ರಾಜಕೀಯ ಹೊರತಾಗಿ ನಡೆದ ರೈತರ ಹೋರಾಟ ರಾಷ್ಟ್ರಾದ್ಯಂತ ಭಾರೀ ಸಂಚಲನ ಮೂಡಿಸಿತ್ತು.

ಕೇಂದ್ರ ಸರ್ಕಾರ ತನ್ನ ಕೃಷಿ ಕಾನೂನುಗಳನ್ನು ಹಿಂಪಡೆಯದೇ ಇದ್ದರೆ ಮುಂದಿನ ದಿನಗಳಲ್ಲಿ ಬಜೆಟ್ ನಡೆಯುವಾಗ ಸಂಸತ್‍ಗೆ ಮುತ್ತಿಗೆ ಹಾಕುವ ಎಚ್ಚರಿಕೆಯನ್ನು ರೈತ ಸಂಘಟನೆಗಳು ನೀಡಿವೆ.

 

BANTWAL

ಪುತ್ತೂರು ಜಾತ್ರೆಯಿಂದ ಹಿಂದಿರುಗುವ ವೇಳೆ ಜವರಾಯನ ಅಟ್ಟಹಾಸ; ಜೀಪ್ ಡಿಕ್ಕಿ; ಬೈಕ್ ಸವಾರ ಸಾ*ವು

Published

on

ಪುತ್ತೂರು : ಜೀಪೊಂದು ಬೈಕ್ ಗೆ ಡಿ*ಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃ*ತಪಟ್ಟು, ಅವರ ಇಬ್ಬರು ಮಕ್ಕಳು ಗಂಭೀ*ರ ಗಾ*ಯಗೊಂಡ ಘಟನೆ ಬುಧವಾರ ರಾತ್ರಿ ಪುತ್ತೂರು ಸುಬ್ರಹ್ಮಣ್ಯ ರಸ್ತೆಯಲ್ಲಿನ ನರಿಮೊಗರು ಗ್ರಾಮದ ಪಾಪೆತ್ತಡ್ಕ ಎಂಬಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಬಡಕ್ಕೋಡಿ ಕಡ್ಯ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಲಾರಿ ಚಾಲಕರಾಗಿರುವ ಲೋಕೇಶ್ (48) ಮೃ*ತಪಟ್ಟವರು. ಅವರ ಇಬ್ಬರು ಮಕ್ಕಳು ಗಂಭೀ*ರ ಗಾಯಗೊಂಡಿದ್ದು, ಗಾ*ಯಾಳುಗಳನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

 

ಲೋಕೇಶ್ ಅವರು  ಮಕ್ಕಳೊಂದಿಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ನಡೆಯುತ್ತಿರುವ ಜಾತ್ರೆಗೆ ಆಗಮಿಸಿ ಹಿಂದಿರುಗುತ್ತಿದ್ದ ವೇಳೆಯಲ್ಲಿ ಮುಂಭಾಗದಿಂದ ಆಗಮಿಸಿದ ಜೀಪು ಅವರು ಚಲಾಯಿಸುತ್ತಿದ್ದ ಬೈಕ್ ಗೆ ಡಿ*ಕ್ಕಿಯಾಗಿತ್ತು.

ಡಿ*ಕ್ಕಿಯ ರಭಸಕ್ಕೆ ಬೈಕ್ ಎರಡು ತುಂಡಾಗಿದೆ. ಸುಮಾರು 50 ಮೀಟರ್ ದೂರದ ತನಕ ಬೈಕನ್ನು ಜೀಪ್‌ ಎಳೆದುಕೊಂಡು ಹೋಗಿದೆ. ಈ ಸಂದರ್ಭದಲ್ಲಿ ರಸ್ತೆಗೆ ಎಸೆಯಲ್ಪಟ್ಟ ಲೋಕೇಶ್ ಅವರು ಸ್ಥಳದಲ್ಲಿಯೇ ಸಾ*ವನ್ನಪ್ಪಿದ್ದಾರೆ. ಪುತ್ತೂರು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

LATEST NEWS

27ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ ಕೆಜಿಎಫ್ ಹೊಗಳಿದ್ದ ಯೂಟ್ಯೂಬರ್!

Published

on

ಮುಂಬೈ : ಖ್ಯಾತ ಯೂಟ್ಯೂಬರ್ ಮತ್ತು ಸೋಶಿಯಲ್ ಮೀಡಿಯಾದಲ್ಲಿ ಪ್ರಖ್ಯಾತರಾಗಿರುವ ಅಬ್ರದೀಪ್ ಸಹಾ ಇಹಲೋಕ ತ್ಯಜಿಸಿದ್ದಾರೆ. ಅಂಗ್ರಿ ರ್‍ಯಾಂಟ್‌‌ಮ್ಯಾನ್‌ ಎಂದೇ ಖ್ಯಾತರಾಗಿರುವ ಅಬ್ರದೀಪ್ ಸಹಾ ತಮ್ಮ 27 ನೇ ವಯಸ್ಸಿಗೆ ಅಸುನೀಗಿದ್ದಾರೆ. ಅವರು ಏಪ್ರಿಲ್ 16 ರಂದು ವಿ*ಧಿವಶರಾಗಿದ್ದಾರೆ. ಅವರ ನಿ*ಧನದ ಸುದ್ದಿ ಅಭಿಮಾನಿಗಳಿಗೆ ಆಘಾತ ಉಂಟು ಮಾಡಿದೆ.

ಅಂಗ್ರಿ ರಾಂಟ್ ಮ್ಯಾನ್ ಅನಾರೋಗ್ಯದಿಂದ ಬಳಲುತ್ತಿದ್ದರು ಎಂದು ಹೇಳಲಾಗಿದೆ. ಕಳೆದ ತಿಂಗಳು ಅಪರೇಷನ್ ಗೆ ಒಳಗಾಗಿದ್ದರು. ಅವರ ಸ್ಥಿತಿ ಗಂಭೀರವಾಗಿದೆ. ಐಸಿಯುವಿನಲ್ಲಿದ್ದಾರೆ ಎಂದು ಹೇಳಲಾಗಿತ್ತು. ಕಳೆದೊಂದು ತಿಂಗಳಿಂದ ಅಬ್ರದೀಪ್ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿರಲಿಲ್ಲ. ಹಾಗಾಗಿ, ಈ ಸುದ್ದಿ ಖಚಿತ ಎಂದೇ ಹೇಳಲಾಗಿತ್ತು. 11 ದಿನಗಳ ಹಿಂದೆ ಅವರ ತಂದೆ ಅಭಿಮಾನಿಗಳಿಗೆ, ಐಸಿಯುನಲ್ಲಿ ರ್‍ಯಾಂಟ್‌‌ಮ್ಯಾನ್‌ ಚೇತರಿಸಿಕೊಳ್ಳುತ್ತಿದ್ದಾರೆ ಎಂದಿದ್ದರು.

ಇದನ್ನೂ ಓದಿ : ಬೆಂಗಳೂರಿನ ಖ್ಯಾತ ಯೂಟ್ಯೂಬರ್ ಬಂಧನ; ಮುಳುವಾಯ್ತು ಆ ಒಂದು ವೀಡಿಯೋ!

ಖ್ಯಾತಿ ಕೊಟ್ಟ ಕೆಜಿಎಫ್ :

ಕೋಲ್ಕತ್ತಾದವರಾದ ಆ್ಯಂಗ್ರಿ ರ್‍ಯಾಂಟ್‌‌ಮ್ಯಾನ್‌ ಫೆಬ್ರವರಿ 19, 1996 ರಂದು ಜನಿಸಿದರು. ‘ಆಂಗ್ರಿ ರಾಂಟ್‌ಮ್ಯಾನ್’ ಎಂಬ ಅವರ ಯೂಟ್ಯೂಬ್ ಚಾನೆಲ್ 481k ಚಂದಾದಾರರನ್ನು ಮತ್ತು Instagram ನಲ್ಲಿ 119k ಫಾಲೋವರ್ಸ್​ ಹೊಂದಿದ್ದರು. 2018ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಕೆಜಿಎಫ್‌ ಸಿನಿಮಾ ವಿಮರ್ಶೆ ಮಾಡುವ ಮೂಲಕ ಅಬ್ರದೀಪ್ ಸಹಾ ಖ್ಯಾತಿ ಗಳಿಸಿದರು.
ಕೆಜಿಎಫ್ ಸಿನಿಮಾವನ್ನು ಹೊಗಳಿದ್ದ ಅವರು, ಬಾಲಿವುಡ್ ಸಿನಿಮಾರಂಗವನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿನಿಮಾ ಹೇಗೆ ಮಾಡಬೇಕು ಎಂದು ದಕ್ಷಿಣ ಭಾರತೀಯ ಚಿತ್ರರಂಗ ನೋಡಿ ಕಲಿಯಿರಿ ಎಂದು ಹೇಳಿದ್ದರು. ಈ ವಿಚಾರ ಸಿಕ್ಕಾಪಟ್ಟೆ ವೈರಲ್ ಆಗಿತ್ತು.

Continue Reading

DAKSHINA KANNADA

ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿರುವ ಬಿಜೆಪಿ ಜಿಲ್ಲಾಧ್ಯಕ್ಷ- ಬಿರುವೆರ್ ಕುಡ್ಲ ಉದಯ್ ಪೂಜಾರಿ

Published

on

ಮಂಗಳೂರು : ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ನರೇಂದ್ರ ಮೋದಿಯವರು ರೋಡ್ ಶೋ ನಡೆಸಿದ್ದರು. ಮುಂಬರುವ ಚುನಾವಣೆಯಲ್ಲಿ ದ.ಕ ಜಿಲ್ಲಾ ಅಭ್ಯರ್ಥಿ ಬ್ರಿಜೇಶ್ ಚೌಟ ಹಾಗೂ ಉಡುಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಪರ ಬ್ಯಾಟ್ ಬೀಸಿದ್ದರು. ಈ ವೇಳೆ ನಾರಾಯಣ ಗುರು ಸರ್ಕಲ್ ನಲ್ಲಿರುವ ಗುರುಗಳ ಮೂರ್ತಿಗೆ ಮಾಲಾರ್ಪಣೆ ಮಾಡಿದ್ದರು.

udaya poojary

ಆದರೆ ಈ ಸಂದರ್ಭ ಬಿಜೆಪಿ ಬೆಂಬಲಿಗರಾದ ಬಿರುವೆರ್‌ ಕುಡ್ಲ ಸಂಘಟನೆಯನ್ನು ಕಡೆಗಣಿಸಿರುವುದಕ್ಕೆ ಬಿರುವೆರ್ ಕುಡ್ಲ ಸಂಸ್ಥಾಪಕ ಉದಯ ಪೂಜಾರಿ ಬೇಸರ ವ್ಯಕ್ತಪಡಿಸಿದ್ದಾರೆ.

ನಾರಾಯಣ ಗುರು ವೃತ್ತ ನಿರ್ಮಾಣ ಮಾಡುವಾಗ ಸತೀಶ್‌ ಕುಂಪಲ ಎಲ್ಲಿದ್ದರು…?

ಮಂಗಳೂರಿನಲ್ಲಿ ನಾರಾಯಣ ಗುರು ವೃತ್ತವನ್ನು ಲೇಡಿಹಿಲ್ ಸರ್ಕಲ್‌ ಬಳಿ ನೂತನವಾಗಿ ನಿರ್ಮಾಣ ಮಾಡುವ ಸಂದರ್ಭದಲ್ಲಿ ಸತೀಶ್‌ ಕುಂಪಲ ಎಲ್ಲಿದ್ದರು…? ನಾವು ಸರ್ಕಲ್‌ ಮಾಡಲು ಹೋರಾಟ ಮಾಡುವಾಗ ಅವರು ಎಲ್ಲಿದ್ದರು..? ಇಂದು ಕೇವಲ ತನ್ನ ರಾಜಕೀಯ ಲಾಭಕ್ಕಾಗಿ ಮಾತನಾಡುತ್ತಿದ್ದಾರೆ. ಅವರು ಬಿಲ್ಲವ ಎನ್ನುವ ಕಾರಣಕ್ಕೆ ಬಿಜೆಪಿ ಜಿಲ್ಲಾಧ್ಯಕ್ಷರನ್ನಾಗಿ ಮಾಡಲಾಗಿದೆ. ಆದರೆ, ಅವರು ಬಿಲ್ಲವರಿಗೋಸ್ಕರ, ಬಿಲ್ಲವ ಸಮುದಾಯಕ್ಕೆ ಏನು ಕೊಡುಗೆ ನೀಡಿದ್ದಾರೆ ಎನ್ನುವುದನ್ನು ಮೊದಲು ಹೇಳಲಿ ಎಂದು ಉದಯ ಪೂಜಾರಿ ಹೇಳಿದ್ದಾರೆ.

ಇದನ್ನೂ ಓದಿ..;ಜೆಪಿಯಿಂದ ಬಿಲ್ಲವ ನಾಯಕ ಔಟ್..? ನಾರಾಯಣ ಗುರು ಹೈಜಾಕ್..!

ಬಿಲ್ಲವ ಸಂಘಟನೆಗಳ ಮನವಿ ಬಳಿಕ ನಾರಾಯಣ ಗುರು ವೃತ್ತ ನಿರ್ಮಾಣ

ನಾರಾಯಣ ಗುರು ವೃತ್ತ ನಿರ್ಮಾಣ ಮಾಡಿದ್ದು, ಬಿಜೆಪಿ ನಾಯಕರು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸುದ್ದಿಗೋಷ್ಠಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿರುವೆರ್ ಕುಡ್ಲದ ಮುಖಂಡ ಉದಯ್‌ ಪೂಜಾರಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.  ಕಳೆದ 13 ವರ್ಷಗಳ ಹಿಂದೆ ನಾವು ಕಾಂಗ್ರೆಸ್ ಸರಕಾರ ಇದ್ದಾಗ ಅಲ್ಲಿ ನಾರಾಯಣ ಗುರು ವೃತ್ತ ಮಾಡಲು ಮನವಿ ಮಾಡಿದ್ದೆವು. ಸಂಸದ ನಳಿನ್‌ ಕುಮಾರ್ ಸಹಿತ ಎಲ್ಲಾ ಶಾಸಕರಿಗೂ ಮನವಿ ನೀಡಿದ್ದೆವು. ಸುಮಾರು 200 ಬಿಲ್ಲವ ಸಂಘಟನೆಗಳು ಮನವಿ ನೀಡಿದ ಬಳಿಕ ಅಲ್ಲಿ ನಾರಾಯಣ ಗುರು ವೃತ್ತ ಮಾಡಲಾಗಿದೆ ಎಂದು ಹೇಳಿದ್ರು.

ಬಿರುವೆರ್ ಕುಡ್ಲ ಸಂಘಟನೆ ದೂರವಿಟ್ಟಿದ್ದಕ್ಕೆ ಆಕ್ರೋಶ

ಆದರೆ, ಭಾನುವಾರದಂದು ಪ್ರಧಾನಿ ನರೇಂದ್ರ ಮೋದಿಯನ್ನು ಸ್ವಾಗತಿಸಲು ಉದ್ಯಮಿಗಳು, ಪಕ್ಷ ವಿರೋಧಿ ಚಟುವಟಿಕೆ ಮಾಡಿದವರನ್ನು ಕರೆದುಕೊಂಡು ಹೋಗಿದ್ದಾರೆ. ಆದರೆ ನಮ್ಮ ಸಂಘಟನೆಯನ್ನು ದೂರ ಇಟ್ಟಿರುವುದು ನಮಗೆ ಬೇಸರ ಮೂಡಿಸಿದೆ ಎಂದರು. ಕನಿಷ್ಠ ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್ ಎಸ್ ಸಾಯಿರಾಂ ಅವರನ್ನಾದರೂ ಕರೆಯಬಹುದಿತ್ತು ಎಂದರು. ನಳಿನ್‌ ಕುಮಾರ್ ಕಟೀಲು, ವೇದವ್ಯಾಸ ಸಹಿತ ಹಲವು ಮಂದಿ ನಾಯಕರು ನಮ್ಮ ಕಷ್ಟಕ್ಕೆ ಸ್ಪಂದಿಸಿದ್ದವರು. ಆದರೆ ಇಂದು ಬಿಜೆಪಿಯಲ್ಲೇ ಎರಡು ಬಣ ಆಗಿದೆ. ಇದು ನಮಗೆ ಬೇಸರ ತರುವ ಕೆಲಸ ಎಂದರು. ಬಿಜೆಪಿ ನಡೆಯಿಂದ ನಮ್ಮ ಸಂಘಟನೆಗೆ ಬೇಸರವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾವು ಇಂಥವರಿಗೇ ಮತ ಚಲಾಯಿಸಿ ಎಂದು ಯಾರಿಗೂ ಹೇಳಲ್ಲ. ಯಾರು ಒಳ್ಳೆಯ ಅಭ್ಯರ್ಥಿ ಇದ್ದಾರೋ ಅವರಿಗೆ ಮತ ಹಾಕಿ ಎಂದರು.

Continue Reading

LATEST NEWS

Trending