Connect with us

    LATEST NEWS

    ವಿಶಾಲ ಗಾಣಿಗ ಮರ್ಡರ್‌ ಪ್ರಕರಣ: ವರ್ಷದ ಬಳಿಕ ಸುಪಾರಿ ಹಂತಕ ಅರೆಸ್ಟ್‌

    Published

    on

    ಉಡುಪಿ: ಬ್ರಹ್ಮಾವರ ತಾಲೂಕಿನಲ್ಲಿ 2021ರಲ್ಲಿ ನಡೆದ ವಿಶಾಲ ಗಾಣಿಗ ಕೊಲೆ ಪ್ರಕರಣ ನಡೆದ ವರ್ಷದ ನಂತರ ಸುಪಾರಿ ಹಂತಕನನ್ನು ಉಡುಪಿ ಪೊಲೀಸರು ಉತ್ತರಪ್ರದೇಶದಲ್ಲಿ ಬಂಧಿಸಿದ್ದಾರೆ.

    ರಾಮಕೃಷ್ಣ ಹಾಗೂ ವಿಶಾಲ ಗಾಣಿಗ ದಂಪತಿ 

    ಬಂಧಿತ ಆರೋಪಿಯನ್ನು ರೋಹಿತ್ ರಾಣಾ ಪ್ರತಾಪ್ ನಿಶಾದ್ ಯಾನೆ ಸೋನು (21) ಎಂದು ಗುರುತಿಸಲಾಗಿದೆ.
    ಘಟನೆ ವಿವರ
    2021ರ ಜು.12 ರಂದು ಬ್ರಹ್ಮಾವರ ಕುಮ್ರಗೊಡು ಗ್ರಾಮದ ರೆಸಿಡೆನ್ಸಿಯಲ್ಲಿ ಒಬ್ಬಂಟಿಯಾಗಿದ್ದ ವಿಶಾಲ ಗಾಣಿಗರವರನ್ನು ಭೀಕರವಾಗಿ ಕೊಲೆ ಮಾಡಿ ಆಕೆಯ ಕುತ್ತಿಗೆಯಲ್ಲಿದ್ದ ಚಿನ್ನದ ಮಂಗಳ ಸೂತ್ರ ಹಾಗೂ ಕೈಯಲ್ಲಿದ್ದ ಚಿನ್ನದ ಬಳೆಗಳನ್ನು ಸುಲಿಗೆ ಮಾಡಲಾಗಿತ್ತು.

    ಘಟನೆ ಬಗ್ಗೆ ಈಕೆಯ ಪತಿ ರಾಮಕೃಷ್ಣ ಗಾಣಿಗನನ್ನು ವಿಚಾರಿಸಿದಾಗ ಪತ್ನಿಯ ಕೊಲೆಗೆ ಆತ ಸುಪಾರಿ ನೀಡಿದ್ದ ಎಂಬ ಅಂಶ ಬಯಲಾಗಿತ್ತು.

    ಪ್ರಕರಣ ಸಂಬಂಧ ಈಗಾಗಲೇ ರಾಮಕೃಷ್ಣ ಗಾಣಿಗ ಹಾಗೂ ಓರ್ವ ಸುಪಾರಿ ಹಂತಕ ಉತ್ತರ ಪ್ರದೇಶದ ಗೋರಖ್‌ಪುರದ ಸ್ವಾಮಿನಾಥ ನಿಶಾದನನ್ನು ಈಗಾಗಲೇ ಉಡುಪಿ ಪೊಲೀಸರು ಬಂಧಿಸಿದ್ದರು.

    ಸದ್ಯ ಆರೋಪಿಗಳು ಹಿರಿಯಡ್ಕ ಜೈಲಿನಲ್ಲಿದ್ದಾರೆ. ಇವರ ವಿರುದ್ಧ ಈಗಾಗಲೇ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

    ಇದೇ ಪ್ರಕರಣದಲ್ಲಿ ಮತ್ತೋರ್ವ ಸುಪಾರಿ ಹಂತಕ ರೋಹಿತ್ ರಾಣಾ ಪ್ರತಾಪ್ ತಲೆಮರೆಸಿಕೊಂಡಿದ್ದನು. ಈತ ನಾಪತ್ತೆ ಬಗ್ಗೆ ಆರೋಪಿಯ ಪೋಷಕರು ಮುಂಬೈಯ ಗಾಮ್‌ದೇವಿ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು.

    ಕೊಲೆ ಪ್ರಕರಣದ ನಂತರ ಹಲವು ತಿಂಗಳು ಆರೋಪಿ ನೇಪಾಳ ಗಡಿಯಲ್ಲಿನ ಮಹಾರಾಜ ಗಂಜ್ ಎಂಬ ಪರಿಸರದಲ್ಲಿ ತಲೆ ಮರೆಸಿಕೊಂಡು ಓಡಾಡುತ್ತಿದ್ದನು.

    ಕೆಲದಿನಗಳ ಹಿಂದೆ ಈತ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿದ್ದ ಬಗ್ಗೆ ಮಾಹಿತಿ ಪಡೆದ ತನಿಖಾಧಿಕಾರಿ ಅನಂತಪದ್ಮನಾಭ ನೇತೃತ್ವದಲ್ಲಿ ಬ್ರಹ್ಮಾವರ ಪೊಲೀಸ್ ಉಪನಿರೀಕ್ಷಕ ಗುರುನಾಥ ಹಾದಿಮನಿ, ಸಿಬ್ಬಂದಿ ವೆಂಕಟರಮಣ ದೇವಾಡಿಗ, ರಾಘವೇಂದ್ರ, ಪ್ರವೀಣ್ ಶೆಟ್ಟಿಗಾರ್ ರವರನ್ನು ಒಳಗೊಂಡ ವಿಶೇಷ ತಂಡವು ಬಂಧಿಸಿದೆ.

    ಜಿಲ್ಲಾ ಪೊಲೀಸ್ ಅಧೀಕ್ಷಕ ವಿಷ್ಣುವರ್ಧನ ಎನ್, ಐ.ಪಿ.ಎಸ್, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಎಸ್ .ಟಿ ಸಿದ್ದಲಿಂಗಪ್ಪರವರ ಮಾರ್ಗದರ್ಶನದಂತೆ,

    ಸುಧಾಕರ ಎಸ್ ನಾಯ್ಕ, ಪೊಲೀಸ್ ಉಪಾಧೀಕ್ಷಕರು, ಉಡುಪಿ ಉಪ ವಿಭಾಗರವರ ನಿರ್ದೇಶನದಂತೆ ಕೋಟ ಠಾಣೆಯ ಸಿಬ್ಬಂದಿ ರಾಘವೇಂದ್ರ,

    ವಿಜಯೇಂದ್ರ ಹಾಗೂ ಬ್ರಹ್ಮಾವರ ವೃತ್ತ ಕಛೇರಿಯ ಸಿಬ್ಬಂದಿ ಕೃಷ್ಣಪ್ಪ, ವಾಸುದೇವ ಪೂಜಾರಿ, ಪ್ರದೀಪ್ ನಾಯಕ್, ಕೃಷ್ಣ ಶೇರುಗಾರ್,

    ಶೇಖರ ಶೇರುಗಾರ್, ಜ್ಯೋತಿ ಎಂ, ನಾಗಶ್ರೀ ಹೆಚ್‌.ಪಿ. ರವರು ಪ್ರಕರಣವನ್ನು ಭೇಧಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.

    ಅಕ್ರಮ ಸಂಬಂಧಕ್ಕಾಗಿ ಕೊಲೆ
    ವಿಶಾಲ ಗಾಣಿಗ ಹತ್ಯೆಗೆ ಪತಿ ರಾಮಕೃಷ್ಣನಿಗೆ ಇದ್ದ ಅಕ್ರಮ ಸಂಬಂಧವೇ ಕಾರಣ ಎಂದು ತನಿಖೆ ವೇಳೆ ತಿಳಿದು ಬಂದಿತ್ತು. ರಾಮಕೃಷ್ಣನ ಅಕ್ರಮ ಸಂಬಂಧದಿಂದ ಗಂಡ ಹೆಂಡತಿ ಮಧ್ಯೆ ಆಗಾಗ ಜಗಳ ಕೂಡ ನಡೆಯುತ್ತಿತ್ತು.

    ಅಲ್ಲದೇ ಆಸ್ತಿ ವಿಚಾರದಲ್ಲೂ ಗಲಾಟೆ ಆಗುತ್ತಲೇ ಇತ್ತು. ಇದೇ ದ್ವೇಷದಿಂದ ಹಂತಕರಿಗೆ 2 ಲಕ್ಷಕ್ಕೂ ಅಧಿಕ ಹಣ ನೀಡಿ ಸುಪಾರಿ ನೀಡಿ ಪತ್ನಿಯನ್ನು ಕೊಲೆ ಮಾಡಿಸಿದ್ದಾನೆ ಅಂತಾ ತಿಳಿದುಬಂದಿದೆ.

    kerala

    5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್‌..!

    Published

    on

    ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್‌ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.

    ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್‌ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.

    ಆನ್‌ ಲೈನ್ ಗೇಮಿಂಗ್‌ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?

    ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
    ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್‌ಲೈನ್ ಗೇಮಿಂಗ್‌ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.

    Continue Reading

    DAKSHINA KANNADA

    ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ

    Published

    on

    ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.


    ಉತ್ತರದ ಬ್ರೇಕ್ ವಾಟರ್ 831 ಮೀಟ‌ರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.

    ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
    ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್‌ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್‌ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್‌ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.

    Continue Reading

    LATEST NEWS

    WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?

    Published

    on

    ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
    ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.

    ಸೀಟ್ ಗಾಗಿ ಎಡವಟ್ಟು :
    ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.

    ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್‌ಗೆ 60 ರೂ., ಹಾಲ್ಫ್‌ಗೆ 40 ರೂ.
    ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.

    ರೋಹಿತ್‌ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.

    ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.

    Continue Reading

    LATEST NEWS

    Trending