LATEST NEWS
ಉಡುಪಿಯ ವಿಶಾಲ ಗಾಣಿಗ ಕೊಲೆಗೆ ಟ್ವಿಸ್ಟ್ ನೀಡಿದ ‘ಎರಡು ಟೀ ಕಪ್’
ಉಡುಪಿ: ದುಬೈನಲ್ಲೇ 6 ತಿಂಗಳ ಹಿಂದೆ ಪತ್ನಿ ವಿಶಾಲ ಗಾಣಿಗ ಕೊಲೆಗೆ ಪತಿ ರಾಮಕೃಷ್ಣ ಗಾಣಿಗ ಮಾಸ್ಟರ್ ಪ್ಲ್ಯಾನ್ ಸಿದ್ದಪಡಿಸಿದ್ದ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು.
ದುಬೈನಲ್ಲೇ ಕುಳಿತು 2 ಲಕ್ಷ ಕೊಟ್ಟು ಸುಪಾರಿ ಕಿಲ್ಲಿಂಗ್ ಬುಕ್ ಮಾಡಿದ್ದ
ಪತ್ನಿ ವಿಶಾಲಾರನ್ನು ಕೊಲೆ ಮಾಡಲೇಬೇಕು ಎಂದು ಸಂಚು ರೂಪಿಸಿದ್ದ ರಾಮಕೃಷ್ಣ ಗಾಣಿಗಾ ಇದಕ್ಕಾಗಿ ಆರೇಳು ತಿಂಗಳ ಹಿಂದೆಯೇ ದುಬೈನಲ್ಲಿ ಕುಳಿತು ಮರ್ಡರ್ ಪ್ಲ್ಯಾನ್ ರೂಪಿಸಿದ್ದ. ಇದಕ್ಕಾಗಿಯೇ ಕೇರಳದ ಒಬ್ಬ ಗೆಳೆಯನನ್ನು ಗೊತ್ತು ಮಾಡಿ ಸುಪಾರಿ ಕಿಲ್ಲರ್ ಒಬ್ಬನನ್ನು ಪರಿಚಯಿಸುವಂತೆ ಹೇಳಿದ್ದ. ಈ ಹಿನ್ನೆಲೆಯಲ್ಲಿ ಆತ ಉತ್ತರ ಪ್ರದೇಶ ಮೂಲದ ಸುಪಾರಿ ಕಿಲ್ಲರ್ ಆರೋಪಿ ಸ್ವಾಮಿನಾಥ ನಿಶಾದ ಎಂಬುವವನನ್ನು ಪರಿಚಯಿಸಿದ್ದ. ಅವನಿಗೆ ಮುಂಗಡವಾಗಿ ಎರಡು ಲಕ್ಷ ರೂಪಾಯಿಗಳನ್ನು ಕೊಟ್ಟು ಸುಪಾರಿ ಕಿಲ್ಲಿಂಗ್ ಬುಕ್ ಮಾಡಿಕೊಂಡಿದ್ದ.
ಊರಿಗೆ ಬಂದಾಗ ಆರೋಪಿಗಳಿಗೆ ಸ್ಥಳ ಪತ್ನಿ ಪರಿಚಯ
ಪತ್ನಿಯ ಕೊಲೆಯ ಉದ್ದೇಶದಿಂದಲೇ ಮಾರ್ಚ್ನಲ್ಲಿ ಪತ್ನಿ ಹಾಗೂ ಮಕ್ಕಳು ಸಮೇತ ರಾಮಕೃಷ್ಣ ಊರಿಗೆ ಬಂದಿದ್ದ. ಈ ವೇಳೆ ಉಪ್ಪಿನ ಕೋಟೆಯ ತನ್ನ ಪ್ಲ್ಯಾಟ್ಗೆ ಸುಪಾರಿ ಕಿಲ್ಲರ್ಗಳನ್ನು ಕರೆಸಿ ಇವರು ತನ್ನ ಸ್ನೇಹಿತರು ಎಂದು ಪತ್ನಿಗೆ ಪರಿಚಯಿಸಿಕೊಂಡಿದ್ದ. ಆ ಸಮಯದಲ್ಲಿ ಹಂತಕ ಆಕೆಯನ್ನು ಹಾಗೂ ಕೊಲೆ ನಡೆಸಲು ಸೂಕ್ತವಾದ ಸ್ಥಳವನ್ನು ಸೂಕ್ಷ್ಮವಾಗಿ ಗಮನಿಸುತ್ತಾನೆ. ಜೊತೆಗೆ ಪತಿ ರಾಮಕೃಷ್ಣ ಅವರೊಂದಿಗೆ ಕುಳಿತು ಕೊಲೆಯ ಮಾಸ್ಟರ್ ಪ್ಲ್ಯಾನ್ ರೂಪಿಸಿ, ಮತ್ತೆ ಆತ ಉತ್ತರ ಪ್ರದೇಶಕ್ಕೆ ಹಿಂತಿರುಗುತ್ತಾನೆ. ಇದಾದ ಕೆಲವೇ ದಿನಗಳಲ್ಲಿ ರಾಮಕೃಷ್ಣ ಪತ್ನಿ, ಮಕ್ಕಳು ಸಮೇತ ಮತ್ತೆ ದುಬೈಗೆ ಹಾರುತ್ತಾರೆ.
ಪತ್ನಿಯ ಬರುವಿಕೆಯನ್ನು ಖಚಿತಪಡಿಸಿಕೊಂಡಿದ್ದ
ಮತ್ತೆ ಇದೇ ಜು.2ರಂದು ವಿಶಾಲ ಗಾಣಿಗ ಅವರನ್ನು ಮಗುವಿನ ಸಮೇತ ಊರಿಗೆ ಕಳುಹಿಸಿಕೊಡುತ್ತಾನೆ ಪತಿ ರಾಮಕೃಷ್ಣ. ಅದಾದ 5 ದಿನಗಳಲ್ಲಿ ಅಂದರೆ ಜು.7ರಂದು ಪತಿ ರಾಮಕೃಷ್ಣ ಗಾಣಿಗರ ಆಸ್ತಿಗೆ ಸಂಬಂಧಿಸಿದ ಪಾಲುಪಟ್ಟಿ ನಡೆದಿತ್ತು. ತದನಂತರ ಜುಲೈ 12ರಂದು ವಿಶಾಲ ಗಾಣಿಗ ಆಕೆಯ ತಂದೆ, ತಾಯಿ ಹಾಗೂ ಪುತ್ರನೊಂದಿಗೆ ಆಟೋ ರಿಕ್ಷಾದಲ್ಲಿ ತಾಯಿ ಮನೆ ಗುಜ್ಜಾಡಿಗೆ ಹೋಗಿದ್ದರು. ಈ ವೇಳೆ ಮಗುವನ್ನು ತನ್ನ ತವರು ಮನೆಯಲ್ಲಿ ಮಗುವನ್ನು ಬಿಟ್ಟು ತನಗೆ ಬ್ಯಾಂಕ್ ನಲ್ಲಿ ಕೆಲಸವಿದೆ ಎಂದು ವಿಶಾಲ ಗಾಣಿಗ ಮತ್ತೆ ಆಟೋರಿಕ್ಷಾ ಮೂಲಕ ಗಂಡನ ಫ್ಲ್ಯಾಟ್ಗೆ ಹಿಂತಿರುಗಿದ್ದರು. ದೂರವಾಣಿ ಕರೆ ಮೂಲಕ ಪತ್ನಿಯ ಬರುವಿಕೆಯನ್ನು ಖಚಿತಪಡಿಸಿಕೊಂಡಿದ್ದ ಪತಿ ರಾಮಕೃಷ್ಣ ಫ್ಲ್ಯಾಟ್ ಗೆ ತನ್ನಿಬ್ಬರು ಸ್ನೇಹಿತರು ಬಂದಿದ್ದಾರೆ ಎಂದು ಆಕೆಗೆ ಮಾಹಿತಿ ನೀಡಿದ್ದ.
ಕಾಫಿ ಕುಡಿದು ಮರ್ಡರ್
ಈ ಮೊದಲು ಆಕೆ ಪರಿಚಯವಿಲ್ಲದವರನ್ನು ಆಕೆ ತನ್ನ ಫ್ಲ್ಯಾಟ್ ಒಳಗಡೆ ಬಿಟ್ಟುಕೊಳ್ಳುತ್ತಿರಲಿಲ್ಲ. ಆದರೆ ಮಾರ್ಚ್ನಲ್ಲಿ ತನ್ನ ಗೆಳೆಯರು ಎಂದು ಪರಿಚಯಿಸಿದ್ದ ಸುಪಾರಿ ಕಿಲ್ಲರ್ಗಳನ್ನು ಆಕೆ ಮನೆಯ ಒಳಗೆ ಬಿಟ್ಟುಕೊಂಡಿದ್ದಳು. ಅಲ್ಲಿ ಆಕೆ ತನ್ನ ಪತಿಯ ಸ್ನೇಹಿತರೆಂದು ನಂಬಿ ಕಾಫೀ ನೀಡಿದ್ದಳು. ತದನಂತರ ಆಕೆಯನ್ನು ಬಾಗಿಲು ಹಾಕಿ ಕುತ್ತಿಗೆಗೆ ವಯರ್ ಬಿಗಿದು ಕೊಲೆ ಮಾಡಿದ್ದಾರೆ. ತನಿಖೆಯ ದಾರಿ ತಪ್ಪಿಸಲು ಆಕೆಯ ಮೈಮೇಲಿದ್ದ ಚಿನ್ನಾಭರಣವನ್ನು ಎಗರಿಸಿದ್ದರು. ಇದಾದ ಮೇಲೆ ಸುಪಾರಿ ಕಿಲ್ಲರ್ಗಳು ಗಂಡ ರಾಮಕೃಷ್ಣ ಅವರಿಗೆ ಕೆಲಸ ಮುಗಿಸಿದ ಮಾಹಿತಿ ನೀಡಿ ಸದ್ದಿಲ್ಲದೇ ಉತ್ತರ ಭಾರತದತ್ತ ಪ್ರಯಾಣ ಬೆಳೆಸಿದ್ದಾರೆ.
ಹೆಣದ ಮುಂದೆ ಗಳಗಳನೆ ಅತ್ತ ಗಂಡ
ಕೊಲೆ ನಡೆದ ನಂತರ ಕುಟುಂಬಸ್ಥರು ಗಂಡ ರಾಮಕೃಷ್ಣನಿಗೆ ಮಾಹಿತಿ ತಲುಪಿಸುತ್ತಾರೆ. ಈ ವೇಳೆ ಆತ ಏನೂ ಗೊತ್ತಿಲ್ಲದವನಂತೆ ನಟಿಸಿ ತರಾತುರಿಯಲ್ಲಿ ದುಬೈನಿಂದ ಊರಿಗೆ ಬರುತ್ತಾನೆ. ತನ್ನ ಮನೆಯಲ್ಲೇ ಅಂತ್ಯಸಂಸ್ಕಾರದ ವ್ಯವಸ್ಥೆಗೆ ಸಿದ್ದತೆ ನಡೆಸುತ್ತಾನೆ. ಈ ವೇಳೆ ಮಗುವನ್ನು ಅಪ್ಪಿ ಅತ್ತು ನಾಟಕವಾಡುತ್ತಾನೆ. ತದನಂತರ ಆಕೆಯನ್ನು ಅಂತ್ಯಸಂಸ್ಕಾರ ನೆರವೇರಿಸಿ, ಆಕೆಯ ಕ್ರಿಯೆಯಲ್ಲೂ ಭಾಗವಹಿಸುತ್ತಾನೆ. ಈದಾಗಲೇ ಪೊಲೀಸರು ತಮ್ಮ ತನಿಖೆ ಪ್ರಾರಂಭಿಸಿದ್ದರು. ಇದರ ವಿಚಾರಣೆಗಾಗಿ ಗಂಡ ರಾಮಕೃಷ್ಣನನ್ನು ಕರೆಯುತ್ತಾರೆ. ಈ ವೇಳೆ ಪೊಲೀಸರ ಪ್ರಶ್ನೆಗೆ ಸಮರ್ಪಕವಾದ ಉತ್ತರ ನೀಡುವುದಿಲ್ಲ. ಆದರೂ ಪೊಲೀಸರು ಯಾವುದೇ ಸಾಕ್ಷ್ಯವಿಲ್ಲದ ಕಾರಣ ಮುಂದಿನ ಬಾರಿ ವಿಚಾರಣೆಗೆ ಕರೆದಾಗ ಬರುವಂತೆ ಹೇಳಿ ಕಳುಹಿಸಿದ್ದರು.
5 ತಂಡಗಳಿಂದ ತೀವ್ರ ತನಿಖೆ
ಈ ಮಧ್ಯೆ ಉತ್ತರ ಪ್ರದೇಶದ ಪೊಲೀಸರ ಸಹಕಾರದಿಂದ ಸುಪಾರಿ ಕಿಲ್ಲರ್ನನ್ನು ನೇಪಾಳದ ಗಡಿಯಲ್ಲಿ ಬಂಧನ ನಡೆಸಿ ಉಡುಪಿಗೆ ಕರೆತರುತ್ತಾರೆ. ಈ ವೇಳೆ ಆತ ನನಗೆ ಸುಪಾರಿ ನೀಡಿದ್ದು ಆಕೆಯ ಗಂಡನೇ ಎಂಬುವುದಾಗಿ ವಿಚಾರಣೆಯಲ್ಲಿ ತಿಳಿಸುತ್ತಾನೆ. ಈ ವೇಳೆ ಮತ್ತೊಮ್ಮೆ ಪತಿ ರಾಮಕೃಷ್ಣನನ್ನು ವಿಚಾರಣೆಗೆ ಕರೆಸಿ ತೀವ್ರ ತನಿಖೆ ನಡೆಸಿದಾಗ ಸುಪಾರಿ ನೀಡಿದ್ದರ ಬಗ್ಗೆ ಮಾಹಿತಿ ನೀಡುತ್ತಾನೆ. ಸದ್ಯ ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬ ವಿಷಯ ತನಿಖಾ ಹಂತದಲ್ಲಿದೆ ಎಂದು ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು. ಸುಪಾರಿ ಕಿಲ್ಲರ್ ಪರಿಚಯಿಸಿದ ಕೇರಳ ಮೂಲದ ಆರೋಪಿಯ ಬಗ್ಗೆ ಸುಳಿವು ಸಿಕ್ಕಿದ್ದು ಶೀಘ್ರದಲ್ಲಿಯೇ ಆತನನ್ನು ಬಂಧಿಸಲಾಗುವುದು ಎಂದರು.
50,000 ಸಾವಿರ ನಗದು ಬಹುಮಾನ
ಕೊಲೆ ಪ್ರಕರಣವನ್ನು ಪರಿಹರಿಸುವಲ್ಲಿ ಭಾಗಿಯಾಗಿರುವ ಇಡೀ ತಂಡಕ್ಕೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ನಿರೀಕ್ಷಕ ಪ್ರವೀಣ್ ಸೂದ್ 50,000 ಸಾವಿರ ನಗದು ಬಹುಮಾನ ಹಾಗೂ ತಂಡದ ಎಲ್ಲಾ ಸದಸ್ಯರಿಗೆ ಪ್ರಶಂಸನೀಯ ಪ್ರಮಾಣಪತ್ರ ಘೋಷಿಸಿದ್ದಾರೆ.
DAKSHINA KANNADA
ತ್ರಿಶೂರ್ ಪೂರಂ..! ದೇಶದ ಹೆಮ್ಮೆಯ ಉತ್ಸವ..!
ವಿವಿಧತೆಯಲ್ಲಿ ಏಕತೆ ಕಾಣುವ ನಮ್ಮ ದೇಶ ಹಲವು ಸಂಸ್ಕೃತಿ, ಕಲೆ, ಆಚರಣೆ, ಭಾಷೆ, ಜಾತಿ, ಧರ್ಮದ ಮೂಲಕ ವಿಶ್ವದ ಗಮನ ಸೆಳೆದಿದೆ. ದಿಪಾವಳಿ, ಹೋಳಿ, ಈದ್ , ಕ್ರಿಸ್ಮಸ್, ಹೀಗೆ ಹಲವು ಹಬ್ಬಗಳು ರಾಷ್ಟ್ರೀಯ ಮಟ್ಟದಲ್ಲಿ ಆಚರಣೆ ಆದ್ರೆ, ಇನ್ನೂ ಕೆಲವು ಹಬ್ಬಗಳು ರಾಜ್ಯದಿಂದ ರಾಜ್ಯಕ್ಕೆ ಬೇರೆ ಬೇರೆಯಾಗಿದೆ. ಅದರಲ್ಲಿ ವಿಶೇಷ ಹಬ್ಬವಾಗಿ ಕೇರಳದಲ್ಲಿ ಆಚರಿಸುವ ತ್ರಿಶೂರ್ ಪೂರಂ ಸದ್ಯ ಏಷ್ಯಾದಲ್ಲೇ ಅತೀ ಹೆಚ್ಚು ಜನರು ಭಾಗವಹಿಸುವ ಉತ್ಸವವಾಗಿ ಜಗತ್ಪ್ರಸಿದ್ದಿಯನ್ನು ಪಡೆದುಕೊಂಡಿದೆ.
ಏನಿದು ತ್ರಿಶೂರ್ ಪೂರಂ ಹಬ್ಬ
ತ್ರಿಶೂರ್ ಪೂರಂ ಅನ್ನೋದು ತ್ರಿಶೂರಿನ ಶಿವ ದೇವಾಲಯದಲ್ಲಿ ನಡೆಯುವ ವಾರ್ಷಿಕ ಜಾತ್ರೋತ್ಸವ. ಮಲೆಯಾಳಂ ಕ್ಯಾಲೆಂಡರ್ ಪ್ರಕಾರ ಪೂರಂ ನಕ್ಷತ್ರದಲ್ಲಿ ಚಂದ್ರೋದಯದ ವೇಳೆಯಲ್ಲಿ ನಡೆಯುವ ಉತ್ಸವ ಇದು. ತ್ರಿಶೂರ್ ನಲ್ಲಿರೋ ವಡಕ್ಕುನಾಥನ್ ಅರ್ಥಾತ್ ಶಿವ ದೇವಸ್ಥಾನದಲ್ಲಿ ನಡೆಯುವ ವಾರ್ಷಿಕ ಜಾತ್ರೆ ಇದು. ಆನೆಗಳ ಮೂಲಕ ದೇವರನ್ನು ಹೊತ್ತುಕೊಂಡು ದೇವಸ್ಥಾನದ ಬಾಗಿಲು ಪ್ರವೇಶ ಮಾಡೋದು ಈ ಉತ್ಸವದ ವಿಶೇಷ. ಹೀಗಾಗಿ ಸಾವಿರಾರು ವಿದೇಶಿಗರು ಉತ್ಸವ ನೋಡಲು ಆಗಮಿಸ್ತಾರೆ ಅನ್ನೋದೇ ವಿಶೇಷ.
ತ್ರಿಶೂರ್ ಪೂರಂ ಹಬ್ಬದ ಹಿನ್ನೆಲೆ
ರಾಮವರ್ಮ ಕುಂಞಿಪಿಳ್ಳೆ ಎಂಬ ಕೊಚ್ಚಿನ್ ಮಹಾರಾಜ 17 ನೇ ಶತಮಾನದಲ್ಲಿ ಅರುಟ್ಟುಪುಳ ಪೂರಂ ಎಂಬ ಉತ್ಸವವನ್ನು ನಡೆಸಿಕೊಂಡು ಬಂದಿದ್ದರು. ಅರುಟ್ಟುಪುಳ ಪೂರಂ ಎಂಬ ಒಂದು ದಿನದ ಉತ್ಸವಕ್ಕೆ ತ್ರಿಶೂರು ಸೇರಿದಂತೆ ಸುತ್ತಮುತ್ತಲಿನ ದೇವಸ್ತಾನಗಳು ಇದರಲ್ಲಿ ಭಾಗಿ ಆಗುತ್ತಿದ್ದವು. 1796 ರಲ್ಲಿ ಮಳೆಯ ಕಾರಣಿದಿಂದ ತ್ರಿಶೂರ್ನಿಂದ ಹೊರಟಿದ್ದ ದೇವಾಲಯ ತಂಡಗಳಿಗೆ ಅರುಟ್ಟುಪುಳ ಪೂರಂ ಉತ್ಸವದಲ್ಲಿ ಭಾಗವಹಿಸಲು ಅವಕಾಶ ನಿರಾಕರಿಸಲಾಗಿತ್ತು. ಇದರಿಂದ ಕೋಪಗೊಂಡಿದ್ದ ತ್ರಿಶೂರಿನ ರಾಜ ಶಕ್ತನ್ 1796 ರಲ್ಲೇ ತ್ರಿಶೂರಿನಲ್ಲೇ ಈ ಪೂರಂ ಉತ್ಸವ ಆರಂಭಿಸಿದ್ರು ಅನ್ನೋ ಐತಿಹಾಸಿಕ ಕಥೆ ಇದೆ. ಅಂದಿನಿಂದ ತ್ರಿಶೂರಿನ ಹತ್ತು ದೇವಾಲಯಗಳು ಒಟ್ಟಾಗಿ ತ್ರಿಶೂರ್ ಪೂರಂ ಆಚರಿಸಲು ಆರಂಭವಾಯ್ತು ಅನ್ನೋ ದಾಖಲೆಗಳು ಸಿಗುತ್ತದೆ.
ಧರ್ಮಾತೀತವಾಗಿ ನಡೆಯುವ ಪೂರಂ ಉತ್ಸವ
ತ್ರಿಶೂರ್ ಪೂರಂ ಅಂದ ತಕ್ಷಣ ನೆನಪಾಗುವುದು ಅಲ್ಲಿ ಕಾಣಸಿಗುವ ಸರ್ವಧರ್ಮ ಸಮನ್ವಯತೆ. ಇಂತಹ ದೃಶ್ಯ ಬಹುಶಃ ದೇಶದ ಬೇರೆಲ್ಲೂ ಕಾಣಲು ಸಿಗಲಾರದು. ತ್ರಿಶೂರ್ ಪೂರಂ ಉತ್ಸವದಲ್ಲಿ ಪ್ರತಿ ವರ್ಷ ಹೊಸ ಕೊಡೆಗಳನ್ನು ತಯಾರಿಸಲಾಗುತ್ತದೆ. ಕುಡವಟ್ಟಂ ಎಂದು ಕರೆಯುವ ಈ ಕೊಡೆಗಳ ವಿಶೇಷ ಆಕರ್ಷಣೆಗೆ ಕ್ರೈಸ್ತ ಸಮೂದಾಯದವರ ಕೊಡುಗೆ ಇದ್ರೆ, ಪೂರಂಗೆ ಬೇಕಾದ ಪೆಂಡಾಲ್ ಹಾಕೋದು ಇಲ್ಲಿನ ಮುಸ್ಲಿಂ ಸಮೂದಾಯದವರು. ಇನ್ನು ಉತ್ಸವ ನೋಡಲು ಹಿಂದೂ ಮುಸ್ಲಿಂ ಕ್ರೈಸ್ತ ಹೀಗೆ ಎಲ್ಲಾ ಧರ್ಮದವರೂ ಆಗಮಿಸುವುದು ಇಲ್ಲಿನ ವಿಶೇಷ. ಇದೇ ಕಾರಣಕ್ಕೆ ಈ ತ್ರಿಶೂರ್ ಪೂರಂ ಇಂದು ಜಗತ್ಪ್ರಸಿದ್ಧಿಯನ್ನು ಪಡೆದುಕೊಂಡಿದೆ.
ತ್ರಿಶೂರ್ ಪೂರಂ ಹಬ್ಬ ಹೇಗೆ ನಡೆಯುತ್ತದೆ
ತ್ರಿಶೂರು ಹಾಗೂ ಸುತ್ತಮುತ್ತಲಿನ ಹತ್ತು ದೇವಲಾಯಗಳಿಂದ ಆನೆಯ ಮೂಲಕ ದೇವರನ್ನು ಹೊತ್ತು ಶಿವ ದೇವಾಲಯಕ್ಕೆ ತರಲಾಗುತ್ತದೆ. ಒಂದೊಂದು ದೇವಸ್ಥಾನದಿಂದ ದೇವರನ್ನು ಹೊತ್ತು ಬಾಗಿಲು ದಾಟಿ ಬರುವ ಆನೆಗಳನ್ನು ನೋಡಲು ಸಾವಿರಾರು ಭಕ್ತರು ಕಾತರದಿಂದ ಕಾಯುತ್ತಿರುತ್ತಾರೆ. ಈ ವೇಳೆ ಮೊಳಗುವ ಪಂಚ ವಾದ್ಯಗಳನ್ನು ಕೇಳಲೆಂದೇ ಕೆಲವರು ಬರುವುದಿದೆ. ಕಣಿಮಂಗಲಂ ಶಾಸ್ತಾವು ದೇವಾಲಯದಿಂದ ಆರಂಭವಾಗುವ ಈ ಉತ್ಸವ ಬಳಿಕ ಒಂದೊಂದೆ ದೇವಸ್ಥಾನದಿಂದ ಬರಲು ಆರಂಭವಾಗುತ್ತದೆ. ಚಂಡೆ, ಮದ್ದಳೆ, ಕಹಳೆ,ತಾಳ ಹಾಗೂ ಎಡಕ್ಕ ಹೀಗೆ ಪಂಚವಾದ್ಯದ ಮೆರವಣಿಗೆ ನಡೆಯುತ್ತದೆ. ಹತ್ತು ಆನೆಗಳು ದೇವಾಲಯದ ಮುಂದೆ ನಿಂತಿದ್ದರೆ , ಐವತ್ತಕ್ಕೂ ಹೆಚ್ಚು ಆನೆಗಳು ಉತ್ಸವದಲ್ಲಿ ಭಾಗಿಯಾಗುತ್ತದೆ. ಚಿನ್ನದ ಹಣೆಪಟ್ಟಿ, ಚಿನ್ನದ ಪ್ರಭಾವಳಿಯನ್ನು ಹಿಡಿದು , ಪಾರೆಮೆಕ್ಕಾವು ಮತ್ತು ತಿರುವಂಬಾಡಿ ಎಂಬ ಎರಡು ತಂಡಗಳು ಪೂರಂ ನಡೆಯುವ ಸ್ಥಳದಲ್ಲಿ ಮುಖಾಮುಖಿಯಾಗಿ ನಿಂತು ಛತ್ರಿ ವಿನಿಯಮ ಮಾಡಿಕೊಳ್ಳುವ ದೃಶ್ಯ ಪೂರಂನಲ್ಲಿ ವಿಶೇಷ ಅನುಭವ ನೀಡುವ ದೃಶ್ಯ ಕೂಡಾ ಹೌದು. ಕುಡಮಟ್ಟಂ ಅಂತ ಇದನ್ನು ಕರೆಯಲಾಗುತ್ತಿದ್ದು ಶಿವದೇವಲಾಯದ ಪಶ್ಚಿಮ ಗೋಪುರದ ಬಳಿ ಇದು ಸಂಪನ್ನಗೊಳ್ಳುತ್ತದೆ.
FILM
ಕನ್ನಡಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಟಾಲಿವುಡ್ ನ ಜನಮನಗೆದ್ದ ನಟಿ..!! ಡಾಲಿಯ ‘ಉತ್ತರಾಕಾಂಡ’ಕ್ಕೆ ನಟಿ ಯಾರು ಗೊತ್ತಾ?
ಮೋಹಕತಾರೆ ರಮ್ಯ.. ಇವರ ಚಿತ್ತ ಯಾವತ್ತ ಅನ್ನೋದೆ ಇನ್ನೂ ಖಚಿತ ಆಗಿಲ್ಲ. ಈ ಮಧ್ಯೆ ಕೆಲವೊಂದು ಸಿನೆಮಾಕ್ಕೆ ನಟಿಯಾಗಿ ಕಾಣಿಸಿಕೊಳ್ಳಬೇಕಿದ್ದ ಇವರು ಹಲವು ಸಿನೆಮಾದಿಂದ ಕೈ ಬಿಟ್ಟಿದ್ದಾರೆ. ಇದರಲ್ಲಿ ಉತ್ತರಾಕಾಂಡ ಸಿನೆಮಾ ನಟನೆಯಿಂದ ಹೊರ ಬಂದಿರುವುದು ಈಗಾಗಲೇ ಸುದ್ದಿಯಾಗಿದೆ. ಆದರೆ ಇವರ ಬದಲಿಗೆ ಕಾಲಿವುಡ್ ನಟಿ ಬರಲಿದ್ದಾರೆ ಅನ್ನೋ ಸುದ್ದಿ ಎಲ್ಲೆಡೆ ಹಬ್ಬಿದೆ.
ರೊಹೀತ್ ಪದಕಿ ನಿರ್ದೇಶನದಲ್ಲಿ ಅನಾವರಣವಾಗಲಿರುವ ಬಯಲು ಸೀಮೆಯ ಉತ್ತರಾಕಾಂಡ ಕಥೆಗೆ ಕಾಲಿವುಡ್ ನ ಐಶ್ವರ್ಯ ರಾಜೇಶ್ ಬಣ್ಣ ಹಚ್ಚಲಿದ್ದಾರೆ ಎಂದು ಹೇಳಲಾಗಿದೆ. ಕಾಕ ಮುತ್ತೈ , ವಡಾ ಚೆನ್ನೈ, ಕನಾ, ನಮ್ಮ ಮನೆ ಪಿಳ್ಳೈ ಹೀಗೆ ಹತ್ತಾರು ಚಿತ್ರ, ವೈವಿಧ್ಯಮಯ ಪಾತ್ರದ ಮೂಲಕ ಚಂದನವನದ ಚೆಂದದ ನಾಯಕಿಯರಿಗೆಲ್ಲರಿಗೂ ತನ್ನ ನಟನೆಯ ಮೂಲಕ ಜನ ಮನ ಗೆದ್ದ ಐಶ್ವರ್ಯ ರಾಜೇಶ್ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈ ಮೂಲಕ ಸ್ಯಾಂಡಲ್ವುಡ್ ನಲ್ಲಿ ಸಂಚಲನ ಮೂಡಿಸ್ತಾರ ಅನ್ನೋ ಗಾಸಿಪ್ ಹರಿದಾಡ್ತಾ ಇದೆ.
ಈ ಚಿತ್ರದಲ್ಲಿ ಚೈತ್ರಾ ಆಚಾರ್ ಲಚ್ಚಿ ಪಾತ್ರಕ್ಕೆ ಬಣ್ಣ ಹಚ್ತಿದ್ದಾರೆ. ದೂದ್ ಪೇಡಾ ದಿಗಂತ್ ಮಿರ್ಚಿ ಮಲ್ಲಿಗೆ ಎಂಬ ಹೆಸರಿನಿಂದ ಬಣ್ಣ ಹಚ್ಚಲಿದ್ದಾರೆ. ಸದಾ ಬಬ್ಲಿ ಕ್ಯಾರೆಕ್ಟರ್ ನಲ್ಲಿ ಕಾಣಿಸಿಕೊಳ್ಳುತ್ತಿದ್ದ ದಿಗಂತ್ ಈ ಸಿನೆಮಾದಲ್ಲಿ ಡಿಫೆರೆಂಟ್ ಲುಕ್ನಲ್ಲಿ ಕಾಣಿಸಲಿದ್ದಾರೆ.
ಮಲಯಾಳಂನ ನಿರ್ಮಾಪಕ ಮತ್ತು ಆಕ್ಟರ್ ವಿಜಯ್ ಬಾಬು ಕೂಡ ಇದೇ ಚಿತ್ರದ ಮೂಲಕ ಕನ್ನಡಕ್ಕೆ ಪಾಪಾರ್ಪಣೆ ಮಾಡಲಿದ್ದಾರಂತೆ. ಡಾಲಿ ಧನಂಜಯ್ ಜೊತೆ ಕರುನಾಡ ಚಕ್ರವರ್ತಿ ಕೂಡ ಚಿತ್ರದಲ್ಲಿದ್ದಾರೆ ಅನ್ನುವ ವಿಚಾರ ಈಗಾಗಲೇ ಸಿನಿ ಪ್ರಿಯರ ಕನಸಿಗೆ ಬಣ್ಣ ಹಚ್ಚಿದಂತಾಗಿದೆ.
LATEST NEWS
UDUPI : ಕಾಂಗ್ರೆಸ್ ಪರ ದರ್ಶನ್ ಪ್ರಚಾರ; ಸುಮಲತಾ ಏನಂದ್ರು?
ಉಡುಪಿ : ಕೋಟ ಶ್ರೀನಿವಾಸ ಪೂಜಾರಿ ಅವರ ಪರ ಉಡುಪಿಯಲ್ಲಿ ಪ್ರಚಾರ ಮಾಡಲು ನಟಿ ಸಂಸದೆ ಸುಮಲತಾ ಅವರು ಆಗಮಿಸಿದ್ದಾರೆ. ಮಹಿಳಾ ಸಮಾವೇಶದಲ್ಲಿ ಭಾಗವಹಿಸಿದ ಸುಮಲತಾ ಕೋಟ ಪರ ಮತಯಾಚನೆ ಮಾಡಿದ್ದಾರೆ.
ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಸುಮಲತಾ ನಟಿಯಾಗಿದ್ದಾಗ ಉಡುಪಿಗೆ ಶೂಟಿಂಗ್ ಅಂತ ಬರ್ತಾ ಇದ್ದದ್ದೇ, ಈ ಬಾರಿ ಚುನಾವಣಾ ಪ್ರಚಾರಕ್ಕೆ ಬಂದಿದ್ದೇನೆ. ಈ ಬಾರಿ ಮಂಡ್ಯದಲ್ಲಿ ಬಿಜೆಪಿಗೆ ಗೆಲುವಾಗಲಿದ್ದು, ಮೈಸೂರು, ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಚಾರ ನಡೆಸುವುದಾಗಿ ಹೇಳಿದ್ದಾರೆ.
ದರ್ಶನ್ ಬಗ್ಗೆ ಏನಂದ್ರು?
ಈ ವೇಳೆ ಮಂಡ್ಯದಲ್ಲಿ ನಟ ದರ್ಶನ್ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸುಮಲತಾ, ಅದು ದರ್ಶನ್ ಅವರ ವೈಯಕ್ತಿಕ ವಿಚಾರ. ನಾವು ಪ್ರತಿದಿನ ರಾಜಕೀಯ ವಿಚಾರ ಚರ್ಚೆ ಮಾಡುವುದಿಲ್ಲ. ಮಾತ್ರವಲ್ಲ, ಇಂತಹ ವಿಚಾರಗಳನ್ನು ದರ್ಶನ್ ಜೊತೆ ಚರ್ಚೆ ಮಾಡುವುದಿಲ್ಲ. ನಾನು ಹೋಗು ಅಥವಾ ಹೊಗಬೇಡ ಅನ್ನಲು ನಾನು ಯಾರು ಎಂದು ಕೇಳಿದ್ದಾರೆ.
ಕೆಲವರು ನಾನೇ ದರ್ಶನ್ ನನ್ನು ಕಾಂಗ್ರೆಸ್ ಪರ ಪ್ರಚಾರಕ್ಕೆ ಕಳುಹಿಸಿದ್ದಾಗಿ ಹೇಳ್ತಾರೆ, ಆದ್ರೆ ಅದಕ್ಕೂ ನನಗೂ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ನಾನು ನನ್ನ ಇಚ್ಚೆಯಿಂದ ಬಿಜೆಪಿ ಪಕ್ಷಕ್ಕೆ ಬಂದಿದ್ದೇನೆ. ಇನ್ನು ಕುಮಾರಸ್ವಾಮಿ ಪರ ಪ್ರಚಾರ ಮಾಡಬೇಕಾ ಬೇಡ್ವಾ ಅಂತ ಪಕ್ಷ ತೀರ್ಮಾನಿಸುತ್ತದೆ ಎಂದು ಹೇಳಿದ್ದಾರೆ.