LATEST NEWS
ಉಡುಪಿಯ ವಿಶಾಲ ಗಾಣಿಗ ಕೊಲೆಗೆ ಟ್ವಿಸ್ಟ್ ನೀಡಿದ ‘ಎರಡು ಟೀ ಕಪ್’
ಉಡುಪಿ: ದುಬೈನಲ್ಲೇ 6 ತಿಂಗಳ ಹಿಂದೆ ಪತ್ನಿ ವಿಶಾಲ ಗಾಣಿಗ ಕೊಲೆಗೆ ಪತಿ ರಾಮಕೃಷ್ಣ ಗಾಣಿಗ ಮಾಸ್ಟರ್ ಪ್ಲ್ಯಾನ್ ಸಿದ್ದಪಡಿಸಿದ್ದ ಎಂದು ಉಡುಪಿ ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು.
ದುಬೈನಲ್ಲೇ ಕುಳಿತು 2 ಲಕ್ಷ ಕೊಟ್ಟು ಸುಪಾರಿ ಕಿಲ್ಲಿಂಗ್ ಬುಕ್ ಮಾಡಿದ್ದ
ಪತ್ನಿ ವಿಶಾಲಾರನ್ನು ಕೊಲೆ ಮಾಡಲೇಬೇಕು ಎಂದು ಸಂಚು ರೂಪಿಸಿದ್ದ ರಾಮಕೃಷ್ಣ ಗಾಣಿಗಾ ಇದಕ್ಕಾಗಿ ಆರೇಳು ತಿಂಗಳ ಹಿಂದೆಯೇ ದುಬೈನಲ್ಲಿ ಕುಳಿತು ಮರ್ಡರ್ ಪ್ಲ್ಯಾನ್ ರೂಪಿಸಿದ್ದ. ಇದಕ್ಕಾಗಿಯೇ ಕೇರಳದ ಒಬ್ಬ ಗೆಳೆಯನನ್ನು ಗೊತ್ತು ಮಾಡಿ ಸುಪಾರಿ ಕಿಲ್ಲರ್ ಒಬ್ಬನನ್ನು ಪರಿಚಯಿಸುವಂತೆ ಹೇಳಿದ್ದ. ಈ ಹಿನ್ನೆಲೆಯಲ್ಲಿ ಆತ ಉತ್ತರ ಪ್ರದೇಶ ಮೂಲದ ಸುಪಾರಿ ಕಿಲ್ಲರ್ ಆರೋಪಿ ಸ್ವಾಮಿನಾಥ ನಿಶಾದ ಎಂಬುವವನನ್ನು ಪರಿಚಯಿಸಿದ್ದ. ಅವನಿಗೆ ಮುಂಗಡವಾಗಿ ಎರಡು ಲಕ್ಷ ರೂಪಾಯಿಗಳನ್ನು ಕೊಟ್ಟು ಸುಪಾರಿ ಕಿಲ್ಲಿಂಗ್ ಬುಕ್ ಮಾಡಿಕೊಂಡಿದ್ದ.
ಊರಿಗೆ ಬಂದಾಗ ಆರೋಪಿಗಳಿಗೆ ಸ್ಥಳ ಪತ್ನಿ ಪರಿಚಯ
ಪತ್ನಿಯ ಕೊಲೆಯ ಉದ್ದೇಶದಿಂದಲೇ ಮಾರ್ಚ್ನಲ್ಲಿ ಪತ್ನಿ ಹಾಗೂ ಮಕ್ಕಳು ಸಮೇತ ರಾಮಕೃಷ್ಣ ಊರಿಗೆ ಬಂದಿದ್ದ. ಈ ವೇಳೆ ಉಪ್ಪಿನ ಕೋಟೆಯ ತನ್ನ ಪ್ಲ್ಯಾಟ್ಗೆ ಸುಪಾರಿ ಕಿಲ್ಲರ್ಗಳನ್ನು ಕರೆಸಿ ಇವರು ತನ್ನ ಸ್ನೇಹಿತರು ಎಂದು ಪತ್ನಿಗೆ ಪರಿಚಯಿಸಿಕೊಂಡಿದ್ದ. ಆ ಸಮಯದಲ್ಲಿ ಹಂತಕ ಆಕೆಯನ್ನು ಹಾಗೂ ಕೊಲೆ ನಡೆಸಲು ಸೂಕ್ತವಾದ ಸ್ಥಳವನ್ನು ಸೂಕ್ಷ್ಮವಾಗಿ ಗಮನಿಸುತ್ತಾನೆ. ಜೊತೆಗೆ ಪತಿ ರಾಮಕೃಷ್ಣ ಅವರೊಂದಿಗೆ ಕುಳಿತು ಕೊಲೆಯ ಮಾಸ್ಟರ್ ಪ್ಲ್ಯಾನ್ ರೂಪಿಸಿ, ಮತ್ತೆ ಆತ ಉತ್ತರ ಪ್ರದೇಶಕ್ಕೆ ಹಿಂತಿರುಗುತ್ತಾನೆ. ಇದಾದ ಕೆಲವೇ ದಿನಗಳಲ್ಲಿ ರಾಮಕೃಷ್ಣ ಪತ್ನಿ, ಮಕ್ಕಳು ಸಮೇತ ಮತ್ತೆ ದುಬೈಗೆ ಹಾರುತ್ತಾರೆ.
ಪತ್ನಿಯ ಬರುವಿಕೆಯನ್ನು ಖಚಿತಪಡಿಸಿಕೊಂಡಿದ್ದ
ಮತ್ತೆ ಇದೇ ಜು.2ರಂದು ವಿಶಾಲ ಗಾಣಿಗ ಅವರನ್ನು ಮಗುವಿನ ಸಮೇತ ಊರಿಗೆ ಕಳುಹಿಸಿಕೊಡುತ್ತಾನೆ ಪತಿ ರಾಮಕೃಷ್ಣ. ಅದಾದ 5 ದಿನಗಳಲ್ಲಿ ಅಂದರೆ ಜು.7ರಂದು ಪತಿ ರಾಮಕೃಷ್ಣ ಗಾಣಿಗರ ಆಸ್ತಿಗೆ ಸಂಬಂಧಿಸಿದ ಪಾಲುಪಟ್ಟಿ ನಡೆದಿತ್ತು. ತದನಂತರ ಜುಲೈ 12ರಂದು ವಿಶಾಲ ಗಾಣಿಗ ಆಕೆಯ ತಂದೆ, ತಾಯಿ ಹಾಗೂ ಪುತ್ರನೊಂದಿಗೆ ಆಟೋ ರಿಕ್ಷಾದಲ್ಲಿ ತಾಯಿ ಮನೆ ಗುಜ್ಜಾಡಿಗೆ ಹೋಗಿದ್ದರು. ಈ ವೇಳೆ ಮಗುವನ್ನು ತನ್ನ ತವರು ಮನೆಯಲ್ಲಿ ಮಗುವನ್ನು ಬಿಟ್ಟು ತನಗೆ ಬ್ಯಾಂಕ್ ನಲ್ಲಿ ಕೆಲಸವಿದೆ ಎಂದು ವಿಶಾಲ ಗಾಣಿಗ ಮತ್ತೆ ಆಟೋರಿಕ್ಷಾ ಮೂಲಕ ಗಂಡನ ಫ್ಲ್ಯಾಟ್ಗೆ ಹಿಂತಿರುಗಿದ್ದರು. ದೂರವಾಣಿ ಕರೆ ಮೂಲಕ ಪತ್ನಿಯ ಬರುವಿಕೆಯನ್ನು ಖಚಿತಪಡಿಸಿಕೊಂಡಿದ್ದ ಪತಿ ರಾಮಕೃಷ್ಣ ಫ್ಲ್ಯಾಟ್ ಗೆ ತನ್ನಿಬ್ಬರು ಸ್ನೇಹಿತರು ಬಂದಿದ್ದಾರೆ ಎಂದು ಆಕೆಗೆ ಮಾಹಿತಿ ನೀಡಿದ್ದ.
ಕಾಫಿ ಕುಡಿದು ಮರ್ಡರ್
ಈ ಮೊದಲು ಆಕೆ ಪರಿಚಯವಿಲ್ಲದವರನ್ನು ಆಕೆ ತನ್ನ ಫ್ಲ್ಯಾಟ್ ಒಳಗಡೆ ಬಿಟ್ಟುಕೊಳ್ಳುತ್ತಿರಲಿಲ್ಲ. ಆದರೆ ಮಾರ್ಚ್ನಲ್ಲಿ ತನ್ನ ಗೆಳೆಯರು ಎಂದು ಪರಿಚಯಿಸಿದ್ದ ಸುಪಾರಿ ಕಿಲ್ಲರ್ಗಳನ್ನು ಆಕೆ ಮನೆಯ ಒಳಗೆ ಬಿಟ್ಟುಕೊಂಡಿದ್ದಳು. ಅಲ್ಲಿ ಆಕೆ ತನ್ನ ಪತಿಯ ಸ್ನೇಹಿತರೆಂದು ನಂಬಿ ಕಾಫೀ ನೀಡಿದ್ದಳು. ತದನಂತರ ಆಕೆಯನ್ನು ಬಾಗಿಲು ಹಾಕಿ ಕುತ್ತಿಗೆಗೆ ವಯರ್ ಬಿಗಿದು ಕೊಲೆ ಮಾಡಿದ್ದಾರೆ. ತನಿಖೆಯ ದಾರಿ ತಪ್ಪಿಸಲು ಆಕೆಯ ಮೈಮೇಲಿದ್ದ ಚಿನ್ನಾಭರಣವನ್ನು ಎಗರಿಸಿದ್ದರು. ಇದಾದ ಮೇಲೆ ಸುಪಾರಿ ಕಿಲ್ಲರ್ಗಳು ಗಂಡ ರಾಮಕೃಷ್ಣ ಅವರಿಗೆ ಕೆಲಸ ಮುಗಿಸಿದ ಮಾಹಿತಿ ನೀಡಿ ಸದ್ದಿಲ್ಲದೇ ಉತ್ತರ ಭಾರತದತ್ತ ಪ್ರಯಾಣ ಬೆಳೆಸಿದ್ದಾರೆ.
ಹೆಣದ ಮುಂದೆ ಗಳಗಳನೆ ಅತ್ತ ಗಂಡ
ಕೊಲೆ ನಡೆದ ನಂತರ ಕುಟುಂಬಸ್ಥರು ಗಂಡ ರಾಮಕೃಷ್ಣನಿಗೆ ಮಾಹಿತಿ ತಲುಪಿಸುತ್ತಾರೆ. ಈ ವೇಳೆ ಆತ ಏನೂ ಗೊತ್ತಿಲ್ಲದವನಂತೆ ನಟಿಸಿ ತರಾತುರಿಯಲ್ಲಿ ದುಬೈನಿಂದ ಊರಿಗೆ ಬರುತ್ತಾನೆ. ತನ್ನ ಮನೆಯಲ್ಲೇ ಅಂತ್ಯಸಂಸ್ಕಾರದ ವ್ಯವಸ್ಥೆಗೆ ಸಿದ್ದತೆ ನಡೆಸುತ್ತಾನೆ. ಈ ವೇಳೆ ಮಗುವನ್ನು ಅಪ್ಪಿ ಅತ್ತು ನಾಟಕವಾಡುತ್ತಾನೆ. ತದನಂತರ ಆಕೆಯನ್ನು ಅಂತ್ಯಸಂಸ್ಕಾರ ನೆರವೇರಿಸಿ, ಆಕೆಯ ಕ್ರಿಯೆಯಲ್ಲೂ ಭಾಗವಹಿಸುತ್ತಾನೆ. ಈದಾಗಲೇ ಪೊಲೀಸರು ತಮ್ಮ ತನಿಖೆ ಪ್ರಾರಂಭಿಸಿದ್ದರು. ಇದರ ವಿಚಾರಣೆಗಾಗಿ ಗಂಡ ರಾಮಕೃಷ್ಣನನ್ನು ಕರೆಯುತ್ತಾರೆ. ಈ ವೇಳೆ ಪೊಲೀಸರ ಪ್ರಶ್ನೆಗೆ ಸಮರ್ಪಕವಾದ ಉತ್ತರ ನೀಡುವುದಿಲ್ಲ. ಆದರೂ ಪೊಲೀಸರು ಯಾವುದೇ ಸಾಕ್ಷ್ಯವಿಲ್ಲದ ಕಾರಣ ಮುಂದಿನ ಬಾರಿ ವಿಚಾರಣೆಗೆ ಕರೆದಾಗ ಬರುವಂತೆ ಹೇಳಿ ಕಳುಹಿಸಿದ್ದರು.
5 ತಂಡಗಳಿಂದ ತೀವ್ರ ತನಿಖೆ
ಈ ಮಧ್ಯೆ ಉತ್ತರ ಪ್ರದೇಶದ ಪೊಲೀಸರ ಸಹಕಾರದಿಂದ ಸುಪಾರಿ ಕಿಲ್ಲರ್ನನ್ನು ನೇಪಾಳದ ಗಡಿಯಲ್ಲಿ ಬಂಧನ ನಡೆಸಿ ಉಡುಪಿಗೆ ಕರೆತರುತ್ತಾರೆ. ಈ ವೇಳೆ ಆತ ನನಗೆ ಸುಪಾರಿ ನೀಡಿದ್ದು ಆಕೆಯ ಗಂಡನೇ ಎಂಬುವುದಾಗಿ ವಿಚಾರಣೆಯಲ್ಲಿ ತಿಳಿಸುತ್ತಾನೆ. ಈ ವೇಳೆ ಮತ್ತೊಮ್ಮೆ ಪತಿ ರಾಮಕೃಷ್ಣನನ್ನು ವಿಚಾರಣೆಗೆ ಕರೆಸಿ ತೀವ್ರ ತನಿಖೆ ನಡೆಸಿದಾಗ ಸುಪಾರಿ ನೀಡಿದ್ದರ ಬಗ್ಗೆ ಮಾಹಿತಿ ನೀಡುತ್ತಾನೆ. ಸದ್ಯ ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬ ವಿಷಯ ತನಿಖಾ ಹಂತದಲ್ಲಿದೆ ಎಂದು ಎಸ್ಪಿ ವಿಷ್ಣುವರ್ಧನ್ ಮಾಹಿತಿ ನೀಡಿದರು. ಸುಪಾರಿ ಕಿಲ್ಲರ್ ಪರಿಚಯಿಸಿದ ಕೇರಳ ಮೂಲದ ಆರೋಪಿಯ ಬಗ್ಗೆ ಸುಳಿವು ಸಿಕ್ಕಿದ್ದು ಶೀಘ್ರದಲ್ಲಿಯೇ ಆತನನ್ನು ಬಂಧಿಸಲಾಗುವುದು ಎಂದರು.
50,000 ಸಾವಿರ ನಗದು ಬಹುಮಾನ
ಕೊಲೆ ಪ್ರಕರಣವನ್ನು ಪರಿಹರಿಸುವಲ್ಲಿ ಭಾಗಿಯಾಗಿರುವ ಇಡೀ ತಂಡಕ್ಕೆ ಕರ್ನಾಟಕ ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಮತ್ತು ನಿರೀಕ್ಷಕ ಪ್ರವೀಣ್ ಸೂದ್ 50,000 ಸಾವಿರ ನಗದು ಬಹುಮಾನ ಹಾಗೂ ತಂಡದ ಎಲ್ಲಾ ಸದಸ್ಯರಿಗೆ ಪ್ರಶಂಸನೀಯ ಪ್ರಮಾಣಪತ್ರ ಘೋಷಿಸಿದ್ದಾರೆ.
kerala
5 ವರ್ಷದಲ್ಲಿ 20 ಕೋಟಿ ಲೂಟಿ..! ಮಹಾ ವಂಚಕಿ ಅರೆಸ್ಟ್..!
ಮಂಗಳೂರು ( ಕೇರಳ ) : ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರು ಐದು ವರ್ಷದಲ್ಲಿ ಸಂಸ್ಥೆಯ 20 ಕೋಟಿ ಹಣವನ್ನು ತನ್ನ ಸಂಬಂಧಿಕರ ಖಾತೆಗೆ ವರ್ಗಾಯಿಸಿದ್ದಾರೆ. ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಖಾಸಗಿ ಹಣಕಾಸು ಸಂಸ್ಥೆಯಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಧನ್ಯ ಮೋಹನ್ ಎಂಬ ಮಹಿಳೆ ಈ ವಂಚನೆ ನಡೆಸಿದ್ದಾರೆ.
ಕಳೆದ ಐದು ವರ್ಷಗಳಿಂದ ಹಂತ ಹಂತವಾಗಿ ಹಣಕಾಸು ಸಂಸ್ಥೆಯ ಖಾತೆಯಿಂದ ತನ್ನ ಸಂಬಂಧಿಕರ ಖಾತೆಗೆ ಹಣ ವರ್ಗಾವಣೆ ಮಾಡಿದ್ದಾರೆ. ಹಣಕಾಸು ಸಂಸ್ಥೆಯ ಆಡಿಟಿಂಗ್ ಸಮಯದಲ್ಲಿ 20 ಕೋಟಿ ಹಣದ ಲೆಕ್ಕಾಚಾರ ಸಿಗದೇ ಇದ್ದಾಗ ಈ ವಿಚಾರ ಬೆಳಕಿಗೆ ಬಂದಿತ್ತು. ಈ ವಿಷಯ ಬಹಿರಂಗವಾಗುತ್ತಿದ್ದಂತೆ ವಂಚಕಿ ಧನ್ಯ ಮೋಹನ್ ತಲೆಮರೆಸಿಕೊಂಡಿದ್ದರು. ಧನ್ಯ ಮೋಹನ್ ಪತ್ತೆಗಾಗಿ ಪೊಲೀಸರು ಲುಕ್ಔಟ್ ನೋಟೀಸ್ ಕೂಡ ಜಾರಿ ಮಾಡಿದ್ದರು.
ಆನ್ ಲೈನ್ ಗೇಮಿಂಗ್ ಚಟಕ್ಕೆ ಬಲಿಯಾಗಿದ್ದ ಮಹಿಳೆ..!?
ಕುಟುಂಬಸ್ಥರ ತೀವ್ರ ವಿಚಾರಣೆಯ ಹೊರತಾಗಿಯೂ ಧನ್ಯ ಮೋಹನ್ ಎಲ್ಲಿ ಹೋಗಿದ್ದಾರೆ ಅನ್ನೋ ವಿಚಾರದ ಮಾಹಿತಿ ದೊರೆತಿರಲಿಲ್ಲ. ಆದ್ರೆ, ಇದೀಗ ಆರೋಪಿ ವಂಚಕಿ ಧನ್ಯ ಮೋಹನ್ ಕೊಲ್ಲಂ ಪೊಲೀಸ್ ಠಾಣೆಯಲ್ಲಿ ಶರಣಾಗತಳಾಗಿದ್ದಾಳೆ.
ಧನ್ಯ ಮನೆಯವರು ಆರ್ಥಿಕವಾಗಿ ಅಷ್ಟೊಂದು ಸದೃಢವಾಗಿಲ್ಲವಾಗಿದ್ದರೂ ಧನ್ಯ ಮೋಹನ್ ಈ ಹಣ ಎಲ್ಲಿ ಹೂಡಿಕೆ ಮಾಡಿದ್ದಾರೆ ಅನ್ನೋ ಕುತೂಹಲ ಮೂಡಿದೆ. ಮೂಲಗಳ ಪ್ರಕಾರ, ಆಕೆ ಹಣವನ್ನು ಆನ್ಲೈನ್ ಗೇಮಿಂಗ್ನಲ್ಲಿ ತೊಡಗಿಸಿಕೊಂಡು ಕಳೆದುಕೊಂಡಿದ್ದಾಳೆ ಎಂದು ಮಾಹಿತಿ ಲಭ್ಯವಾಗಿದೆ. ಅದೇನೆ ಇದ್ರೂ ಸದ್ಯ ಆಕೆಯ ವಿಚಾರಣೆಯ ಬಳಿಕ ಹಣ ಏನಾಯ್ತು ಅನ್ನೋ ವಿಚಾರ ಬಹಿರಂಗವಾಗಬೇಕಾಗಿದೆ.
DAKSHINA KANNADA
ಕುಳಾಯಿ ಜೆಟ್ಟಿಯ ಬ್ರೇಕ್ ವಾಟರ್ ಮರು ವಿನ್ಯಾಸಕ್ಕೆ ಶಾಸಕ ಡಾ.ಭರತ್ ಶೆಟ್ಟಿ ವೈ ಮನವಿ
ಕುಳಾಯಿ : ಮಂಗಳೂರು ನಗರ ಉತ್ತರ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯ ಕುಳಾಯಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಮೀನುಗಾರಿಕಾ ಬಂದರಿನ ವಿನ್ಯಾಸವನ್ನು ಪರಿಷ್ಕರಿಸಿ ಸರ್ವ ಋತು ಬಂದರು ಹಾಗೂ ಸುರಕ್ಷತೆಯ ಮೀನುಗಾರಿಕೆಗೆ ಅವಕಾಶ ಕಲ್ಪಿಸಬೇಕು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ಅವರು ಮೀನುಗಾರಿಕಾ ಸಚಿವ ಮಂಕಾಳ್ ವೈದ್ಯ ಅವರಿಗೆ ಮನವಿ ಸಲ್ಲಿಸಿದರು.
ಉತ್ತರದ ಬ್ರೇಕ್ ವಾಟರ್ 831 ಮೀಟರ್ ಮತ್ತು ದಕ್ಷಿಣದ ಬ್ರೇಕ್ ವಾಟರ್ 262 ಮೀಟರ್ ಮಾಡಲಾಗುತ್ತಿದೆ. ಇದು ಸುರಕ್ಷತೆಯ ಮೀನುಗಾರಿಕೆಗೆ ಪೂರಕವಾಗಿಲ್ಲ. ಸಮುದ್ರದ ನೀರಿನ ರಭಸವನ್ನು ಪರಿಣಾಮಕಾರಿಯಾಗಿ ತಡೆಯಲು ಸಾಧ್ಯವಾಗದೆ ನಾಡದೋಣಿ ಮೀನುಗಾರರಿಗೆ ತಮ್ಮ ದೋಣಿಯನ್ನು ದಡಕ್ಕೆ ತರಲು ಪೂರಕ ವಾತಾವರಣವಿಲ್ಲ.
ಇದನ್ನೂ ಓದಿ : WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಪ್ರಸ್ತುತ ಇರುವ ಉತ್ತರದ ಬ್ರೇಕ್ ವಾಟೆರ್ನ ಉದ್ದವನ್ನು 831 ರಿಂದ ಸರಾರಸರಿ 250 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 1081 ಮೀಟರ್ಗೆ ನಿಗದಿಪಡಿಸಿ, ದಕ್ಷಿಣದ ಬ್ರೇಕ್ ವಾಟರ್ ಉದ್ದ 262 ಮೀಟರ್ನಿಂದ 719 ಮೀಟರ್ ಹೆಚ್ಚಿಸಿ ಒಟ್ಟು ಉದ್ದ 981(ಅಳಿವೆ ಬಾಗಿಲಿನ ಅಗಲ ಅಂತರ 100 ಮೀಟರ್ ಮಾತ್ರ ಇರುವಂತೆ) ವಿನ್ಯಾಸವನ್ನು ಮರು ವಿನ್ಯಾಸಗೊಳಿಸಿ ಕಾಮಗಾರಿ ನಡೆಸಬೇಕು ಎಂದು ಮನವಿ ಮಾಡಿದ್ದಾರೆ. ಈ ವೇಳೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಉಪಸ್ಥಿತರಿದ್ದರು.
LATEST NEWS
WATCH : ಸೀಟಿಗಾಗಿ ಕಿಟಕಿಯಿಂದ ಬಸ್ ಹತ್ತಿದ ವಿದ್ಯಾರ್ಥಿ! ಆಮೇಲೇನಾಯ್ತು ಗೊತ್ತಾ!?
ಮಂಗಳೂರು/ಮಹಾರಾಷ್ಟ್ರ : ಬಸ್ಸಿನಲ್ಲಿ ಸೀಟಿಗಾಗಿ ಹಂಬಲಿಸೋರು ಅನೇಕ ಮಂದಿ ಇದ್ದಾರೆ. ಅದೂ ಸಿಎಂ ಕುರ್ಚಿಗಾಗಿ ನಡೆಯೋ ರಾಜಕೀಯ ಗುದ್ದಾಟಕ್ಕಿಂತಲೂ ಮಿಗಿಲು. ಬಸ್ ಬಂದು ನಿಂತಾಗ ಪರಸ್ಪರ ತಳ್ಳಾಡಿ ಸೀಟು ಹಿಡಿಯುವ ದೃಶ್ಯ ಸಾಮಾನ್ಯ. ಕೆಲವೊಮ್ಮೆ ಬಸ್ ಹತ್ತಿದವರು ತಮ್ಮರಿಗಾಗಿ ಕರ್ಚೀಫ್ ಹಾಕಿಡೋದೂ ಇದೆ. ಇನ್ನೂ ಕೆಲವರು ಸೀಟ್ ಹಿಡಿಯಲು ಕಿಟಕಿಯಿಂದಲೂ ಕರ್ಚೀಫ್ ಹಾಕೋದು, ಬ್ಯಾಗ್ ಇಡುವ ದೃಶ್ಯ ಕಾಣಲು ಸಿಗುತ್ತದೆ.
ಆದರೆ, ಇಲ್ಲೊಬ್ಬ ಸೀಟಿಗಾಗಿ ಕಿಟಕಿಯಿಂದ ಬಸ್ ಏರಲು ಹೋಗಿ ಅವಾಂತರವಾಗಿದೆ. ಸದ್ಯ ಆ ವಿದ್ಯಾರ್ಥಿಯ ಎಡವಟ್ಟಿನ ವೀಡಿಯೋ ವೈರಲ್ ಆಗುತ್ತಿದೆ.
ಸೀಟ್ ಗಾಗಿ ಎಡವಟ್ಟು :
ಈ ವೈರಲ್ ದೃಶ್ಯ ನಡೆದಿರೋದು ಮಹಾರಾಷ್ಟ್ರದಲ್ಲಿ. ಅವನು ಮಾಮೂಲಿನಂತೆ ಬಾಗಿಲಿನಿಂದ ಬಸ್ ಏರಬಹುದಿತ್ತು. ಆದರೆ, ಸರ್ಕಸ್ ಮಾಡಲು ಹೋಗಿ ಎಡವಟ್ಟಾಗಿದೆ.
ಇದನ್ನೂ ಓದಿ : ವಿದ್ಯುತ್ ಇಲ್ಲದೆ ಪರದಾಡುತ್ತಿರುವ ಮಲೆನಾಡು: ಮೊಬೈಲ್ ಫುಲ್ ಚಾರ್ಜ್ಗೆ 60 ರೂ., ಹಾಲ್ಫ್ಗೆ 40 ರೂ.
ಆ ವಿದ್ಯಾರ್ಥಿ ಕಿಟಕಿಯ ಮೂಲಕ ಬಸ್ ಏರಿದ್ದಾನೆ. ಆದರೆ, ಕಿಟಕಿ ಸಮೇತ ಕೆಳಗೆ ಬಿದ್ದಿದ್ದಾನೆ.
ರೋಹಿತ್ (avaliyapravasi) ಎಂಬವರು ತಮ್ಮ ಎಕ್ಸ್ ಖಾತೆಯಲ್ಲಿ ಈ ವೀಡಿಯೋ ಹಂಚಿಕೊಂಡಿದ್ದಾರೆ. ಸೀಟ್ ಗಾಗಿ ವಿದ್ಯಾರ್ಥಿ ಕಿಟಕಿ ಏರುವ ಸರ್ಕಸ್ ಮಾಡಿದ್ದಾನೆ. ಕಿಟಕಿ ಗ್ಲಾಸ್ ಸರಿಸಿ ಒಳ ಹೋಗಲು ಪ್ರಯತ್ನಿಸುತ್ತಿದ್ದಂತೆ, ಕಿಟಕಿ ಸಹಿತ ಕೆಳಗೆ ಬಿದ್ದಿದ್ದಾನೆ. ಈ ವೀಡಿಯೋವನ್ನು ಅಲ್ಲೇ ಇದ್ದ ಇನ್ನೊಂದು ಬಸ್ ನಲ್ಲಿದ್ದ ವ್ಯಕ್ತಿ ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ.
ಜುಲೈ 22 ರಂದು ಈ ವೀಡಿಯೋ ಹಂಚಿಕೊಳ್ಳಲಾಗಿದ್ದು, ವೈರಲ್ ಆಗಿದೆ. ನೆಟ್ಟಿಗರು ತರಹೇವಾರಿ ಕಮೆಂಟ್ಸ್ ಮಾಡುತ್ತಿದ್ದಾರೆ.
- LATEST NEWS5 days ago
ಗೀಸರ್ನಿಂದ ವಿಷಾನಿಲ ಸೋರಿಕೆ; ಇಹಲೋಕ ತ್ಯಜಿಸಿದ ತಾಯಿ, ಮಗ
- LATEST NEWS5 days ago
ಕಸದ ತೊಟ್ಟಿಯಲ್ಲಿ ಪತ್ತೆಯಾಯ್ತು ಲಕ್ಷಾಂತರ ರೂ. ಬೆಲೆ ಬಾಳುವ ವಜ್ರದ ನೆಕ್ಲೇಸ್
- LATEST NEWS7 days ago
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಟೀಮ್ ಇಂಡಿಯಾ ಕ್ರಿಕೆಟಿಗ
- DAKSHINA KANNADA2 days ago
ವಿಟ್ಲದ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ; ಸಾರ್ವಜನಿಕರನ್ನು ನೋಡಿ ಕಾಲ್ಕಿತ್ತ ಜೋಡಿ