Connect with us

    BELTHANGADY

    ವಿಶ್ವ ಹಿಂದೂ ಪರಿಷತ್ ವತಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

    Published

    on

    ಬೆಳ್ತಂಗಡಿ: ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಯವರನ್ನು ವಿಶ್ವ ಹಿಂದೂ ಪರಿಷತ್ ವತಿಯಿಂದ ಧರ್ಮಸ್ಥಳದಲ್ಲಿ ನಿನ್ನೆ ಅಭಿನಂದಿಸಲಾಯಿತು.


    ಈ ಸಂದರ್ಭ ವಿಹಿಂಪ ರಾಜ್ಯ ಕಾರ್ಯಾಧ್ಯಕ್ಷ ಎಂ.ಬಿ.ಪುರಾಣಿಕ್, ಕರ್ಣಾಟಕ ಪ್ರಾಂತ ಉಪಾಧ್ಯಕ್ಷ ಪೂವಪ್ಪ, ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್, ಪ್ರಾಂತ ಸಹ ಸಂಚಾಲಕ ಮುರಳಿ ಕೃಷ್ಣ ಹಸಂತಡ್ಕ, ಜಿಲ್ಲಾ ಅಧ್ಯಕ್ಷ ಡಾ ಕೃಷ್ಣ ಪ್ರಸನ್ನ,

    ಜಿಲ್ಲಾ ಉಪಾಧ್ಯಕ್ಷ ಭಾಸ್ಕರ ಧರ್ಮಸ್ಥಳ, ಜಿಲ್ಲಾ ಕಾರ್ಯದರ್ಶಿ ಸತೀಶ್, ಸಹ ಕಾರ್ಯದರ್ಶಿ ನವೀನ್, ಜಿಲ್ಲಾ ಪ್ರಚಾರ ಪ್ರಮುಖ್ ಶ್ರೀಧರ್ ತೆಂಕಿಲ, ಸುರಕ್ಷಾ ಪ್ರಮುಖ್ ಜಯಂತ್,

    ವಿಹಿಂಪ ಮಂಗಳೂರು ಅಧ್ಯಕ್ಷ ಗೋಪಾಲ ಕುತ್ತಾರ್, ಮಂಗಳೂರು ಕಾರ್ಯದರ್ಶಿ ಶಿವಾನಂದ ಮೆಂಡನ್, ವಿಹಿಂಪ ಬೆಳ್ತಂಗಡಿಯ ಗಣೇಶ್, ಸಂತೋಷ್ ಅತ್ತಾಜೆ, ಮೋಹನ ಬೆಳ್ತಂಗಡಿ ಮತ್ತಿತರರು ಉಪಸ್ಥಿತರಿದ್ದರು.

    BELTHANGADY

    ಅಪ್ರಾಪ್ತ ಬಾಲಕಿಗೆ ಕಿರುಕುಳ; ಆರೋಪಿ ಅರೇಸ್ಟ್

    Published

    on

    ಬೆಳ್ತಂಗಡಿ: ಶಾಲಾ ವಿದ್ಯಾರ್ಥಿನಿಯನ್ನು ಹಿಂಬಾಲಿಸಿ ಕೊಂಡು ಬಂದು ಮೊಬೈಲ್ ನಂಬರ್ ಕೇಳುವ ಮೂಲಕ ಆಕೆಗೆ ಕಿರುಕುಳ ನೀಡುತ್ತಿದ್ದ ಆರೋಪಿಯ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ.

    ಬೆಳ್ತಂಗಡಿ ತಾಲೂಕಿನ ಕುಕ್ಕೇಡಿ ಗ್ರಾಮದ ಪುಲ್ಲಾಯಿ ಎನ್ನುವಲ್ಲಿ ಈ ಘಟನೆ ನಡೆದಿದೆ.

    ಬಂಟ್ವಾಳ ತಾಲೂಕಿನ ಸಜೀಪನಡು ಗ್ರಾಮದ ನಿವಾಸಿ, ಹುಲ್ಲು ಕಟಾವು ಯಂತ್ರದ ಮೆಕ್ಯಾನಿಕ್‌ ಆಗಿರುವ ಜುಮಾರ್‌ (24) ಬಂಧಿತ ಆರೋಪಿ. ಸಂಬಂಧಿ ಹಾಗೂ ನೆರೆಯ ವಿದ್ಯಾರ್ಥಿನಿಯೊಂದಿಗೆ ಬಾಲಕಿ ಕಾಲೇಜಿಗೆ ಹೋಗುತ್ತಿರುವ ವೇಳೆ ಕಳೆದ ಐದು ದಿನಗಳಿಂದ ಆರೋಪಿಯು ಬೈಕಿನಲ್ಲಿ ಹಿಂಬಾಲಿಸಿಕೊಂಡು ಹೋಗುತ್ತಿದ್ದ.

    ಬೈಕ್‌ನಲ್ಲಿ ಜೊತೆಯಾಗಿ ಬರುವಂತೆ ಒತ್ತಾಯಿಸಿದ್ದು ಮಾತ್ರವಲ್ಲದೆ, ಮೊಬೈಲ್‌ ನಂಬರ್ ಕೊಡುವಂತೆ ಕೇಳಿಕೊಳ್ಳುತ್ತಿದ್ದ.

    ಅಂತೆಯೇ ಅ. 15ರಂದು ಬೆಳಗ್ಗೆ 7.45 ಗಂಟೆಗೆ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವೇಳೆ ಅತ ಬೈಕ್‌ ಅನ್ನು ಚಲಾಯಿಸಿಕೊಂಡು ಮುಂದಕ್ಕೆ ಹೋಗಿ ವಾಪಸು ಹಿಂದಕ್ಕೆ ತಿರುಗಿಸಿಕೊಂಡು ಬಂದು ತೊಂದರೆ ನೀಡಿದ್ದಾಗಿ ಆರೋಪಿಸಲಾಗಿದೆ.

    ಪೋಕ್ಸೋ ಪ್ರಕರಣ ದಾಖಲಿಸಿಕೊಂಡಿರುವ ವೇಣೂರು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    Continue Reading

    BELTHANGADY

    ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಕಾರು

    Published

    on

    ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದ ಘಟನೆ ಬೆಳ್ತಂಗಡಿಯ ಕಾಶಿಬೆಟ್ಟುವಿನಲ್ಲಿ ನಡೆದಿದೆ.

    ಉಡುಪಿಯಿಂದ ಮೂವರು ಯುವಕರು ಅರಿಕೋಡಿ ದೇವಸ್ಥಾನಕ್ಕೆ ತೆರಳುತ್ತಿದ್ದರು. ಸುಮಾರು ಬೆಳಗ್ಗೆ 4.45 ರ ವೇಳೆಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಕಾಶಿಬೆಟ್ಟು ಬಳಿ ರಾಷ್ಟ್ರೀಯ ಹೆದ್ದಾರಿಯ ಚರಂಡಿಗೆ ಬಿದ್ದಿದೆ.

    ಚಾಲಕ ನಿದ್ದೆಯ ಮಂಪರಿನಲ್ಲಿ ಇದ್ದದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಕ್ರೇನ್ ಸಹಾಯದಿಂದ ಕಾರನ್ನು ಮೇಲೆತ್ತಲಾಗಿದೆ.

    Continue Reading

    BELTHANGADY

    ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ

    Published

    on

    ಬೆಳ್ತಂಗಡಿ: ಪಾದಚಾರಿಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ ಹೊಡೆದ ಘಟನೆ ಬುಧವಾರ ನಿಡಿಗಲ್ ಸಮೀಪ ಸಂಭವಿಸಿದೆ.

    ರಸ್ತೆಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಸ್ ಢಿಕ್ಕಿ ಹೊಡೆದ ಪರಿಣಾಮ ರಸ್ತೆಗೆ ಬಿದ್ದ ಪಾದಾಚಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ತಿಳಿದು ಬಂದಿದೆ.

    ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

    Continue Reading

    LATEST NEWS

    Trending