DAKSHINA KANNADA
ವಿಟ್ಲ : ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ : 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆ
ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. ಈ ಚುನಾವಣೆಯ ಪೂರ್ವಭಾವಿಯಾಗಿ ಜೂನ್ 3 ರಂದು ಶಾಲಾ ಸಂಸತ್ತಿನ ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಾಯಿತು. ಜೂನ್ 6 ರಂದು ಶಾಲೆಯ ಚುನಾವಣಾ ಅಭ್ಯರ್ಥಿಗಳು ಶಾಲಾ ಚುನಾವಣಾ ಅಧಿಕಾರಿಗಳಿಗೆ ನಾಮಪತ್ರಗಳನ್ನು ಸಲ್ಲಿಸಿದರು.
ಜೂನ್ 11 ರಿಂದ ಜೂನ್ 13 ರ ವರೆಗೆ ಅಭ್ಯರ್ಥಿಗಳು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ 5 ರಿಂದ 10ನೇ ತರಗತಿಯವರೆಗಿನ ಎಲ್ಲಾ ವಿದ್ಯಾರ್ಥಿಗಳಿಗೆ ಕೆಲವು ಆಶ್ವಾಸನೆಗಳನ್ನು ನೀಡಿ ಮತ ಯಾಚಿಸಿದರು. ಜೂನ್ 15 ರಂದು ಡಿಜಿಟಲ್ ತಂತ್ರಜ್ಞಾನದ ಮುಖೇನ ನಡೆದ ಮತದಾನ ಪ್ರಕ್ರಿಯೆಯಲ್ಲಿ ಶಾಲಾ ವಿದ್ಯಾರ್ಥಿಗಳು ಅತೀ ಉತ್ಸಾಹದಿಂದ ಪಾಲ್ಗೊಂಡಿದ್ದರು.
ಚುನಾಯಿತರಾದವರು :
ಶಾಲಾ ಸಂಸತ್ತಿನ ಪ್ರಧಾನ ಮಂತ್ರಿಯಾಗಿ ಹತ್ತನೇ ತರಗತಿಯ ಸಾಕ್ಷಿ, ಗೃಹ ಮಂತ್ರಿಯಾಗಿ ಅಬೂಬಕರ್ ನವವಿ (10ನೇ ತರಗತಿ), ಸಂವಹನ ಮಂತ್ರಿಯಾಗಿ ಖತಿಜಾ ಇಫ್ಹಾ (10ನೇ ತರಗತಿ), ಕ್ರೀಡಾ ಮಂತ್ರಿಯಾಗಿ ಶುಭಂ ಶೆಟ್ಟಿ (10ನೇ ತರಗತಿ ), ಶಿಕ್ಷಣ ಮಂತ್ರಿಯಾಗಿ ನಿಧಿಶಾ (9ನೇ ತರಗತಿ), ಸಾಂಸ್ಕೃತಿಕ ಮಂತ್ರಿಯಾಗಿ ಪ್ರಗತಿ (9ನೇ ತರಗತಿ), ಆರೋಗ್ಯ ಮತ್ತು ಸ್ವಚ್ಛತಾ ಮಂತ್ರಿಯಾಗಿ ಲಿಖಿತ್ ಕುಮಾರ್ ಎಲ್ (9ನೇ ತರಗತಿ) ಹಾಗೂ ನೀರಾವರಿ ಮತ್ತು ವಿದ್ಯುತ್ ಮಂತ್ರಿಯಾಗಿ ದೀಪಿತ್ (8ನೇ ತರಗತಿ) ಚುನಾಯಿತರಾದರು.
ಸಹಾಯಕ ಮಂತ್ರಿಗಳಾಗಿ ಪ್ರಾಥಮಿಕ ವಿಭಾಗದಿಂದ ಯಶಸ್ವಿ ಟಿ ಎಮ್ (7ನೇ ತರಗತಿ), ದಿಯಾ ವೈ ಶೆಟ್ಟಿ (7ನೇ ತರಗತಿ), ಸನ್ನಿಧಿ ಎಲ್ ಎಸ್ (5ನೇ ತರಗತಿ), ಮುಹಮ್ಮದ್ ಫಹ್ಮಾನ್ (7ನೇ ತರಗತಿ), ಸಾತ್ವಿಕ್ ಕೆ (6ನೇ ತರಗತಿ), ಕೌಶಲ್ ಬಿ (5ನೇ ತರಗತಿ), ಸುಶಾನ್ (6ನೇ ತರಗತಿ) ಹಾಗೂ ಜಿ ಎಸ್ ರಿಷಿಕ್ ಅಂಚನ್ (5ನೇ ತರಗತಿ ಚುನಾಯಿತರಾದರು.
ಇದನ್ನೂ ಓದಿ : ಹಕ್ಕಿ ಜ್ವರ ಬಂದಿದೆ, ಮೊಟ್ಟೆ, ಕೋಳಿ ತಿನ್ನುವುದು ಸುರಕ್ಷಿತವೇ?
ಚುನಾವಣಾ ಫಲಿತಾಂಶ ಘೋಷಣೆಯ ನಂತರ ಬಾಲವಿಕಾಸ ಟ್ರಸ್ಟಿನ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ ಹಾಗೂ ಸಂಸ್ಥೆಯ ಪ್ರಾಚಾರ್ಯರಾದ ರವೀಂದ್ರ ದರ್ಬೆ ವಿಜೇತ ಅಭ್ಯರ್ಥಿಗಳನ್ನು ಅಭಿನಂದಿಸಿದರು. ಈ ಚುನಾವಣಾ ಪ್ರಕ್ರಿಯೆಯಲ್ಲಿ ಶಿಕ್ಷಕಿಯರಾದ ಲೀಲಾ ಮುಖ್ಯ ಚುನಾವಣಾ ಅಧಿಕಾರಿಯಾಗಿ ಹಾಗೂ ಶೋಭಾ ಎಂ ಶೆಟ್ಟಿ ಉಪ ಚುನಾವಣಾ ಅಧಿಕಾರಿಯಾಗಿ ಜವಾಬ್ದಾರಿಯನ್ನು ನಿರ್ವಹಸಿದರು.
ಶಿಕ್ಷಕಿ ರಶ್ಮಿ ಕೆ ಫೆರ್ನಾಂಡೀಸ್ ಚುನಾವಣಾ ಫಲಿತಾ0ಶ ಘೋಷಿಸಿದರು. ಶಾಲಾ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗ ಸಹಕರಿಸಿದರು.
DAKSHINA KANNADA
ಇನ್ಮುಂದೆ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಿಸುವಂತಿಲ್ಲ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಬೆಂಗಳೂರು: ಕರ್ನಾಟಕದ ಎಲ್ಲಾ ಶಾಲೆಗಳಲ್ಲಿ ಹುಟ್ಟುಹಬ್ಬ ಆಚರಣೆ ಮಾಡದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಖಾಸಗಿ ವ್ಯಕ್ತಿಗಳ ಅಂದ್ರೆ ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ನಿಷೇಧಿಸಿದೆ ಎಂದು ಸುತ್ತೋಲೆ ಹೊರಡಿಸಿದೆ.
ಗಣ್ಯವ್ಯಕ್ತಿಗಳು ಮಕ್ಕಳ ಹುಟ್ಟುಹಬ್ಬವನ್ನು ಕೇಕ್ ಕತ್ತರಿಸಿ ಸಿಹಿ ಇತ್ಯಾದಿ ಹಂಚುವ ಅದ್ದೂರಿ ಕಾರ್ಯಕ್ರಮಗಳನ್ನು ಸಂಸ್ಥೆಯಲ್ಲಿ ಆಚರಿಸುವುದರಿಂದ ಮಕ್ಕಳಿಗೆ ಅವರ ಹುಟ್ಟು ಹಬ್ಬವನ್ನು ಈ ರೀತಿ ಆಚರಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲವಲ್ಲ ಅಂತ ಬೇಜಾರು ಮಾಡಿಕೊಳ್ಳುತ್ತವೆ. ಇದರಿಂದ ಮನಸ್ಸಿಗೆ ಆಘಾತವಾಗಿ ಮಕ್ಕಳ ಮನಸ್ಸು ದುರ್ಬಲವಾಗುವ ಸಂಭವ ಹೆಚ್ಚಾಗಿರುತ್ತದೆ. ಹೀಗಾಗಿ ಸರ್ಕಾರ ಈ ಕ್ರಮ ಕೈಗೊಂಡಿದೆ.
DAKSHINA KANNADA
ತೊಳೆದ್ರು ಬಿಳಿ ಬಟ್ಟೆ ಮೇಲಿನ ಕಲೆ ಹೋಗ್ತಿಲ್ವಾ? ಹೀಗೆ ಮಾಡಿ
ಮಂಗಳೂರು: ಬಿಳಿ ಬಟ್ಟೆಯನ್ನು ಕಲೆಯಾಗದಂತೆ ನೋಡಿಕೊಳ್ಳುವುದು ಕಷ್ಟದ ಕೆಲಸ. ಕೆಲವೊಮ್ಮೆ ಕೈ ತಪ್ಪಿ ಟೀ ಕಾಫಿ ಚೆಲ್ಲಿಯೋ, ಪೆನ್ನಿನ ಇಂಕ್ ತಾಗಿಯೋ ಬಿಳಿ ಬಟ್ಟೆಯ ಅಂದವನ್ನು ಹಾಳು ಮಾಡುತ್ತದೆ. ಈ ವೇಳೆ ಯಾವುದೇ ಡಿಟರ್ಜೆಂಟ್, ಸೋಪ್ ಬಳಸಿ ತಿಕ್ಕಿ ತೊಳೆದರೂ ಪ್ರಯೋಜನವಂತೂ ಆಗುವುದೇ ಇಲ್ಲ. ಬಟ್ಟೆಯನ್ನು ಜಾಸ್ತಿ ಉಜ್ಜಿದರೆ, ಆ ಬಟ್ಟೆಗಳು ಹಾಳಾಗುವ ಸಾಧ್ಯತೆ ಇರುತ್ತದೆ. ನಿಮಗೂ ಈ ರೀತಿ ಅನುಭವವಾಗಿದ್ದರೆ ಟೆನ್ಶನ್ ಮಾಡಿಕೊಳ್ಬೇಡಿ, ಈ ವಸ್ತುಗಳನ್ನು ಬಳಸಿ ಕಲೆಯನ್ನು ನಿವಾರಿಸಿಕೊಳ್ಳಬಹುದು.
- ಅರ್ಧ ಕಪ್ ನೀರಿಗೆ ಅರ್ಧ ಕಪ್ ವಿನೆಗರ್ ಮಿಶ್ರಣ ಮಾಡಿ ಬಿಳಿ ಬಟ್ಟೆಯ ಮೇಲೆ ಇರುವ ಕಲೆಗೆ ಸ್ಪ್ರೇ ಮಾಡಿ, ಸ್ವಲ್ಪ ಸಮಯ ಹಾಗೆ ಬಿಡಬೇಕು. ತದನಂತರದಲ್ಲಿ ಅದೇ ನೀರಿನಿಂದ ತಿಕ್ಕಿ ತೊಳೆದರೆ ಕಲೆ ಬಿಡುತ್ತದೆ.
- ಬಿಳಿ ಬಟ್ಟೆ ಮೇಲಿನ ಕಲೆಯನ್ನು ತೆಗೆದು ಹಾಕಲು ಅಡುಗೆ ಸೋಡಾ ಬೆಸ್ಟ್ ಎನ್ನಬಹುದು. ನೀರಿಗೆ ಅಡುಗೆ ಸೋಡಾ ಸೇರಿಸಿ, ಕಲೆಯಾದ ಬಟ್ಟೆಯನ್ನು ಆ ನೀರಿನಲ್ಲಿ ನೆನೆಸಿಡಬೇಕು. ಸ್ವಲ್ಪ ಸಮಯದ ಬಳಿಕ ಬಟ್ಟೆಯನ್ನು ತೊಳೆದರೆ ಕಲೆಯೂ ಹೋಗುತ್ತದೆ.
- ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಆ ಜಾಗಕ್ಕೆ ನಿಂಬೆರಸ ಹಾಕಿ ಉಪ್ಪು ಮತ್ತು ಸೋಪಿನಿಂದ ಚೆನ್ನಾಗಿ ತೊಳೆದರೆ ಕಲೆಯೂ ಇಲ್ಲದಂತಾಗುತ್ತದೆ.
ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಸೇರಿಸಿ ಉಜ್ಜುವುದರಿಂದ ಬಿಳಿ ಬಟ್ಟೆ ಮೇಲಿನ ಕಲೆಯೂ ನಿವಾರಣೆಯಾಗುತ್ತದೆ. - ಬಿಳಿ ಬಟ್ಟೆಯಲ್ಲಿ ಕಲೆಯಿದ್ದರೆ ಸ್ವಲ್ಪ ಬಿಸಿ ನೀರನ್ನು ಆ ಜಾಗಕ್ಕೆ ಹಾಕಿ, ಡಿರ್ಟಜೆಂಟ್ ನಿಂದ ಉಜ್ಜಿ ಕಲೆಯನ್ನು ತೆಗೆದು ಹಾಕಬಹುದು.
- ಬಿಳಿ ಬಟ್ಟೆ ಮೇಲಿನ ಕಲೆ ನಿವಾರಣೆಗೆ ಟೂತ್ ಪೇಸ್ಟ್ ಬಳಸುವುದು ಪರಿಣಾಮಕಾರಿಯಾಗಿದೆ. ಕಲೆ ಮೇಲೆ ಟೂತ್ಪೇಸ್ಟ್ ಅನ್ವಯಿಸಿ, ಹತ್ತರಿಂದ ಹದಿನೈದು ನಿಮಿಷಗಳ ಕಾಲ ಹಾಗೆ ಬಿಡಬೇಕು. ಆ ಬಳಿಕ ಡಿಟೆರ್ಜಂಟ್ ಬಳಸಿ ಸ್ವಚ್ಛಗೊಳಿಸಿದರೆ ಕಲೆ ಉಳಿಯುವುದಿಲ್ಲ.
DAKSHINA KANNADA
ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಸ್ವರ್ಣಪಾದುಕೆ ಸಮರ್ಪಣೆ
ಮಂಗಳೂರು: ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ 36ನೆಯ ಅಧಿಪತಿಗಳಾದ ಜಗದ್ಗುರು ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರ ಸನ್ಯಾಸ ಸ್ವೀಕಾರ ಸುವರ್ಣಮಹೋತ್ಸವದ ಸ್ಮರಣಾರ್ಥ ಕಟೀಲು ಶ್ರೀದುರ್ಗಾ ಪರಮೇಶ್ವರಿ ಕ್ಷೇತ್ರಕ್ಕೆ ಶೃಂಗೇರಿ ಶಾರದಾಪೀಠದ ವತಿಯಿಂದ 40 ಲಕ್ಷ ರೂಪಾಯಿ ಮೌಲ್ಯದ ಸ್ವರ್ಣಪಾದುಕೆ ಹಾಗೂ ಒಡ್ಯಾಣವನ್ನು ಸಮರ್ಪಿಸಲಾಗಿದೆ.
ಶ್ರೀಭಾರತೀ ತೀರ್ಥ ಮಹಾಸ್ವಾಮಿಗಳವರು 1974 ರಲ್ಲಿ ಸನ್ಯಾಸ ಸ್ವೀಕರಿಸಿದ್ದು, 2024 ಕ್ಕೆ 50 ವರ್ಷಗಳಾಗುತ್ತಿವೆ. ಶೃಂಗೇರಿಯಲ್ಲಿ ಉಭಯ ಜಗದ್ಗುರುಗಳು ಈ ಪಾದುಕೆ ಹಾಗೂ ಒಡ್ಯಾಣವನ್ನು ಕಟೀಲು ದೇವಳದ ಆನುವಂಶಿಕ ಅರ್ಚಕ ಶ್ರೀಹರಿನಾರಾಯಣದಾಸ ಅಸ್ರಣ್ಣ ಅವರಿಗೆ ಹಸ್ತಾಂತರಿಸಿದರು. ಇದನ್ನು ಜೂ.19 ರಂದು ಶ್ರೀದೇವಿಗೆ ತೊಡಿಸಿ ಅಲಂಕಾರ ಮಾಡಲಾಯಿತು. ಈ ಸೇವೆಯನ್ನು ಶೃಂಗೇರಿ ಶ್ರೀಮಠದ ಶಿಷ್ಯರಾದ ಆಂಧ್ರಪ್ರದೇಶದ ಶ್ರೀಪೋಲಿಸೆಟ್ಟಿ ಶ್ಯಾಮ್ ಸುಂದರ್ ಅವರು ನೀಡಿರುತ್ತಾರೆ.
Read More..; ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕ್ರಿಕೆಟಿಗ ಮಯಂಕ್ ಅಗರವಾಲ್ ಭೇಟಿ