ಬಾಲಕಿಗೆ ಅಶ್ಲೀಲ ಸಂದೇಶ: ವಿಟ್ಲದಲ್ಲಿ ಹಲ್ಲೆಗೊಳಗಾದ ಬಾಲಕನ ಪ್ರಕರಣಕ್ಕೆ ಟ್ವಿಸ್ಟ್
ವಿಟ್ಲ : ವಿಟ್ಲದಲ್ಲಿ ನಾಲ್ಕೈದು ಮಂದಿ ಯುವಕರು ಸೇರಿ ಬಾಲಕನೊಬ್ಬನಿಗೆ ಹಲ್ಲೆ ನಡೆಸಿರುವ ಘಟನೆಗೆ ಇದೀಗ ಟ್ವಿಸ್ಟ್ ಸಿಕ್ಕಿದ್ದು, ಸಾರ್ವಜನಿಕರಿಂದ ಒದೆ ತಿಂದ ಬಾಲಕ ವಿರುದ್ದ ಈಗ ಪೋಸ್ಕೋ ಪ್ರಕರಣ ದಾಖಲಾಗಿದೆ.
ಕೆಲವು ದಿನಗಳ ಹಿಂದೆ ಹುಡುಗರ ಗುಂಪೊಂದು ಬಾಲಕನೊಬ್ಬನಿಗೆ ಥಳಿಸಿರುವ ಘಟನೆಯ ವಿಡಿಯೋ ವೈರಲ್ ಆಗಿತ್ತು, ಹುಡುಗಿಯೊಬ್ಬಳಿಗೆ ಅಶ್ಲೀಲ ಮೆಸೆಜ್ ಕಳುಹಿಸಿದ್ದ ಎಂಬ ಆರೋಪದ ಮೇಲೆ ಯುವಕರ ಗುಂಪೊಂದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಯುವಕರ ಮೇಲೆ ಪ್ರಕರಣ ದಾಖಲಾಗಿತ್ತು.
ಆದರೆ ಈಗ ಇಡೀ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಈಗ ಸಂತ್ರಸ್ಥೆ ಕೆಲವು ದಿನಗಳ ಹಿಂದೆ ಹಲ್ಲೆಗೊಳಗಾದ ಯುವಕ ತನಗೆ ಅಶ್ಲೀಲ ಸಂದೇಶ ಕಳುಹಿಸಿದ್ದ, ಅಲ್ಲದೆ ಬೆದರಿಕೆಯನ್ನೂ ಹಾಕಿದ್ದ ಎಂದು ವಿಟ್ಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.
ಬಾಲಕಿ ದೂರಿನ ಹಿನ್ನೆಲೆಯಲ್ಲಿ ವಿಟ್ಲ ಪೊಲೀಸರು ಬಾಲಕನ ಮೇಲೆ ಮೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ. ಕೊಳ್ನಾಡು ಗ್ರಾಮದ ಕಾಡು ಮಠ ಪ್ರೌಢಶಾಲೆಯ ಮೈದಾನದಲ್ಲಿ ಬಾಲಕನೊಬ್ಬನಿಗೆ ಹಿಂದೂ ಸಂಘಟನೆ ಕಾರ್ಯಕರ್ತರು ಥಳಿಸಿದ ವಿಡಿಯೋ ವೈರಲ್ ಆಗಿತ್ತು.
ಬಾಲಕಿಗೆ ಅಶ್ಲೀಲ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಬಾಲಕಿ ತನ್ನ ಸಹೋದರರಿಗೆ ಈ ವಿಚಾರ ತಿಳಿಸಿದ್ದು, ಇದೇ ಆಕ್ರೋಶದಿಂದ ಬಾಲಕನಿಗೆ ಹಲ್ಲೆ ನಡೆಸಲಾಗಿತ್ತು ಎನ್ನುವ ವಿಚಾರ ಇದೀಗ ಗೊತ್ತಾಗಿದೆ. ಈ ಬಗ್ಗೆ ವಿಟ್ಲ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.