DAKSHINA KANNADA
ವಿಕ ನವತಾರೆ ಸೀಸನ್ 5 ಗೆ ಚಾಲನೆ..!
ನಾಡಿನ ಹೆಮ್ಮೆಯ ಬಹು ನಿರೀಕ್ಷಿತ ವಿಕ ನವತಾರೆ 2022 ಸೌಂದರ್ಯ ಸ್ಪರ್ಧೆಗೆ ಪ್ರವೇಶ ಪ್ರಕ್ರಿಯೆ ಆರಂಭವಾಗಿದೆ. ಆಸಕ್ತರು ಸೂಕ್ತ ವಿವರ ಮತ್ತು ದಾಖಲೆಗಳೊಂದಿಗೆ ವಾಟ್ಸಪ್ ಮಾಡಿ ಪ್ರವೇಶ ಪಡೆದುಕೊಳ್ಳಬಹುದಾಗಿದೆ. ವಾಟ್ಸಪ್ ಸಂಖ್ಯೆ: 8880852240
ಬೆಂಗಳೂರು : ವಿಜಯ ಕರ್ನಾಟಕದ ಪ್ರತಿಷ್ಠಿತ ಕಾಲೇಜು ಸೌಂದರ್ಯ ಸ್ಪರ್ಧೆ ವಿಕ ನವತಾರೆಗೆ ಈ ಬಾರಿ ಯಶಸ್ವಿ ಐದನೇ ವರ್ಷದ ಸಂಭ್ರಮ.
2018ರಲ್ಲಿ ಆರಂಭವಾಗಿರುವ ಈ ವೇದಿಕೆ ರಾಜ್ಯಮಟ್ಟದಲ್ಲಿ ಕಾಲೇಜು ವಿದ್ಯಾರ್ಥಿನಿಯರಿಗೆ ನಡೆಯುವ ಏಕೈಕ ಮತ್ತು ಅತ್ಯಂತ ವಿಶ್ವಾಸಾರ್ಹ ಸೌಂದರ್ಯ ಸ್ಪರ್ಧೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದು, ಫ್ಯಾಷನ್, ಮಾಡೆಲಿಂಗ್, ಸಿನಿಮಾ, ಕಿರುತೆರೆ, ಜಾಹೀರಾತು ಮುಂತಾದ ಶೋಬಿಜ್ ಕ್ಷೇತ್ರದಲ್ಲಿ ಸಾಧನೆ ಮಾಡಲು ಬಯಸುವವರಿಗೆ ಭದ್ರ ಬುನಾದಿ ಹಾಕಿಕೊಡುತ್ತಿದೆ.
ವಿಕ ನವತಾರೆಯ ಕಳೆದ ನಾಲ್ಕು ಸೀಸನ್ಗಳು ರಾಜ್ಯಾದ್ಯಂತ ಅತ್ಯಂತ ಯಶಸ್ವಿಯಾಗಿ ನಡೆದಿದ್ದು, ಇದರಲ್ಲಿ ವಿಜೇತರಾದ ಕಾಲೇಜು ವಿದ್ಯಾರ್ಥಿನಿಯರು ಈಗ ಸಿನಿಮಾ ಸೇರಿದಂತೆ, ಕಿರುತೆರೆ, ಮಾಡೆಲಿಂಗ್ ಮತ್ತು ಜಾಹೀರಾತು ಕ್ಷೇತ್ರಗಳಲ್ಲಿ ಗಮನೀಯ ಸಾಧನೆ ಮಾಡುತ್ತಿದ್ದಾರೆ.
ಈ ಸೌಂದರ್ಯ ಸ್ಪರ್ಧೆ ಅವರ ಬದುಕನ್ನೇ ಬದಲಾಯಿಸಿದ್ದು, ಅವರಿಗೆ ಸಿಲೆಬ್ರಿಟಿ ಸ್ಟೇಟಸ್ ನೀಡಿದೆ. ವಿಜೇತರು ಮಾತ್ರವಲ್ಲದೆ, ಇದರಲ್ಲಿ ಪಾಲ್ಗೊಂಡವರೂ ಈ ಸ್ಪರ್ಧೆಯ ಸಮಯದಲ್ಲಿ ರ್ಯಾಂಪ್ ವಾಕ್, ಗ್ರೂಮಿಂಗ್ ತರಬೇತಿ ಹಾಗೂ ವೇದಿಕೆಯಲ್ಲಿ ನಿಂತು ಮಾತನಾಡುವ ಆತ್ಮವಿಶ್ವಾಸವನ್ನು ಪಡೆದುಕೊಂಡು ತಮ್ಮ ಮಾಡೆಲಿಂಗ್, ನಟನೆ ಮುಂತಾದ ಪ್ಯಾಷನ್ಗಳತ್ತ ಇನ್ನೂ ಹೆಚ್ಚಿನ ರೀತಿಯಲ್ಲಿ ಗಮನ ಕೇಂದ್ರೀಕರಿಸಿ ನಡೆಯುತ್ತಿದ್ದಾರೆ.
ಕರ್ನಾಟಕದ ಸೌಂದರ್ಯ ಸ್ಪರ್ಧೆ ಕ್ಷೇತ್ರದಲ್ಲಿ ತನ್ನದೇ ವಿಶೇಷ ಛಾಪು ಮೂಡಿಸಿರುವ ವಿಕ ನವತಾರೆ ಈ ಬಾರಿಯೂ ರಾಜ್ಯದೆಲ್ಲೆಡೆಯ ವಿದ್ಯಾರ್ಥಿನಿಯರಿಗೆ ವೇದಿಕೆ ಕಲ್ಪಿಸಲಿದ್ದು, ಇದಕ್ಕೆ ಮುನ್ನುಡಿಯಾಗಿ ಈಗಾಗಲೇ ವಿಕ ನವತಾರೆ 2022 ಲೋಗೊ ಅನಾವರಣಗೊಂಡಿದೆ.
ಬೆಂಗಳೂರು ಸೇರಿದಂತೆ ರಾಜ್ಯದ ಏಳು ಜಿಲ್ಲೆಗಳಲ್ಲಿ ಈ ಸ್ಪರ್ಧೆಯ ಆಡಿಷನ್ ನಡೆಯಲಿದ್ದು, ಇದರಲ್ಲಿ ಉತ್ತಮ ಪ್ರದರ್ಶನ ತೋರಿದವರು ವಿಕ ನವತಾರೆ 2022 ಫಿನಾಲೆಗೆ ಆಯ್ಕೆಯಾಗುತ್ತಾರೆ.
ವಿಕ ನವತಾರೆ 2022 ಕಾಲೇಜು ಸೌಂದರ್ಯಸ್ಪರ್ಧೆಗೆ ಸ್ಟಾರ್ ಸುವರ್ಣ ಪ್ರಾಯೋಜಕತ್ವವಿದ್ದು, ನಾಲೆಜ್ ಪಾರ್ಟ್ನರ್ ಪರಿಶ್ರಮ ನೀಟ್ ಅಕಾಡೆಮಿ, ಫ್ಯಾಷನ್ ಪಾರ್ಟ್ನರ್ ಸುದರ್ಶನ್ ಸಿಲ್ಕ್ಸ್, ಬ್ಯೂಟಿ ಪಾರ್ಟನರ್ ನಿವಿಯಾ ಸಹಯೋಗವಿದೆ.
ಈ ಸ್ಪರ್ಧೆಯಲ್ಲಿ ಪಾಲ್ಗೊಳ್ಳಲು ಆಸಕ್ತಿಯಿರುವ ಕಾಲೇಜು ವಿದ್ಯಾರ್ಥಿನಿಯರು ಇಂದಿನಿಂದಲೇ ನಿಮ್ಮ ಸಂಪೂರ್ಣ ವಿವರಗಳಿರುವ ಪೋರ್ಟ್ಫೋಲಿಯೊ ಜತೆಗೆ ಸೂಕ್ತ ಫೋಟೊಗಳನ್ನು ನಾವು ಸೂಚಿಸಿದ ವಾಟ್ಸಪ್ ಸಂಖ್ಯೆಗೆ ಕಳುಹಿಸಿ.
ಸ್ವವಿವರ ಕಳಿಸಬೇಕಾದ ಕೊನೆಯ ದಿನ ಡಿಸೆಂಬರ್ 5, 2022. ವಾಟ್ಸಪ್ ಸಂಖ್ಯೆ: 8880852240
ವಿಕ ನವತಾರೆ 2022 ಸೂಚನೆ
ಕರ್ನಾಟಕದ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ 18ರಿಂದ 23 ವರ್ಷದೊಳಗಿನ ಆಸಕ್ತ ಯುವತಿಯರು ವಿಕ ನವತಾರೆ 2022 ಸ್ಪರ್ಧೆಯಲ್ಲಿ ಪಾಲ್ಗೊಳ್ಳಬಹುದು.
ಅರ್ಹ ಕಾಲೇಜು ವಿದ್ಯಾರ್ಥಿನಿಯರು ತಮ್ಮ ಸೂಕ್ತ ವಿವರಗಳೊಂದಿಗೆ ಕ್ಲೋಸ್ಅಪ್ ಮತ್ತು ಪೂರ್ಣ ಭಾವಚಿತ್ರ ಫೋಟೊಗಳು ಮತ್ತು ಕಿರುಪರಿಚಯವಿರುವ 1 ನಿಮಿಷದ ವಿಡಿಯೊ ಕಳುಹಿಸಬೇಕು.
ನಿಮ್ಮ ಪ್ರೊಫೈಲ್ನಲ್ಲಿ ಸ್ಪರ್ಧಿಯ ಹೆಸರು, ಪೋಷಕರ ಹೆಸರು, ವಿಳಾಸ, ಕಾಲೇಜಿನ ಹೆಸರು, ತರಗತಿ, ಜನ್ಮ ದಿನಾಂಕ ಮುಂತಾದ ವಿವರಗಳನ್ನು ನಮೂದಿಸಿ, ಕಾಲೇಜು ಐಡಿ ಪ್ರತಿ ಜತೆಗೆ ನಾವು ಸೂಚಿಸಿದ ವಾಟ್ಸಪ್ ನಂಬರ್ಗೆ ಕಳಿಸಿ.
ಹಿಂದಿನ ಸೀಸನ್ಗಳ ವಿಜೇತೆಯರು, ಟೈಟಲ್ ವಿಜೇತೆಯರು ಭಾಗವಹಿಸುವಂತಿಲ್ಲ.
DAKSHINA KANNADA
ಹಿಂಜಾವೇ ಮುಖಂಡ ಅಕ್ಷಯ್ ರಜಪೂತ್ಗೆ ಗಡಿಪಾರು..!
ಪುತ್ತೂರು: ಹಿಂದೂ ಜಾಗರಣ ವೇದಿಕೆಯ ಮುಖಂಡ ಅಕ್ಷಯ್ ರಜಪೂತ್ ರವರನ್ನು (ನಿನ್ನೆ) ಎ.25ರಂದು ರಾತ್ರಿ ಗಡಿಪಾರು ಮಾಡಲಾಗಿದೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಸಮಿತಿಯ ಸದಸ್ಯ ಅಕ್ಷಯ್ ರಜಪೂತ್ ರವರನ್ನು ತಡರಾತ್ರಿ ವೇಳೆ ಅವರ ಮನೆಯಲ್ಲಿ ಬಂಧಿಸಿ ಇದೀಗ ಅವರನ್ನು ಹಾವೇರಿ ಜಿಲ್ಲೆಗೆ ಗಡಿಪಾರು ಮಾಡಲಾಗಿದೆ.
ಮುಂದೆ ಓದಿ..; ಪತ್ನಿಗೆ ಮೆಸೇಜ್ ಮಾಡಿದ್ದಕ್ಕೆ ಖಾದರ್ ಭಾಷಾನನ್ನು ಭೀಕರವಾಗಿ ಹ*ತ್ಯೆಗೈದ ಆಂಜನೇಯ ಗುಡಿಯ ಪೂಜಾರಿ..!
ಅಕ್ಷಯ್ ಗಡಿಪಾರನ್ನು ಹಿಂದೂ ಜಾಗರಣ ವೇದಿಕೆ ತೀವ್ರವಾಗಿ ಖಂಡಿಸಿದ್ದು ಕಾಂಗ್ರೆಸ್ಸಿನ ಹಿಂದೂ ವಿರೋಧೀ ನೀತಿ ಎಂದು ಹೇಳಿದ್ದಾರೆ.
DAKSHINA KANNADA
ಮತದಾನದ ವೇಳೆ ಮತಗಟ್ಟೆಗೆ ಮೊಬೈಲ್ ಕೊಂಡುಯ್ಯುತ್ತೀರಾ? ಹಾಗಿದ್ರೆ ಇದನ್ನು ಗಮನಿಸಿ
ಮಂಗಳೂರು: ಲೋಕಸಭಾ ಚುನಾವಣಾ ಹಿನ್ನೆಲೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಎ.26ರಂದು ಮತದಾನ ನಡೆಯಲಿದೆ. ಈ ಬಾರಿ ಚುನಾವಣೆಯ ಸಂದರ್ಭ ಮೊಬೈಲ್ ಫೋನ್ಗಳನ್ನು ಮತಗಟ್ಟೆಗಳಿಗೆ ತೆಗೆದುಕೊಂಡು ಹೋಗುವ ಮೊದಲು ಯೋಚಿಸಿ. ಏಕೆಂದರೆ, ಬೂತ್ಗಳ ಆವರಣದಲ್ಲಿ ಅವುಗಳ ಬಳಕೆಗೆ ನಿರ್ಬಂಧ ವಿಧಿಸಲಾಗಿದೆ. ಬೂತ್ಗಳಿಗೆ ಹೋಗುವ ಜನರನ್ನು ಕೂಲಂಕುಷವಾಗಿ ತಪಾಸಣೆ ಮಾಡಲಾಗುವುದು. ಮತದಾರರು ಮತ ಚಲಾಯಿಸಲು ಹೋಗುವ ಮೊದಲು ಫೋನ್ಗಳನ್ನು ಇಡಲು ವಿಶೇಷ ವ್ಯವಸ್ಥೆ ಮಾಡಲಾಗಿರುತ್ತದೆ ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.
ಈ ಹಿಂದೆ ಮತಗಟ್ಟೆಗೆ ಮೊಬೈಲ್ ಕೊಂಡೊಯ್ದು ಫೊಟೊ ಹಾಗೂ ವೀಡಿಯೋಗಳನ್ನು ಮಾಡಿದ್ದ ಘಟನೆ ನಡೆದಿತ್ತು. ಹಾಗಾಗಿ ಈ ಬಾರಿ ಮೊಬೈಲ್ ಫೋನ್ ಗಳನ್ನು ಮತಗಟ್ಟೆಯ ಒಳಗಡೆ ಪ್ರವೇಶಿಸುವ ಮೊದಲು ಪ್ರಿಸೈಡಿಂಗ್ ಆಫೀಸರ್ ಬಳಿ ಟ್ರೇಯಲ್ಲಿ ಇಡುವ ವ್ಯವಸ್ಥೆ ಮಾಡಲು ನಿರ್ಧರಿಸಲಾಗಿದೆ. ಆ ಟ್ರೇಯನ್ನು ಪೊಲೀಸರು ಅಥವಾ ಚುನಾವಣಾ ಅಧಿಕಾರಿಗಳು ಕಾವಲು ಕಾಯುತ್ತಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮುಂದೆ ಓದಿ..; ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ
ಮತದಾನ ಮಾಡುವಾಗ ಫೋನ್ಗಳನ್ನು ಟ್ರೇನಲ್ಲಿ ಇಡಲು ಸೂಚಿಸಬೇಕೇ ಅಥವಾ ಅವುಗಳನ್ನು ಸೈಲೆಂಟ್ ಮೋಡ್ನಲ್ಲಿ ಇಡುವಂತೆ ಹೇಳಬೇಕೇ ಎಂಬ ನಿರ್ಧಾರ ಕೈಗೊಳ್ಳುವುದನ್ನು ಪ್ರಿಸೈಡಿಂಗ್ ಆಫೀಸರ್ ವಿವೇಚನೆಗೆ ಬಿಡಲಾಗಿದೆ. ಕೆಲವು ಸಂದರ್ಭಗಳಲ್ಲಿ, ಮತಗಟ್ಟೆಯೊಳಗೆ ಫೋನ್ಗಳನ್ನು ಅನುಮತಿಸದಿರಲು ಚುನಾವಣಾಧಿಕಾರಿಗಳು ನಿರ್ಧರಿಸಿದ್ದಾರೆ. ಇದು ಕೆಲವೇ ಸೆಕೆಂಡುಗಳ ವಿಷಯವಷ್ಟೆ. ಮತದಾನದ ಸಮಯದಲ್ಲಿ ಗೋಪ್ಯತೆಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಮತದಾರರು ಮತದಾನ ಮಾಡುವಾಗ ಅವುಗಳನ್ನು ಬಳಸಬಾರದು ಎಂದು ಮಾತ್ರ ನಾವು ಹೇಳುತ್ತಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ. ಸಿಇಒ, ಜಿಲ್ಲಾಧಿಕಾರಿಗಳು ಮತ್ತು ಇತರ ಚುನಾವಣಾಧಿಕಾರಿಗಳು ಭಾಗವಹಿಸಿದ್ದ ಸಭೆಯಲ್ಲಿ ಈ ವಿಷಯ ಚರ್ಚಿಸಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
BELTHANGADY
ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ
ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.
ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?
ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
- DAKSHINA KANNADA7 days ago
“ಸೆಕ್ಸ್” ನನ್ನ ಸಾಮರ್ಥ್ಯದ ರಹಸ್ಯ…! ಮಾಜಿ ಸಂಸದೆಯ ಹೇಳಿಕೆ ವೈರಲ್..!
- DAKSHINA KANNADA7 days ago
ಕೊರಗಜ್ಜನ ಫೋಟೋವನ್ನು ಮನೆಯಲ್ಲಿ ಇಟ್ಟು ಆರಾಧಿಸಬಹುದಾ?
- LATEST NEWS6 days ago
ಆಲದ ಮರದ ಪೊಟರೆಯಲ್ಲಿ ಪತ್ತೆಯಾಯ್ತು 64 ಲಕ್ಷ ರೂ.!
- DAKSHINA KANNADA7 days ago
ಕಾರ್ಪೋರೇಟರ್ ಮಗಳ ಹ*ತ್ಯೆ..! ಒಂಬತ್ತು ಬಾರಿ ಇರಿದ ಪಾಪಿ…!