Connect with us

    LATEST NEWS

    WATCH VIDEO : ನೀರಿನ ಅಭಾವದಿಂದ ತತ್ತರಿಸಿದ್ದಾರೆ ಜನ…ವೈರಲ್ ಆಯ್ತು ಆನಂದ್ ಮಹೀಂದ್ರಾ ಕೊಟ್ಟಿರೋ ಐಡಿಯಾ!

    Published

    on

    ಸದ್ಯ ಸುಡು ಬಿಸಿಲಿನ ತಾಪ ಜೋರಾಗಿದೆ. ಇದರಿಂದ ಜನರು ತತ್ತರಿಸಿ ಹೋಗಿದ್ದಾರೆ. ಅಲ್ಲದೇ, ನೀರಿಗಾಗಿ ಹಾಹಾಕಾರವೂ ಜೋರಾಗಿದೆ. ಹೀಗೆ ಆದರೆ, ಮುಂದೇನು ಎಂಬ ಚಿಂತೆ ಅಂತೂ ಸಾಮಾನ್ಯವಾಗಿ ಕಾಡುತ್ತಿದೆ.
    ಈ ನೀರಿನ ಸಮಸ್ಯೆಯ ಪರಿಹಾರಕ್ಕೆ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ವಿಶಿಷ್ಟವಾದ ಉಪಾಯವೊಂದನ್ನು ನೀಡಿದ್ದಾರೆ. ಈ ಬಗ್ಗೆ ಅವರು ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಅವರ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

    ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ಅವರು ಸಾಮಾಜಿಕ ಜಾಲತಾಣದಲ್ಲಿ ಹಲವು ವಿಚಾರಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಕೆಲವೊಂದು ವಿಡಿಯೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ. ಅವರಿಗೆ 11 ಮಿಲಿಯನ್ ಪಾಲೋವರ್ಸ್ ಇದ್ದಾರೆ.

    ಎಸಿ ನೀರನ್ನು ಬಳಸಲು ಕರೆ :
    ಪ್ರಪಂಚದ ನೀರಿನ ಕೊರತೆಯ ಸಮಸ್ಯೆಯನ್ನು ಪರಿಹರಿಸಲು ಮಹೀಂದ್ರಾ ಒಂದು ವಿಶಿಷ್ಟ ಮಾರ್ಗವನ್ನು ಸೂಚಿಸಿದ್ದಾರೆ. ನೀರನ್ನು ಪಡೆಯಲು ಎಸಿಯನ್ನು ಹೇಗೆ ಬಳಸಬಹುದು ಎಂಬುದನ್ನು ತೋರಿಸುವ ವೀಡಿಯೊವನ್ನು ಅವರು ಸಾಮಾಜಿಕ ಜಾಲತಾಣ X ನಲ್ಲಿ ಹಂಚಿಕೊಂಡಿದ್ದಾರೆ.
    ಎಸಿ ತ್ಯಾಜ್ಯ ನೀರನ್ನು ಹೊರಹಾಕುತ್ತದೆ. ಅದನ್ನು ಹೇಗೆ ಬಳಕೆ ಮಾಡಬಹುದು ಜೊತೆಗೆ ಯಾವುದಕ್ಕೆ ಬಳಕೆ ಮಾಡಬಹುದು ಎನ್ನುವ ಬಗ್ಗೆ ವಿಡಿಯೋದಲ್ಲಿ ವಿವರಿಸಲಾಗಿದೆ.

    ಎಸಿಯಿಂದ ಬರುವ ನೀರನ್ನು ಹೇಗೆ ಪಡೆಯಬಹುದು ಎಂದು ವಿಡಿಯೋದಲ್ಲಿ ತೋರಿಸಲಾಗಿದೆ. ಜೊತೆಗೆ ಈ ನೀರನ್ನು ಕಾರನ್ನು ತೊಳೆಯಲು, ಗಿಡಗಳಿಗೆ ಹಾಕಲು, ಮನೆ ಸ್ವಚ್ಚಗೊಳಿಸಲು ಹಾಗೂ ಟಾಯ್ಲೆಟ್ ಫ್ಲೆಶ್‌ಗೂ ಬಳಸಬಹುದು ಎಂದು ಹೇಳಲಾಗಿದೆ.

    ವೀಡಿಯೋದಲ್ಲಿ ಏನಿದೆ?

    ವೀಡಿಯೊದಲ್ಲಿ ವಿಂಡೋ ಎಸಿಯನ್ನು ನೋಡಬಹುದು. ಅದರ ಔಟ್ಲೆಟ್ ಗೆ ಪೈಪ್‌ ಅನ್ನು ಸಂಪರ್ಕಿಸಲಾಗಿದೆ. ಈ ಪೈಪ್ ಸಿಲಿಂಡರಾಕಾರದ ಕಂಟೇನರ್ ಗೆ ಸಂಪರ್ಕ ಹೊಂದಿದೆ. ಅಗತ್ಯವಿದ್ದಾಗ ಈ ಸಂಗ್ರಹವಾದ ನೀರನ್ನು ಮನೆ ಸ್ವಚ್ಛಗೊಳಿಸಲು, ತೋಟಗಾರಿಕೆ ಇತ್ಯಾದಿಗಳಿಗೆ ಬಳಸಬಹುದು ಎಂಬುದಾಗಿ ತೋರಿಸಲಾಗಿದೆ.

    ‘ಜನರು ಎಸಿಗಳನ್ನು ಬಳಸುವಲ್ಲೆಲ್ಲಾ ಇದು ಭಾರತದಾದ್ಯಂತ ಪ್ರಮಾಣಿತ ಸಾಧನವಾಗಬೇಕಾಗಿದೆ. ನೀರು ಎಂಬುದು ಭಾಗ್ಯ. ಅದನ್ನು ಜೋಪಾನವಾಗಿ ಸಂಗ್ರಹಿಸಬೇಕಿದೆ…ಪ್ರಪಂಚಕ್ಕೆ ಹಂಚಿ’ ಎಂದು ಬರೆದುಕೊಂಡಿದ್ದಾರೆ ಅವರು. ಹೀಗಾಗಿ ಕಸದಿಂದ ರಸ ಎಂಬಂತೆ ಆನಂದ್ ಮಹೀಂದ್ರಾ ಅವರು ಎಸಿ ತ್ಯಾಜ್ಯ ನೀರನ್ನು ಬಳಕೆಯ ಬಗ್ಗೆ ವಿಡಿಯೋ ಹಂಚಿಕೊಂಡಿದ್ದಾರೆ.

    ಸದ್ಯ ನೀರಿನ ಅಭಾವ ಇದೆ. ಈ ರೀತಿ ಆನಂದ ಮಹೀಂದ್ರ ಅವರ ಉಪಾಯ ಸಹಾಯವಾಗಲಿದೆ. ಈ ಪೋಸ್ಟ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಮಹೀಂದ್ರ ಅವರ ಉಪಾಯವನ್ನು ಹಲವರು ಮೆಚ್ಚಿಕೊಂಡಿದ್ದಾರೆ.

    https://x.com/anandmahindra/status/1768858275871924640?s=20

    DAKSHINA KANNADA

    ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವು

    Published

    on

    ತೆಲಂಗಾಣ: ಮೊಬೈಲ್ ಚಾರ್ಜ್ ಮಾಡುವ ವೇಳೆ ವಿದ್ಯುತ್ ಸ್ಪರ್ಶಿಸಿ ಬಾಲಕಿ ಸಾ*ವನ್ನಪ್ಪಿರುವ ಘಟನೆ ತೆಲಂಗಾಣದ ಖಮ್ಮಂ ಜಿಲ್ಲೆಯ ಚಿಂತಕಣಿಲ್ಲಿ ಶುಕ್ರವಾರ ನಡೆದಿದೆ.

    ಅಂಜಲಿ ಕಾರ್ತಿಕಾ (9) ಮೃ*ತ ಬಾಲಕಿ. ಮೊಬೈಲ್​​​ನಲ್ಲಿ ಆಟವಾಡುತ್ತಿರುವ ವೇಳೆ ಚಾರ್ಜ್ ಖಾಲಿಯಾಗಿದ್ದು, ಅಂಜಲಿ ಮೊಬೈಲ್ ಚಾರ್ಜ್ ಮಾಡಲು ಹೋಗಿದ್ದಾಳೆ. ಈ ವೇಳೆ ವಿದ್ಯುತ್ ಸ್ಪರ್ಶಿಸಿದ್ದು, ಬಾಲಕಿ ಕುಸಿದು ಬಿದ್ದಿದ್ದಾಳೆ.

    ಕುಸಿದು ಬಿದ್ದು ಒದ್ದಾಡುತ್ತಿರುವ ಬಾಲಕಿಯನ್ನು ಗಮನಿಸಿದ ಆಕೆಯ ಪೋಷಕರು ತಕ್ಷಣ ಗ್ರಾಮದ ಖಾಸಗಿ ವೈದ್ಯರ ಬಳಿ ಕರೆದೊಯ್ದಿದ್ದಾರೆ. ಆದರೆ ಬಾಲಕಿ ಅದಾಗಲೇ ಮೃ*ತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದ್ದಾರೆ.

    ಬಾಲಕಿ ಆಟವಾಡುತ್ತಿದ್ದಂತೆ ಒದ್ದೆ ಕೈಯಲ್ಲಿ ಹೋಗಿ ವಿದ್ಯುತ್ ಸ್ಪರ್ಶಿಸಿರುವುದೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ. ಕೆಲ ಹೊತ್ತಿನ ಹಿಂದೆ ಮನೆಯಲ್ಲಿ ಕುಣಿದು ಕುಪ್ಪಳಿಸುತ್ತಾ ಆಟವಾಡುತ್ತಿದ್ದ ಬಾಲಕಿ ಏಕಾಏಕಿ ಪ್ರಾ*ಣ ಕಳೆದುಕೊಂಡಿರುವುದನ್ನು ಕಂಡು ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

    ಮೃ*ತ ಬಾಲಕಿ ಅಂಜಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಾಲ್ಕನೇ ತರಗತಿ ವಿದ್ಯಾರ್ಥಿನಿ. ತಂದೆ ರಾಮಕೃಷ್ಣ ದೂರಿನ ಮೇರೆಗೆ ಎಸ್‌ಎಸ್‌ಐ ನಾಗುಲ್ಮೀರ ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ

    Published

    on

    ಚಾರ್ಮಾಡಿ: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿದು ಟ್ರಾಫಿಕ್ ಜಾಮ್ ಆದ ಘಟನೆ ನಿನ್ನೆ ತಡರಾತ್ರಿ ಸಂಭವಿಸಿದೆ.

    ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯ ಚಾರ್ಮಾಡಿಘಾಟ್‌ನ 10ನೇ ತಿರುವಿನಲ್ಲಿ ಗುಡ್ಡ ಕುಸಿದಿದ್ದು ಚಾರ್ಮಾಡಿ ಘಾಟ್​ನಿಂದ ಕೊಟ್ಟಿಗೆಹಾರದವರೆಗೂ ವಾಹನಗಳು ನಿಂತಲ್ಲೇ ನಿಂತಿದ್ದವು. ಬಳಿಕ ಜೆಸಿಬಿ ಮೂಲಕ ಮಣ್ಣು ತೆರವು ಕಾರ್ಯಾಚರಣೆ ನಡೆಸಲಾಯ್ತು.

    ಅತ್ತ ಮಂಗಳೂರಿಗೆ ತೆರಳುವವರನ್ನು ಪೊಲೀಸರು ಚಿಕ್ಕಮಗಳೂರಿನ ಕೊಟ್ಟಿಗೆಹಾರದಲ್ಲೇ ವಾಹನಗಳನ್ನು ತಡೆದು ವಾಪಸ್ ಕಳಿಸಿದ್ದಾರೆ. ಅತ್ತ ಉಜಿರೆ ಬಳಿಯೂ ಚಾರ್ಮಾಡಿ ಘಾಟ್ ಪ್ರವೇಶ ನಿರ್ಬಂಧಿಸಲಾಗಿತ್ತು.

    Continue Reading

    DAKSHINA KANNADA

    ಅರ್ಜುನ್​ ಪತ್ತೆಗೆ ಸೇನೆಗೆ ಸಹಾಯ..! ಶಿರೂರಿಗೆ ಈಶ್ವರ ಮಲ್ಪೆಗೆ ಬುಲಾವ್..!

    Published

    on

    ಅಂಕೋಲ: ಶಿರೂರು ಗುಡ್ಡ ಕುಸಿತ ಪ್ರಕರಣ ಸಂಭವಿಸಿ ಇಂದಿಗೆ 12 ದಿನವಾಗಿದೆ. ನಾಪತ್ತೆಯಾದ ಮೂವರಿಗಾಗಿ ಶೋಧ ಕಾರ್ಯ ಮುಂದುವರೆದಿದೆ. ನದಿಯ ದಡದಲ್ಲಿ ಈಗಾಗಲೇ ಹುಡುಕಾಟ ಮುಗಿದಿದ್ದು, ಲಾರಿ ಮತ್ತು ಚಾಲಕ ಅರ್ಜುನ್​ ನದಿಯೊಳಗೆ ಇದ್ದಾರೆ ಎಂದು ಹೇಳಲಾಗುತ್ತಿದೆ. ಅತ್ತ ಗೋಕಾಕ್ ನಿಂದ ಬಂದ ಪೋಕ್ಲೈನ್ ತನ್ನ ಕೆಲಸ ಮುಗಿಸಿದ್ದು, ವಾಪಾಸ್ ಆಗುತ್ತಿದೆ.

    ಇಂದು ಅರ್ಜುನ್​ಗಾಗಿ ಮುಳುಗು ತಜ್ಞರಿಂದ ಹುಡುಕಾಟ ನಡೆಯಲಿದೆ. ಈಶ್ವರ್ ಮಲ್ಪೆ ತಂಡ ಇಂದು ಶಿರೂರಿಗೆ ಬರಲಿದ್ದು, ಅರ್ಜುನ್​​ಗಾಗಿ ಹುಡುಕಾಡಲಿದ್ದಾರೆ. ಜಿಲ್ಲಾಡಳಿತದ ಮನವಿ ಮೇರೆಗೆ ಮುಳುಗು ತಜ್ಞರ ತಂಡ ಶಿರೂರಿಗೆ ಆಗಮಿಸಲಿದ್ದಾರೆ.

     

    ಗಂಗಾವಳಿ ನದಿಯಲ್ಲಿ ನೀರಿನ ವೇಗ ಹೆಚ್ಚಿರುವ ಹಿನ್ನಲೆಯಲ್ಲಿ, ನೀರಿನೊಳಗೆ ಹೋಗಲು ನೌಕಾದಳದ ಮುಳುಗು ತಜ್ಞರು ಹಿಂದೇಟು ಹಾಕಿದ್ದಾರೆ. ಈ ವೇಳೆ ಶಾಸಕ ಸತೀಶ್ ಸೈಲ್ ಸ್ಥಳೀಯ ಮೀನುಗಾರ ಹಾಗೂ ಈಶ್ವರ್ ಮಲ್ಪೆ ಸಹಾಯ ಕೇಳಿದ್ದಾರೆ.

    ಇಂದು ಅರ್ಜುನ್​ ಮತ್ತು ಲಾರಿ ಪತ್ತೆಯಾದರೆ ನದಿಯ ಕೆಳಗೆ ಸುಮಾರು 20 ಅಡಿ ಆಳದಲ್ಲಿರುವ ಲಾರಿ ಮೇಲಕ್ಕೆ ಎತ್ತಲು ಪ್ರಯತ್ನ ನಡೆಯಲಿದೆ.

    Continue Reading

    LATEST NEWS

    Trending